To see the other types of publications on this topic, follow the link: ಕಾಯಕ.

Journal articles on the topic 'ಕಾಯಕ'

Create a spot-on reference in APA, MLA, Chicago, Harvard, and other styles

Select a source type:

Consult the top 28 journal articles for your research on the topic 'ಕಾಯಕ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಲಕ್ಷ್ಮಿದೇವಿ, ಎನ್‌. "ಬಾಚಿಕಾಯಕದ ಕಾಳವ್ವೆಯ ವಚನದಲ್ಲಿ ಕಾಯಕ, ಮಾತು ಮತ್ತು ವ್ರತ ಪ್ರಜ್ಞೆ". AKSHARASURYA 04, № 03 (2024): 117 to 124. https://doi.org/10.5281/zenodo.12672873.

Full text
Abstract:
ವಚನಗಳಲ್ಲಿ ನಾವು ವಿಚಾರ ಸ್ವಾತಂತ್ರ್ಯದ ಪರಾಕಾಷ್ಟೆಯನ್ನು ಕಾಣುತ್ತೇವೆ. “ಉದರ ನಿಮಿತ್ತಂ ಬಹುಕೃತ ವೇಷಂ” ಎಂಬ ಮಾತೊಂದಿದೆ. ಹೊಟ್ಟೆ ಹೊರೆಯುವುದಕ್ಕಾಗಿ ಮಾನವ ಅನೇಕ ವೇಷಗಳನ್ನು ಕೈಗೊಳ್ಳುತ್ತಾನೆ. ಆದರೆ ಶರಣರು ಹೊಟ್ಟೆ ಹೊರೆಯುವ ಕಾಯಕದ ಮೂಲಕ ದಾಸೋಹ ಸಿದ್ಧಾಂತವನ್ನು ಅನುಭಾವದ ಮೂಲಕ ಸಮಾಜಕ್ಕೆ ಸಾರಿದವರು. ಅಸಮಾನತೆಯ ಸಮಾಜದಲ್ಲಿ ಶೂದ್ರರಿಗೆ, ಅಸ್ಪೃಶ್ಯರಿಗೆ, ಹೆಣ್ಣಿಗೆ ಸಮಾನ ಸ್ಥಾನಮಾನವನ್ನು ತಂದುಕೊಟ್ಟ ಕೀರ್ತಿ ಬಸವಣ್ಣನರಿಗೆ ಸಲ್ಲುತ್ತದೆ. ೧೨ನೇ ಶತಮಾನದ ಸಮಾಜದಲ್ಲಿ ಅಕ್ಷರ ಕ್ರಾಂತಿಯ ಮೂಲಕ ಸ್ತ್ರೀ-ಪುರುಷ ಸಮಾನತೆಯನ್ನು ಪಡೆದದ್ದು ಪವಾಡವೇ ಸರಿ. ಅದರಲ್ಲೂ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಮಹಿಳೆ ಅನುಭವ ಮಂಟಪದ ಗೋಷ್ಠಿಯಲ್ಲಿ ಪುರುಷನಷ್ಟೇ ಸಮಾನತೆಯನ್ನು ಕೈಗೊಂಡಿದ್ದು ಸಮಾಜಿಕ ಕ್ರಾಂತಿ ಎನ್ನಬಹುದು. ಅವರಲ್ಲಿ
APA, Harvard, Vancouver, ISO, and other styles
2

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Full text
Abstract:
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು”. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
APA, Harvard, Vancouver, ISO, and other styles
3

ಮೋಹನ್‌, ಕುಮಾರ್‌ ಆರ್‌. "ನೇಯ್ಗೆ ಕಾಯಕದ ಶರಣ ಮತ್ತು ಶರಣೆಯರ ವಚನಗಳ ಮಹತ್ವ". AKSHARASURYA JOURNAL 06, № 06 (2025): 47 to 60. https://doi.org/10.5281/zenodo.15580976.

Full text
Abstract:
ಆದ್ಯವಚನಕಾರರಾದ ಜೇಡರ ದಾಸಿಮಯ್ಯನವರು ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಶ್ರೇಷ್ಠ ಶಿವಶರಣ ಹಾಗೆಯೇ ದೊರೆತಿರುವ ಆಧಾರಗಳ ಮೇರೆಗೆ ದಾಸಿಮಯ್ಯನ ಪತ್ನಿ ದುಗ್ಗಳೆ, ಅಮುಗಿ ದೇವಯ್ಯ, ಅಮುಗೆ ರಾಯಮ್ಮ, ಆದಯ್ಯ, ಕದಿರ ರೆಮ್ಮವ್ವೆ, ಕದಿರ ಕಾಯಕದ ಕಾಳವ್ವೆಯರು ಕೂಡ ನೇಯ್ಗೆ ಕಾಯಕವನ್ನು ಮಾಡುತ್ತ ಸಮಾಜಕ್ಕೆ ತಮ್ಮದೇ ಆದ ವಚನಗಳ ಮೂಲಕ ಸಮಾಜದ ಸರ್ವೋನ್ನತಿಗೆ ಶ್ರಮಿಸಿದ ಕಾಯಕ ಶರಣ ಮತ್ತು ಶರಣೆಯರು. ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಈ ಶರಣ ಮತ್ತು ಶರಣೆಯರು ತಮ್ಮ ಅನುಭವ, ಆತ್ಮಾನುಭೂತಿಯನ್ನು ಸಮಾಜದ ಜನರೊಂದಿಗೆ ಹಂಚಿಕೊಳ್ಳಲು ಪ್ರಯತ್ನಿಸಿದರು. ಸರಳ ಮತ್ತು ಸ್ಪಷ್ಟ ನುಡಿಗಳಲ್ಲಿ ವಚನಗಳನ್ನು ಕಟ್ಟಿಕೊಟ್ಟು ದಾಂಪತ್ಯದಿಂದಲೂ ಮೋಕ್ಷ ಸಂಪಾದನೆ ಸಾಧ್ಯವೆಂಬ ಅಧ್ಯಾತ್ಮಿಕ ಚಿಂತನೆಯನ್ನು ತೋರಿದವರು. ಸತ್ಯದ ಪ್ರತಿಪಾದನೆ, ಸ್ತ್ರೀಪರ ಕಾಳಜಿ, ಸ್ತ್ರೀಸಮ
APA, Harvard, Vancouver, ISO, and other styles
4

