To see the other types of publications on this topic, follow the link: ಆಧ್ಯಾತ್ಮಿಕತೆ.

Journal articles on the topic 'ಆಧ್ಯಾತ್ಮಿಕತೆ'

Create a spot-on reference in APA, MLA, Chicago, Harvard, and other styles

Select a source type:

Consult the top 24 journal articles for your research on the topic 'ಆಧ್ಯಾತ್ಮಿಕತೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಸಂತೋಷ್‌, ಕುಮಾರ್‌ ಆರ್‌.ಎಂ. "ಮಂಕುತಿಮ್ಮನ ಕಗ್ಗ: ಆದರ್ಶ ಮತ್ತು ನೈತಿಕ ಮೌಲ್ಯಗಳ ಸಮನ್ವಯ". AKSHARASURYA 06, № 02 (2025): 31 to 44. https://doi.org/10.5281/zenodo.15123973.

Full text
Abstract:
ಡಿ.ವಿ.ಜಿ.ಯವರ ʼಮಂಕುತಿಮ್ಮನ ಕಗ್ಗ’ವು ಕನ್ನಡ ಸಾಹಿತ್ಯದ ಅನನ್ಯ ಪಂಕ್ತಿಯು, ತತ್ವಪೂರ್ಣವೂ, ಜೀವನಕ್ಕೆ ದಾರಿದೀಪವಾಗಿದೆ. ಡಿ.ವಿ.ಜಿ ಅವರು ರಚಿಸಿದ ಈ ಕೇವಲ ಕಾವ್ಯಕೃತಿಯಲ್ಲ, ಜೀವನದ ಸಾರ್ಥಕತೆಯನ್ನು ಅರಿತುಕೊಳ್ಳಲು ಮಾರ್ಗದರ್ಶನ ನೀಡುವ ತತ್ತ್ವಚಿಂತನೆಯ ಗ್ರಂಥವಾಗಿದೆ. ಮಂಕುತಿಮ್ಮನ ಕಗ್ಗದಲ್ಲಿ ವ್ಯಕ್ತವಾಗಿರುವ ಚಿಂತನಶೀಲತೆ, ತಾತ್ತ್ವಿಕ ದೃಷ್ಟಿಕೋನ ಹಾಗೂ ಆಧ್ಯಾತ್ಮಿಕ ಅರಿವು, ಮಾನವ ಮೌಲ್ಯಗಳನ್ನು ಪ್ರತಿಪಾದಿಸುವ ಸಿದ್ಧಾಂತಗಳಾಗಿವೆ.ಈ ಕಾವ್ಯಕೃತಿಯಲ್ಲಿ ಜೀವನದ ನೈಜತೆಯನ್ನು ಮನಗಾಣಿಸುವಂತೆ ಮಾಡುವ ತತ್ವೋಪದೇಶಗಳು ಸಂಕಲಿತವಾಗಿವೆ. ಜೀವನದಲ್ಲಿ ಏರಿಳಿತಗಳು ಸಹಜ, ಆದರೆ ಮಾನವನ ಹೊಣೆಗಾರಿಕೆ, ಶ್ರದ್ಧೆ, ತಾಳ್ಮೆ ಮತ್ತು ನೈತಿಕತೆ ಅವಶ್ಯಕವೆಂಬ ವಿಚಾರವನ್ನು ಕವಿ ಬಹಳ ಸರಳ ಹಾಗೂ ಗಂಭೀರ ರೀತಿಯಲ್ಲಿ ಪ್ರತಿಪಾದಿಸುತ್ತಾರೆ. ಆಧ್ಯಾ
APA, Harvard, Vancouver, ISO, and other styles
2

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
3

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Full text
Abstract:
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
APA, Harvard, Vancouver, ISO, and other styles
4

ವಾಣಿ, ಡಿ.ಎಸ್. "ಆಧ್ಯಾತ್ಮಿಕತೆಯ ಹಿನ್ನೆಲೆಯಲ್ಲಿ ನಾಕುತಂತಿ ಕವನದ ವಿಶ್ಲೇಷಣೆ". AKSHARASURYA JOURNAL 06, № 06 (2025): 85 to 96. https://doi.org/10.5281/zenodo.15581057.

Full text
Abstract:
ದ.ರಾ. ಬೇಂದ್ರೆಯವರ ʼನಾಕುತಂತಿʼ ಎಂಬ ಕಾವ್ಯವು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯದ ಒಂದು ಮಹತ್ವಪೂರ್ಣ ಕಾವ್ಯವಾಗಿದೆ. ತಮ್ಮ ಭಾಷೆಯ ಮೂಲಕವೇ ಕೋಟ್ಯಂತರ ಸಾಹಿತ್ಯಾಸಕ್ತರನ್ನು ಹೊಂದಿದ್ದು ದ. ರಾ. ಬೇಂದ್ರೆ ನಿಜಕ್ಕೂ ಕನ್ನಡಕ್ಕೆ ದೇವರು ಕರುಣಿಸಿದ “ವರಕವಿ”ಯೇ ಸರಿ. ಆದ್ಯಾತ್ಮ ನೆಲೆಯ ಒಂದು ನಿಗೂಢ ಕವನವಾಗಿದೆ. ಸಮಸ್ತ ವಿಶ್ವವನ್ನು ವೀಣೆಗೆ ಹೋಲಿಸಿ ಅದಕ್ಕಿರುವುದು ನಾನು, ನೀನು, ಆನು, ತಾನು ಎಂಬ ನಾಲ್ಕು ತಂತಿಗಳು ಇದು ನಾಲ್ಕುಭಾಗಗಳಲ್ಲಿ ವಿಂಗಡಿತವಾಗಿದ್ದು ಪ್ರತಿಯೊಂದು ಭಾಗವೂ ಆಧ್ಯಾತ್ಮಿಕ ಮತ್ತು ತಾತ್ವಿಕ ಅರ್ಥಗಳನ್ನು ಒಳಗೊಂಡಿದೆ. ಇವರ ಪ್ರಕಾರ ಸಮಸ್ತ ಸೃಷ್ಟಿಯೇ ಒಂದು ವಿರಾಟ್‌ ವೀಣೆ. 
APA, Harvard, Vancouver, ISO, and other styles
5

ಮಹೇಶ್ವರಪ್ಪ, ಕೆ. "ಕುವೆಂಪು ಅವರ ಆಧ್ಯಾತ್ಮಿಕ ದೃಷ್ಟಿಯ ಒಳನೋಟ". International Journal of Kannada Research 10, № 3 (2024): 01–05. http://dx.doi.org/10.22271/24545813.2024.v10.i3a.979.

