To see the other types of publications on this topic, follow the link: ಅಸ್ಪೃಶ್ಯತೆ.

Journal articles on the topic 'ಅಸ್ಪೃಶ್ಯತೆ'

Create a spot-on reference in APA, MLA, Chicago, Harvard, and other styles

Select a source type:

Consult the top 28 journal articles for your research on the topic 'ಅಸ್ಪೃಶ್ಯತೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
2

ನಾಗರಾಜ, ಹರಿಜನ. "ಅಸ್ಪೃಶ್ಯತೆಯ ನಿರ್ಮೂಲನೆಯಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ". AKSHARASURYA JOURNAL 06, № 05 (2025): 105 to 113. https://doi.org/10.5281/zenodo.15504316.

Full text
Abstract:
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ್ಮದಾಗಿದ್ದು ಇದರ ಹೆಮ್ಮೆಯ ಸಂಗತಿಯೆಂದರೆ ಅದುವೇ ಸಮಾನತೆ ಎಂದು ಹೇಳಬಹುದು. ಭಾರತದ ಸರ್ಕಾರವು ಸಂವಿಧಾನ ಜಾರಿಯಾದಾಗಿನಿಂದ ಹಿಡಿದು ಪ್ರಸ್ತುತ ದಿನಮಾನದವರೆಗೆ ಇಲ್ಲಿನ ಪ್ರತಿಯೊಬ್ಬ ಪ್ರಜೆಯೂ ಭ್ರಾತೃತ್ವ ಭಾವನೆಯೊಂದಿಗೆ ಯಾವುದೇ ಜಾತಿ, ವರ್ಗ ಮತ್ತು ಮತಗಳ ಬೇಧಭಾವವಿಲ್ಲದೇ ʼನಾವೆಲ್ಲರೂ ಭಾರತೀಯರು, ನಾವೆಲ್ಲರೂ ಸಮಾನರು’ ಎನ್ನುವಂತೆ ಕಾಯ್ದೆ ಕಾನೂನುಗಳನ್ನ
APA, Harvard, Vancouver, ISO, and other styles
3

ಸುನೀತಾ, ಮಹೇಶ್ವರಿ. "ಬಸವಣ್ಣನವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA 05, № 01 (2024): 134 to 138. https://doi.org/10.5281/zenodo.13871042.

Full text
Abstract:
೧೨ನೇ ಶತಮಾನದ ಆಂದೋಲನದ ನಾಯಕ ಮತ್ತು ಕೇಂದ್ರ ವ್ಯಕ್ತಿ ಆದ ಬಸವಣ್ಣ ಸಾಹಿತ್ಯದೃಷ್ಟಿಯಿಂದ ನೋಡಿದಾಗ ಆತ ಒಬ್ಬ ಅತ್ಯುತ್ತಮ ಕೃತಿಕಾರ ಸಮಾನತೆಯ ತತ್ವವನ್ನು ಸಾರಿದ ಹರಿಕಾರ ಎಂದು ಹೇಳುವುದು ಆಕಸ್ಮಿಕವೇ ಸರಿ. ಆತ ಹುಟ್ಟಿದ್ದು ಬಿಜಾಪುರ್ ಜಿಲ್ಲೆಯ ಬಸವನಬಾಗೇವಾಡಿ ಅಗ್ರಹಾರ ಎಂಬ ಊರಲ್ಲಿ ೧೧೩೪ಲ್ಲಿ ಜನನವಾಯಿತು. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಇವರು ಬಾಲ್ಯದಿಂದಲೇ ವೈದಿಕ ಸಂಸ್ಕೃತಿಯ ವಿರೋಧಿಗಳಾಗಿದ್ದರು. ಇವರು ಹುಟ್ಟಿದ್ದು ಉತ್ತಮ ಬ್ರಾಹ್ಮಣ ಮನೆತನದಲ್ಲಿ ಆದರು ದಲಿತ ವರ್ಗದ ಜೊತೆ ಬೆರೆತು ಅವರಿಗಾಗಿ ತನ್ನ ಜೀವನದುದ್ದಕ್ಕೂ ಹೋರಾಡಿದನೆಂದು ತಿಳಿದು ಬರುತ್ತದೆ. ಹೊಸ ಹೊಸ ಬಗೆಯ ಅನೇಕ ಸುಧಾರಣೆಗಳನ್ನು ಜಾರಿಗೆ ತಂದು ನಮ್ಮ ಆಡಳಿತವನ್ನು ಸರಳಗೊಳಿಸಿದರು. ಎಲ್ಲಾ ಶರಣರನ್ನು ಕೂಡಿಸಿ ಎಲ್ಲಾ ಜಾತಿಯವರೊಡನೆ ತಮ್ಮನ್ನು ತಾವು ತೊಡಗಿಸಿಕೊಂಡು ಸ
APA, Harvard, Vancouver, ISO, and other styles
4

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
5

ಅಂಜಿನಪ್ಪ, ಎಲ್.ಟಿ. "ಕನ್ನಡದಲ್ಲಿ ಮೀಸಲಾತಿ ಚಳವಳಿಯ ಇತಿಹಾಸ: ಒಂದು ಅವಲೋಕನ". AKSHARASURYA JOURNAL 06, № 06 (2025): 01 to 10. https://doi.org/10.5281/zenodo.15580870.

Full text
Abstract:
ಪ್ರಸ್ತುತ ಈ ಲೇಖನದಲ್ಲಿ ಭಾರತದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆ ಶೂದ್ರರು ಅನುಭವಿಸಿದ ಯಾತನೆಗಳು, ಹನ್ನೆರಡನೇ ಶತಮಾನದಲ್ಲಿ ಆದ ಸಾಮಾಜಿಕ ಕ್ರಾಂತಿಗಳು, ಸ್ವಾತಂತ್ರ ಪೂರ್ವದಲ್ಲಿನ ಮೀಸಲಾತಿ ಕ್ರಮಗಳು ನಂತರದ ಬೆಳವಣಿಗೆಯನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ಕೊಲ್ಲಾಪುರದ ಶಾಹುಮಹಾರಾಜರು ಹಿಂದುಳಿದವರಿಗೆ ಶೇಕಡ 50ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ ಎಂಬ ಹೆಗ್ಗಳಿಕೆ ಪಾತ್ರವಾದ ರೀತಿ ಹಾಗೂ ಅವರ ಕೈಗೊಂಡ ಕಾರ್ಯವೈಖರಿಗಳನ್ನು ಇಲ್ಲಿ ತಿಳಿಸಲಾಗಿದೆ. ಜೊತೆಗೆ ನಾಲ್ವಡಿ ಕೃಷ್ಣರಾಜ ಒಡೆಯರು ಹಿಂದುಳಿದವರಿಗೆ ನೀಡಿದ ಕೊಡುಗೆಗಳು ಅವರ ಅಧಿಕಾರವಧಿಯಲ್ಲಿ ಜಾರಿಗೆ ತಂದ ಮಿಲ್ಲರ್ ಆಯೋಗ, ಮಿಲ್ಲರ್ ಆಯೋಗವು ಆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನೀಡುತ್ತಿದ್ದ ತಾರತಮ್ಯ ಸಂಬಳದ ಸೌಲತ್ತುಗಳು ಇತರ ಸೌಲತ್ತುಗಳು ಹಾಗೂ ಆಯೋಗ ಕ
APA, Harvard, Vancouver, ISO, and other styles
6