ಬಿ, ನಾಗೇಶ. "ಜಲಗಾರ ನಾಟಕ ಮತ್ತು ವಚನಕಾರರ ಕಾಯಕ ತತ್ವ". International Journal of Kannada Research 10, № 2 (2024): 118–22. http://dx.doi.org/10.22271/24545813.2024.v10.i2b.975.

Full text
APA, Harvard, Vancouver, ISO, and other styles
5

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Full text
Abstract:
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
APA, Harvard, Vancouver, ISO, and other styles
6

ಮಾಳಿಗೆ, ಡಾ ಜೆ ಕರಿಯಪ್ಪ. "ಕಾಯಕ ನಿಷ್ಠೆ ಮತ್ತು ದಾಸೋಹ ಸೇವೆಯ ಮೋಳಿಗೆ ಮಾರಯ್ಯ". International Journal of Kannada Research 9, № 3 (2023): 05–07. http://dx.doi.org/10.22271/24545813.2023.v9.i3a.840.

Full text
APA, Harvard, Vancouver, ISO, and other styles
7

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
8

ಕುಮಾರಯ್ಯ, ಡಿ.ಎಸ್. "ಬಸವಣ್ಣನವರ ವಚನಗಳಲ್ಲಿ-ಜಾತಿ ನಿರಾಕರಣೆ". AKSHARASURYA JOURNAL 06, № 06 (2025): 26 to 31. https://doi.org/10.5281/zenodo.15580919.

Full text
Abstract:
ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಶರಣ ಸಮಾಜವು ಕುಲ, ಮತ, ಲಿಂಗ, ವರ್ಣ, ವರ್ಗಇವುಗಳಿಂದ ಮುಕ್ತವಾಗಿತ್ತು. ಬಸವಣ್ಣನವರು ಜಾತಿಯ ವಿಷ ಬೀಜವನ್ನು ಕಿತ್ತು ನವ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಸಾರಿದರು. ಮನುಧರ್ಮದ ಕರ್ಮಸಿದ್ದಾಂತವನ್ನು ಬಸವಣ್ಣನವರು ಅಲ್ಲಗಳೆದು ಕಾಯಕ ಸಿದ್ಧಾಂತವನ್ನು ಕಾರ್ಯಗತಗೊಳಿಸಿದರು. ಬಸವಣ್ಣನವರ ಚಿಂತನೆಗಳಲ್ಲಿ ಜಾತಿ ನಿರಾಕರಣೆಯೂ ಸಹ ಮಹತ್ವವಾದ ಚಿಂತನೆಯಾಗಿದೆ. ಜಾತಿ ನಿರಾಕರಣೆ ವಿಚಾರದಲ್ಲಿ ಎಲ್ಲರಿಗಿಂತ ಹೆಚ್ಚು ಮಾನಸಿಕ ಸಂಘರ್ಷವನ್ನು ಹೊಂದಿದವನು ಬಸವಣ್ಣನವರು, ಇಲ್ಲದಿದ್ದರೆ ‘ಉತ್ತಮ ಕುಲದಲ್ಲಿ ಹುಟ್ಟಿದನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯ ಎಂದು ಹೇಳುವ ನೋವು ಏಕಿರಬೇಕಿತ್ತು?’ ಉತ್ತಮ ಜಾತಿ ಸಂಕೋಲನೆಯಿಂದ ಬಿಡಿಸಿಕೊಂಡು ಹೊರಬರುವುದಕ್ಕಾಗಿ ತಾನು ಹುಟ್ಟಿದ ಜಾತಿಯನ್ನು ನಿರಾಕ
APA, Harvard, Vancouver, ISO, and other styles
9

ತ್ರಿವೇಣಿ. "ಸಾಮಾಜಿಕ ಹರಿಕಾರ ಬಸವಣ್ಣ". AKSHARASURYA JOURNAL 04, № 04 (2024): 139 to 143. https://doi.org/10.5281/zenodo.13284139.