Full text
APA, Harvard, Vancouver, ISO, and other styles
6

ಶೋಭಾರಾಣಿ, ಎನ್. "ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಪಾಶುಪತ-ಕಾಳಾಮುಖ ಸಾಧನ ಪಂಥ". AKSHARASURYA 03, № 05 (2024): 61–67. https://doi.org/10.5281/zenodo.10938065.

Full text
Abstract:
ಭಾರತೀಯ ಮತ್ತು ವಿಶೇಷವಾಗಿ ಕರ್ನಾಟಕದ ಆಧ್ಯಾತ್ಮಿಕ ಆರಾಧನಾ ಪಂಥಗಳಲ್ಲಿ ಪಾಶುಪತ-ಕಾಳಾಮುಖ ಪಂಥವು ಬಹು ಮುಖ್ಯವಾದುದು. ಆಧ್ಯಾತ್ಮಿಕ ಪರಂಪರೆಯ ಹಿನ್ನೆಲೆಯಲ್ಲಿ ಮಾತ್ರವಲ್ಲದೇ, ದೇವಾಲಯ ಮತ್ತು ವಾಸ್ತುಶಿಲ್ಪ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೂಡ ಈ ಸಾಧನಾ ಪಂಥದ ಸಾಧಕರು ನೀಡಿರುವ ಕೊಡುಗೆ ಅಪಾರವಾದುದು. ಕರ್ನಾಟಕದ ಬಹುತೇಕ ದೇವಾಲಯಗಳು ಪಾಶುಪತ-ಕಾಳಾಮುಖರಿಂದ ನಿರ್ಮಾಣಗೊಂಡಿವೆ. ಒಂದು ಕಾಲದಲ್ಲಿ ಅಂದರೆ ಕ್ರಿ.ಶ. 12ನೇ ಶತಮಾನಕ್ಕಿಂತ ಸಾಕಷ್ಟು ಪೂರ್ವದಲ್ಲೆ ಈ ಮಾರ್ಗವು ಕರ್ನಾಟಕದಲ್ಲಿ ಪ್ರಮುಖ ಆಧ್ಯಾತ್ಮಿಕ ಮಾರ್ಗವಾಗಿ ಪ್ರಭಾವಶಾಲಿಯಾಗಿತ್ತು. ಹಲವು ರಾಜರುಗಳು ಈ ಮಾರ್ಗಕ್ಕೆ ಪ್ರೋತ್ಸಾಹ ಮತ್ತು ಆಶ್ರಯವನ್ನು ನೀಡಿದ್ದಲ್ಲದೆ, ಸ್ವತಃ ಇದರ ಅನುಯಾಯಿಗಳೂ ಆಗಿದ್ದ ಉದಾಹರಣೆಗಳಿವೆ. ಲಾಕುಳೀಶ, ಕಾಳಾಮುಖ, ಪಾಶುಪತ, ಕಾಪಾಲಿಕ ಮೊದಲಾದ ದಕ್ಷಿಣಾಚ
APA, Harvard, Vancouver, ISO, and other styles
7

ಶ್ರೀಧರ್, ಆರ್. "ಸಿದ್ಧಲಿಂಗಯ್ಯನವರ ಕಾವ್ಯ: ಸಾಮಾಜಿಕ ಕ್ರೋಧದ ನೆಲೆಯಿಂದ ಆಧ್ಯಾತ್ಮಿಕ ಅನ್ವೇಷಣೆಯ ಕಡೆಗೆ". AKSHARASURYA JOURNAL 05, № 06 (2025): 01 to 07. https://doi.org/10.5281/zenodo.14788682.

Full text
Abstract:
ಕವಿ ಸಿದ್ಧಲಿಂಗಯ್ಯನವರ ಮೊದಲ ʼಹೊಲೆಮಾದಿಗರ ಹಾಡುʼ ಕವನ ಸಂಕಲನದಿಂದ ಅವರ ಕಡೆಯ ʼಬೋಧಿವೃಕ್ಷದ ಕೆಳಗೆʼ ಸಮಗ್ರ ಕಾವ್ಯದ ಶೀರ್ಷಿಕೆಗಳನ್ನು ರೂಪಕದಂತೆ ಪರಿಭಾವಿಸುವುದಾದರೆ, ಸಮಾಜದಲ್ಲಿನ ಶೋಷಣೆ, ತಾರತಮ್ಯ, ಅಸಮಾನತೆಯಿಂದ ಕನಲಿ ಸಂಘರ್ಷದ ಪ್ರತಿಕ್ರಿಯೆ ಹಾಗೂ ಕೀಳರಿಮೆಯಿಂದ ನರಳುತ್ತಿದ್ದ ವಿಸರ್ಜಿತ ಲೋಕದಿಂದ ಹುಟ್ಟಿದ ಬಂಡಾಯದಂತೆ ಸ್ಫೋಟಿಸಿದ ಅವರ ಕವಿತೆಗಳು ಸಮ ಸಮಾಜದ ಹಂಬಲವಾದ ಸಾಮರಸ್ಯದ ಕಡೆಗೆ ಸಾಗಿರುವ ಸೃಜನಶೀಲ ಪಯಣದ ವಿಕಾಸ ಎಂದು ವ್ಯಾಖ್ಯಾನಿಸಬಹುದು. ಇಲ್ಲಿ ಆತ್ಯಂತಿಕ ತೀವ್ರತೆಯಿಂದ ಹುಟ್ಟಿದ ಬಂಡಾಯ ಸಮುದಾಯದಲ್ಲಿ ಸ್ವಾಭಿಮಾನ ಹಾಗೂ ಮಾನವ ಘನತೆಯನ್ನು ಮೂಡಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಸಮಷ್ಟಿ ಬದುಕನ್ನು ಕುರಿತ ಗಾಢ ವಿಷಾದ ಈ ಅನ್ಯಾಯದ ವ್ಯವಸ್ಥೆ ಬದಲಾಗಬೇಕೆಂಬ ಹಂಬಲ ಇಲ್ಲಿನ ಕವಿತೆಗಳು ಪ್ರತಿಪಾದಿಸುವ ನಿಲುವು.ಸ
APA, Harvard, Vancouver, ISO, and other styles
8

ಪ್ರಕಾಶ. "ವಚನಕಾರ್ತಿಯರಲ್ಲಿ ಬಂಡಾಯದ ನೆಲೆಗಳು". AKSHARASURYA JOURNAL 06, № 04 (2025): 56 to 63. https://doi.org/10.5281/zenodo.15490899.

