To see the other types of publications on this topic, follow the link: ಅಸಮಾನತೆ.

Journal articles on the topic 'ಅಸಮಾನತೆ'

Create a spot-on reference in APA, MLA, Chicago, Harvard, and other styles

Select a source type:

Consult the top 18 journal articles for your research on the topic 'ಅಸಮಾನತೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಪ್ರಮಿಳಾ, ಬಾರ್ಕೂರು. "ಮಹಿಳಾ ವಿಮೋಚನೆ: ವಿವಿಧ ಆಯಾಮಗಳು". AKSHARASURYA JOURNAL 05, № 04 (2024): 132 to 141. https://doi.org/10.5281/zenodo.14289978.

Full text
Abstract:
ಮನುಷ್ಯ ಮನುಷ್ಯನ ನಡುವಿನ ಅಸಮಾನತೆಯ ಪ್ರಶ್ನೆಯಲ್ಲಿ ಲಿಂಗಾಧರಿತ ಅಸಮಾನತೆ ಅತ್ಯಂತ ಸಂಕೀರ್ಣವಾದುದು ಮತ್ತು ಸೂಕ್ಷ್ಮವಾದುದು. ಹೆಣ್ಣಿನ ದಮನವು ಸಾಮಾಜಿಕ ಹಾಗೂ ಕೌಟುಂಬಿಕ ನೆಲೆಯೆರಡರಲ್ಲೂ ನಡೆಯುವುದರಿಂದ ಶೋಷಕ ವರ್ಗವನ್ನು ಪ್ರತ್ಯೇಕವಾಗಿ ಗುರುತಿಸುವುದು ಅಸಾಧ್ಯ. ಹೆಣ್ಣಿನ ದಮನದ ವಿಚಾರ ಬಹಳ ಸೂಕ್ಷ್ಮವಾದದ್ದು, ಹಾಗಾಗಿ ಲಿಂಗ ತಾರತಮ್ಯದ ಎಲ್ಲ ಹೋರಾಟ ಅಥವಾ ಹೆಣ್ಣಿನ ಬಿಡುಗಡೆಯ ಚರ್ಚೆಯನ್ನು ಕುಟುಂಬದ ನೆಲೆಯಿಂದಲೇ ಪ್ರಾರಂಭಿಸಬೇಕಾಗುತ್ತದೆ. ಅಲ್ಲದೇ ಈ ಹೋರಾಟವನ್ನು ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಹೀಗೆ ಬಹು ಆಯಾಮಗಳಲ್ಲಿ ನಡೆಸಬೇಕಾಗುತ್ತದೆ. ಲಿಂಗ ತಾರತಮ್ಯದ ವ್ಯವಸ್ಥೆಯನ್ನು ಭಂಜನಗೊಳಿಸುವ ಪ್ರಕ್ರಿಯೆಯೇ ಮಹಿಳಾ ವಿಮೋಚನೆ. ಇಂತಹ ಆಶಯದಲ್ಲಿ ಕಟ್ಟುವ ಎಲ್ಲಾ ಚಟುವಟಿಕೆಗಳನ್ನು ವಾಸ್ತವವಾಗಿ ಮಹಿಳಾ ವಿಮೋಚನಾ ಚಳುವಳಿಯಾಗಿಯೇ ಗ್ರಹಿಸಬಹ
APA, Harvard, Vancouver, ISO, and other styles
2

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
3

ನರಸಿಂಹಪ್ಪ, ಜೆ. "ಮೊದಲನೇ ತಲೆಮಾರಿನ ಸವಾಲುಗಳು: ಕರೋನಾ ಹಿನ್ನೆಲೆಯಲ್ಲಿ". AKSHARASURYA 06, № 02 (2025): 148 to 154. https://doi.org/10.5281/zenodo.15124196.

