To see the other types of publications on this topic, follow the link: ಅಂಬೇಡ್ಕರ್.

Journal articles on the topic 'ಅಂಬೇಡ್ಕರ್'

Create a spot-on reference in APA, MLA, Chicago, Harvard, and other styles

Select a source type:

Consult the top 34 journal articles for your research on the topic 'ಅಂಬೇಡ್ಕರ್.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
2

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
3

ಮಹಾದೇವಿ, ಹುಣಶೀಬೀಜ. "ಮಹಾರಾಷ್ಟ್ರ್ರದಲ್ಲಿ ದಲಿತ ಚಳುವಳಿ: ಮಹಿಳಾ ಪ್ರತಿನಿಧೀಕರಣ". AKSHARASURYA JOURNAL 06, № 05 (2025): 60 to 71. https://doi.org/10.5281/zenodo.15504245.

Full text
Abstract:
ಕೌಟುಂಬಿಕ ಜವಾಬ್ದಾರಿಗಳಲ್ಲಿ ಮುಳುಗಿ ಹೋಗಿರುವ ಮಹಿಳೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾರ್ವಜನಿಕ ಹೋರಾಟ, ರಾಜಕಾರಣ, ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡರೂ ಎಲೆ ಮರೆಯ ಕಾಯಿಯಂತೆ ಇರಬೇಕಾಗುತ್ತದೆ. ಹೀಗಿರುವಾಗಲೇ ಮಹಾರಾಷ್ಟ್ರ್ರದ ಸಾರ್ವಜನಿಕ ಹೋರಾಟಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದನ್ನು ಕಾಣಬಹುದು. ಅಂಬೇಡ್ಕರ್‌ರ ಜೊತೆಗೆ ನಿಮ್ನ ವರ್ಗಗಳ ಮಹಾವಿಮೋಚನಾ ಚಳುವಳಿಯಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು. ಭಾರತ ರಾಜಕೀಯ ಸ್ವಾತಂತ್ರ್ಯ ಪಡೆಯುವ ಹವಣಿಕೆಯಲ್ಲಿದ್ದಾಗ ಅಂಬೇಡ್ಕರ್‌ರು ಸಮಾಜದ ಅಂಚಿಗೆ ದೂಡಲ್ಪಟ್ಟವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ದಲಿತ ಸಂಘಟನೆ, ಹೋರಾಟ, ಚಳುವಳಿ, ದಲಿತ ಪತ್ರಿಕೆಗಳ ಪ್ರಕಟಣೆ, ಎದುರಿಸಿದ ಚುನಾವಣೆ, ಬೌದ್ಧ ಧರ್ಮ ಮತಾಂತರ ಹೀಗೆ ಅವರು ಕೈಗೊಂಡ ಮಹತ್ವದ ಕಾರ್ಯಗಳಲ್
APA, Harvard, Vancouver, ISO, and other styles
4

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
5

ಸುಚಿತ್ರಾ, ಟಿ., та ಕೆ.ಎಸ್. ಗಿರಿಜಾ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜಾತಿ ನಿರ್ಮೂಲನೆ: ಒಂದು ವಿಶ್ಲೇಷಣೆ". AKSHARASURYA JOURNAL 06, № 05 (2025): 226 to 232. https://doi.org/10.5281/zenodo.15504688.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆ (Annihilation of Caste) ಕೃತಿ ಭಾರತೀಯ ಜಾತಿ ವ್ಯವಸ್ಥೆಯ ವಿರುದ್ಧ ನೀಡಿದ ಅತ್ಯಂತ ಪ್ರಬಲ ವಿಮರ್ಶೆಗಳಲ್ಲಿ ಒಂದಾಗಿದೆ. 1936ರಲ್ಲಿ ಜಾತ್ ಪಾತ್ ತೋಡಕ್ ಮಂಡಳಿಗೆ ಈ ಭಾಷಣವನ್ನು ನೀಡಲು ಉದ್ದೇಶಿಸಲಾಗಿತ್ತಾದರೂ, ಸಂಘಟಕರು ಅದರ ವಿಷಯವನ್ನು ತೀವ್ರವಾದದ್ದು ಎಂದು ಪರಿಗಣಿಸಿ ಅದನ್ನು ನಿರಾಕರಿಸಿದರು. ನಂತರ ಅಂಬೇಡ್ಕರ್ ಅವರು ಈ ಭಾಷಣವನ್ನು ಸ್ವತಃ ಪುಸ್ತಕ ರೂಪದಲ್ಲಿ ಪ್ರಕಟಿಸಿದರು. ಈ ಪ್ರಬಂಧದಲ್ಲಿ ಅಂಬೇಡ್ಕರ್ ಅವರ ಜಾತಿ ಸಂಬಂಧಿತ ಆಲೋಚನೆಗಳ ವಿಶ್ಲೇಷಣೆ, ಹಾಗೂ ಜಾತಿ ನಿರ್ಮೂಲನೆಗಾಗಿ ಅವರು ನೀಡಿದ ಸಂವಿಧಾನಾತ್ಮಕ ಕೊಡುಗೆಗಳನ್ನು ವಿಮರ್ಶಾತ್ಮಕವಾಗಿ ಚರ್ಚಿಸಲಾಗಿದೆ. ಜೊತೆಗೆ, ಈ ಕೃತಿಯ ಪ್ರಸ್ತುತತೆ ಮತ್ತು ಸಮಕಾಲೀನ ಜಾತಿ ರಾಜಕೀಯದ ಮೇಲೆ ಇದರ ಪರಿಣಾಮವನ್ನೂ ಅವಲೋಕಿಸಲಾಗುತ್ತದೆ.
APA, Harvard, Vancouver, ISO, and other styles
6

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
7

ಪ್ರಸನ್ನಕುಮಾರ್, ಕೆ. "ಅಂಬೇಡ್ಕರ್‌ರವರ ಸಾಮಾಜಿಕ ಚಿಂತನೆಗಳು". AKSHARASURYA JOURNAL 05, № 06 (2025): 110 to 116. https://doi.org/10.5281/zenodo.14788784.