Full text
Abstract:
೧೨ನೇ ಶತಮಾನದ ವಚನಚಳವಳಿಯೇ ಚಾರಿತ್ರಿಕವಾಗಿ ಬಹುದೊಡ್ಡ ಪ್ರಮಾಣದ ಬಂಡಾಯಕ್ಕೆ ನೂತನ ಅಯಾಸವನ್ನು ನೀಡಿತು. ಸುಮಾರು ಮೂವತ್ತೆರಡು ಜನ ಶರಣೆಯರು ವಚನಗಳನ್ನು ರಚಿಸಿ ಶ್ರೇಷ್ಠ ಚಿಂತಕಿಯರಾದರು ಅವರು ಸಮಾಜದ ಡಾಂಭಿಕತೆಯ ವಿರುದ್ಧ ಪ್ರತಿಭಿಟಿಸಿದ ರೀತಿ ಅಗಮ್ಯವಾದುದು. ಲಿಂಗಭೇದ ನಿರಾಕರಣೆ, ಮನೋಪ್ರವೃತ್ತಿಗಳ ವಿರುದ್ಧ ಪ್ರತಿಭಟನೆ ಮಾಡಿರುವುದು ಅವರ ಜ್ಞಾನ, ಆತ್ಮಸ್ಥೈರ್ಯ ಹಾಗೂ ಅವರ ಒಳಗಿನ ಬಂಡಾಯ ಗುಣಕ್ಕೆ ಸಾಕ್ಷಿಯಾಗಿದೆ.ಪುರುಷ ಪ್ರಧಾನ ಸಮಾಜವು ತನ್ನ ಹಿತಾಶಕ್ತಿಯನ್ನು ಕಾಯ್ದುಕೊಂಡು ಮಹಿಳೆಯನ್ನು ಕತ್ತಲೆಯ ಕೂಪಕ್ಕೆ ತಳ್ಳಿತ್ತು ೧೨ನೇಯ ಶತಮಾನದ ಬಸವಾದಿ ಶರಣರು ಮಹಿಳೆಯರ ಬದುಕಿನಲ್ಲಿದ್ದ ಕತ್ತಲೆಯನ್ನು ಸರಿಸಿ ಬೆಳಕಿನ ಮಾರ್ಗವನ್ನು ದರ್ಶಿಸಿದರು ಮನುಷ್ಯನ ಸಣ್ಣತನವನ್ನು ಶಮನಗೊಳಿಸಿ ಸಮಾನತೆಯ ತಳಹದಿಯ ಮೇಲೆ ಮಾನವೀಯವಾದ ಸಮಸಂಸ್ಕೃತಿಯ ಸಮಾಜ
APA, Harvard, Vancouver, ISO, and other styles
9

ರಕ್ಷಾ, ಎಸ್, та ಡಾ ಟಿ ಎಸ್ ಹರ್ಷ. "ವಿಶ್ವದ ಅತಿದೊಡ್ಡ ಪ್ರಾಚೀನ ಆಧ್ಯಾತ್ಮಿಕ ಆಚರಣೆ ಮತ್ತು ಪವಿತ್ರ ಸ್ನಾನದ ವೈಜ್ಞಾನಿಕ ವಿಸ್ಮಯಗಳ". International Journal of Kannada Research 11, № 2 (2025): 174–79. https://doi.org/10.22271/24545813.2025.v11.i2c.1122.

Full text
APA, Harvard, Vancouver, ISO, and other styles
10

ಸುಪ್ರಿಯಾ, ಮಲಶೆಟ್ಟಿ. "ವಚನಗಳಲ್ಲಿ ಖಗೋಳ ವಿಜ್ಞಾನ". AKSHARASURYA JOURNAL 04, № 04 (2024): 84 to 91. https://doi.org/10.5281/zenodo.13284072.

Full text
Abstract:
ವಿಜ್ಞಾನ ಮತ್ತು ಆಧ್ಯಾತ್ಮಿಕತೆಯು ಒಂದೇ ಸತ್ಯವನ್ನು ಎರಡು ರೀತಿಯಲ್ಲಿ ಕಾಣುವುದು. ಬ್ರಹ್ಮಾಂಡ ಮತ್ತು ಪಿಂಡಾಂಡ, ಬಾಹ್ಯ ಜಗತ್ತು ಮತ್ತು ಆಂತರಿಕ ಜಗತ್ತು ಎಂಬ ಎರಡು ಜಗತ್ತುಗಳಿವೆ. ಅನುಭವದಿಂದ ಈ ಎರಡು ಕ್ಷೇತ್ರಗಳಿಂದಲೂ ನಮಗೆ ಸತ್ಯ ದೊರಕುವುದು. ಆಂತರಿಕ ಅನುಭವದಿಂದ ಸಂಗ್ರಹಿಸಿರುವುದೇ ಮನಶಾಸ್ತ್ರ , ತತ್ವಶಾಸ್ತ್ರ ಮತ್ತು ಧರ್ಮ. ಬಾಹ್ಯ ಜಗತ್ತಿನಿಂದ ನಮಗೆ ಭೌತವಿಜ್ಞಾನಗಳು ದೊರಕುವವು. ಪೂರ್ಣವಾದ ಸತ್ಯವು ಎರಡು ಕ್ಷೇತ್ರಗಳಿಂದ ಬರುವ ಅನುಭವಗಳಿಗೆ ವಿರೋಧವಿಲ್ಲದೆ ಇರಬೇಕು. ಪಿಂಡಾಂಡವು ಬ್ರಹ್ಮಾಂಡಕ್ಕೆ ಪ್ರಮಾಣವಾಗಿರಬೇಕು. ಸತ್ಯವು ಯಾವ ಕ್ಷೇತ್ರಕ್ಕೆ ಸೇರಿದ್ದರು ಪರಸ್ಪರ ವಿರೋಧಗಳಿರುವುದಿಲ್ಲ ಆಂತರಿಕ ಸತ್ಯಕ್ಕೂ ಬಾಹ್ಯ ಸತ್ಯಕ್ಕೂ ಪರಸ್ಪರ ವಿರೋಧವಿಲ್ಲ. 
APA, Harvard, Vancouver, ISO, and other styles
11

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Full text
Abstract:
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
APA, Harvard, Vancouver, ISO, and other styles
12

ಬೋರಯ್ಯ, ಪಿ. ಕೆ. "ತತ್ವಪದಕಾರ ಲಿಂಗಯ್ಯನವರ ತತ್ವಪದಗಳ ಜೀವಾಳ". AKSHARASURYA 05, № 02 (2024): 42 to 49. https://doi.org/10.5281/zenodo.14034913.