Full text
Abstract:
ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಪ್ರಮುಖ ಆಶಯವೇ ಅಸಮಾನತೆ ನಿವಾರಿಸಿ ಎಲ್ಲರಿಗೂ ಸಾಮಾಜಿಕ ಆರ್ಥಿಕ ರಾಜಕೀಯ ಪ್ರಕ್ರಿಯೆಗಳಲ್ಲಿ ಸಮಾನ ಅವಕಾಶ ಒದಗಿಸುವುದು. ಹೀಗಾಗಿ ಕರೋನಾ ತಂದ ಬಿಕ್ಕಟ್ಟುಗಳನ್ನು ವಿವಿದ ಆಯಾಮಗಳನ್ನು ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಚರ್ಚಿಸುವ ಅಗತ್ಯವಿದೆ. ಕರೋನಾ ಸನ್ನಿವೇಶದಲ್ಲಿ ಶ್ರೀಸಾಮಾನ್ಯರ ಹಕ್ಕುಗಳನ್ನು ಮರೆಮಾಚಲಾಗುತ್ತಿದೆ. ಈ ಸಾಂಕ್ರಾಮಿಕವು ಹರಡುವಲ್ಲಿ ಯಾವುದೇ ಆರ್ಥಿಕ ತಾರತಮ್ಯ ಮಾಡುತ್ತಿಲ್ಲ ಆದರೆ, ಇದರಿಂದ ಮುಕ್ತಿ ಪಡೆಯಲು ದೊರೆಯುವ ಆರೋಗ್ಯ ಸೌಲಭ್ಯಗಳು ಶ್ರೇಣಿಕೃತವಾಗಿವೆ. ಈ ಮೂಲಕ ಸಮ ಸಮಾಜವನ್ನು ನಿರ್ಮಾಣ ಮಾಡಲು ಬೇಕಾಗುವ ಪರಿಭಾಷೆಗಳ ಮುಖಾಂತರ ಅರ್ಥೈಸಿಕೊಳ್ಳುವ ಜರೂರು ಇದೆ. ಕೇಂದ್ರದಿಂದ ಅಂಚೆಗೆ ತಳ್ಳಲ್ಪಟ್ಟ ಶೋಷಿತ ಸಮುದಾಯಗಳ ಸವಾಲುಗಳನ್ನು ಮರು ಚಿಂತನೆಗೆ ಒಳಪಡಿಸಲಾಗಿದೆ. 
APA, Harvard, Vancouver, ISO, and other styles
4

ಚಂದ್ರಕಲಾ, ಹೆಚ್. ಆರ್. "ಹಿಜ್ರಾ ಸಮುದಾಯದ ರೇವತಿ ಆತ್ಮಕಥೆಯ ನೆರಳುಗಳ ಜಾಡು". AKSHARASURYA JOURNAL 03, № 04. SPECIAL ISSUE. (2024): 148 to 156. https://doi.org/10.5281/zenodo.10929908.