ಪ್ರಸನ್ನಕುಮಾರ್, ಕೆ. "ಅಂಬೇಡ್ಕರ್‌ರವರ ಸಾಮಾಜಿಕ ಚಿಂತನೆಗಳು". AKSHARASURYA JOURNAL 05, № 06 (2025): 110 to 116. https://doi.org/10.5281/zenodo.14788784.

Full text
Abstract:
ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಸಿಕೊಂಡ ಮಹಾನ್ ವ್ಯಕ್ತಿ. ಇವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಇವರು ದೇಶಕ್ಕಾಗಿ ಮಾಡಿದ ಹೋರಾಟಗಳು ಎಂತಹ ದುರ್ಬಲ ವ್ಯಕ್ತಿಗಳನ್ನೂ ಸಹ ಎಚ್ಚರಿಸುತ್ತದೆ. ಇವರ ಕೊಡುಗೆಯನ್ನು ಭಾರತೀಯ ಜನತೆ ಎಂದಿಗೂ ಮರೆಯುವುದಿಲ್ಲ. ಸಂವಿಧಾನ ರಚನೆಗೆ ಮಾತ್ರವಲ್ಲದೇ ಅವರ ಸೇವೆ ಜನತೆಯನ್ನು ಜಾಗೃತರಾಗಿ ಮಾಡುವ ಸಾಧನವಾಗಿದೆ ಎನ್ನಬಹುದು. ಅಂಬೇಡ್ಕರ್ ಅವರು ವೈಚಾರಿಕತೆಯ ನೆಲೆಯಲ್ಲಿ ಈ ದೇಶವನ್ನು ಮುಂದೆ ತೆಗೆದುಕೊಂಡು ಹೋಗಬೇಕೆಂಬ ಮಹದಾಶಯವನ್ನು ಹೊಂದಿರುವ ಅಪರೂಪ ವ್ಯಕ್ತಿ. ಈ ಹಿನ್ನಲೆಯಲ್ಲಿಯೇ ಅವರು “ಈ ದೇಶದಲ್ಲಿ ಗುಡಿ-ಗೋಪುರಗಳಿಗಿಂತ ಶಾಲೆಗಳು ತೆರೆದರೆ, ಆ ದೇಶ ಉದ್ದಾರವಾಗುತ್ತದೆ” ಎಂಬ ನಿಲುವನ್ನು ತ
APA, Harvard, Vancouver, ISO, and other styles
7

ನವೀನ್, ಕುಮಾರ ಎ. ಜಿ. "ಅಂಬೇಡ್ಕರ್‌: ಅಸ್ಪೃಶ್ಯರ ಆರ್ಥಿಕ ಸ್ವಾವಲಂಬನೆಗಾಗಿ ನಡೆಸಿದ ಚಿಂತನೆಗಳು". AKSHARASURYA JOURNAL 06, № 05 (2025): 121 to 132. https://doi.org/10.5281/zenodo.15504345.

Full text
Abstract:
ಇಂದು ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳ ಏಳಿಗೆಯು ಒಂದು ರಾಷ್ಟ್ರೀಯ ಸಮಸ್ಯೆಯಾಗಿ ಉಳಿಯುತ್ತ ಬಂದಿದೆ. ಕಳೆದ ನಲವತ್ತು ವರ್ಷಗಳಿಂದ ಅಂದರೆ 1991 ರಿಂದ ಮಾಹಿತಿ ತಂತ್ರಜ್ಞಾನದಿಂದ ಪ್ರಾರಂಭವಾಗಿ 2018ರ ಮೇಕಿಂಗ್ ಇಂಡಿಯಾ ವರೆಗೆ ಅನೇಕ ಯೋಜನೆಗಳು ಹತ್ತಾರು ಭಾಗ್ಯಗಳು ಅಪಾರ ಪ್ರಮಾಣದ ಆರ್ಥಿಕ ನೆರವು ನೀಡಲಾಗಿದೆ. ಆದರೂ ಸಮಾಜದಲ್ಲಿ ಆರ್ಥಿಕ ದುರ್ಬಲ ವರ್ಗ ಸಮಾಜಿಕವಾಗಿ ಮುಖ್ಯವಾಹಿನಿಯಲ್ಲಿ ಬಂದು ಮಹತ್ತರವಾದ ಸಾಧನೆ ಮಾಡುವಲ್ಲಿ ವಿಫಲವಾಗಿದೆ. ಬಡತನ ನಿರ್ಮೂಲನೆ ಅಸಾಧ್ಯವೇನೋ ಅನಿಸುವಷ್ಟರ ಮಟ್ಟಕ್ಕೆ ಬಂದು ನಿಂತಿದೆ. ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಸುಲಿಗೆ, ಮೋಸ, ಸಂಪತ್ತಿನ ಕ್ರೋಢಿಕರಣಕ್ಕಾಗಿ ನಡೆಯುತ್ತ ಕಾನೂನೆ ಭಯಪಡುವ ಮಟ್ಟಕ್ಕೆ ನಡೆಯುತ್ತಿವೆ. ಇದರ ಪರಿಣಾಮ ಜನ ಅನ್ಯ ಧರ್ಮಕ್ಕೆ ಮತಾಂತರ ಹೊಂದುತ್ತ ಅಲ್ಲಿಯೂ ನೆಮ್ಮದಿ ಕಾಣದ
APA, Harvard, Vancouver, ISO, and other styles
8

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
9

ವಿಜಯಲಕ್ಷ್ಮಿ, ದತ್ತಾತ್ರೇಯ ದೊಡ್ಡಮನಿ. "ವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ". AKSHARASURYA JOURNAL 06, № 05 (2025): 241 to 248. https://doi.org/10.5281/zenodo.15504724.