Full text
Abstract:
ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಹಾಗೂ ವೇದ ಉಪನಿಷತ್ತುಗಳಿಂದ ಪ್ರಭಾವಿತರಾದ ಲಿಂಗಯ್ಯನವರು ತತ್ವಪದಕಾರರಾಗಿ, ವೇದಾಂತಿಗಳಾಗಿ, ಒಬ್ಬ ಆದರ್ಶ ಶಿಕ್ಷಕರಾಗಿ, ಕವಿಗಳಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಆಧ್ಯಾತ್ಮಿಕ ಕಥೆಗಳು, ನಾಟಕ, ಜೀವನ ಚರಿತ್ರೆ, ಸಾವಿರಾರು ತತ್ವಪದಗಳನ್ನು ಬರೆದು, ಸಾಮಾಜಿಕ ವ್ಯವಸ್ಥೆಯಲ್ಲಿ ಬಡವರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟವನ್ನು ಮಾಡುವುದರ ಮೂಲಕ ಜನರಲ್ಲಿ, ಶಾಂತಿ ಸಾಮರಸ್ಯದ ಬೆಳಕನ್ನು ಚೆಲ್ಲವುದರ ಕಡೆಗೆ ಮುಖ ಮಾಡಿ ಚಲಿಸಿದ್ದೆ ಅಪಾರ. ವೈದಿಕರನ್ನು ಮತ್ತು ವೈದಿಕತೆಯನ್ನು ತನ್ನ ಅಂತರಂಗದಿಂದಲೇ ಗ್ರಹಿಸಿ, ಅವರ ಆಚರಣೆಗಳನ್ನು ಪ್ರಶ್ನಿಸಿ, ಅವರು ತಮ್ಮ ತತ್ವಪದಗಳಲ್ಲಿ ವಿಶ್ಲೇಷಿಸಿರುವುದು ಗಮನಾರ್ಹ. ಹಾಗೆಯೇ ಸಮಾಜದಲ್ಲಿ ಅನೇಕ ರೀತಿಯ ಆಚರಣೆಗಳಲ್ಲಿ ಜಾತಿ, ಮತ, ಮಡಿ-
APA, Harvard, Vancouver, ISO, and other styles
13

ಪಂಪಾಪತಿ, ವಿ. "ಮಾರಾಟದ ಸರಕಾಗಿರುವ ಹೆಣ್ಣಿನ ದೇಹ: ವೇಶ್ಯಾವಾಟಿಕೆಯ ಹಿನ್ನೆಲೆ". International Journal of Advance Research in Multidisciplinary 2, № 3 (2024): 310–14. https://doi.org/10.5281/zenodo.13318294.

Full text
Abstract:
ಸಾವಿರಾರು ವರ್ಷಗಳಿಂದ ಗಂಡಸರು ಹೆಣ್ಣಿನ ಬದುಕನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ. ಮಕ್ಕಳನ್ನು ಹೆರಲು ಹೆಂಡತಿ ಬೇಕು, ದೈಹಿಕ ಸುಖ ಪಡೆಯಲು ವ್ಯಭಿಚಾರಿಣಿ ಬೇಕು, ಆಧ್ಯಾತ್ಮಿಕ ಸುಖ ಪಡೆಯಲು ಸ್ತ್ರೀ ಕಲಾವಿದೆ ಬೇಕು. ಪುರುಷನ ಜೀವನದಲ್ಲಿ ಮಹಿಳೆಯ ಸ್ಥಾನದ ಸಂದರ್ಭದಲ್ಲಿ ಇದು ವ್ಯಕ್ತವಾಗುತ್ತದೆ. ದೈಹಿಕ ಸುಖದ ತೃಪ್ತಿಗಾಗಿ ಹೆಣ್ಣನ್ನು ಮಾರಾಟದ ವಸ್ತುವನ್ನಾಗಿ ಪರಿವರ್ತಿಸುವ ಆಲೋಚನೆಯು ಸೋಮಾರಿ, ಸೋಮಾರಿ ಮತ್ತು ಭೋಗವಾದಿ ಸಮಾಜದ ಫಲವತ್ತಾದ ಮನಸ್ಸಿನಿಂದ ಬರುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಸುಖಕರ, ನಿರ್ಮಲ ಜೀವನ ಸಾಧ್ಯವಾದರೆ ವೈವಾಹಿಕ ನೈತಿಕತೆಯಂತಹ ನಿರ್ಬಂಧಗಳನ್ನು ಹೇರಲಾಗುತ್ತಿತ್ತು. ನಂತರ, ಸೋಮಾರಿತನ ಮತ್ತು ಅವಲಂಬನೆಯ ಜೀವನದಲ್ಲಿ ಉದ್ಭವಿಸಿದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಈ ಕೃತಕ ನಿರ್ಬಂಧಗಳನ್ನು ರಚಿಸಲಾಯಿತು, ಆದರೆ ನಂತ
APA, Harvard, Vancouver, ISO, and other styles
14

D'Souza, Joseph Cyril. "ಎಡ್ವಿನ್ ಜೆ. ಎಫ್ ಡಿ ಸೋಜಾಚ್ಯಾ ಉಣ್ಯಾ ಭಾವಾಡ್ತಾಚೆ ದೊಳ್ಯಾಂನಿ ಕೊಡಿಯಾಳ್ ಪರಿಸರ್ ಆನಿ ಸಂಸ್ಕೃತಿ". MJES Journal of Amar Konkani 3, № 2 (2024): 51–67. http://dx.doi.org/10.69852/aloy.mjesjak.3.2/16343.