Full text
Abstract:
ಕನ್ನಡದಲ್ಲಿ ಈಗೀಗ ಅನುವಾದಿತ ಆತ್ಮಕಥನಗಳ ಸಂಖ್ಯೆ ಹೆಚ್ಚುತ್ತಿವೆ. ಕನ್ನಡದ ಆತ್ಮಕಥನಗಳ ಮಾದರಿಗೆ ಇದೊಂದು ವಿಶಿಷ್ಟ ಸೇರ್ಪಡೆ ಏಕೆಂದರೆ ಬಹುಪಾಲು ಆತ್ಮಕಥನಗಳಿಗೆ ಆತ್ಮವಿರದೆ, ಆತ್ಮವಂಚನೆಯಿಂದ ಕೂಡಿರುತ್ತವೆ. ರೇವತಿಯ ಆತ್ಮಕಥೆ ‘ಬದುಕು ಬಯಲು’ ಕೃತಿಯಲ್ಲಿ ಬಾಲ್ಯದ ಅನುಭವಗಳ ಗಟ್ಟಿತನ ಮತ್ತು ಪ್ರಾಮಾಣಿಕತೆ ಬೆಳೆಯುತ್ತಾ ಪಕ್ವವಾಗುತ್ತಾ ಸಾಗಿ ಈ ಲೋಕವನ್ನು ನ್ಯಾಯದ ಕಟಕಟೆಯಲ್ಲಿ ನಿಲ್ಲಿಸಿ ರೇವತಿಯ ಆತ್ಮಘನತೆಯನ್ನು ಹೆಚ್ಚಿಸುತ್ತದೆ. ಪರಮಾತ್ಮನನ್ನು ದರ್ಶಿಸುತ್ತದೆ. ದೇಹದ ಅಂಗಾಂಗಗಳ ಮೂಲಕ ಗಂಡು, ಹೆಣ್ಣು ಎಂದು ಗುರುತಿಸಲಾಗುತ್ತದೆ. ಬದುಕು ಗಂಡು-ಹೆಣ್ಣೆಂಬ ದ್ವಿಲಿಂಗದ ಸುತ್ತವೇ ಹೆಣೆದುಕೊಂಡಿದೆ. ಆದರೆ ಗಂಡಿನೊಳಗಿರುವ ಹೆಣ್ಣಿನ ಭಾವನೆ, ನಡವಳಿಕೆಯನ್ನು ಗುರುತಿಸುವುದು ಹೇಗೆಂಬ ಪ್ರಶ್ನೆಗೆ ಈ ಕೃತಿ ಉತ್ತರದಾಯಿಯಾಗಿದೆ.
APA, Harvard, Vancouver, ISO, and other styles
5

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
APA, Harvard, Vancouver, ISO, and other styles
6

ಡಾ., ಬಸವರಾಜ ಯು. "ಬಳ್ಳಾರಿ ಜಿಲ್ಲೆಯಲ್ಲಿ ಒಣಭೂಮಿ ಬೇಸಾಯಗಾರರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು". International Journal of Advance Research in Multidisciplinary 2, № 4 (2024): 74–78. https://doi.org/10.5281/zenodo.14343817.

Full text
Abstract:
ಮಾನವ ಸಮಾಜದಲ್ಲಿ ಸಂಘ ಜೀವಿಯಾಗಿ ಜೀವನ ನೆಡಸುತ್ತಿದ್ದಾನೆ. ಸಾಮಾಜವನ್ನು ಬಿಟ್ಟು ಬದುಕಲಾರನು. ಈ ಸಮಾಜದಲ್ಲಿ ಗೌರವಯುತವಾಗಿ ಜೀವನ ಮಾಡಲು ಕೆಲವು ಅವಶ್ಯಕವಾದ ಅಂಶಗಳು ಮುಖ್ಯವಾಗುತ್ತವೆ. ಏಕೆಂದರೆ ಇವು ಜೀವನಕ್ಕೆ ಅವಶ್ಯಕವಾಗಿರುವಂತಹ ಸಂಪನ್ಮೂಲಗಳಾಗಿವೆ. ಎಲ್ಲಾ ಸಂಪನ್ಮೂಲಗಳನ್ನು ಒಬ್ಬ ವ್ಯಕ್ತಿಯಿಂದ ಉತ್ಪಾದಿಸಲು ಸಾಧ್ಯವಿಲ್ಲ. ಅದ್ದರಿಂದ ಇತರೆ ಸಮಾಜದಲ್ಲಿನ ವ್ಯಕ್ತಿಗಳು ಕೂಡಿ ಕೆಲಸಮಾಡಿದರೆ ಸಂಪನ್ಮೂಲಗಳನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತಾನೆ. ಅದೇ ರೀತಿಯಲ್ಲಿ ಮಾನವ ಅಭಿವೃದ್ಧಿಗೆ ಅವಶ್ಯಕವಾದ ಸುಸ್ಥಿರ ಅಭಿವೃದ್ಧಿ ಗುರಿಗಳಾದ ಬಡತನ ನಿರ್ಮೂಲನೆ, ಹಸಿವುಮುಕ್ತ, ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಗುಣಮಟ್ಟದ ಶಿಕ್ಷಣ, ಲಿಂಗ ಸಮಾನತೆ, ಸ್ವಚ್ಛ ನೀರು, ನೈರ್ಮಲ್ಯ, ಅಗ್ಗವಾದ ಬದುಕು ಶುದ್ಧ ಗೌರವಯುತ ಕೆಲಸ ಮತ್ತು ನೆರವು, ಉದ್ಯಮ, ಆವಿ
APA, Harvard, Vancouver, ISO, and other styles
7