Full text
Abstract:
ಪ್ರಭುತ್ವದ ಮೇಲಾಟಕ್ಕೆ ಪರ್ಯಾಯವಾಗಿ ಜನಶಕ್ತಿ ರೂಪುಗೊಳ್ಳಬೇಕೆಂದು ಬಯಸುತ್ತಿದ್ದ ಬಸವಣ್ಣನವರು ಕಾಯಕ-ದಾಸೋಹಗಳ ಮುಖೇನ ಅದನ್ನು ಸಾಧಿಸುವ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಕಾಳಜಿಯುಳ್ಳ ಸಮಾನ ಮನಸ್ಕರ ಸಂಘಟನೆಯಿಂದ ಮಾತ್ರ ಇಂಥದ್ದನ್ನು ಸಾಧಿಸಲು ಸಾಧ್ಯವೆಂಬ ನಿಲುವಿನಲ್ಲಿ, ಜಾತಿ, ವರ್ಣ, ವರ್ಗಗಳೇ ಮೊದಲಾದ ಎಲ್ಲ ಬಂಧನಗಳನ್ನು ಮೀರಿದ ‘ಅನುಭವ ಮಂಟಪ’ ಎಂಬ ಒಂದು ಅದ್ಭುತ ವೇದಿಕೆಯನ್ನು ರೂಪಿಸಿದರು. ಅನುಭವಮಂಟಪದಲ್ಲಿ ಎಲ್ಲರೂ ಸಮಾನಭಾವದಲ್ಲಿ ಸಾಮಾಜಿಕ ಒಳಿತಿನ ಉದ್ದೇಶದಿಂದ ಸೇರಿ ಪರಸ್ಪರ ಚರ್ಚೆ ಮಾಡಿದರು. ಆ ಮೂಲಕ ಅಂದೇ ಪ್ರಜಾಪ್ರಭುತ್ವಕ್ಕೆ ಅಡಿಗಲ್ಲನ್ನು ಹಾಕಿದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇನ್ನಿಲ್ಲದ ಮಹತ್ವ ನೀಡಿದ ಅನುಭವ ಮಂಟಪವು ಶರಣ ಶರಣೆಯರೆಲ್ಲ ಲಿಂಗ-ಜಾತಿಬೇಧಗಳಿಲ್ಲದಂತೆ ಒಗ್ಗೂಡಲು ಇಂಬು ನೀಡಿತು. ಇಂ
APA, Harvard, Vancouver, ISO, and other styles
10

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
APA, Harvard, Vancouver, ISO, and other styles
11

ಶ್ರೀನಿವಾಸ, ಎಸ್.ಜಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 01 to 10. https://doi.org/10.5281/zenodo.15490768.

Full text
Abstract:
ʼಕಾಯಕವೇ ಕೈಲಾಸʼ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದ್ದು ವಚನ ಸಾಹಿತ್ಯ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಗುರಿಯಿಟ್ಟು ನಡೆದ ದಾರ್ಶನಿಕ ಚಳುವಳಿ ವಚನ ಸಾಹಿತ್ಯ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು ಕೂತು ಉಣ್ಣುವ ವರ್ಗಗಳು ನಿರ್ಮಾಣವಾಗುವುದಕ್ಕೆ ಕಾರಣವಾಗಿರಬೇಕು, ಸಮಾಜದಲ್ಲಿ ಮೇಲ್ವರ್ಗವೆಂದು ಕರೆಸಿಕೊಂಡ ಜನರು ಸಮಾಜದ ಇತರರನ್ನು
APA, Harvard, Vancouver, ISO, and other styles
12

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
13

ಮಾದಪ್ಪ, ಜಿ. "'ತಮಂಧದ ಕೇಡು' ಕಥೆಯಲ್ಲಿ ಚಿತ್ರಣಗೊಂಡಿರುವ ಸಾಮಾಜಿಕ ವ್ಯವಸ್ಥೆ". AKSHARASURYA JOURNAL 05, № 03 Special Issue (2024): 45 to 52. https://doi.org/10.5281/zenodo.14246486.

Full text
Abstract:
ಭಾರತೀಯ ಸಾಮಾಜಿಕ ವ್ಯವಸ್ಥೆಯು ಬಹುತ್ವದ ನೆಲೆಯಿಂದ ಕೂಡಿದೆ. ಶೋಷಣೆಗೊಳಗಾದವರ ನೋವು, ಆಕ್ರೋಶ, ಸಂವೇದನೆಗಳನ್ನು ಪ್ರತಿಭಟನೆ, ಹೋರಾಟದ ಮೂಲಕ ಅಭಿವ್ಯಕ್ತಿಸುವ ಬಂಡಾಯ ಸಾಹಿತ್ಯ ಪಂಥದ ಆರಂಭಿಕ ಕಥೆಗಳು ಸಿಟ್ಟು, ಅವಮಾನ, ಹತಾಶೆ, ಆಕ್ರೋಶಗಳನ್ನು ರೋಷಾವೇಶದ ಭಾಷೆಯಲ್ಲಿಯೇ ಹೊರಹಾಕಿದೆ. ಈ ಕಾಲಘಟ್ಟದಲ್ಲಿ ಕಂಡುಬರುವ ಅಮರೇಶ ನುಗಡೋಣಿ ತಮ್ಮ ಕಥೆಗಳಲ್ಲಿ ಸಾಮಾಜಿಕ ಕಳಕಳಿ, ರಾಜಕೀಯಪ್ರಜ್ಞೆ ಹಾಗೂ ಪ್ರತಿಭಟನೆಯ ಮೂಲಕ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ್ದಾರೆ. ಹಾಗೂ ತಮ್ಮ ಕಥೆಗಳಲ್ಲಿ 12ನೇ ಶತಮಾನದ ಬಸವಣ್ಣನ ಕಾಯಕ ವೃತ್ತಿಯ ಸಮಸಮಾಜದ ಕನಸಿನ ಸಮಾಜವನ್ನು ಮರುನಿರ್ಮಾಣ ಮಾಡಲು ಪ್ರಯತ್ನಿಸಿದ್ದಾರೆ. ದೇವನೂರು ಮಹಾದೇವ ಅವರ ಕಥೆಗಳನ್ನು ನೆನಪಿಸುವ ಇವರ ಕಥೆಗಳು ಅಲ್ಲಿನ ಪಾತ್ರಗಳಂತೆ ತಾತ್ವಿಕವಾಗಿ ಪ್ರತಿಭಟಿಸುವುದಿಲ್ಲ; ಮೃದುಧೋರಣೆಯಲ್ಲಿ ಸಾತ್
APA, Harvard, Vancouver, ISO, and other styles
14

ಸೋಮಶೇಖರ, ಎಂ. "ಹರಿಹರನ ರಗಳೆಯಲ್ಲಿ ಶರಣ ಕೆಂಬಾವಿ ಭೋಗಣ್ಣ". AKSHARASURYA 04, № 02 (2024): 145 to 156. https://doi.org/10.5281/zenodo.11525997.