Full text
Abstract:
ಖಾಣ್-ಜೆವಣ್, ನ್ಹೆಸಣ್ ಆನಿ ದಿಸ್ಪಡ್ತೆಂ ಜಿವಿತ್ - ಹೆ ಖಂಚ್ಯಾಯ್ ಸಂಸ್ಕೃತಿಚೆ ಮಹತ್ವಾಚೆ ಆನಿ ಮುಳಾವೆ ಘಟಕ್ ಜಾವ್ನಾಸೊನ್, ಸಾಹಿತ್ಯಾಂತ್ಲ್ಯಾ ಸಾಂಕೇತಿಕತಾ ಆನಿ ಅರ್ಥಾಚೆ ಗಿರೆಸ್ತ್ ಮೂಳ್ ಜಾವ್ನಾಸಾತ್. ಪಾತ್ರಾಂಚೆಂ ಪ್ರೇರಣ್, ಪಾತ್ರಾಂ ಮಧ್ಲೊ ಸಂಘರ್ಶ್, ವಿಶ್ವ್ ದಿಶ್ಟಿಕೋನ್ ರೂಪಿತ್ ಕರ್ಚ್ಯಾಕ್ ಧರ್ಮ್ ಆನಿ ಪಾತ್ಯೆಣಿ ಗೂಂಡ್ ಪಾತ್ರ್ ಖೆಳ್ತಾತ್. ಹ್ಯಾ ಲೇಖನಾಂತ್ ಎಡ್ವಿನ್ ಜೆ. ಎಫ್ ಡಿ'ಸೋಜಾಚ್ಯಾ ಉಣ್ಯಾ ಭಾವಾಡ್ತಾಚೆ ಕಾದಂಬರಿಂತ್ ಕೊಡಿಯಾಳ್ ಆನಿ ಭೊಂವ್ತಿಚೆಂ ಪರಿಸರ್ ಆನಿ ಸಂಸ್ಕೃತಿ ಕಶಿ ಚಿತ್ರಿತ್ ಜಾಲ್ಯಾ, ಕಾದಂಬರಿಂತ್ ದಾಖಯಿಲ್ಲೊ ಧರ್ಮಿಕ್ ಆನಿ ಆಧ್ಯಾತ್ಮಿಕ್ ಅಂಶ್ ಪಾತ್ರಾಂಚ್ಯಾ ಬಳ್ವಂತ್ ಚಿತ್ರೀಕರಣಾಕ್ ಕಸೊ ಪೂರಕ್ ಆನಿ ಕಾದಂಬರಿಂತ್ಲ್ಯಾ ಪಾತ್ರಾಂನಿ ಸಂದರ್ಭಾಕ್ ಸರಿ ಜಾವ್ನ್ ಘೆಂವ್ಚ್ಯಾ ನಿರ್ಣಯಾಂಚೆರ್ ಆನಿ ಸಂವಾದಾ
APA, Harvard, Vancouver, ISO, and other styles
15

ಉಮೇಶ್, ಬಿ. ಆರ್. "ನಲ್ಲೂರರ ʼನೀನೆಂಬ ನಾನುʼ ಕವನ ಸಂಕಲನದ ವಿಭಿನ್ನ ನೆಲೆಗಳು". AKSHARASURYA JOURNAL 05, № 06 (2025): 92 to 104. https://doi.org/10.5281/zenodo.14788762.

Full text
Abstract:
ಆಧುನಿಕ ಕನ್ನಡ ಸಾಹಿತಿಗಳಲ್ಲಿ ಆರ್.ಕೆ.ನಲ್ಲೂರು ಪ್ರಸಾದ್‌ರವರು ಒಬ್ಬರು. ಯಾವುದೇ ಒಂದು ಸಾಹಿತ್ಯಿಕ ಪಂಥಕ್ಕೆ ಸೀಮಿತರಾಗದ ಇವರು ಸಮನ್ವಯತೆಯಿಂದ ಕಾವ್ಯ ಕಟ್ಟುತ್ತಿರುವವರು. ಇವರು ಕವಿಯಾಗಿ, ಜಾನಪದ ವಿದ್ವಾಂಸರಾಗಿ, ಕಲಾವಿದರಾಗಿ, ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿ, ವಿಚಾರವಾದಿಯಾಗಿ, ಸಂಸ್ಕೃತಿ ಚಿಂತಕರಾಗಿ, ಲೇಖಕರಾಗಿಯೂ ಗುರುತಿಸಲ್ಪಟ್ಟಿದ್ದಾರೆ. ಸಾಹಿತಿಯಾದವನಿಗೆ ತಾನು ಬದುಕುತ್ತಿರುವ ಸಮಾಜದ ಬಗ್ಗೆ ಸದಾಕಾಲ ಕೃತಜ್ಞತಾ ಭಾವವೇ ಇರುತ್ತದೆ. ಸಮಾಜದ ಪ್ರತಿಯೊಂದು ಆಗು-ಹೋಗುಗಳನ್ನು ಆತ ಸದಾ ತೆರೆದ ಹೃದಯದಿಂದ ಸ್ವೀಕರಿಸಿ, ಅನುಭವಿಸಿ ಅವುಗಳಿಗೆ ಅಭಿವ್ಯಕ್ತಿಸುತ್ತಾ ಬದುಕುತ್ತಾನೆ. ಅವನ ಅಭಿವ್ಯಕ್ತಿಯು ಮೌಖಿಕವಾಗಿ ಇಲ್ಲವೇ ಕಾರ್ಯರೂಪದಲ್ಲಿ ಅಭಿವ್ಯಕ್ತಿಸಲ್ಪಡುತ್ತದೆ. ಸಾಹಿತಿಯು ತಾನು ಕಂಡುಂಡ ಅನೇಕ ಘಟನೆಗಳಿಗೆ ಪ್ರತಿಕ
APA, Harvard, Vancouver, ISO, and other styles
16

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
17

ಎನ್., ಎಸ್. ಸತೀಶ್. "ಅಲ್ಲಮನ ವಚನದ ವಿವೇಚನೆ". AKSHARASURYA JOURNAL 05, № 04 (2024): 41 to 46. https://doi.org/10.5281/zenodo.14289593.