Full text
Abstract:
ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಸಿಕೊಂಡ ಮಹಾನ್ ವ್ಯಕ್ತಿ. ಇವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಇವರು ದೇಶಕ್ಕಾಗಿ ಮಾಡಿದ ಹೋರಾಟಗಳು ಎಂತಹ ದುರ್ಬಲ ವ್ಯಕ್ತಿಗಳನ್ನೂ ಸಹ ಎಚ್ಚರಿಸುತ್ತದೆ. ಇವರ ಕೊಡುಗೆಯನ್ನು ಭಾರತೀಯ ಜನತೆ ಎಂದಿಗೂ ಮರೆಯುವುದಿಲ್ಲ. ಸಂವಿಧಾನ ರಚನೆಗೆ ಮಾತ್ರವಲ್ಲದೇ ಅವರ ಸೇವೆ ಜನತೆಯನ್ನು ಜಾಗೃತರಾಗಿ ಮಾಡುವ ಸಾಧನವಾಗಿದೆ ಎನ್ನಬಹುದು. ಅಂಬೇಡ್ಕರ್ ಅವರು ವೈಚಾರಿಕತೆಯ ನೆಲೆಯಲ್ಲಿ ಈ ದೇಶವನ್ನು ಮುಂದೆ ತೆಗೆದುಕೊಂಡು ಹೋಗಬೇಕೆಂಬ ಮಹದಾಶಯವನ್ನು ಹೊಂದಿರುವ ಅಪರೂಪ ವ್ಯಕ್ತಿ. ಈ ಹಿನ್ನಲೆಯಲ್ಲಿಯೇ ಅವರು “ಈ ದೇಶದಲ್ಲಿ ಗುಡಿ-ಗೋಪುರಗಳಿಗಿಂತ ಶಾಲೆಗಳು ತೆರೆದರೆ, ಆ ದೇಶ ಉದ್ದಾರವಾಗುತ್ತದೆ” ಎಂಬ ನಿಲುವನ್ನು ತ
APA, Harvard, Vancouver, ISO, and other styles
8

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
APA, Harvard, Vancouver, ISO, and other styles
9

ನಾಗೇಶ್, ಎನ್. "೨೧ನೆಯ ಶತಮಾನದ ಕನ್ನಡ ನಾಟಕ ಮತ್ತು ರಂಗಭೂಮಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 114 to 120. https://doi.org/10.5281/zenodo.15504329.

Full text
Abstract:
ರಂಗಭೂಮಿಯೊಂದು ಜಾಗತೀಕ ಕಲಾಭಿವ್ಯಕ್ತಿ ಮಾಧ್ಯಮವಾಗಿದೆ, ನಾಟಕವು ಜಗತ್ತಿನ ಸಾಂಸ್ಕೃತಿಕ ಸೃಜನಶೀಲತೆಯ ಅಸ್ಮಿತೆಯ ಭಾಗವಾಗಿ ಲೋಕದರ್ಶನವನ್ನು ಒಡಮೂಡಿಸುವಲ್ಲಿ ಪ್ರಮುಖ ಸಾಹಿತ್ಯ ಪ್ರಕಾರವಾಗಿದೆ. ಶ್ರೇಷ್ಠ ದಾರ್ಶನಿಕರಾದ ಬುದ್ಧ, ಬಸವಣ್ಣ, ಡಾ. ಬಿ. ಆರ್. ಅಂಬೇಡ್ಕರ್‌, ಜ್ಯೋತಿ ಬಾ ಪುಲೆ, ಪೆರಿಯಾರ್, ನಾರಾಯಣಗುರುಗಳಂತಹ ಆದರ್ಶಪ್ರಾಯರಾದವರ ಜೀವನ ಆಧಾರಿತ ನಾಟಕಗಳನ್ನು ರಂಗರೂಪಕ್ಕೆ ತಂದು ಸಮುದಾಯಗಳತ್ತ ತೆಗೆದುಕೊಂಡು ಹೋಗುವ ಅನಿವಾರ್ಯತೆ ಈ ನಾಡಿಗಿದೆ. ಅಂಬೇಡ್ಕರ್‌ ಅವರು ʼತಳಸಮುದಾಯಗಳಿಗೆ ಮಾತ್ರವಲ್ಲದೆ ಎಲ್ಲ ಸಮುದಾಯಗಳಿಗೂ ಅಕ್ಷರದ ಮೂಲಕ ವಿಮೋಚನೆ ಸಾಧ್ಯ’ ಎಂಬುದನ್ನು ತಿಳಿಸಿಕೊಟ್ಟರು. ಇವರ ಬದುಕು, ಬರಹ ಮತ್ತು ಭಾಷಣಗಳಲ್ಲಿನ ಚಿಂತನಾಧಾರೆಗಳನ್ನು ಕನ್ನಡ ನಾಟಕ ಮತ್ತು ರಂಗಭೂಮಿಗೆ ಅಳವಡಿಕೊಳ್ಳುವುದರ ತುರ್ತು
APA, Harvard, Vancouver, ISO, and other styles
10

ASHOKA, N. S. "ಮರಾಠಿ ದಲಿತ ಕಾವ್ಯ ನಡೆದುಬಂದ ದಾರಿ". AKSHARASURYA JOURNAL 03, № 03 (2024): 79 to 86. https://doi.org/10.5281/zenodo.10775141.