Full text
Abstract:
ವಚನ ಸಾಹಿತ್ಯದ ಮಾತು ಬಂದ ತಕ್ಷಣವೇ ನಮ್ಮಲ್ಲಿ ಬಸವಾದಿ ಶರಣರ ಆಲೋಚನೆಗಳು ಸುಳಿದಾಡುತ್ತವೆ. ವಚನ ಸಾಹಿತ್ಯದ ಮೇಲೆ ಸಾಕಷ್ಟು ಸಂಶೋಧನೆಗಳು ನಡೆದಿದೆ; ನಡೆಯತ್ತಲೇ ಇದೆ. ವಚನ ಸಾಹಿತ್ಯವನ್ನು ಅಧ್ಯಯನದ ದೃಷ್ಟಿಯಿಂದ ಬಸವಪೂರ್ವ ಯುಗ (11ನೇ ಶತಮಾನ), ಬಸವ ಯುಗ (12-13ನೇ ಶತಮಾನ), ಬಸವೋತ್ತರ ಯುಗ (15-19ನೇ ಶತಮಾನ) ಹಾಗೂ ಆಧುನಿಕ ಯುಗ (20ನೇ ಶತಮಾನ) ಎಂದೂ ವಿಭಾಗಿಸಿಕೊಳ್ಳಲಾಗಿದೆ. ಈ ಸಾಹಿತ್ಯ ಸೃಷ್ಟಿಯ ಪ್ರಮುಖ ಕಾರಣ ಹಾಗೂ ಪ್ರೇರಣೆಗಳೆಂದರೆ ಶರಣ ಧರ್ಮದ ತತ್ವಗಳ ಪ್ರಸಾರ ಮಾಡುವುದು ಹಾಗೂ ಅಂದಿನ ಸಮಾಜದಲ್ಲಿನ ಅಸಮಾನತೆಯನ್ನು ಹೊಡೆದೋಡಿಸುವುದು. ಹನ್ನೊಂದನೆಯ ಶತಮಾನದಲ್ಲಿ ಈ ಕಾರ್ಯವನ್ನು ಕೈಗೊಂಡವರು ಕೊಂಡಗುಳಿ ಕೇಶಿರಾಜ, ಕೆಂಬಾವಿ ಭೋಗಣ್ಣ, ಶಂಕರದಾಸಿಮಯ್ಯ, ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಸಕಳೇಶ ಮಾದರಸ, ಜೇಡರದಾಸಿಮಯ್ಯ ಹಾಗೂ ಚಂದ
APA, Harvard, Vancouver, ISO, and other styles
15

ಗೌಡ., ಎಂ.ಟಿ. "ವಚನ ಸಾಹಿತ್ಯ: ಮಾನವ ಮೌಲ್ಯಗಳ ಪ್ರತಿಬಿಂಬ". AKSHARASURYA JOURNAL 06, № 04 (2025): 90 to 96. https://doi.org/10.5281/zenodo.15490961.

Full text
Abstract:
ವಚನವೆಂಬುದು ಕೇವಲ ಸಾಹಿತ್ಯ ಪ್ರಕಾರವಲ್ಲ ಅದು ಒಂದು ಚಳುವಳಿ ಕೂಡ ಆಗಿದೆ. ಅದನ್ನು ಸಮಾಜೋ ಧಾಶ್ರಮಿಕ ಚಳುವಳಿ, ಕಾಯಕ ಜೀವಿಗಳ, ಚಳುವಳಿ ಪರಿಪೂರ್ಣ ಚಳುವಳಿ ಎಂದು ಬಗೆಬಗೆಯಾಗಿ ಕನ್ನಡ ವಿದ್ವಾಂಸರು ಅದರ ಸ್ವರೂಪ ಮಹಿಮೆಯನ್ನು ಬಣ್ಣಿಸಿದ್ದಾರೆ. ವಚನ ಸಾಹಿತ್ಯ ಇಡೀ ಭಾರತೀಯ ಭಾಷೆಗಳಲ್ಲಿಯೇ ವಿಶಿಷ್ಟವಾದುದು. ಕನ್ನಡ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ನೀಡಿದ ಕೊಡುಗೆ ಆದಾಗಿದೆ ಎಂದರೂ ನಡೆಯುತ್ತದೆ. ಮಾನವ ಕುಲದ ಸರ್ವಾಂಗೀಣ ವಿಕಾಸಕ್ಕಾಗಿ ಶ್ರಮಿಸಿದ ಮಹಾತ್ಮರಾದ ಶಿವಶರಣರು ಅನನ್ಯ ಕೊಡುಗೆ ನೀಡಿರುವ ಜಗತ್ತಿನ ಅಪರೂಪದ ಸಾಹಿತ್ಯ ವಚನಗಳು. ವಚನಗಳು ಎಂದಾಕ್ಷಣ ನೆನಪಾಗುವುದೇ ಶಿವಶರಣರು. ಶರಣ ಪಂಥಕ್ಕೆ ಭಕ್ತಿಯ ಶಕ್ತಿಯೇ ಕೇಂದ್ರ ಬಿಂದು. ವಚನ ಸಾಹಿತ್ಯವು ಸವಿಸ್ತಾರವಾದ ಸಮುದ್ರದ ಆಳದಲ್ಲಿನ ಮುತ್ತು, ರತ್ನಗಳನ್ನು ಹೆಕ್ಕಿ ಅಳೆದು, ತೂಗಿ ಸ
APA, Harvard, Vancouver, ISO, and other styles
16

ಅನುಷ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 72 to 77. https://doi.org/10.5281/zenodo.15490928.