Full text
Abstract:
ಅಲ್ಲಮ ಈ ವಚನದಲ್ಲಿ ಮುಸುರೆ ಹಾಗು ನೊಣವನ್ನು ಉಪಮೆ ನೀಡುವುದರ ಮೂಲಕ ವಿಷಯಾಸೆಗಳನ್ನು ಮುಸುರೆಯೆಂದು ಸಾಮಾನ್ಯ ಮನುಷ್ಯನ ಮನಸ್ಸನ್ನು ನೊಣವೆಂದು ಹೇಳಿದ್ದಾನೆ. ಮುಸುರೆ ಅಲ್ಪಾವಧಿಯದ್ದಾಗಿದ್ದು ಸ್ವಲ್ಪ ಸಮಯದ ಅನಂತರ ಕೊಳೆತು ನಾರುತ್ತದೆ ಅಂತೆಯೇ ವಿಷಯಾಸಕ್ತಿಗಳು ಆ ಕ್ಷಣಕ್ಕೆ ಸಂತಸವನ್ನು ತಂದು ಕೊಟ್ಟರೂ ದೀರ್ಘಾವಧಿಯಲ್ಲಿ ತನ್ನ ಮನಸ್ಸಿನ ಶಾಂತಿಯನ್ನು ಕಳೆದುಕೊಳ್ಳುತ್ತಾ, ಚಿತ್ತ ವಿಕೃತಿಗೆ ಒಳಗಾಗುವುದಲ್ಲದೆ ಅವನು ತನ್ನ ವ್ಯಕ್ತಿತ್ವ ನಾರುವಂತೆ ಮಾಡಿಕೊಳ್ಳುತ್ತಾನೆ. ಇನ್ನು ಮತ್ತೊಂದು ಆಯಾಮವನ್ನು ನೋಡುವುದಾದರೆ ಮುಸುರೆಯ ಮಡಕೆ ಮನುಷ್ಯನ ಲೋಭತನದ ಕ್ರೋಢೀಕರಣ ಇದು ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತದೆ. ನೊಣ ಈ ಕ್ರೋಢೀಕರಣವನ್ನು ಹರಡುವ ಸಾಂಕ್ರಾಮಿಕ ರೋಗದ ಮನೋಭಾವದಂತೆ ಕಾಣುತ್ತದೆ.  ನೊಣದ ಸ್ವಭಾವದಲ್ಲಿನ ಚಂಚಲತೆ, ಪಶುವಿನಲ್ಲಿ
APA, Harvard, Vancouver, ISO, and other styles
18

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
19

USHA. "ಉತ್ತರ ರಾಮಾಯಣ ಆಧಾರಿತ ಕನ್ನಡ ಕಾವ್ಯಗಳು". AKSHARASURYA JOURNAL 03, № 03 (2024): 56 to 62. https://doi.org/10.5281/zenodo.10775072.

Full text
Abstract:
ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡಿರುವ ರಾಮಾಯಣ ಶಕ್ತಿಯುತ ಶ್ರವ್ಯಕಾವ್ಯವಾಗಿ ರಚನೆಯಾಗಿದ್ದು, ಈ ರಾಮಾಯಣದ ಮೂಲಕ ಸಾವಿರಾರು ವರ್ಷಗಳ ಹಿಂದಿನ ಇನ್ನು ಮುಂಬರುವ ಲಕ್ಷಾಂತರ ವರ್ಷಗಳ ಜನರ ಬದುಕಿಗೆ ಪ್ರಜ್ಞಾವಂತ ಪ್ರಗತಿಯನ್ನು, ಪ್ರಜ್ಞೆಯ ಜೀವನವನ್ನು ಕಟ್ಟಿ ಕೊಡುತ್ತದೆ. ವಾಲ್ಮೀಕಿ ವಿರಚಿತ ರಾಮಾಯಣದ ಉತ್ತರ ರಾಮಾಯಣ ಭಾಗವು 14 ವರ್ಷ ವನವಾಸ ಮುಗಿಸಿ ಸೀತೆಯನ್ನು ಅಪಹರಿಸಿದ್ದ ರಾವಣನನ್ನು ಸಂಹರಿಸಿ, ಅಯೋಧ್ಯೆಗೆ ಹಿಂತಿರುಗಿ, ಪಟ್ಟಾಭಿಷೇಕವಾದ ನಂತರದ ಭಾಗವೇ ಉತ್ತರ ರಾಮಾಯಾಣ. ಈ ಭಾಗ ಪ್ರಕ್ಷಿಪ್ತ ಎಂಬ ವಾದ ವಿವಾದಗಳು ನಡೆದರೂ ಉತ್ತರ ರಾಮಾಯಣಕ್ಕೆ ಸಂಬಂಧಿಸಿದ ಹಲವಾರು ಭಾಗಶಃ ಹಾಗೂ ಪೂರ್ಣ ಪ್ರಮಾಣದ ಕೃತಿಗಳು ಕನ್ನಡದಲ್ಲಿ ರಚನೆಯಾದವು. ಕನ್ನಡ ಉತ್ತರ ರಾಮಾಯಣದಲ್ಲಿ ನಾರಾಯಣ, ನರಸ, ತಿರುಮಲೆ ವೈದ್ಯ, ಯೋಗೀಂದ್ರ, ಸೋಸಲೆ ಅಯ್ಯಶಾಸ್ತ್ರಿ ಇವರು
APA, Harvard, Vancouver, ISO, and other styles
20

ಎನ್., ಚಂದ್ರಶೇಖರ್. "ಛಲವಾದಿ ಸಮುದಾಯದ ಪಾರಂಪರಿಕ ಹಿನ್ನೋಟ ಹಾಗೂ ವಾಸ್ತವ ಸ್ಥಿತಿ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2022, 1–10. http://dx.doi.org/10.59176/kjksp.v1i2.2210.

Full text
Abstract:
ಪ್ರಜಾಪ್ರಭುತ್ವ ಪರಿಕಲ್ಪನೆಯನ್ನು ಒಳಗೊಂಡ ಭಾರತ ಜಾತಿಗಳಿಂದ ಕೂಡಿದ ಜಾತ್ಯತೀತ ರಾಷ್ಟç. ಇಲ್ಲಿ ಜಾತ್ಯತೀತ ಎಂಬುದು ವಾಸ್ತವವಾಗಿ ಯಾವುದೇ ಒಂದು ಧರ್ಮ, ವರ್ಣ ಮತ್ತು ವರ್ಗದ ಕಟ್ಟುಪಾಡುಗಳಿಗೆ ಅಧೀನವಾಗದ ಸಾರ್ವತ್ರಿಕ ದೃಷ್ಟಿಕೋನವನ್ನು ಹೊಂದಿದ ಸ್ಥಿತಿಯಾಗಿದೆ. ಆದರೆ ಅದಕ್ಕೆ ವ್ಯತಿರಿಕ್ತವೆಂಬAತೆ ಈ ನೆಲದಲ್ಲಿ ನಾವು ಕಂಡುAಡ ವೈವಿಧ್ಯಮಯ ಅನುಭವಗಳು ಚಾರಿತ್ರಿಕ, ಪೌರಾಣಿಕ, ಆಧ್ಯಾತ್ಮಿಕ, ಧಾರ್ಮಿಕ ಸಾಮಾಜಿಕ, ಹಾಗೂ ರಾಜಕೀಯ ಹಿನ್ನೆಲೆಯಿಂದ ಬಹಳ ಭಿನ್ನವಾದದ್ದು ಮತ್ತು ಆಚರಣೆಯ ರೂಪದಲ್ಲಿ ಅಷ್ಟೇ ಜಟಿಲವಾದದ್ದೂ ಆಗಿದೆ ಎಂಬುದರಲ್ಲಿ ಅತಿಶಯೋಕ್ತಿಯಿಲ್ಲ. ಆ ಕಾರಣದಿಂದಲೇ ಇಂದಿಗೂ ಶ್ರೇಷ್ಠತೆಯ ಕುಲಮದದಿಂದ ಹೊರಬರಲಾಗದ ಕೆಲವಾರು ಜಾತಿಗಳು ಬಹುಸಂಖ್ಯಾತರಾದ ಹಲವಾರು ಜಾತಿಗಳ ವಿರುದ್ಧ ತಮ್ಮ ಅಸ್ತಿತ್ವಕ್ಕಾಗಿ ಹಸಿದ ಹೆಬ್ಬಾವುಗಳಂತೆ ಬುಸುಗುಡು
APA, Harvard, Vancouver, ISO, and other styles
21