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
APA, Harvard, Vancouver, ISO, and other styles
8

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Full text
Abstract:
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
APA, Harvard, Vancouver, ISO, and other styles
9

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
10

ರಾಘವೇಂದ್ರ, ಬಿ. ಎ. ದ್ರಾಕ್ಷಿ, та ಹೆಚ್‌. ವಿಶ್ವಮಾನವ ವಿಜಯಕುಮಾರ. "ಚೆನ್ನಣ್ಣ ವಾಲೀಕಾರ ಅವರ ಕಥೆಗಳಲ್ಲಿ ಪ್ರತಿರೋಧದ ನೆಲೆ". AKSHARASURYA 04, № 02 (2024): 98 to 112. https://doi.org/10.5281/zenodo.11525890.

Full text
Abstract:
ಕಥೆ ಹೇಳುವುದು ಮತ್ತು ಕೇಳುವುದು ಮನುಷ್ಯನ ಆಸಕ್ತಿ ಮತ್ತು ಹವ್ಯಾಸಿ ಎರಡು ಹೌದು. ಕೆಲವು ವರ್ಷಗಳ ಹಿಂದೆ ದೂರದರ್ಶದನಂತಹ ಮಾಧ್ಯಮಗಳು ಬರುವುದಕ್ಕೆ ಮುಂಚೆ ಭಾರತದಂತಹ, ಕರ್ನಾಟಕದಂತಹ ಹಳ್ಳಿಗಳಲ್ಲಿ ಹಿರಿಯರು ಹೇಳುವ ಕತೆಗಳೇ ಮನರಂಜನೆಯ ತಾಣಗಳು ಆಗಿದ್ದವು. ನನಗೆ ನೆನಪಿರುವ ಹಾಗೆ ಚಿಕ್ಕವನಿರುವಾಗ ನಮ್ಮ ಅಜ್ಜಿಯೂ ಹಲವೂ ಕಥೆಗಳನ್ನು ಹೇಳಿ ಕಥೆ ಎಂದರೆ ಏನು ಎಂಬುದನ್ನು ಪರಿಚಯಿಸಿದ್ದಳು. ಅಷ್ಟೇ ಅಲ್ಲದೆ ಅವರು ಹೇಳುವ ಕಥೆಗಳಲ್ಲಿ ಜೀವನದ ಬದುಕಿನ ಅನುಭವದ ಸತ್ಯಾಸತ್ಯಗಳನ್ನು ಒಳಗೊಂಡಿರುವಂತಹ ಮೌಲ್ಯಯುತವಾದ, ನೀತಿಯುತವಾದ ಸಂದೇಶಗಳನ್ನು ಸಾರುವ ಕಥೆಗಳಾಗಿದ್ದವು. ಇಂತಹ ಕಥೆಗಳನ್ನು ಹಿರಿಯರಿಂದ ಕೇಳಿ ಆಧುನಿಕ ಕಥಾ ಸಾಹಿತ್ಯದಲ್ಲಿ ಹಲವಾರು ಕಥೆಗಳನ್ನು ಬರೆದ ಕಥೆಗಾರರು ಕನ್ನಡ ಸಾಹಿತ್ಯದಲ್ಲಿ ಕಂಡು ಬರುತ್ತಾರೆ. ಅವರಲ್ಲಿ ಚೆನ್ನಣ್ಣ ವಾಲೀಕಾರರು
APA, Harvard, Vancouver, ISO, and other styles
11

ಬೋರಯ್ಯ, ಪಿ. ಕೆ. "ತತ್ವಪದಕಾರ ಲಿಂಗಯ್ಯನವರ ತತ್ವಪದಗಳ ಜೀವಾಳ". AKSHARASURYA 05, № 02 (2024): 42 to 49. https://doi.org/10.5281/zenodo.14034913.