Full text
Abstract:
ಪ್ರಸ್ತುತ ಸಂಶೋಧನಾ ಲೇಖನವು ಮರಾಠಿ ದಲಿತ ಕಾವ್ಯ ಬೆಳೆದುಬಂದ ಹಾದಿಯನ್ನು ಕುರಿತು ಚರ್ಚಿಸುತ್ತದೆ. ಮಹಾರಾಷ್ಟ್ರದಲ್ಲಿ ದಲಿತ ಸಾಹಿತ್ಯ ಹುಟ್ಟುಪಡೆಯಲು ದೊರೆತ ಸ್ಫೂರ್ತಿ ಹಾಗೂ ಪ್ರೇರಣೆಗಳ ಹುಡುಕಾಟದ ನೆಲೆಯನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಗಿದೆ. ಮರಾಠಿ ದಲಿತ ಸಾಹಿತ್ಯ ಇಡೀ ಭಾರತೀಯ ಇತರೆ ಭಾಷೆಗಳ ದಲಿತ ಸಾಹಿತ್ಯಗಳಿಗಿಂತ ಹೆಚ್ಚು ಪ್ರಬಲವಾಗಿ ರೂಪುಗೊಳ್ಳಲು ಕಾರಣವಾದ ಐತಿಹಾಸಿಕ ಮೈಲಿಗಲ್ಲುಗಳನ್ನು ಗುರುತಿಸಲಾಗಿದೆ. ಮರಾಠಿ ದಲಿತ ಸಾಹಿತ್ಯ 1970 ರಿಂದೀಚೆಗೆ ಬಹಳಷ್ಟು ಪ್ರಚಲಿತಕ್ಕೆ ಬಂದಿದ್ದರೂ, ಅದರ ಮೂಲ ಬೇರುಗಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಜ್ಯೋತಿ ಬಾಪುಲೆ ಹಾಗೂ ಅಕ್ಷರದವ್ವ ಸಾವಿತ್ರಿ ಬಾಪುಲೆ ಅವರ ಚಳುವಳಿಗೆ ಹೋಗುತ್ತದೆ. ಮರಾಠಿ ದಲಿತ ಸಾಹಿತ್ಯಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಹುದೊಡ್ಡ ನಿಧಿಯ ಆಗರವಾಗಿ
APA, Harvard, Vancouver, ISO, and other styles
11

ರೇಣುತಾಕ್ಷಿ. "ಶಿಕ್ಷಣವೆಂದರೆ ಜೀವನಕ್ಕೆ ಸಿದ್ಧತೆಯಲ್ಲ, ಶಿಕ್ಷಣವೇ ಜೀವನ". AKSHARASURYA JOURNAL 06, № 05 (2025): 169 to 174. https://doi.org/10.5281/zenodo.15504563.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದಂತೆ, ಶಿಕ್ಷಣ ಜೀವನಕ್ಕೆ ಸಿದ್ಧತೆ ಮಾತ್ರವಲ್ಲ, ಅದು ಜೀವನವೇ ಆಗಿದೆ. ಶಿಕ್ಷಣವು ಕೇವಲ ಉದ್ಯೋಗ ಅಥವಾ ಜೀವನೋದ್ಯಮಕ್ಕೆ ಪೂರಕವಾಗಿರುವುದಷ್ಟೇ ಅಲ್ಲ, ಅದು ವ್ಯಕ್ತಿಯ ಬುದ್ಧಿ, ಚಿಂತನೆ, ವ್ಯಕ್ತಿತ್ವ ಮತ್ತು ಸಮಾಜದ ಪ್ರಗತಿಗೆ ಸಹಾಯಕವಾಗಬೇಕು. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಶಿಕ್ಷಣವು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾಭ್ಯಾಸವು ವ್ಯಕ್ತಿಗೆ ಅರ್ಥಪೂರ್ಣ ಬದುಕನ್ನು ಕಟ್ಟಿಕೊಳ್ಳಲು, ಸ್ವತಂತ್ರವಾಗಿ ಚಿಂತಿಸಲು, ಹಾಗೂ ತಾನು ಎದುರಿಸುವ ಸವಾಲುಗಳಿಗೆ ಉತ್ತರಿಸಲು ಶಕ್ತಿಯನ್ನು ನೀಡುತ್ತದೆ. ಸಮೃದ್ಧ ಜೀವನಕ್ಕಾಗಿ ಕೇವಲ ಹಣಕಾಸಿನ ಪ್ರಗತಿಯನ್ನಷ್ಟೇ ಗಮನಿಸುವುದಕ್ಕಿಂತ, ಮಾನವೀಯತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಪಾ
APA, Harvard, Vancouver, ISO, and other styles
12

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
13

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
14

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್‌ ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
15

ಗಣೇಶ. "ಧರ್ಮ ಮತ್ತು ಅಂಬೇಡ್ಕರ್‌". AKSHARASURYA JOURNAL 06, № 05 (2025): 46 to 53. https://doi.org/10.5281/zenodo.15504212.