ಮುಯಿನ್, ಸೈಯದ್. "ಅಲ್ಲಿದೆ ನಮ್ಮನೆ ..... ಇಲ್ಲಿ ಬಂದೆ ಸುಮ್ಮನೆ !!" ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 74–80. http://dx.doi.org/10.59176/kjksp.v3i1.2340.

Full text
Abstract:
ಪ್ರಸ್ತುತ ಲೇಖನವು ಕೆ. ಎಸ್. ನರಸಿಂಹಸ್ವಾಮಿ ಅವರ ಮನೆಯಿಂದ ಮನೆಗೆ ಕವನದ ವಿಶ್ಲೇಷಣೆಯಾಗಿದೆ. ಸಾವು ಮುಕ್ತಿಯ ಸಂಕೇತ, ಬದುಕಿನ ಜಂಜಾಟಗಳಿAದ, ನೋವು, ಪರದಾಟಗಳಿಂದ ಮುಕ್ತನಾಗುವ ಕ್ರಿಯೆ, ಸುಖ, ದುಖಗಳು ಶಾಶ್ವತವಲ್ಲ ಆದರೆ ಸಾವು ಶಾಶ್ವತವಾದುದು, ಸಾವು ಲೌಕಿಕ ಜಗತ್ತಿಗೆ ವಿದಾಯ ಮತ್ತು ಹೊಸ ಜಗತ್ತಿನಲ್ಲಿ ಹೊಸ ಜೀವನಕ್ಕೆ ಸ್ವಾಗತವನ್ನು ಒಳಗೊಂಡಿರುತ್ತದೆ. ಈ ಸತ್ಯದ ಕುರಿತಾಗಿ ಕವನ ಚರ್ಚೆ ಮಾಡುವುದು ಸೂಚ್ಯಾರ್ಥದ ಮೂಲಕ. ‘ಹೆಸರಿರದ ಇನ್ನೊಂದು ಮನೆಗೆ ಹೊಸತು ಹಳೆಯದು ಎಲ್ಲ ಯಾತ್ರೆ ಹೊರಟಿದ್ದೇವೆ’ ಎನ್ನುವ ಮಾತು ಆಧ್ಯಾತ್ಮಿಕ ಹುಟುಕಾಟವನ್ನು ಸೂಚಿಸುವಂತಹದ್ದಾಗಿದೆ. ಜೀವನದ ಕೊನೆಯಲ್ಲಿ ಹೊಸಬರು ಮತ್ತು ಹಳಬರು ಎಂಬ ಯಾವುದೇ ಭೇದ ಭಾವವಲ್ಲದೆ ಎಲ್ಲಾ ಜೀವರಾಶಿಗಳೂ ಆದರವಿರದ, ಹೆಸರಿರದ, ಕದವಿರದ ಇನ್ನೊಂದು ಮನೆಗೆ ಹೋಗಲೇಬೇಕಾಗುತ್ತದೆ. ಅದೇ ಕ
APA, Harvard, Vancouver, ISO, and other styles
22

ಎಂ., ತಿಪ್ಪೇಸ್ವಾಮಿ. "ಚಿತ್ರದುರ್ಗ ಜಿಲ್ಲೆಯ ತತ್ವಪದಗಳಲ್ಲಿನ ಸಾಮಾಜಿಕ ಮೌಲ್ಯಗಳು". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 22–27. http://dx.doi.org/10.59176/kjksp.v3i1.2334.

Full text
Abstract:
ತತ್ವಪದಗಳ ಮುಖ್ಯ ಉದ್ದೇಶ ಸಮಾಜದಲ್ಲಿ ಬದಲಾವಣೆಯನ್ನು ತರುವುದಾಗಿದೆ. ಸಮಾಜದಲ್ಲಿ ಸಮಾನತೆ, ಸಹಕಾರ, ಸಹಬಾಳ್ವೆಯ ಜೊತೆಗೆ ಸಮಾಜದ ಮನುಜರು ಅರಿವಿನ ಹಾದಿ ಹಿಡಿದು ಬದುಕುವುದರಿಂದ ಸಮಾಜಕ್ಕು ಕ್ಷೇಮ ಎಂಬುದನ್ನು ಅರಿತಿದ್ದರಿಂದಲೆ ಶರಣರು, ಹರಿದಾಸರು, ತತ್ವಪದಕಾರರೆಲ್ಲರೂ ತಮ್ಮ ವಚನಗಳ ಮೂಲಕ, ಕೀರ್ತನೆಗಳ ಮೂಲಕ, ತತ್ವಪದಗಳ ಮೂಲಕ ಸಮಾಜಕ್ಕೆ ತಿಳಿಸುವಂತಹ ಪ್ರಯತ್ನ ಪಟ್ಟರು. ಆಧ್ಯಾತ್ಮಿಕ ಅನುಸಂಧಾನದ ಜೊತೆಜೊತೆಗೆ ಸಮಾಜವನ್ನು ಎಚ್ಚರಿಸುವುದರೊಂದಿಗೆ ಶುದ್ಧೀಕರಿಸುವ ಕಾರ್ಯವನ್ನು ತತ್ವಪದಕಾರರು ನಿರಂತರವಾಗಿ ಮಾಡಿಕೊಂಡು ಬಂದಿರುವುದನ್ನು ಗಮನಿಸಬಹುದು. ಈ ಭಾಗದ ತತ್ವಪದಕಾರರು ಬಯಲು ಸೀಮೆಯ, ಬರದ ನಾಡಿನ ಜನರ ಕಷ್ಟದ ಬದುಕನ್ನು ಕಂಡಿದ್ದರಿAದ ತಮ್ಮ ತತ್ವಪದಗಳಲ್ಲಿ ಸಮಾಜವನ್ನು ತಿದ್ಧುವಂತಹ, ಬದಲಾವಣೆಯನ್ನು ತರುವಂತಹ, ಹಣತೆಯನ್ನು ಹಚ್ಚಿದ್ದಾರ
APA, Harvard, Vancouver, ISO, and other styles
23

ಹೆಚ್. ಎಸ್., ಸಂತೋಷ. "ಮಹಿಳಾ ತತ್ವಪದಕಾರ್ತಿಯರ ಅನುಭಾವದ ನೆಲೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2023, 124–31. http://dx.doi.org/10.59176/kjksp.v2i2.2308.