Full text
Abstract:
ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಹಾಗೂ ವೇದ ಉಪನಿಷತ್ತುಗಳಿಂದ ಪ್ರಭಾವಿತರಾದ ಲಿಂಗಯ್ಯನವರು ತತ್ವಪದಕಾರರಾಗಿ, ವೇದಾಂತಿಗಳಾಗಿ, ಒಬ್ಬ ಆದರ್ಶ ಶಿಕ್ಷಕರಾಗಿ, ಕವಿಗಳಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಆಧ್ಯಾತ್ಮಿಕ ಕಥೆಗಳು, ನಾಟಕ, ಜೀವನ ಚರಿತ್ರೆ, ಸಾವಿರಾರು ತತ್ವಪದಗಳನ್ನು ಬರೆದು, ಸಾಮಾಜಿಕ ವ್ಯವಸ್ಥೆಯಲ್ಲಿ ಬಡವರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟವನ್ನು ಮಾಡುವುದರ ಮೂಲಕ ಜನರಲ್ಲಿ, ಶಾಂತಿ ಸಾಮರಸ್ಯದ ಬೆಳಕನ್ನು ಚೆಲ್ಲವುದರ ಕಡೆಗೆ ಮುಖ ಮಾಡಿ ಚಲಿಸಿದ್ದೆ ಅಪಾರ. ವೈದಿಕರನ್ನು ಮತ್ತು ವೈದಿಕತೆಯನ್ನು ತನ್ನ ಅಂತರಂಗದಿಂದಲೇ ಗ್ರಹಿಸಿ, ಅವರ ಆಚರಣೆಗಳನ್ನು ಪ್ರಶ್ನಿಸಿ, ಅವರು ತಮ್ಮ ತತ್ವಪದಗಳಲ್ಲಿ ವಿಶ್ಲೇಷಿಸಿರುವುದು ಗಮನಾರ್ಹ. ಹಾಗೆಯೇ ಸಮಾಜದಲ್ಲಿ ಅನೇಕ ರೀತಿಯ ಆಚರಣೆಗಳಲ್ಲಿ ಜಾತಿ, ಮತ, ಮಡಿ-
APA, Harvard, Vancouver, ISO, and other styles
12

ನಾಗರಾಜ, ಹರಿಜನ. "ಅಸ್ಪೃಶ್ಯತೆಯ ನಿರ್ಮೂಲನೆಯಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ". AKSHARASURYA JOURNAL 06, № 05 (2025): 105 to 113. https://doi.org/10.5281/zenodo.15504316.

Full text
Abstract:
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ್ಮದಾಗಿದ್ದು ಇದರ ಹೆಮ್ಮೆಯ ಸಂಗತಿಯೆಂದರೆ ಅದುವೇ ಸಮಾನತೆ ಎಂದು ಹೇಳಬಹುದು. ಭಾರತದ ಸರ್ಕಾರವು ಸಂವಿಧಾನ ಜಾರಿಯಾದಾಗಿನಿಂದ ಹಿಡಿದು ಪ್ರಸ್ತುತ ದಿನಮಾನದವರೆಗೆ ಇಲ್ಲಿನ ಪ್ರತಿಯೊಬ್ಬ ಪ್ರಜೆಯೂ ಭ್ರಾತೃತ್ವ ಭಾವನೆಯೊಂದಿಗೆ ಯಾವುದೇ ಜಾತಿ, ವರ್ಗ ಮತ್ತು ಮತಗಳ ಬೇಧಭಾವವಿಲ್ಲದೇ ʼನಾವೆಲ್ಲರೂ ಭಾರತೀಯರು, ನಾವೆಲ್ಲರೂ ಸಮಾನರು’ ಎನ್ನುವಂತೆ ಕಾಯ್ದೆ ಕಾನೂನುಗಳನ್ನ
APA, Harvard, Vancouver, ISO, and other styles
13

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
14

ನವೀನ್, ಕುಮಾರ ಎ. ಜಿ. "ಅಂಬೇಡ್ಕರ್‌: ಅಸ್ಪೃಶ್ಯರ ಆರ್ಥಿಕ ಸ್ವಾವಲಂಬನೆಗಾಗಿ ನಡೆಸಿದ ಚಿಂತನೆಗಳು". AKSHARASURYA JOURNAL 06, № 05 (2025): 121 to 132. https://doi.org/10.5281/zenodo.15504345.