Full text
Abstract:
ಅಂಬೇಡ್ಕರ್‌ ಭಾರತದ ಒಬ್ಬ ಶ್ರೇಷ್ಠ ಪ್ರತಿಭಾವಂತ ಬುದ್ಧಿ ಜೀವಿ ಮತ್ತು ಮೇಧಾವಿ. ಪ್ರಪಂಚದ ಅಪ್ರತಿಮ ಚಿಂತಕರ ಸಾಲಿನಲ್ಲಿ ನಿಲ್ಲಬಲ್ಲ, ಮೇರು ವ್ಯಕ್ತಿತ್ವವುಳ್ಳ ಚಿಂತನಶೀಲ ವ್ಯಕ್ತಿ. ಅವರು ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಆಸಕ್ತಿ ಮತ್ತು ಕುತೂಹಲದಿಂದ ಅಮೂಲಾಗ್ರವಾಗಿ ಅಧ್ಯಯನ ಮಾಡಿದ್ದರು. ಧರ್ಮವನ್ನು ಕುರಿತಂತೆ ರಾಬರ್ಟ್ ಸನ್ ಸ್ಮಿತ್ ಅವರ ಪರಿಕಲ್ಪನೆಯನ್ನು ಅಂಬೇಡ್ಕರ್‌ ಹಿಂದೂ ಧರ್ಮದ ತತ್ವಜ್ಞಾವನ್ನು ಕುರಿತ ತಮ್ಮ ಕೃತಿಯಲ್ಲಿ ಹೀಗೆ ಉಲ್ಲೇಖಿಸಿದ್ದಾರೆ. ಧರ್ಮ ಯಾವುದೇ ಕಾರಣಕ್ಕೂ ದುರ್ಬಲರನ್ನು ಶೋಷಿಸುವ ಅಸ್ತ್ರವಾಗಬಾರದು. ಹಿಂದೂ ಧಾರ್ಮಿಕ ವ್ಯವಸ್ಥೆಯಲ್ಲಿ ದೈವಿಕ ಪ್ರಭುತ್ವದ ಲಿಖಿತ ಸಂವಿಧಾನ ಮತ್ತು ಪುರೋಹಿತಶಾಹಿಯ ಅಘೋಷಿತ ಪ್ರಾಬಲ್ಯವನ್ನು ಕಾಪಾಡಿಕೊಂಡು ಬರಲಾಗಿದೆ. ಈ ಧರ್ಮದಲ್ಲಿ ಬಹುಸಂಖ್ಯಾತ ಹಿಂದುಳಿದ
APA, Harvard, Vancouver, ISO, and other styles
16

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
17

ಡಾ., ಸ್ವಾಮಿ. "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಪರಿಚಯ". International Journal of Advance Research in Multidisciplinary 2, № 3 (2024): 258–61. https://doi.org/10.5281/zenodo.13292327.

Full text
Abstract:
ಭಾರತದ ಪ್ರತಿಯೊಂದು ರಾಜ್ಯಗಳು ಸಹ ವಿವಿಧ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸಿವೆ. ಅಂಥ ನಿಗಮಗಳು ರಾಜ್ಯ ಸರ್ಕಾರಗಳ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಅಳವಡಿಸಿಕೊಂಡು ಅವುಗಳ ಅನುಷ್ಠಾನಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಬರುತ್ತಿವೆ. ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಜನರ ಸರ್ವತೋಮುಖ ಅಭಿವೃದ್ಧಿಗೆÀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ೨೦-೦೩-೧೯೭೫ರಂದು ಸ್ಥಾಪಿಸಲಾಗಿದೆ. ದಿನಾಂಕ ೧೬-೦೮-೨೦೦೫ ರಂದು ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಎಂದು ಮರುನಾಮಕರಣ ಮಾಡಲ್ಪಟ್ಟಿದೆ. ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿ ಡಾ.ಬಿ.ಆರ್.ಅಂಬೇ
APA, Harvard, Vancouver, ISO, and other styles
18

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
19

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
20

ನವೀನ್, ಕುಮಾರ ಎ. ಜಿ. "ಅಂಬೇಡ್ಕರ್‌: ಅಸ್ಪೃಶ್ಯರ ಆರ್ಥಿಕ ಸ್ವಾವಲಂಬನೆಗಾಗಿ ನಡೆಸಿದ ಚಿಂತನೆಗಳು". AKSHARASURYA JOURNAL 06, № 05 (2025): 121 to 132. https://doi.org/10.5281/zenodo.15504345.

Full text
Abstract:
ಇಂದು ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳ ಏಳಿಗೆಯು ಒಂದು ರಾಷ್ಟ್ರೀಯ ಸಮಸ್ಯೆಯಾಗಿ ಉಳಿಯುತ್ತ ಬಂದಿದೆ. ಕಳೆದ ನಲವತ್ತು ವರ್ಷಗಳಿಂದ ಅಂದರೆ 1991 ರಿಂದ ಮಾಹಿತಿ ತಂತ್ರಜ್ಞಾನದಿಂದ ಪ್ರಾರಂಭವಾಗಿ 2018ರ ಮೇಕಿಂಗ್ ಇಂಡಿಯಾ ವರೆಗೆ ಅನೇಕ ಯೋಜನೆಗಳು ಹತ್ತಾರು ಭಾಗ್ಯಗಳು ಅಪಾರ ಪ್ರಮಾಣದ ಆರ್ಥಿಕ ನೆರವು ನೀಡಲಾಗಿದೆ. ಆದರೂ ಸಮಾಜದಲ್ಲಿ ಆರ್ಥಿಕ ದುರ್ಬಲ ವರ್ಗ ಸಮಾಜಿಕವಾಗಿ ಮುಖ್ಯವಾಹಿನಿಯಲ್ಲಿ ಬಂದು ಮಹತ್ತರವಾದ ಸಾಧನೆ ಮಾಡುವಲ್ಲಿ ವಿಫಲವಾಗಿದೆ. ಬಡತನ ನಿರ್ಮೂಲನೆ ಅಸಾಧ್ಯವೇನೋ ಅನಿಸುವಷ್ಟರ ಮಟ್ಟಕ್ಕೆ ಬಂದು ನಿಂತಿದೆ. ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಸುಲಿಗೆ, ಮೋಸ, ಸಂಪತ್ತಿನ ಕ್ರೋಢಿಕರಣಕ್ಕಾಗಿ ನಡೆಯುತ್ತ ಕಾನೂನೆ ಭಯಪಡುವ ಮಟ್ಟಕ್ಕೆ ನಡೆಯುತ್ತಿವೆ. ಇದರ ಪರಿಣಾಮ ಜನ ಅನ್ಯ ಧರ್ಮಕ್ಕೆ ಮತಾಂತರ ಹೊಂದುತ್ತ ಅಲ್ಲಿಯೂ ನೆಮ್ಮದಿ ಕಾಣದ
APA, Harvard, Vancouver, ISO, and other styles
21