Full text
Abstract:
ಪ್ರಸ್ತುತ ಲೇಖನದಲ್ಲಿ ಹನ್ನೆರಡನೇಯ ಶತಮಾನದಲ್ಲಿದ್ದ ವಚನ ಸಾಹಿತ್ಯದ ಸಾಮಾಜಿಕ ಚಿಂತನೆಗಳು ವ್ಯಕ್ತವಾಗಿವೆ. ಆ ಕಾಲದಲ್ಲಿದ್ದ ಸಾಮಾಜಿಕ ಮೌಲ್ಯ ಪರಿವರ್ತನೆ ವಚನಕಾರರು ಸಮಾನ ನಾಯಕತ್ವವನ್ನು ಅನುಸರಿಸಿದ್ದು, ಜಾತಿ - ಧರ್ಮ, ಲಿಂಗ ತಾರತಮ್ಯ, ಮೇಲು - ಕೀಳು, ವಿಗ್ರಹಾರಾಧನೆ ದೇವಸ್ಥಾನಗಳ ನಿರ್ಮಾಣವನ್ನು ಖಂಡಿಸಿದರು ಹಾಗೂ ಇದಕ್ಕೆಲ್ಲ ವಿರೋಧಿಯಾಗಿದ್ದರು. ವೀರಶೈವ ಧರ್ಮದ ಪಂಚ ಸೂತ್ರಗಳು ಕಾಯಕದ ಮಹತ್ವವನ್ನು ತಿಳಿಸಿರುವುದು ಎಲ್ಲರಲ್ಲಿಯೂ ಸಮಾನತೆಯ ಭಾವ ಅಂದಿನ ಕಾಲಕ್ಕೆ ಹೇಗಿತ್ತು. ವಚನಕಾರರಾದ ಬಸವಣ್ಣನವರು ಮತ್ತು ಅಕ್ಕಮಹಾದೇವಿಯವರ ವಚನಗಳ ಗ್ರಹಿಕೆ, ವಚನ ಸಾಹಿತ್ಯ ಇಂದಿನ ಸಮಾಜಕ್ಕೆ ಏಕೆ ಪ್ರಸ್ತುತ ಹಾಗೂ ಸಣ್ಣದೊಂದು ಪದ್ಯವನ್ನು ವಿಷಯದ ಕುರಿತು ಒಳಗೊಂಡಿದೆ. 
APA, Harvard, Vancouver, ISO, and other styles
17

ಶಂಭುಲಿಂಗ, ಹುಬ್ಬಳ್ಳಿ. "ಶಿವಶರಣರ ದೃಷ್ಟಿಯಲ್ಲಿ ಆರ್ಥಿಕ ಸಿದ್ಧಾಂತ". AKSHARASURYA 03, № 06 (2024): 137 to 142. https://doi.org/10.5281/zenodo.11127274.

Full text
Abstract:
12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಅಂದಿನ ಸಮಾಜದ ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತಹ ಸುಧಾರಣೆಯನ್ನು ತರಲು ಬಯಸಿದರು. ಪ್ರತಿಯೊಬ್ಬ ವ್ಯಕ್ತಿಯೂ ಕಾಯಕದಲ್ಲಿ ತೊಡಗಬೇಕು. ಆ ಕಾಯಕದಿಂದ ಬಂದ ಹಣದಿಂದ ತನ್ನ ಅಗತ್ಯತೆಗಳನ್ನು ಪೂರೈಸಿಕೊಂಡು ಉಳಿದ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು ಎಂಬುದು ಶರಣರ ಆಲೋಚನೆಯಾಗಿತ್ತು. ಜೊತೆಗೆ ಸಮಾಜದಲ್ಲಿನ ಸಂಪತ್ತು ಎಲ್ಲ ಜನರಿಗೆ ಸಮಾನವಾಗಿ ಹಂಚಿಕೆ ಆಗಬೇಕು ಎಂಬ ಪರಿಕಲ್ಪನೆಯನ್ನು ಹೊಂದಿದ್ದರು. ಅಂತೆಯೆ ‘ಶಿವಶರಣರ ದೃಷ್ಟಿಕೋನದಲ್ಲಿ ಆರ್ಥಿಕ ಸಿದ್ದಾಂತ’ ಎಂಬ ಈ ಲೇಖನದಲ್ಲಿ ಅರ್ಥಶಾಸ್ತ್ರದ ಪರಿಕಲ್ಪನೆಗಳಾದ ಕೃಷಿ, ಉದ್ಯೋಗ, ಉತ್ಪಾದನೆ, ವಿತರಣೆ, ಆದಾಯ, ಅನುಭೋಗ, ಉಳಿತಾಯ ಮುಂತಾದ ಅಂಶಗಳ ಬಗ್ಗೆ ಬೆಳಕನ್ನು ಚೆಲ್ಲಲಾಗಿದೆ. ಉ
APA, Harvard, Vancouver, ISO, and other styles
18

ತೇಜಾವತಿ, ಕೆ. "ಕುವೆಂಪುರವರ ಜಲಗಾರ ನಾಟಕ". AKSHARASURYA JOURNAL 05, № 06 (2025): 83 to 91. https://doi.org/10.5281/zenodo.14788756.