Full text
Abstract:
ಇಂದು ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳ ಏಳಿಗೆಯು ಒಂದು ರಾಷ್ಟ್ರೀಯ ಸಮಸ್ಯೆಯಾಗಿ ಉಳಿಯುತ್ತ ಬಂದಿದೆ. ಕಳೆದ ನಲವತ್ತು ವರ್ಷಗಳಿಂದ ಅಂದರೆ 1991 ರಿಂದ ಮಾಹಿತಿ ತಂತ್ರಜ್ಞಾನದಿಂದ ಪ್ರಾರಂಭವಾಗಿ 2018ರ ಮೇಕಿಂಗ್ ಇಂಡಿಯಾ ವರೆಗೆ ಅನೇಕ ಯೋಜನೆಗಳು ಹತ್ತಾರು ಭಾಗ್ಯಗಳು ಅಪಾರ ಪ್ರಮಾಣದ ಆರ್ಥಿಕ ನೆರವು ನೀಡಲಾಗಿದೆ. ಆದರೂ ಸಮಾಜದಲ್ಲಿ ಆರ್ಥಿಕ ದುರ್ಬಲ ವರ್ಗ ಸಮಾಜಿಕವಾಗಿ ಮುಖ್ಯವಾಹಿನಿಯಲ್ಲಿ ಬಂದು ಮಹತ್ತರವಾದ ಸಾಧನೆ ಮಾಡುವಲ್ಲಿ ವಿಫಲವಾಗಿದೆ. ಬಡತನ ನಿರ್ಮೂಲನೆ ಅಸಾಧ್ಯವೇನೋ ಅನಿಸುವಷ್ಟರ ಮಟ್ಟಕ್ಕೆ ಬಂದು ನಿಂತಿದೆ. ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಸುಲಿಗೆ, ಮೋಸ, ಸಂಪತ್ತಿನ ಕ್ರೋಢಿಕರಣಕ್ಕಾಗಿ ನಡೆಯುತ್ತ ಕಾನೂನೆ ಭಯಪಡುವ ಮಟ್ಟಕ್ಕೆ ನಡೆಯುತ್ತಿವೆ. ಇದರ ಪರಿಣಾಮ ಜನ ಅನ್ಯ ಧರ್ಮಕ್ಕೆ ಮತಾಂತರ ಹೊಂದುತ್ತ ಅಲ್ಲಿಯೂ ನೆಮ್ಮದಿ ಕಾಣದ
APA, Harvard, Vancouver, ISO, and other styles
15

ಸುನೀತಾ, ಮಹೇಶ್ವರಿ. "ಬಸವಣ್ಣನವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA 05, № 01 (2024): 134 to 138. https://doi.org/10.5281/zenodo.13871042.