ಶ್ರೀಧರ್, ಆರ್. "ಕಾರ್ಮಿಕರ ಹಿತರಕ್ಷಕ ಡಾ. ಬಾಬಾಸಾಹೇಬ್ ಅಂಬೇಡ್ಕರ್‌". AKSHARASURYA JOURNAL 06, № 05 (2025): 220 to 225. https://doi.org/10.5281/zenodo.15504669.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಹಾಗೂ ರಾಜಕೀಯ ಕೊಡುಗೆ ಅಪಾರ. ಬಹುಜನರ ಬವಣೆಯ ಬದುಕಿನೊಳಗೆ ಇಳಿದು ಲವಣದಂತೆ ಕರಗಿರುವ ಬಾಬಾಸಾಹೇಬರು ಅಪ್ಪಟ ಪ್ರಜಾಪ್ರಭುತ್ವವಾದಿ. ರೈತರು, ಕಾರ್ಮಿಕರು, ಹೆಣ್ಣು ಮಕ್ಕಳ ಉನ್ನತಿಗೆ ಹಾಗೂ ಸಕಲ ಜೀವಿಗಳ ಘನತೆಗೆ ಅಗತ್ಯವಾದ ಮಾರ್ಗಗಳನ್ನು ಶೋಧಿಸಿದ ಶ್ರೇಷ್ಠ ವಿಮೋಚಕ. ಭಾರತದಲ್ಲಿ ಕಾರ್ಮಿಕರಿಗೆ ಯಾವುದೇ ಹಕ್ಕುಗಳು ದೊರೆತಿದ್ದರೆ, ಕಾರ್ಮಿಕರು ಅದರ ಫಲಾನುಭವಿಗಳು ಆಗಿದ್ದರೆ ಅದರ ಸಂಪೂರ್ಣ‌ ಯಶಸ್ಸು ಬಾಬಾಸಾಹೇಬರಿಗೆ ಸಲ್ಲಬೇಕು. ಪ್ರಸ್ತುತ ಲೇಖನದಲ್ಲಿ ಜನಪರವಾದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಿದ ಬಾಬಾಸಾಹೇಬರ ಪಾತ್ರವನ್ನು ಅಭಿವ್ಯಕ್ತಿಸುವ ಪ್ರಯತ್ನ ಮಾಡಲಾಗಿದೆ.
APA, Harvard, Vancouver, ISO, and other styles
22

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ
APA, Harvard, Vancouver, ISO, and other styles
23

ಅಜೀತ, ಪಾತ್ರೋಟ, та ರುಮ್ಮಾ ಶಿವಗಂಗಾ. "'ವೀಸಾದ ನಿರೀಕ್ಷಣೆಯಲ್ಲಿ ಆತ್ಮಕಥನ': ಡಾ.ಬಿ.ಆರ್. ಅಂಬೇಡ್ಕರರ ಜೀವನ ಮತ್ತು ಪ್ರಯೋಗಗಳು." AKSHARASURYA 04, № 03 (2024): 78 to 87. https://doi.org/10.5281/zenodo.12672742.

Full text
Abstract:
ಆತ್ಮಕಥೆ ಬರೆದುಕೊಳ್ಳುವುದು ಮನುಷ್ಯ ಬದುಕಿನ ಪ್ರಮುಖ ಬೆಳವಣಿಗೆಯಾಗಿದೆ. ಈ ಕಾರಣವಾಗಿಯೆ ಮನುಷ್ಯ ತನ್ನ ಸರಿ ತಪ್ಪುಗಳನ್ನು ನಿವೇದಿಸಿಕೊಂಡು ಬದುಕಿನ ವಿಕಾಸದತ್ತ ದಾಪುಗಾಲಿಡುವುದು ಕಾಣಬಹುದು. ಮಾನವ ಬೆಳವಣಿಗೆ ಮತ್ತು ವಿಕಾಸ ಕ್ರಮದಲ್ಲಿ ತನ್ನ ಬದುಕಿನ ಅನುಭವಗಳನ್ನು ಮನೆ, ಸಮಾಜ, ಪರಿಸರ, ಸಂಸ್ಕೃತಿಗಳಿಂದ ರೂಪುಗೊಂಡಿವೆ. ಅವುಗಳು ಮನುಷ್ಯ ಒಳ ಹೊರಗನ್ನು ಅರಿತುಕೊಳ್ಳಲು ಸಹಾಯ ಮಾಡುತ್ತವೆ. ಇಲ್ಲಿ ಪ್ರಮುಖವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಬದುಕಿನುದ್ದಕ್ಕೂ ಅನುಭವಿಸಿದ ದುಖಃ ದುಮ್ಮಾನಗಳು, ಸಂಕಟಗಳು ಮತ್ತು ಅವುಗಳಿಂದ ಬಿಡುಗಡೆಗೆ ಹಾತೋರೆಯುವ ಮನಸ್ಥಿತಿ ಪ್ರಕಟಗೊಳ್ಳುತ್ತದೆ. ಅಲ್ಲದೆ ಅವರು ಕಂಡುಕೊಳ್ಳುವ ಪರಿಹಾರೋಪಾಯಗಳು ಎಲ್ಲವೂ ಒಂದೊಂದು ಹೊಸ ಪ್ರಯೋಗದಂತೆ ಗೋಚರಿಸುತ್ತದೆ. ಅಲ್ಲದೆ ಅವು ಓದುಗರಿಗೆ ಸಂದೇಶಗಳಾಗಿ ಮಾರ್ಪಡುತ್
APA, Harvard, Vancouver, ISO, and other styles
24

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Full text
Abstract:
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳ
APA, Harvard, Vancouver, ISO, and other styles
25

ವಿ., ಚಂದ್ರಶೇಖರ ನಂಗಲಿ. "ಇದು ಎಂದೆಂದಿಗೂ 'ನಿಚ್ಚಂ ಪೊಸತು!" AKSHARASURYA 04, № 02 (2024): 18 to 26. https://doi.org/10.5281/zenodo.11525518.