Full text
Abstract:
ರಾಷ್ಟ್ರಕವಿ ಕುವೆಂಪುರವರು ಕನ್ನಡದ ಮೇರು ಕವಿ, ಅಗ್ರಮಾನ್ಯ ಕವಿ, ಕಾದಂಬರಿಕಾರ, ವಿಮರ್ಶಕ, ಉತ್ತಮ ಚಿಂತಕರೂ ಆಗಿದ್ದರು. ಇವರು ಅನೇಕ ನಾಟಕಗಳನ್ನು ಬರೆದಿದ್ದಾರೆ. 20ನೇಯ ಶತಮಾನದ ಶ್ರೇಷ್ಠಕವಿ, ವರಕವಿ ಬೇಂದ್ರೆಯವರಿಂದ “ಯುಗದಕವಿ ಜಗದಕವಿ” ಎನಿಸಿಕೊಂಡವರು. ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಿದವರು ಕುವೆಂಪುರವರು.ಜಲಗಾರ ನಾಟಕ ಆರಂಭಗೊಳ್ಳುವುದು ಆಗಷ್ಟೇ ಸೂರ್ಯ ಮೂಡುವ ಹೊತ್ತಿನಲ್ಲಿ ಇನ್ನೂ ರಂಗದ ಮೇಲೆಲ್ಲಾ ಮಬ್ಬು ಮಬ್ಬು ಕತ್ತಲು, “ಮೂಡಿ ಬಾ, ಮೂಡಿ ಬಾ, ಜಗದ ಕಣ್ಣೆ ಬಾ, ಬಾ” ಎಂದು ಬೆಳಗನ್ನು ಸ್ವಾಗತಿಸುವ ಹಾಡಿನ ಮೂಲಕ ನಾಟಕ ಆರಂಭಗೊಳ್ಳುತ್ತದೆ. ಜಲಗಾರ ನಾಟಕದಲ್ಲಿ ಇರುವುದು ಎರಡು ದೃಶ್ಯಗಳು. ಮೊದಲನೆಯದು “ದೇವಸ್ಥಾನಕ್ಕೆ ಜನರು ಹೋಗುತ್ತಿರುವುದು” ಎರಡನೆಯದು “ದೇವಸ್ಥಾನದಿಂ
APA, Harvard, Vancouver, ISO, and other styles
19

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
20

ಡಿ.ಆರ್.‌, ನಾಗರಾಜ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಅಲ್ಲಮನ ಕಾಯ ಸಿದ್ಧಾಂತ". AKSHARASURYA JOURNAL 05, № 04 (2024): 01 to 29. https://doi.org/10.5281/zenodo.14289448.

Full text
Abstract:
ಡಾ.ಡಿ.ಆರ್.ನಾಗರಾಜ್ ಅವರ ಹೆಸರು ಕೇಳಿದಾಕ್ಷಣ ಕನ್ನಡದ ಶ್ರೇಷ್ಠ ವಿಮರ್ಶಕರು ಎಂಬ ಪ್ರಶಂಸೆಯೇ ಮೊದಲಿಗೆ ನೆನಪಾಗುತ್ತದೆ. ಆದರೆ, ಡಿ.ಆರ್.ಎನ್ ಅವರು ವಿಮರ್ಶೆ ಎಂಬ ಪ್ರಾಕಾರಸೀಮೆಯನ್ನು ದಾಟಿಕೊಂಡು ನಿಸ್ಸೀಮರಾಗಿ ಸೃಜನಶೀಲ ಲೇಖಕರಾಗಿಯೂ ಸಾಂಸ್ಕೃತಿಕ ಸಂಶೋಧಕರಾಗಿಯೂ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ಬೈನರಿ ವಿಭಜನೆಯ ಚಿಂತನಕ್ರಮಗಳಿಂದಾಗಿ ಕನ್ನಡಕ್ಕೆ ಉಂಟಾಗುತ್ತಿರುವ ಧಕ್ಕೆಯನ್ನು ಮನಗಂಡು ಕನ್ನಡ ಪ್ರಜ್ಞಾವಲಯದ ವೈಶಾಲ್ಯತೆಯನ್ನೂ ವೈವಿಧ್ಯತೆಯನ್ನೂ ತನ್ಮೂಲಕ ಕೂಡಲಸಂಗಮಗೊಳಿಸಿದ ಅಪೂರ್ವ ಚಿಂತಕರಾಗಿದ್ದಾರೆ. ಭಾರತದ ಪ್ರಮುಖ ಚಿಂತಕರಲ್ಲಿ ಒಬ್ಬರಾಗುವ ಮಟ್ಟಿಗೆ ಬೆಳೆದ ಡಿ.ಆರ್‌.ನಾಗರಾಜ್ ಅವರ ಬರವಣಿಗೆಯು ಪ್ರಖರ ಚಿಂತನೆಗೆ ಹೆಸರುವಾಸಿಯಾಗಿದೆ. ನಟರಾಜ್ ಹುಳಿಯಾರ್ ಅವರು ದಾಖಲಿಸುವಂತೆ, ‘ಸಾಹಿತ್ಯ ವಿಮರ್ಶೆ, ಸಂಶೋಧನೆ,
APA, Harvard, Vancouver, ISO, and other styles
21

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
22

ಚಂದ್ರಶೇಖರ್, ಎನ್. "ಬೆಸಗರಹಳ್ಳಿ ರಾಮಣ್ಣ ಅವರ 'ಬೇಲ' ಕಥೆಯಲ್ಲಿನ ಬಹುತ್ವದ ಬೆರಗು". AKSHARASURYA JOURNAL 04, № 06 (2024): 35 to 44. https://doi.org/10.5281/zenodo.13724477.