Full text
Abstract:
೧೨ನೇ ಶತಮಾನದ ಆಂದೋಲನದ ನಾಯಕ ಮತ್ತು ಕೇಂದ್ರ ವ್ಯಕ್ತಿ ಆದ ಬಸವಣ್ಣ ಸಾಹಿತ್ಯದೃಷ್ಟಿಯಿಂದ ನೋಡಿದಾಗ ಆತ ಒಬ್ಬ ಅತ್ಯುತ್ತಮ ಕೃತಿಕಾರ ಸಮಾನತೆಯ ತತ್ವವನ್ನು ಸಾರಿದ ಹರಿಕಾರ ಎಂದು ಹೇಳುವುದು ಆಕಸ್ಮಿಕವೇ ಸರಿ. ಆತ ಹುಟ್ಟಿದ್ದು ಬಿಜಾಪುರ್ ಜಿಲ್ಲೆಯ ಬಸವನಬಾಗೇವಾಡಿ ಅಗ್ರಹಾರ ಎಂಬ ಊರಲ್ಲಿ ೧೧೩೪ಲ್ಲಿ ಜನನವಾಯಿತು. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಇವರು ಬಾಲ್ಯದಿಂದಲೇ ವೈದಿಕ ಸಂಸ್ಕೃತಿಯ ವಿರೋಧಿಗಳಾಗಿದ್ದರು. ಇವರು ಹುಟ್ಟಿದ್ದು ಉತ್ತಮ ಬ್ರಾಹ್ಮಣ ಮನೆತನದಲ್ಲಿ ಆದರು ದಲಿತ ವರ್ಗದ ಜೊತೆ ಬೆರೆತು ಅವರಿಗಾಗಿ ತನ್ನ ಜೀವನದುದ್ದಕ್ಕೂ ಹೋರಾಡಿದನೆಂದು ತಿಳಿದು ಬರುತ್ತದೆ. ಹೊಸ ಹೊಸ ಬಗೆಯ ಅನೇಕ ಸುಧಾರಣೆಗಳನ್ನು ಜಾರಿಗೆ ತಂದು ನಮ್ಮ ಆಡಳಿತವನ್ನು ಸರಳಗೊಳಿಸಿದರು. ಎಲ್ಲಾ ಶರಣರನ್ನು ಕೂಡಿಸಿ ಎಲ್ಲಾ ಜಾತಿಯವರೊಡನೆ ತಮ್ಮನ್ನು ತಾವು ತೊಡಗಿಸಿಕೊಂಡು ಸ
APA, Harvard, Vancouver, ISO, and other styles
16

ಲಕ್ಷ್ಮಿದೇವಿ, ಎನ್‌. "ಬಾಚಿಕಾಯಕದ ಕಾಳವ್ವೆಯ ವಚನದಲ್ಲಿ ಕಾಯಕ, ಮಾತು ಮತ್ತು ವ್ರತ ಪ್ರಜ್ಞೆ". AKSHARASURYA 04, № 03 (2024): 117 to 124. https://doi.org/10.5281/zenodo.12672873.

Full text
Abstract:
ವಚನಗಳಲ್ಲಿ ನಾವು ವಿಚಾರ ಸ್ವಾತಂತ್ರ್ಯದ ಪರಾಕಾಷ್ಟೆಯನ್ನು ಕಾಣುತ್ತೇವೆ. “ಉದರ ನಿಮಿತ್ತಂ ಬಹುಕೃತ ವೇಷಂ” ಎಂಬ ಮಾತೊಂದಿದೆ. ಹೊಟ್ಟೆ ಹೊರೆಯುವುದಕ್ಕಾಗಿ ಮಾನವ ಅನೇಕ ವೇಷಗಳನ್ನು ಕೈಗೊಳ್ಳುತ್ತಾನೆ. ಆದರೆ ಶರಣರು ಹೊಟ್ಟೆ ಹೊರೆಯುವ ಕಾಯಕದ ಮೂಲಕ ದಾಸೋಹ ಸಿದ್ಧಾಂತವನ್ನು ಅನುಭಾವದ ಮೂಲಕ ಸಮಾಜಕ್ಕೆ ಸಾರಿದವರು. ಅಸಮಾನತೆಯ ಸಮಾಜದಲ್ಲಿ ಶೂದ್ರರಿಗೆ, ಅಸ್ಪೃಶ್ಯರಿಗೆ, ಹೆಣ್ಣಿಗೆ ಸಮಾನ ಸ್ಥಾನಮಾನವನ್ನು ತಂದುಕೊಟ್ಟ ಕೀರ್ತಿ ಬಸವಣ್ಣನರಿಗೆ ಸಲ್ಲುತ್ತದೆ. ೧೨ನೇ ಶತಮಾನದ ಸಮಾಜದಲ್ಲಿ ಅಕ್ಷರ ಕ್ರಾಂತಿಯ ಮೂಲಕ ಸ್ತ್ರೀ-ಪುರುಷ ಸಮಾನತೆಯನ್ನು ಪಡೆದದ್ದು ಪವಾಡವೇ ಸರಿ. ಅದರಲ್ಲೂ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಮಹಿಳೆ ಅನುಭವ ಮಂಟಪದ ಗೋಷ್ಠಿಯಲ್ಲಿ ಪುರುಷನಷ್ಟೇ ಸಮಾನತೆಯನ್ನು ಕೈಗೊಂಡಿದ್ದು ಸಮಾಜಿಕ ಕ್ರಾಂತಿ ಎನ್ನಬಹುದು. ಅವರಲ್ಲಿ
APA, Harvard, Vancouver, ISO, and other styles
17