Full text
Abstract:
‘ನಿಚ್ಚಂ ಪೊಸತು’ ಕೃತಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಬುದ್ಧ ಕೇಂದ್ರಿತ ಕವನಗಳನ್ನು ಕುರಿತ ಸಮಾಲೋಚನೆ, ಮೈಸೂರು ಕೇಂದ್ರಿತ ಸಾಂಸ್ಕೃತಿಕ ಮಹತ್ವವನ್ನು ಕುರಿತ ಪರಿಶೀಲನೆ, ಯೆಹೂದ್ಯರಿಗಾಗಿ ಮುಂದೆ ಬಂದು ಪೀಡಿತನಾಗುವ ಮೋಸೆಸ್‌ನ ಮಹಾಯಾನ, ಮುಲ್ಕ್ರಾಜ್ ಆನಂದ್ ಮತ್ತು ಬಾಬಾಸಾಹೇಬ ಅಂಬೇಡ್ಕರ್ ಅವರ ಮಾತುಕತೆ, ಭೀಮಜ್ಯೋತಿ ಬಿ.ಬಸವಲಿಂಗಪ್ಪ ಅವರ ಅರಿವಿನ ಯಾನ, ಜಾತಿಪದ್ಧತಿ ಮತ್ತು ಅಸ್ಪೃಶ್ಯತೆಯ ಮನೋವಿಕಾರಗಳನ್ನು ಮೀರಿ ಸೋದರಸ್ನೇಹದಿಂದ ಬಾಳಿದ ಎಸ್‌ಪಿಬಿ+ಜೇಸುದಾಸ್ ಕುರಿತ ಲೇಖನಗಳೂ ಇವೆ. ಇವೆಲ್ಲವನ್ನೂ ‘ನಿಚ್ಚಂ ಪೊಸತು’ ಎಂಬ ಹೃದ್ಯಭಾವದಿಂದ ಭೈರಪ್ಪನವರು ಒಳಗೊಂಡಿರುವುದು ಸ್ತುತ್ಯಾರ್ಹವಾಗಿದೆ. ಭೈರಪ್ಪನವರ ಪುಸ್ತಕದ ತಾತ್ವಿಕತೆ ಎಂದರೆ ಜಾತಿ ಶ್ರೇಣೀಕರಣದ ಕೆನೆಪದರದಲ್ಲಿ ತನ್ನನ್ನು ಗುರುತಿಸಿಕೊಳ
APA, Harvard, Vancouver, ISO, and other styles
26

ಪವಿತ್ರ, ಎಸ್. "ಬೌದ್ಧ ಧಮ್ಮ ಮತ್ತು ಮಹಿಳೆ". AKSHARASURYA JOURNAL 06, № 05 (2025): 133 to 140. https://doi.org/10.5281/zenodo.15504377.

Full text
Abstract:
ಈ ಲೇಖನದಲ್ಲಿ ಬುದ್ದನ ಮೇಲಿನ ಕೆಲವು ಆರೋಪಗಳಿಗೆ ಉತ್ತರವನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ. ಅದಕ್ಕೆ ಅಂಬೇಡ್ಕರ್‌ ಅವರು ತಮ್ಮ ಬರಹ ಮತ್ತು ಭಾಷಣಗಳಲ್ಲಿ ಆರೋಪಗಳಿಗೆ ವಿವರಣೆ ನೀಡಿದ್ದಾರೆ. ಅದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಬುದ್ದ ತನ್ನ ಹೆಂಡತಿಯಾದ ಯಶೋಧರೆಯ ಅನುಮತಿ ಕೇಳದೆ ತೊರೆದು ಬಂದ, ಮಗನ ಮುಖವನ್ನು ಸಹ ನೋಡಲಿಲ್ಲ. ಬುದ್ದ ತನ್ನ ಸಂಘದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಲಿಲ್ಲ. ಬುದ್ದ ತನ್ನ ಸಂಘದವರಿಗೆ ಮಹಿಳೆಯರ ವಿಷಯದಲ್ಲಿ ಸದಾ ಜಾಗ್ರತೆ ವಹಿಸಬೇಕು ಎಂದು ಹೇಳುತ್ತಿದ್ದ ಎಂಬುದು ಬುದ್ದನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಕಾರಣವಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ವೈದಿಕ ಧರ್ಮ ಪ್ರಣೀತ ಮನುಸ್ಮೃತಿ, ರಾಮಾಯಣ ಮತ್ತು ಮಹಾಭಾರತ ಕೃತಿಗಳು ಮಹಿಳೆಯರನ್ನು ಹೇಗೆ ಚಿತ್ರಿಸಿವೆ, ಅದರಲ್ಲಿ ಮಹಿಳೆಯರ ಸ್ಥಾನಮಾನಗಳೇನು
APA, Harvard, Vancouver, ISO, and other styles
27

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
28

ವಿಜಯಲಕ್ಷ್ಮಿ, ದತ್ತಾತ್ರೇಯ ದೊಡ್ಡಮನಿ. "ವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ". AKSHARASURYA JOURNAL 06, № 05 (2025): 241 to 248. https://doi.org/10.5281/zenodo.15504724.