Full text
Abstract:
ಆತ್ಮಕಥೆ ಕನ್ನಡ ಸಾಹಿತ್ಯದ ಒಂದು ಸಾಹಿತ್ಯ ಪ್ರಕಾರವಾಗಿ ಬೆಳೆದು ಬಂದಿರುವುದನ್ನು ನೋಡುತ್ತೇವೆ. ಮನುಷ್ಯನ ಸುತ್ತಲೂ ನಡೆಯುವ ಮತ್ತು ಅವರ ಅಂತರಾಳದಲ್ಲಿರುವ ಹೂರಣಗಳನ್ನು ಹೊರ ಹಾಕುವ ಒಂದು ಪ್ರಕಾರವಾಗಿ ಕಾಣುತ್ತೇವೆ. ಒಬ್ಬ ಮನುಷ್ಯನ ಇಡೀ ಬದುಕಿನಲ್ಲಿ ನಡೆದಂತಹ ತಪ್ಪು-ಸರಿ, ಸಿಹಿ-ಕಹಿ ಘಟನೆಗಳಿಗೆ ಅಕ್ಷರ ರೂಪವನ್ನು ನೀಡುತ್ತಾನೆ. ತಮ್ಮ ಅಂತರಾಳದ ತಮುಲಗಳನ್ನು ಸ್ವವಿಮರ್ಶೆಗೆ ಒಳಪಡಿಸಿಕೊಳ್ಳಲಾಗುತ್ತದೆ. ಆದರೆ ಬಾಬಾ ಸಾಹೇಬರು ಬರೆದ ಅವರ ಆತ್ಮಕಥೆಯಲ್ಲಿ ಅವರ ಬದುಕಿನ ಕಹಿ ಘಟನೆಗಳು ಹೇಗೆ ಮುಂದೆ ಅವರು ಇಡೀ ಸಮಾಜದ ಏಳಿಗೆಗಾಗಿ ಅವುಗಳನ್ನೆ ಆಧಾರವಾಗಿ ಬಳಸಿಕೊಂಡರು ಎನ್ನುವುದನ್ನು ಅವರ ಬದುಕೆ ನಮಗೆ ತೋರಿಸಿಕೊಡುತ್ತದೆ. ʼವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ’ ಇದು ಡಾ. ಬಿ.ಆರ್. ಅಂಬೇಡ್ಕರ್‌ ಅವರು ಬರೆದಿರುವ ಆತ್ಮಕಥ
APA, Harvard, Vancouver, ISO, and other styles
10

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
11

ಕಾಂತರಾಜ, ಯಾದವ್ ಸಿ. "ದಲಿತ ಆತ್ಮಕತೆಗಳಲ್ಲಿ ಬಾಲ್ಯ ಮತ್ತು ಶಾಲಾ ಶಿಕ್ಷಣದ ನಿರೂಪಣೆಗಳು". AKSHARASURYA 06, № 02 (2025): 84 to 91. https://doi.org/10.5281/zenodo.15124072.

Full text
Abstract:
ಮನುಷ್ಯನ ಬದುಕಿನಲ್ಲಿ ಬಾಲ್ಯದ ಅನುಭವವು ತುಂಬಾ ಮುಖ್ಯವಾದದ್ದು. ಬಾಲ್ಯದ ಬದುಕು ಎಲ್ಲರಿಗೂ ಒಂದೇ ರೀತಿಯದಾಗಿರುವುದಿಲ್ಲ. ಆ ವಯಸ್ಸಿನ ಶಿಕ್ಷಣವೂ ಕೂಡ ಬಾಲ್ಯದ ಅನುಭವವಗಳನ್ನು ದಟ್ಟವಾಗಿ ಆವರಿಸಿಕೊಂಡಿರುತ್ತದೆ. ಜಾತಿಯಾಧಾರಿತ ಸಾಮಾಜಿಕ ವ್ಯವಸ್ಥೆಯೂ ಕೂಡ ಈ ಬಾಲ್ಯದ ಮೇಲೆ ಪ್ರಭಾವವನ್ನು ಬೀರುತ್ತದೆ. ಮೇಲ್ಜಾತಿ, ಮಧ್ಯಮ ಜಾತಿಗಳು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದ ಕುರಿತಂತೆ ಎಚ್ಚರಿಕೆಯಿಂದಿದ್ದರೆ, ತಳ ಸಮುದಾಯಗಳು ಮತ್ತು ಶ್ರಮಿಕ ವರ್ಗ ಮೂಲಭೂತ ಸೌಕರ್ಯಗಳಿಗಾಗಿಯೇ ಹೋರಾಟ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂಧರ್ಭದಲ್ಲಿ ಶಿಕ್ಷಣದ ಕುರಿತ ಮಾತು ಕನಸಿನ ಪಯಣವೇ ಸರಿ. ಹಸಿವು ಮತ್ತು ಅವಮಾನಗಳಾಚೆಗಿನ ಬದುಕನ್ನು ದಲಿತ ಆತ್ಮಕಥೆಗಳಲ್ಲಿ ಕಾಣಬಹುದು. ಶಾಲೆಯ ಕುರಿತಂತೆ, ಶಿಕ್ಷಕರ ಕುರಿತಂತೆ ದಲಿತ ಆತ್ಮಕತೆಗಳು ಚಿತ್ರಿಸುವ ಸೂಕ್ಷ್ಮ ಪ
APA, Harvard, Vancouver, ISO, and other styles
12

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್‌ ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
13

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
14

ಅಜೀತ, ಪಾತ್ರೋಟ, та ರುಮ್ಮಾ ಶಿವಗಂಗಾ. "'ವೀಸಾದ ನಿರೀಕ್ಷಣೆಯಲ್ಲಿ ಆತ್ಮಕಥನ': ಡಾ.ಬಿ.ಆರ್. ಅಂಬೇಡ್ಕರರ ಜೀವನ ಮತ್ತು ಪ್ರಯೋಗಗಳು." AKSHARASURYA 04, № 03 (2024): 78 to 87. https://doi.org/10.5281/zenodo.12672742.