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
18

ಶೈಲಜ, ಹಿರೇಮಠ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಬುಡಕಟ್ಟು ಮಹಿಳೆ: ಸ್ಥಾಪಿತ ಗ್ರಹಿಕೆಗಳಿಗೆ ಭಿನ್ನಮತ". AKSHARASURYA 05, № 02 (2024): 01 to 34. https://doi.org/10.5281/zenodo.14035474.

Full text
Abstract:
ಪ್ರಸ್ತುತ ಸಂದರ್ಭದಲ್ಲಿ ವಿಶಾಲಾರ್ಥ ದೃಷ್ಟಿಕೋನದ ಬರಹಗಾರರಾಗುವುದೆಂದರೆ, ಸಮಾಜದಲ್ಲಿನ ಜಾತಿ, ಪ್ರದೇಶ, ಬುಡಕಟ್ಟು, ಆದಿವಾಸಿ ಮತ್ತು ಜಂಡರ್ ಆಧಾರಿತ ಶ್ರೇಣೀಕರಣವನ್ನು ಮೀರುವುದೇ ಆಗಿದೆ; ಹಾಗಿದ್ದರೂ ಅಸಮಾನತೆಗೆ ಬುನಾದಿಯೊದಗಿಸುವ ಶ್ರೇಣೀಕರಣವನ್ನು ಅಸ್ಮಿತೆಯಾಗಿ, ಅನನ್ಯತೆಯಾಗಿ ಚಿಂತಕರು ನಿರೂಪಿಸಿದ್ದರ ಪರಿಣಾಮದಿಂದಾಗಿ, ಅಸಮಾನತೆಯನ್ನು ಸಮರ್ಥಿಸುವ ನಿರೂಪಣೆಗಳು ಸಾಹಿತ್ಯ ಲೋಕದಲ್ಲೂ ನಿರಾತಂಕವಾಗಿ ಮುಂದುವರೆದಿವೆ. ಬರಹಲೋಕದೊಳಗಿನ ಇಂತಹ ನಿರೂಪಣೆಯ ರಾಜಕಾರಣವೇ ಸತ್ಯವನ್ನು ಸೃಷ್ಟಿಸುತ್ತ, ಅದನ್ನು ಒಪ್ಪುವಂತೆ ಜ್ಞಾನದ ಅಧಿಕಾರದ ನೆಲೆಯಲ್ಲಿ ಒತ್ತಾಯಿಸುತ್ತದೆ; ಅಧ್ಯಯನದೊಳಗಿನ ಬರಹಗಾರರ ಉದ್ದೇಶದ ಭಾಗವಾಗಿ ನಿರೂಪಣೆಗೊಂಡ ನಿಲುವುಗಳನ್ನು ಸಮಸ್ಯೀಕರಿಸಿಕೊಂಡು ಮರುವಿಶ್ಲೇಷಣೆಗೆ ಒಳಪಡಿಸಬೇಕಿದೆ. ಈ ಉದ್ದೇಶದ ಹಿನ್ನೆಲೆಯಲ್ಲಿಯೇ ಮಹಿಳೆ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!