Full text
Abstract:
ಆತ್ಮಕಥೆ ಕನ್ನಡ ಸಾಹಿತ್ಯದ ಒಂದು ಸಾಹಿತ್ಯ ಪ್ರಕಾರವಾಗಿ ಬೆಳೆದು ಬಂದಿರುವುದನ್ನು ನೋಡುತ್ತೇವೆ. ಮನುಷ್ಯನ ಸುತ್ತಲೂ ನಡೆಯುವ ಮತ್ತು ಅವರ ಅಂತರಾಳದಲ್ಲಿರುವ ಹೂರಣಗಳನ್ನು ಹೊರ ಹಾಕುವ ಒಂದು ಪ್ರಕಾರವಾಗಿ ಕಾಣುತ್ತೇವೆ. ಒಬ್ಬ ಮನುಷ್ಯನ ಇಡೀ ಬದುಕಿನಲ್ಲಿ ನಡೆದಂತಹ ತಪ್ಪು-ಸರಿ, ಸಿಹಿ-ಕಹಿ ಘಟನೆಗಳಿಗೆ ಅಕ್ಷರ ರೂಪವನ್ನು ನೀಡುತ್ತಾನೆ. ತಮ್ಮ ಅಂತರಾಳದ ತಮುಲಗಳನ್ನು ಸ್ವವಿಮರ್ಶೆಗೆ ಒಳಪಡಿಸಿಕೊಳ್ಳಲಾಗುತ್ತದೆ. ಆದರೆ ಬಾಬಾ ಸಾಹೇಬರು ಬರೆದ ಅವರ ಆತ್ಮಕಥೆಯಲ್ಲಿ ಅವರ ಬದುಕಿನ ಕಹಿ ಘಟನೆಗಳು ಹೇಗೆ ಮುಂದೆ ಅವರು ಇಡೀ ಸಮಾಜದ ಏಳಿಗೆಗಾಗಿ ಅವುಗಳನ್ನೆ ಆಧಾರವಾಗಿ ಬಳಸಿಕೊಂಡರು ಎನ್ನುವುದನ್ನು ಅವರ ಬದುಕೆ ನಮಗೆ ತೋರಿಸಿಕೊಡುತ್ತದೆ. ʼವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ’ ಇದು ಡಾ. ಬಿ.ಆರ್. ಅಂಬೇಡ್ಕರ್‌ ಅವರು ಬರೆದಿರುವ ಆತ್ಮಕಥ
APA, Harvard, Vancouver, ISO, and other styles
29

ಕಾಂತರಾಜ, ಯಾದವ್ ಸಿ. "ಲಂಕೇಶರ ಕಣ್ಣಲ್ಲಿ ಗಾಂಧೀಜಿ". AKSHARASURYA 05, № 02 (2024): 50 to 60. https://doi.org/10.5281/zenodo.14035140.

Full text
Abstract:
ಗಾಂಧೀಜಿಯವರು ಹುಟ್ಟಿ 156 ವರ್ಷಗಳಾಗಿವೆ. ಅವರ ಬದುಕಿನ ಬಗೆಗೆ ಚರ್ಚೆ, ಬರಹ, ಸ್ಮರಣೆ-ಸ್ತುತಿ ನಡೆಯುತ್ತಲೇ ಇವೆ. ಭಾರತದ ಇತರೆ ವ್ಯಕ್ತಿಗಳು ಜಾತಿ, ಧರ್ಮ, ಪಂಥಗಳಿಗೆ ಒಳಗಾದಂತೆ ಮಹಾತ್ಮಗಾಂಧಿಯವರು ಸುಲಭಕ್ಕೆ ಒಳಗಾಗದೆ ಇರುವುದು ಅವರ ಬದುಕಿನ ರೀತಿಯನ್ನು ಬಿಂಬಿಸುವಂತದ್ದು. ದೀರ್ಘಕಾಲ ಭಾರತದ ರಾಜಕೀಯ, ಸಾಮಾಜಿಕ ಬದುಕಿನಲ್ಲಿದ್ದ ಗಾಂಧೀಜಿಯವರು ಇಂದಿಗೂ ʼಅನ್ಯʼರಾಗಿಯೇ ಇರುವಂತಾಗಿದೆ. ಅನ್ಯ ನಂತೆ ಕಂಡರೂ ಕೂಡ ಪ್ರಸ್ತುತದಲ್ಲಿಯೂ ಒಂದಲ್ಲಾ ಒಂದುರೀತಿಯಲ್ಲಿ ಪ್ರಸ್ತುತರಾಗುತ್ತಲೇ ಇದ್ಧಾರೆ. ಗಾಂಧೀಜಿಯವರ ಸತ್ಯಾಗ್ರಹ, ಉಪವಾಸ, ಶ್ರಮದ ಬದುಕು, ಅಸ್ಪೃಶ್ಯತೆಯ ನಿವಾರಣೆ, ಬ್ರಹ್ಮಚರ್ಯ, ಟ್ರಸ್ಟೀಶಿಪ್‌ ಹೀಗೆ ಹಲವು ನೆಲೆಗಳಲ್ಲಿ ಬದುಕಿದ್ಧ ಗಾಂಧೀಜಿಯವರ ಬದುಕು ಪರ-ವಿರೋಧ ಚರ್ಚೆಗಳಿಗೆ ಒಳಗಾಗುತ್ತಲೇ, ಪ್ರಸ್ತುತಕ್ಕೆ ಮುಖಾಮುಖಿಯಾಗುತ್
APA, Harvard, Vancouver, ISO, and other styles
30

ಅಂಜಿನಪ್ಪ, ಎಲ್.ಟಿ. "ಕನ್ನಡದಲ್ಲಿ ಮೀಸಲಾತಿ ಚಳವಳಿಯ ಇತಿಹಾಸ: ಒಂದು ಅವಲೋಕನ". AKSHARASURYA JOURNAL 06, № 06 (2025): 01 to 10. https://doi.org/10.5281/zenodo.15580870.