Full text
Abstract:
ಕನ್ನಡ ಕಥಾ ಜಗತ್ತಿನಲ್ಲಿ ಬೆಸಗರಹಳ್ಳಿ ರಾಮಣ್ಣನವರು ಮೂಡಿಸಿದ ಛಾಪು ಓದುಗ ಲೋಕಕ್ಕೆ ಇಂದಿಗೂ ಆಪ್ತವಾಗಿಯೇ ಇದೆ. ತಮ್ಮ ವೃತ್ತಿ ಹಾಗೂ ಪ್ರವೃತ್ತಿಗಳಲ್ಲಿ ಸಾಮರಸ್ಯವನ್ನು ಕಾಯ್ದುಕೊಂಡು ಅವರು ಮಾಡಿದ ಸಾಹಿತ್ಯ ಕೃಷಿ ವಿಶೇಷವಾದದ್ದು. ತಮ್ಮ ಬರಹಗಳಲ್ಲಿ ಮೂಡಿ ಬಂದಿರುವ ನಿರಾಡಂಬರ ಹಾಗೂ ಸಹಜತೆ ತಮ್ಮ ಬರಹದ ಶಕ್ತಿಯನ್ನು ಹೆಚ್ಚಿಸಿದೆ. ಒಬ್ಬ ಓದುಗನಿಗೆ ಕತೆಗಾರ, ಕಾದಂಬರಿಕಾರ ಕೊಡಮಾಡುವ ಭಾವನಾತ್ಮಕ ಸಾಂತ್ವನ ಇವರ ರಚನೆಗಳಲ್ಲಿ ಅಗಾಧವಾದ ಇಳುವರಿಯನ್ನು ನೀಡಿದೆಯೆಂದರೆ ತಪ್ಪಾಗಲಾರದು. ಇವರು ಸಮಾಜವನ್ನು ಕಂಡ, ಕಟ್ಟಿಕೊಟ್ಟ ನೋಟಕ್ರಮವೇ ಭಿನ್ನವಾದದ್ದು. ಸಾಮಾಜಿಕವಾದ ಹಾವು ಏಣಿಯಾಟದಲ್ಲಿ ಜಮೀನ್ದಾರಿ ಪದ್ದತಿ ಹಾಗೂ ವೇಶ್ಯಾವೃತ್ತಿಯ ಕರಾಳ ಮುಖವನ್ನು &lsquo;ಬೇಲ&rsquo; ಕತೆಯಲ್ಲಿ ಅನಾವರಣಗೊಳಿಸಿದ್ದಾರೆ. ವೃತ್ತಿಯಲ್ಲಿ ನರ್ತಕಿಯಾದ ಸ್ಪುರದ್
APA, Harvard, Vancouver, ISO, and other styles
23

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್&zwnj; ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
24

SHA, SHETTAR. "ಬೌದ್ಧರು ನಿರ್ಮಿಸಿದ ಪ್ರಾಕೃತ ಜಗದ್ವಲಯ". AKSHARASURYA JOURNAL 03, № 03 (2024): 01 to 25. https://doi.org/10.5281/zenodo.10774933.

Full text
Abstract:
ಕನ್ನಡ ಸಾಹಿತ್ಯ, ಸಂಸ್ಕೃತಿ, ಶಾಸನ, ಚರಿತ್ರೆ, ಭಾಷೆಯ ಕುರಿತು ಆಳವಾದ ಸಂಶೋಧನೆ ನಡೆಸಿ ಹೊಸ ತಿಳಿವು ನೀಡುವ ಮೂಲಕ ಕನ್ನಡದ ಮನಸುಗಳನ್ನು ಬೆಳಗಿದ ಸಂಶೋಧಕರಲ್ಲಿ ಪ್ರೊ.ಷ.ಶೆಟ್ಟರ್ ಅವರು ಅಗ್ರಗಣ್ಯರಾಗಿದ್ದಾರೆ. ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಜನಿಸಿದ್ದು 11 ಡಿಸೆಂಬರ್ 1935ರಂದು ಬಳ್ಳಾರಿ ಜಿಲ್ಲೆ ಹಡಗಲಿ ತಾಲ್ಲೂಕಿನ ಹಂಪಸಾಗರದಲ್ಲಿ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್&zwnj;ನಲ್ಲಿ ಉನ್ನತ ವ್ಯಾಸಂಗ ಮಾಡಿದ ಇವರು ಸಾಹಿತ್ಯ, ಚರಿತ್ರೆ, ಪ್ರಾಕ್ತನಶಾಸ್ತ್ರ, ಶಾಸನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕಾವ್ಯ ಕುರಿತು ಸುಮಾರು 30ಕ್ಕೂ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಇವರ ಸಂಶೋಧನೆಗಳ ಕೊಡುಗೆ ಬಹಳ ಇತ್ತು. ಕೇಂಬ್ರಿಜ್, ಹಾರ್ವರ್ಡ್,
APA, Harvard, Vancouver, ISO, and other styles
25

ರಾಗೌ, (ರಾಮೇಗೌಡ), та ಭೈರಪ್ಪ ಎಂ. "ಗಾದೆ". AKSHARASURYA JOURNAL 04, № 06 (2024): 01 to 34. https://doi.org/10.5281/zenodo.13724358.