Full text
Abstract:
ಆತ್ಮಕಥೆ ಬರೆದುಕೊಳ್ಳುವುದು ಮನುಷ್ಯ ಬದುಕಿನ ಪ್ರಮುಖ ಬೆಳವಣಿಗೆಯಾಗಿದೆ. ಈ ಕಾರಣವಾಗಿಯೆ ಮನುಷ್ಯ ತನ್ನ ಸರಿ ತಪ್ಪುಗಳನ್ನು ನಿವೇದಿಸಿಕೊಂಡು ಬದುಕಿನ ವಿಕಾಸದತ್ತ ದಾಪುಗಾಲಿಡುವುದು ಕಾಣಬಹುದು. ಮಾನವ ಬೆಳವಣಿಗೆ ಮತ್ತು ವಿಕಾಸ ಕ್ರಮದಲ್ಲಿ ತನ್ನ ಬದುಕಿನ ಅನುಭವಗಳನ್ನು ಮನೆ, ಸಮಾಜ, ಪರಿಸರ, ಸಂಸ್ಕೃತಿಗಳಿಂದ ರೂಪುಗೊಂಡಿವೆ. ಅವುಗಳು ಮನುಷ್ಯ ಒಳ ಹೊರಗನ್ನು ಅರಿತುಕೊಳ್ಳಲು ಸಹಾಯ ಮಾಡುತ್ತವೆ. ಇಲ್ಲಿ ಪ್ರಮುಖವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಬದುಕಿನುದ್ದಕ್ಕೂ ಅನುಭವಿಸಿದ ದುಖಃ ದುಮ್ಮಾನಗಳು, ಸಂಕಟಗಳು ಮತ್ತು ಅವುಗಳಿಂದ ಬಿಡುಗಡೆಗೆ ಹಾತೋರೆಯುವ ಮನಸ್ಥಿತಿ ಪ್ರಕಟಗೊಳ್ಳುತ್ತದೆ. ಅಲ್ಲದೆ ಅವರು ಕಂಡುಕೊಳ್ಳುವ ಪರಿಹಾರೋಪಾಯಗಳು ಎಲ್ಲವೂ ಒಂದೊಂದು ಹೊಸ ಪ್ರಯೋಗದಂತೆ ಗೋಚರಿಸುತ್ತದೆ. ಅಲ್ಲದೆ ಅವು ಓದುಗರಿಗೆ ಸಂದೇಶಗಳಾಗಿ ಮಾರ್ಪಡುತ್
APA, Harvard, Vancouver, ISO, and other styles
15

ಗಾಯತ್ರಿ, ಉಪ್ಪಾರ. "ಸಮಾನತೆಯ ಹರಿಕಾರ ಬಸವಣ್ಣ". AKSHARASURYA JOURNAL 04, № 05 Special Issue (2024): 70 to 74. https://doi.org/10.5281/zenodo.13294390.

Full text
Abstract:
ಬಸವಣ್ಣ 12ನೇಯ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಮನುಕುಲದ ಉದ್ಧಾರಕ್ಕಾಗಿ ಎಲ್ಲ ರಂಗದಲ್ಲಿಯೂ ಕ್ರಾಂತಿಗೈದ ಮಹಾನ್ ಪುರುಷ, ಕ್ರಾಂತಿಕಾರಿ. ಸಮಾಜದಲ್ಲಿನ ಅನಿಷ್ಟಗಳನ್ನು ತೆಗೆದುಹಾಕಲು ಶ್ರಮಿಸಿದರು. ವಚನಗಳ ಮುಖಾಂತರ ಸಮಾಜದ ಮಧ್ಯದಲ್ಲಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡಲು ಜನರ ಮಧ್ಯ ದುಮುಕಿ ಜನಸಾಮಾನ್ಯರಿಗೆ ತಿಳಿಯುವ ಭಾಷೆಯಲ್ಲಿ ವಚನಗಳ ಮೂಲಕ ಸಮಾಜದ ಅಂಕು, ಡೊಂಕುಗಳನ್ನು, ಢಾಂಬಿಕತೆಗಳನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿಗನ್ನಡ ವಚನಗಳ ಮೂಲಕ ನಿರೂಪಿಸಿದ ಮಹಾನ ನೇತಾರ. ಸದ್ಗುಣ ಸದಾಚಾರಗಳು ಯಾವುದೇ ಜಾತಿಗೆ ಮೀಸಲಾದವುಗಳಲ್ಲ ಇಲ್ಲವೆ ಹುಟ್ಟಿನಿಂದ ಬಂದವುಗಳೂ ಅಲ್ಲ. ಈ ಅಸ್ಪೃಶ್ಯತಾ ಭಾವನೆಯನ್ನು ಬಸವಣ್ಣನವರು ಸಂಪೂರ್ಣವಾಗಿ ತೆಗೆದುಹಾಕಿ ಸಮಾನತೆಯನ್ನು ತಮ್ಮ ಜೀವನದಲ್ಲಿ ಆಚರಣೆಗೆ ತಂದರು.
APA, Harvard, Vancouver, ISO, and other styles
16

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
17

ವಿ., ಚಂದ್ರಶೇಖರ ನಂಗಲಿ. "ಇದು ಎಂದೆಂದಿಗೂ 'ನಿಚ್ಚಂ ಪೊಸತು!" AKSHARASURYA 04, № 02 (2024): 18 to 26. https://doi.org/10.5281/zenodo.11525518.