Full text
Abstract:
ಪ್ರಸ್ತುತ ಈ ಲೇಖನದಲ್ಲಿ ಭಾರತದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆ ಶೂದ್ರರು ಅನುಭವಿಸಿದ ಯಾತನೆಗಳು, ಹನ್ನೆರಡನೇ ಶತಮಾನದಲ್ಲಿ ಆದ ಸಾಮಾಜಿಕ ಕ್ರಾಂತಿಗಳು, ಸ್ವಾತಂತ್ರ ಪೂರ್ವದಲ್ಲಿನ ಮೀಸಲಾತಿ ಕ್ರಮಗಳು ನಂತರದ ಬೆಳವಣಿಗೆಯನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ಕೊಲ್ಲಾಪುರದ ಶಾಹುಮಹಾರಾಜರು ಹಿಂದುಳಿದವರಿಗೆ ಶೇಕಡ 50ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ ಎಂಬ ಹೆಗ್ಗಳಿಕೆ ಪಾತ್ರವಾದ ರೀತಿ ಹಾಗೂ ಅವರ ಕೈಗೊಂಡ ಕಾರ್ಯವೈಖರಿಗಳನ್ನು ಇಲ್ಲಿ ತಿಳಿಸಲಾಗಿದೆ. ಜೊತೆಗೆ ನಾಲ್ವಡಿ ಕೃಷ್ಣರಾಜ ಒಡೆಯರು ಹಿಂದುಳಿದವರಿಗೆ ನೀಡಿದ ಕೊಡುಗೆಗಳು ಅವರ ಅಧಿಕಾರವಧಿಯಲ್ಲಿ ಜಾರಿಗೆ ತಂದ ಮಿಲ್ಲರ್ ಆಯೋಗ, ಮಿಲ್ಲರ್ ಆಯೋಗವು ಆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನೀಡುತ್ತಿದ್ದ ತಾರತಮ್ಯ ಸಂಬಳದ ಸೌಲತ್ತುಗಳು ಇತರ ಸೌಲತ್ತುಗಳು ಹಾಗೂ ಆಯೋಗ ಕ
APA, Harvard, Vancouver, ISO, and other styles
31

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ. ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪ
APA, Harvard, Vancouver, ISO, and other styles
32

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ‘ಕಲಿಕೆ’ ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.‘ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ’ ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. ‘ದೇಶ ಸುತ್ತು ಇಲ್ಲವೇ ಕೋಶ ಓದು’ ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
APA, Harvard, Vancouver, ISO, and other styles
33

ಡಿ.ಆರ್.‌, ನಾಗರಾಜ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಅಲ್ಲಮನ ಕಾಯ ಸಿದ್ಧಾಂತ". AKSHARASURYA JOURNAL 05, № 04 (2024): 01 to 29. https://doi.org/10.5281/zenodo.14289448.

Full text
Abstract:
ಡಾ.ಡಿ.ಆರ್.ನಾಗರಾಜ್ ಅವರ ಹೆಸರು ಕೇಳಿದಾಕ್ಷಣ ಕನ್ನಡದ ಶ್ರೇಷ್ಠ ವಿಮರ್ಶಕರು ಎಂಬ ಪ್ರಶಂಸೆಯೇ ಮೊದಲಿಗೆ ನೆನಪಾಗುತ್ತದೆ. ಆದರೆ, ಡಿ.ಆರ್.ಎನ್ ಅವರು ವಿಮರ್ಶೆ ಎಂಬ ಪ್ರಾಕಾರಸೀಮೆಯನ್ನು ದಾಟಿಕೊಂಡು ನಿಸ್ಸೀಮರಾಗಿ ಸೃಜನಶೀಲ ಲೇಖಕರಾಗಿಯೂ ಸಾಂಸ್ಕೃತಿಕ ಸಂಶೋಧಕರಾಗಿಯೂ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ಬೈನರಿ ವಿಭಜನೆಯ ಚಿಂತನಕ್ರಮಗಳಿಂದಾಗಿ ಕನ್ನಡಕ್ಕೆ ಉಂಟಾಗುತ್ತಿರುವ ಧಕ್ಕೆಯನ್ನು ಮನಗಂಡು ಕನ್ನಡ ಪ್ರಜ್ಞಾವಲಯದ ವೈಶಾಲ್ಯತೆಯನ್ನೂ ವೈವಿಧ್ಯತೆಯನ್ನೂ ತನ್ಮೂಲಕ ಕೂಡಲಸಂಗಮಗೊಳಿಸಿದ ಅಪೂರ್ವ ಚಿಂತಕರಾಗಿದ್ದಾರೆ. ಭಾರತದ ಪ್ರಮುಖ ಚಿಂತಕರಲ್ಲಿ ಒಬ್ಬರಾಗುವ ಮಟ್ಟಿಗೆ ಬೆಳೆದ ಡಿ.ಆರ್‌.ನಾಗರಾಜ್ ಅವರ ಬರವಣಿಗೆಯು ಪ್ರಖರ ಚಿಂತನೆಗೆ ಹೆಸರುವಾಸಿಯಾಗಿದೆ. ನಟರಾಜ್ ಹುಳಿಯಾರ್ ಅವರು ದಾಖಲಿಸುವಂತೆ, ‘ಸಾಹಿತ್ಯ ವಿಮರ್ಶೆ, ಸಂಶೋಧನೆ,
APA, Harvard, Vancouver, ISO, and other styles
34

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!