Full text
Abstract:
ಇತಿಹಾಸದಲ್ಲಿ ಹೆಚ್ಚು ಚರ್ಚೆಗೆ ಒಳಪಟ್ಟ ಪಾತ್ರ ಮಹಿಳೆಯ ಪಾತ್ರ ಮಹಿಳೆಯರ ಬಗೆಗೆ ಶತ ಶತಮಾನಗಳಿಂದಲೂ ಪ್ರಾಚೀನ ಕನ್ನಡ ಸಾಹಿತ್ಯಗಳಿಂದ ಹಿಡಿದು ಆಧುನಿಕ ಕಾಲಘಟ್ಟದವರೆಗೂ ವಿಭಿನ್ನ ನೆಲೆಯಲ್ಲಿ ಚರ್ಚೆ ಮಾಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಂಪರೆಯಲ್ಲಿ ವಚನ, ಸ್ವರವಚನ, ಕೀರ್ತನೆ, ತತ್ವಪದಗಳು ವಿಭಿನ್ನ ಆಶಯಗಳೊಂದಿಗೆ ಬೆಳೆದು ಬಂದಿದೆ. ಅದರಲ್ಲೂ ಸಾಹಿತ್ಯವೇ ಸೃಷ್ಟಿಯಾಗಿಲ್ಲ ಎಂಬ ಕಾಲದಲ್ಲಿ ಹದಿನಾರರಿಂದ ಇಪ್ಪತ್ತನೇಯ ಶತಮಾನದ ಅವಧಿಯಲ್ಲಿ ತತ್ವಪದ ಸಾಹಿತ್ಯವು ಹುಟ್ಟಿ ಸಮಾಜದ ಜನಮಾನಸದಲ್ಲಿ ಆಳವಾಗಿ ಬೇರೂರಿತು. ವಚನಗಳ ಸಮಾಜಮುಖಿಯ ಆಯಾಮ, ಕೀರ್ತನೆಗಳ ಭಕ್ತಿಯ ಆಯಾಮ, ಸ್ವರ ವಚನಗಳ ಅನುಭಾವಿಕ ಆಯಾಮಗಳ ಪ್ರಭಾವ ಪ್ರೇರಣೆಯಿಂದ ತತ್ವಪದ ಸಾಹಿತ್ಯವು ಹುಟ್ಟಿತು. ಪರಮಾತ್ಮನ ಬಗೆಗಿನ ಅನುಭವ ಈ ಪದ್ಯಗಳಲ್ಲಿ ವ್ಯಕ್ತ ಗೊಂಡಿರುವುದರಿಂದ ಇವಕ್ಕೆ ಅನುಭ
APA, Harvard, Vancouver, ISO, and other styles
24

ಭಟ್, ಮೈತ್ರಿ. "ಬಸವಣ್ಣನವರ ವಚನಗಳೂ... ಮನೋವಿಜ್ಞಾನವೂ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 17–21. http://dx.doi.org/10.59176/kjksp.v3i1.2333.

Full text
Abstract:
ಕನ್ನಡದ ಅನನ್ಯ ಸಾಹಿತ್ಯ ಪ್ರಕಾರವಾದ ವಚನವು ಅಂತರಂಗದ ಉತ್ಕಟ ಅವಸ್ಥೆಯಿಂದ ಹೊರಬಂದ ಶಬ್ದರೂಪವಾಗಿದ್ದು, ಅತ್ತ ಪದ್ಯವೂ ಅಲ್ಲದ ಇತ್ತ ಗದ್ಯವೂ ಅಲ್ಲದ ಈ ವಿಶಿಷ್ಟ ಲಯಬದ್ಧ ಗೀತೆಯು ಗಾತ್ರದಲ್ಲಿ ಕಿರಿದಾದರೂ ಜೀವ ವಿಕಾಸದ ಹಾದಿಯಲ್ಲಿ ಹಿರಿದಾದುದೇ ಆಗಿದೆ. ಇಂತಹ ವಚನಗಳು ಅಂತರಂಗದ ನಿವೇದನೆಗಳಾಗಿ, ಆತ್ಮಗತ ಸಂಭಾಷಣೆಗಳಾಗಿ ಹೊರಹೊಮ್ಮಿವೆ. ವಿವಿಧ ಕಾಯಕಗಳಲ್ಲಿ ತೊಡಗಿದ್ದ ನಾನಾ ಜಾತಿಮತಗಳ ಜನರು ತಮ್ಮ ಅಂತಃಪ್ರೇರಣೆಯ ತುಡಿತಕ್ಕೆ ಸ್ಪಂದಿಸಿ, ತಮ್ಮ ಮನದಾಳದ ಚಿಂತನೆಗಳನ್ನು ಜನಮಾನಸಕ್ಕೆ ತಲುಪಿಸಲು ಆಡುನುಡಿಯನ್ನು ಬಳಸಿಕೊಂಡರು. ಶುದ್ಧ ದೇಸೀ ಮನೋಭೂಮಿಕೆಯಲ್ಲಿ ಹುಟ್ಟಿದ ಇವು ಗದ್ಯದ ನಿರರ್ಗಳತೆಯಿಲ್ಲದಿದ್ದರೂ ಸರಳತೆಯಿಂದ, ಪದ್ಯದ ಕ್ರಮಬದ್ಧ ಛಂದೋಗತಿ ಇಲ್ಲದಿದ್ದರೂ ಅದರ ಲಯದಿಂದ ಕೂಡಿ ಸ್ವಚ್ಛಂದ ಲಯದಲ್ಲಿ ಮಿಂದೇಳುತ್ತವೆ. ಬಿಡಿಯಾಗಿ ನೋಡಿದರ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!