Full text
Abstract:
‘ನಿಚ್ಚಂ ಪೊಸತು’ ಕೃತಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಬುದ್ಧ ಕೇಂದ್ರಿತ ಕವನಗಳನ್ನು ಕುರಿತ ಸಮಾಲೋಚನೆ, ಮೈಸೂರು ಕೇಂದ್ರಿತ ಸಾಂಸ್ಕೃತಿಕ ಮಹತ್ವವನ್ನು ಕುರಿತ ಪರಿಶೀಲನೆ, ಯೆಹೂದ್ಯರಿಗಾಗಿ ಮುಂದೆ ಬಂದು ಪೀಡಿತನಾಗುವ ಮೋಸೆಸ್‌ನ ಮಹಾಯಾನ, ಮುಲ್ಕ್ರಾಜ್ ಆನಂದ್ ಮತ್ತು ಬಾಬಾಸಾಹೇಬ ಅಂಬೇಡ್ಕರ್ ಅವರ ಮಾತುಕತೆ, ಭೀಮಜ್ಯೋತಿ ಬಿ.ಬಸವಲಿಂಗಪ್ಪ ಅವರ ಅರಿವಿನ ಯಾನ, ಜಾತಿಪದ್ಧತಿ ಮತ್ತು ಅಸ್ಪೃಶ್ಯತೆಯ ಮನೋವಿಕಾರಗಳನ್ನು ಮೀರಿ ಸೋದರಸ್ನೇಹದಿಂದ ಬಾಳಿದ ಎಸ್‌ಪಿಬಿ+ಜೇಸುದಾಸ್ ಕುರಿತ ಲೇಖನಗಳೂ ಇವೆ. ಇವೆಲ್ಲವನ್ನೂ ‘ನಿಚ್ಚಂ ಪೊಸತು’ ಎಂಬ ಹೃದ್ಯಭಾವದಿಂದ ಭೈರಪ್ಪನವರು ಒಳಗೊಂಡಿರುವುದು ಸ್ತುತ್ಯಾರ್ಹವಾಗಿದೆ. ಭೈರಪ್ಪನವರ ಪುಸ್ತಕದ ತಾತ್ವಿಕತೆ ಎಂದರೆ ಜಾತಿ ಶ್ರೇಣೀಕರಣದ ಕೆನೆಪದರದಲ್ಲಿ ತನ್ನನ್ನು ಗುರುತಿಸಿಕೊಳ
APA, Harvard, Vancouver, ISO, and other styles
18

ಸಿದ್ಧಲಿಂಗಯ್ಯ та ಆರ್. ಶ್ರೀಧರ್. "ಕವಿಯನ್ನು ರೂಪಿಸಿದ ಪರಿಸರ... (The Environment Which Shaped Poet...)". AKSHARASURYA JOURNAL 05, № 04 (2024): 30 to 33. https://doi.org/10.5281/zenodo.14289519.

Full text
Abstract:
“ನನ್ನ ಬದುಕಿನ ಹಿನ್ನೆಲೆಯನ್ನು ನೆನೆಸಿಕೊಂಡರೆ ನಾನು ಯಾರೋ ಭೂಮಾಲೀಕರ ಮನೆಯ ಜೀತಗಾರನಾಗಿಯೋ, ಬೆಂಗಳೂರಿನ ಯಾವುದಾದರೂ ಗಿರಣಿಯ ಕಾರ್ಮಿಕನಾಗಿಯೋ ಇರಬೇಕಾಗಿತ್ತು. ಆದರೆ ಕೂದಲೆಳೆಯ ಅಂತರದಲ್ಲಿ ಪಾರಾದ ನಾನು ಅನೇಕರ ಸಹಾನುಭೂತಿ, ಪ್ರೀತಿ, ಕರುಣೆಯಿಂದ ಕವಿಯಾಗಿದ್ದೇನೆ, ಲೇಖಕನಾಗಿದ್ದೇನೆ. ನಾನು ನನ್ನ ಹಿನ್ನೆಲೆಯನ್ನು ಮರೆಯದೆ ಜೀತಗಾರರು, ಕೂಲಿಕಾರರು, ರೈತರು, ಕಾರ್ಮಿಕರು ಮತ್ತು ಜಾತೀಯತೆ, ಅಸ್ಪೃಶ್ಯತೆಯ ಕಾರಣದಿಂದ ನೊಂದ ಜೀವಿಗಳ ಪರವಾದ ನಿಲುವನ್ನು ರೂಢಿಸಿಕೊಂಡೆ. ಆದ್ದರಿಂದ ನನ್ನ ಸಾಹಿತ್ಯ ವಿಭಿನ್ನ ಮಾರ್ಗದಲ್ಲಿ ಮುನ್ನಡೆಯಲು ಕಾರಣವಾಯಿತು.” ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಗೊಂಡಿರುವ ‘ಡಾ. ಸಿದ್ಧಲಿಂಗಯ್ಯ: ಸಮಗ್ರ ಸಾಹಿತ್ಯ’ ಸಂಪುಟಗಳ (2018) ಲೇಖಕರ ಮಾತಿನಲ್ಲಿ ಈ ಸಾಲುಗಳನ್ನು ಓದುಗರು ಗಮನಿಸ
APA, Harvard, Vancouver, ISO, and other styles
19

ತ್ರಿವೇಣಿ. "ಸಾಮಾಜಿಕ ಹರಿಕಾರ ಬಸವಣ್ಣ". AKSHARASURYA JOURNAL 04, № 04 (2024): 139 to 143. https://doi.org/10.5281/zenodo.13284139.

Full text
Abstract:
ಪ್ರಭುತ್ವದ ಮೇಲಾಟಕ್ಕೆ ಪರ್ಯಾಯವಾಗಿ ಜನಶಕ್ತಿ ರೂಪುಗೊಳ್ಳಬೇಕೆಂದು ಬಯಸುತ್ತಿದ್ದ ಬಸವಣ್ಣನವರು ಕಾಯಕ-ದಾಸೋಹಗಳ ಮುಖೇನ ಅದನ್ನು ಸಾಧಿಸುವ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಕಾಳಜಿಯುಳ್ಳ ಸಮಾನ ಮನಸ್ಕರ ಸಂಘಟನೆಯಿಂದ ಮಾತ್ರ ಇಂಥದ್ದನ್ನು ಸಾಧಿಸಲು ಸಾಧ್ಯವೆಂಬ ನಿಲುವಿನಲ್ಲಿ, ಜಾತಿ, ವರ್ಣ, ವರ್ಗಗಳೇ ಮೊದಲಾದ ಎಲ್ಲ ಬಂಧನಗಳನ್ನು ಮೀರಿದ ‘ಅನುಭವ ಮಂಟಪ’ ಎಂಬ ಒಂದು ಅದ್ಭುತ ವೇದಿಕೆಯನ್ನು ರೂಪಿಸಿದರು. ಅನುಭವಮಂಟಪದಲ್ಲಿ ಎಲ್ಲರೂ ಸಮಾನಭಾವದಲ್ಲಿ ಸಾಮಾಜಿಕ ಒಳಿತಿನ ಉದ್ದೇಶದಿಂದ ಸೇರಿ ಪರಸ್ಪರ ಚರ್ಚೆ ಮಾಡಿದರು. ಆ ಮೂಲಕ ಅಂದೇ ಪ್ರಜಾಪ್ರಭುತ್ವಕ್ಕೆ ಅಡಿಗಲ್ಲನ್ನು ಹಾಕಿದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇನ್ನಿಲ್ಲದ ಮಹತ್ವ ನೀಡಿದ ಅನುಭವ ಮಂಟಪವು ಶರಣ ಶರಣೆಯರೆಲ್ಲ ಲಿಂಗ-ಜಾತಿಬೇಧಗಳಿಲ್ಲದಂತೆ ಒಗ್ಗೂಡಲು ಇಂಬು ನೀಡಿತು. ಇಂ
APA, Harvard, Vancouver, ISO, and other styles
20

ಮೋಹನ್‌, ಕುಮಾರ್‌ ಆರ್‌. "ನೇಯ್ಗೆ ಕಾಯಕದ ಶರಣ ಮತ್ತು ಶರಣೆಯರ ವಚನಗಳ ಮಹತ್ವ". AKSHARASURYA JOURNAL 06, № 06 (2025): 47 to 60. https://doi.org/10.5281/zenodo.15580976.

Full text
Abstract:
ಆದ್ಯವಚನಕಾರರಾದ ಜೇಡರ ದಾಸಿಮಯ್ಯನವರು ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಶ್ರೇಷ್ಠ ಶಿವಶರಣ ಹಾಗೆಯೇ ದೊರೆತಿರುವ ಆಧಾರಗಳ ಮೇರೆಗೆ ದಾಸಿಮಯ್ಯನ ಪತ್ನಿ ದುಗ್ಗಳೆ, ಅಮುಗಿ ದೇವಯ್ಯ, ಅಮುಗೆ ರಾಯಮ್ಮ, ಆದಯ್ಯ, ಕದಿರ ರೆಮ್ಮವ್ವೆ, ಕದಿರ ಕಾಯಕದ ಕಾಳವ್ವೆಯರು ಕೂಡ ನೇಯ್ಗೆ ಕಾಯಕವನ್ನು ಮಾಡುತ್ತ ಸಮಾಜಕ್ಕೆ ತಮ್ಮದೇ ಆದ ವಚನಗಳ ಮೂಲಕ ಸಮಾಜದ ಸರ್ವೋನ್ನತಿಗೆ ಶ್ರಮಿಸಿದ ಕಾಯಕ ಶರಣ ಮತ್ತು ಶರಣೆಯರು. ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಈ ಶರಣ ಮತ್ತು ಶರಣೆಯರು ತಮ್ಮ ಅನುಭವ, ಆತ್ಮಾನುಭೂತಿಯನ್ನು ಸಮಾಜದ ಜನರೊಂದಿಗೆ ಹಂಚಿಕೊಳ್ಳಲು ಪ್ರಯತ್ನಿಸಿದರು. ಸರಳ ಮತ್ತು ಸ್ಪಷ್ಟ ನುಡಿಗಳಲ್ಲಿ ವಚನಗಳನ್ನು ಕಟ್ಟಿಕೊಟ್ಟು ದಾಂಪತ್ಯದಿಂದಲೂ ಮೋಕ್ಷ ಸಂಪಾದನೆ ಸಾಧ್ಯವೆಂಬ ಅಧ್ಯಾತ್ಮಿಕ ಚಿಂತನೆಯನ್ನು ತೋರಿದವರು. ಸತ್ಯದ ಪ್ರತಿಪಾದನೆ, ಸ್ತ್ರೀಪರ ಕಾಳಜಿ, ಸ್ತ್ರೀಸಮ
APA, Harvard, Vancouver, ISO, and other styles
21

ಕಾಂತರಾಜ, ಯಾದವ್ ಸಿ. "ಲಂಕೇಶರ ಕಣ್ಣಲ್ಲಿ ಗಾಂಧೀಜಿ". AKSHARASURYA 05, № 02 (2024): 50 to 60. https://doi.org/10.5281/zenodo.14035140.

Full text
Abstract:
ಗಾಂಧೀಜಿಯವರು ಹುಟ್ಟಿ 156 ವರ್ಷಗಳಾಗಿವೆ. ಅವರ ಬದುಕಿನ ಬಗೆಗೆ ಚರ್ಚೆ, ಬರಹ, ಸ್ಮರಣೆ-ಸ್ತುತಿ ನಡೆಯುತ್ತಲೇ ಇವೆ. ಭಾರತದ ಇತರೆ ವ್ಯಕ್ತಿಗಳು ಜಾತಿ, ಧರ್ಮ, ಪಂಥಗಳಿಗೆ ಒಳಗಾದಂತೆ ಮಹಾತ್ಮಗಾಂಧಿಯವರು ಸುಲಭಕ್ಕೆ ಒಳಗಾಗದೆ ಇರುವುದು ಅವರ ಬದುಕಿನ ರೀತಿಯನ್ನು ಬಿಂಬಿಸುವಂತದ್ದು. ದೀರ್ಘಕಾಲ ಭಾರತದ ರಾಜಕೀಯ, ಸಾಮಾಜಿಕ ಬದುಕಿನಲ್ಲಿದ್ದ ಗಾಂಧೀಜಿಯವರು ಇಂದಿಗೂ ʼಅನ್ಯʼರಾಗಿಯೇ ಇರುವಂತಾಗಿದೆ. ಅನ್ಯ ನಂತೆ ಕಂಡರೂ ಕೂಡ ಪ್ರಸ್ತುತದಲ್ಲಿಯೂ ಒಂದಲ್ಲಾ ಒಂದುರೀತಿಯಲ್ಲಿ ಪ್ರಸ್ತುತರಾಗುತ್ತಲೇ ಇದ್ಧಾರೆ. ಗಾಂಧೀಜಿಯವರ ಸತ್ಯಾಗ್ರಹ, ಉಪವಾಸ, ಶ್ರಮದ ಬದುಕು, ಅಸ್ಪೃಶ್ಯತೆಯ ನಿವಾರಣೆ, ಬ್ರಹ್ಮಚರ್ಯ, ಟ್ರಸ್ಟೀಶಿಪ್‌ ಹೀಗೆ ಹಲವು ನೆಲೆಗಳಲ್ಲಿ ಬದುಕಿದ್ಧ ಗಾಂಧೀಜಿಯವರ ಬದುಕು ಪರ-ವಿರೋಧ ಚರ್ಚೆಗಳಿಗೆ ಒಳಗಾಗುತ್ತಲೇ, ಪ್ರಸ್ತುತಕ್ಕೆ ಮುಖಾಮುಖಿಯಾಗುತ್
APA, Harvard, Vancouver, ISO, and other styles
22

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
APA, Harvard, Vancouver, ISO, and other styles
23

ದಿನೇಶ, ಎನ್.ಎನ್. "ಮಲಬಾರ್ ಮಾಪಿಳ್ಳೆ ಬಂಡಾಯಗಳು: ಧರ್ಮ, ಭೂಮಿ ಮತ್ತು ಹಕ್ಕುಗಳಿಗಾಗಿ ಹೋರಾಟ". AKSHARASURYA 06, № 02 (2025): 105 to 116. https://doi.org/10.5281/zenodo.15124098.

Full text
Abstract:
19ನೆಯ ಶತಮಾನದಾದ್ಯಂತ ಸ್ಫೋಟಗೊಂಡು 20ನೇಯ ಶತಮಾನದ ಮೊದಲ ಭಾಗವು ಉಗ್ರ ಹೋರಾಟದೊಂದಿಗೆ ಅಳಿದುಹೋದವು. ಕೇರಳದ ಮಲಬಾರ್ ಪ್ರದೇಶದಲ್ಲಿ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಪ್ರತಿರೋಧವಾಗಿ ಪ್ರಾರಂಭವಾಯಿತು. ಮಲೆಯಾಳಿ ಸಮಾಜದ ಜೊತೆಗಿನ ಅರಬರ ವ್ಯಾಪಾರೀ ಸಂಬಂಧದ ಚರಿತ್ರೆ ಸುಮಾರು 9ನೇ ಶತಮಾನದಷ್ಟು ಹಿಂದಿನಿಂದ ಪ್ರಾರಂಭವಾಗುತ್ತದೆ. ಕರಾವಳಿ ಪ್ರಾಂತ್ಯದಲ್ಲಿದ್ದ ಹಿಂದೂ ಮುಖಂಡರುಗಳಿಗೆ ಶ್ರೀಮಂತ ಅರಬ ವ್ಯಾಪಾರಿಗಳ ಬೆಂಬಲ ಯಾವಾಗಲೂ ಬೇಕಾಗುತ್ತಿತ್ತು. ಮಲಬಾರಿನಲ್ಲೇ ಕ್ರಮೇಣ ಉಳಿದುಕೊಂಡ ಅರಬ ವ್ಯಾಪಾರಿಗಳು ಪ್ರಮುಖವಾಗಿ ನಾಯರ್ ಮತ್ತು ತಿಯಾ ಜಾತಿಯ ಹೆಂಗಸರನ್ನೇ ಮದುವೆಯಾದರು. ಕಾಲಾಂತರದಲ್ಲಿ ಇವರೇ ಮಾಪಿಳ್ಳೆಗಳಾದರು. ಮತಾಂತರಗೊಂಡು ಹೊಸದಾಗಿ ಸೇರ್ಪಡೆಗೊಳ್ಳುವ ಪ್ರತಿಯೊಬ್ಬ ಸದಸ್ಯನನ್ನು ಮಾಪಿಳ್ಳೆಗಳು ಸಂತೋಷದಿಂದ ಸ್ವೀಕರಿಸಿದರೂ ಮ
APA, Harvard, Vancouver, ISO, and other styles
24

ಶ್ರೀಧರ್, ಆರ್. "ಸಿದ್ಧಲಿಂಗಯ್ಯನವರ ಕಾವ್ಯ: ಸಾಮಾಜಿಕ ಕ್ರೋಧದ ನೆಲೆಯಿಂದ ಆಧ್ಯಾತ್ಮಿಕ ಅನ್ವೇಷಣೆಯ ಕಡೆಗೆ". AKSHARASURYA JOURNAL 05, № 06 (2025): 01 to 07. https://doi.org/10.5281/zenodo.14788682.

Full text
Abstract:
ಕವಿ ಸಿದ್ಧಲಿಂಗಯ್ಯನವರ ಮೊದಲ ʼಹೊಲೆಮಾದಿಗರ ಹಾಡುʼ ಕವನ ಸಂಕಲನದಿಂದ ಅವರ ಕಡೆಯ ʼಬೋಧಿವೃಕ್ಷದ ಕೆಳಗೆʼ ಸಮಗ್ರ ಕಾವ್ಯದ ಶೀರ್ಷಿಕೆಗಳನ್ನು ರೂಪಕದಂತೆ ಪರಿಭಾವಿಸುವುದಾದರೆ, ಸಮಾಜದಲ್ಲಿನ ಶೋಷಣೆ, ತಾರತಮ್ಯ, ಅಸಮಾನತೆಯಿಂದ ಕನಲಿ ಸಂಘರ್ಷದ ಪ್ರತಿಕ್ರಿಯೆ ಹಾಗೂ ಕೀಳರಿಮೆಯಿಂದ ನರಳುತ್ತಿದ್ದ ವಿಸರ್ಜಿತ ಲೋಕದಿಂದ ಹುಟ್ಟಿದ ಬಂಡಾಯದಂತೆ ಸ್ಫೋಟಿಸಿದ ಅವರ ಕವಿತೆಗಳು ಸಮ ಸಮಾಜದ ಹಂಬಲವಾದ ಸಾಮರಸ್ಯದ ಕಡೆಗೆ ಸಾಗಿರುವ ಸೃಜನಶೀಲ ಪಯಣದ ವಿಕಾಸ ಎಂದು ವ್ಯಾಖ್ಯಾನಿಸಬಹುದು. ಇಲ್ಲಿ ಆತ್ಯಂತಿಕ ತೀವ್ರತೆಯಿಂದ ಹುಟ್ಟಿದ ಬಂಡಾಯ ಸಮುದಾಯದಲ್ಲಿ ಸ್ವಾಭಿಮಾನ ಹಾಗೂ ಮಾನವ ಘನತೆಯನ್ನು ಮೂಡಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಸಮಷ್ಟಿ ಬದುಕನ್ನು ಕುರಿತ ಗಾಢ ವಿಷಾದ ಈ ಅನ್ಯಾಯದ ವ್ಯವಸ್ಥೆ ಬದಲಾಗಬೇಕೆಂಬ ಹಂಬಲ ಇಲ್ಲಿನ ಕವಿತೆಗಳು ಪ್ರತಿಪಾದಿಸುವ ನಿಲುವು.ಸ
APA, Harvard, Vancouver, ISO, and other styles
25

ನಾಗೇಶ್, ಎನ್. "೨೧ನೆಯ ಶತಮಾನದ ಕನ್ನಡ ನಾಟಕ ಮತ್ತು ರಂಗಭೂಮಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 114 to 120. https://doi.org/10.5281/zenodo.15504329.

Full text
Abstract:
ರಂಗಭೂಮಿಯೊಂದು ಜಾಗತೀಕ ಕಲಾಭಿವ್ಯಕ್ತಿ ಮಾಧ್ಯಮವಾಗಿದೆ, ನಾಟಕವು ಜಗತ್ತಿನ ಸಾಂಸ್ಕೃತಿಕ ಸೃಜನಶೀಲತೆಯ ಅಸ್ಮಿತೆಯ ಭಾಗವಾಗಿ ಲೋಕದರ್ಶನವನ್ನು ಒಡಮೂಡಿಸುವಲ್ಲಿ ಪ್ರಮುಖ ಸಾಹಿತ್ಯ ಪ್ರಕಾರವಾಗಿದೆ. ಶ್ರೇಷ್ಠ ದಾರ್ಶನಿಕರಾದ ಬುದ್ಧ, ಬಸವಣ್ಣ, ಡಾ. ಬಿ. ಆರ್. ಅಂಬೇಡ್ಕರ್‌, ಜ್ಯೋತಿ ಬಾ ಪುಲೆ, ಪೆರಿಯಾರ್, ನಾರಾಯಣಗುರುಗಳಂತಹ ಆದರ್ಶಪ್ರಾಯರಾದವರ ಜೀವನ ಆಧಾರಿತ ನಾಟಕಗಳನ್ನು ರಂಗರೂಪಕ್ಕೆ ತಂದು ಸಮುದಾಯಗಳತ್ತ ತೆಗೆದುಕೊಂಡು ಹೋಗುವ ಅನಿವಾರ್ಯತೆ ಈ ನಾಡಿಗಿದೆ. ಅಂಬೇಡ್ಕರ್‌ ಅವರು ʼತಳಸಮುದಾಯಗಳಿಗೆ ಮಾತ್ರವಲ್ಲದೆ ಎಲ್ಲ ಸಮುದಾಯಗಳಿಗೂ ಅಕ್ಷರದ ಮೂಲಕ ವಿಮೋಚನೆ ಸಾಧ್ಯ’ ಎಂಬುದನ್ನು ತಿಳಿಸಿಕೊಟ್ಟರು. ಇವರ ಬದುಕು, ಬರಹ ಮತ್ತು ಭಾಷಣಗಳಲ್ಲಿನ ಚಿಂತನಾಧಾರೆಗಳನ್ನು ಕನ್ನಡ ನಾಟಕ ಮತ್ತು ರಂಗಭೂಮಿಗೆ ಅಳವಡಿಕೊಳ್ಳುವುದರ ತುರ್ತು
APA, Harvard, Vancouver, ISO, and other styles
26

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
27

ಶೈಲಜ, ಹಿರೇಮಠ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಬುಡಕಟ್ಟು ಮಹಿಳೆ: ಸ್ಥಾಪಿತ ಗ್ರಹಿಕೆಗಳಿಗೆ ಭಿನ್ನಮತ". AKSHARASURYA 05, № 02 (2024): 01 to 34. https://doi.org/10.5281/zenodo.14035474.

Full text
Abstract:
ಪ್ರಸ್ತುತ ಸಂದರ್ಭದಲ್ಲಿ ವಿಶಾಲಾರ್ಥ ದೃಷ್ಟಿಕೋನದ ಬರಹಗಾರರಾಗುವುದೆಂದರೆ, ಸಮಾಜದಲ್ಲಿನ ಜಾತಿ, ಪ್ರದೇಶ, ಬುಡಕಟ್ಟು, ಆದಿವಾಸಿ ಮತ್ತು ಜಂಡರ್ ಆಧಾರಿತ ಶ್ರೇಣೀಕರಣವನ್ನು ಮೀರುವುದೇ ಆಗಿದೆ; ಹಾಗಿದ್ದರೂ ಅಸಮಾನತೆಗೆ ಬುನಾದಿಯೊದಗಿಸುವ ಶ್ರೇಣೀಕರಣವನ್ನು ಅಸ್ಮಿತೆಯಾಗಿ, ಅನನ್ಯತೆಯಾಗಿ ಚಿಂತಕರು ನಿರೂಪಿಸಿದ್ದರ ಪರಿಣಾಮದಿಂದಾಗಿ, ಅಸಮಾನತೆಯನ್ನು ಸಮರ್ಥಿಸುವ ನಿರೂಪಣೆಗಳು ಸಾಹಿತ್ಯ ಲೋಕದಲ್ಲೂ ನಿರಾತಂಕವಾಗಿ ಮುಂದುವರೆದಿವೆ. ಬರಹಲೋಕದೊಳಗಿನ ಇಂತಹ ನಿರೂಪಣೆಯ ರಾಜಕಾರಣವೇ ಸತ್ಯವನ್ನು ಸೃಷ್ಟಿಸುತ್ತ, ಅದನ್ನು ಒಪ್ಪುವಂತೆ ಜ್ಞಾನದ ಅಧಿಕಾರದ ನೆಲೆಯಲ್ಲಿ ಒತ್ತಾಯಿಸುತ್ತದೆ; ಅಧ್ಯಯನದೊಳಗಿನ ಬರಹಗಾರರ ಉದ್ದೇಶದ ಭಾಗವಾಗಿ ನಿರೂಪಣೆಗೊಂಡ ನಿಲುವುಗಳನ್ನು ಸಮಸ್ಯೀಕರಿಸಿಕೊಂಡು ಮರುವಿಶ್ಲೇಷಣೆಗೆ ಒಳಪಡಿಸಬೇಕಿದೆ. ಈ ಉದ್ದೇಶದ ಹಿನ್ನೆಲೆಯಲ್ಲಿಯೇ ಮಹಿಳೆ
APA, Harvard, Vancouver, ISO, and other styles
28

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!