Full text
Abstract:
ಸಮಚಿತ್ತತೆಯ ಶೋಧಕ-ಸಾಧಕರಾಗಿ ಡಾ.ರಾಗೌ (ರಾಮೇಗೌಡ)&nbsp; &nbsp; ಡಾ.ರಾಗೌ(ರಾಮೇಗೌಡ) ಅವರು ಕನ್ನಡ ನವೋತ್ತರ ಯುಗದ ಪ್ರಮುಖ ಕವಿಯಾಗಿ, ವಿಮರ್ಶಕರಾಗಿ, ಸಂಶೋಧಕರಾಗಿ, ಶಾಸ್ತ್ರೀಯ ಮತ್ತು ಜಾನಪದ ವಿದ್ವಾಂಸರಾಗಿ ಹೊಮ್ಮಿದ ವಿಶಿಷ್ಟ ಲೇಖಕರು. ಕಾವ್ಯ, ವಿಮರ್ಶೆ, ಜಾನಪದ ಅಧ್ಯಯನ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ಸಂಶೋಧನೆ ಮೊದಲಾದ ಕ್ಷೇತ್ರಗಳಲ್ಲಿ ರಾಗೌ ತಮ್ಮನ್ನು ತೊಡಗಿಸಿಕೊಂಡು ಸಾಹಿತ್ಯಕಯಾನವನ್ನು ವಿಕಾಸಪಡಿಸಿಕೊಂಡವರು. ಸದಾ ಸಂಕ್ರಮಣಶೀಲವಾದ ಆಧುನಿಕ ಕನ್ನಡ ಸಾಹಿತ್ಯದ ಬಾನಂಗಳವನ್ನು ತನ್ನದೇ ನೆಲೆಯಲ್ಲಿ ನಿಂತು ನಿಟ್ಟಿಸುತ್ತಾ ತಮ್ಮ ಸಾಧನೆಯ ಸಾಮರ್ಥ್ಯವನ್ನು ತೋಡಿಸಿಕೊಂಡವರು ರಾಗೌ, ತಮ್ಮ ಅವಲೋಕನದಲ್ಲೂ ಕ್ರಿಯಾಶೀಲತೆಯಲ್ಲೂ ಇಂತಹುದೊಂದು ದೂರವನ್ನು, ನಿರ್ಲಿಪ್ತತೆಯನ್ನು ಅಂತರ್ಗತಗೊಳಿಸಿಕೊಂಡು ಬರೆಯುತ್ತಾ ಬಂದುದರಿಂದ ಅವರು ಒಂದು
APA, Harvard, Vancouver, ISO, and other styles
26

ರೈಟ್, ರೆವರೆಂಡ್ ಮೋಹನ್ ಮನೋರಾಜ್. "ಮಿಷನರಿಗಳ ಕನ್ನಡ ಕಾಯಕ". 18 липня 2023. https://doi.org/10.5281/zenodo.8161066.

Full text
Abstract:
ಈಗ ಮಂಗಳೂರು, ಉಡುಪಿ, ಕಾರವಾರ ಕೇಂದ್ರಗಳಾಗಿ ಕರಾವಳಿಯ ಜಿಲ್ಲೆಗಳು, ನೆರೆಯ ಕಾಸರಗೋಡು ಪತ್ರಿಕೋದ್ಯಮದ ಸಾಧನೆಯ ಶೃಂಗದಲ್ಲಿದೆ. ಅನೇಕ ಪತ್ರಿಕೆಗಳು, ಸ್ಯಾಟಲೈಟ್ ಚಾನೆಲ್ ಗಳು, ದೇಶದಲ್ಲೇ ಗರಿಷ್ಠ ಎಂಬಂತೆ ಬಹುಭಾಷಾ ಪ್ರಾದೇಶಿಕ ಚಾನೆಲ್&zwnj;ಗಳು, ಆನ್ ಲೈನ್ ಆವೃತ್ತಿಗಳು, ವೆಬ್ ಸೈಟ್ ಗಳು, ಸಂಜೆ ಪತ್ರಿಕೆಗಳು, ವೆಬ್ ಪತ್ರಿಕೆಗಳು, ಫೇಸ್ ಬುಕ್ - ವಾಟ್ಸ್&zwnj;ಆ್ಯಪ್&zwnj; ಮಾಹಿತಿಇಂಟರ್&zwnj;ನೆಟ್&zwnj; ವಿನಿಮಯ ಗ್ರೂಪ್&zwnj;ಗಳು, ನೇರಪ್ರಸಾರ ನೀಡುವ ವಾಹಿನಿಗಳು... ಹೀಗೆ ಮಾಧ್ಯಮದ ಎಲ್ಲ ಅವಕಾಶಗಳು ಇಲ್ಲಿ ಕಾರ್ಯರೂಪಕ್ಕೆ ಬಂದಿವೆ. ಅನೇಕ ಪತ್ರಕರ್ತರು ರಾಜ್ಯ - ದೇಶ ಅಂತಾರಾಷ್ಟ್ರೀಯ ಮಾನ್ಯತೆಗಳಿಗೂ ಪಾತ್ರರಾಗಿದ್ದಾರೆ.
APA, Harvard, Vancouver, ISO, and other styles
27

-, ಕೃಷ್ಣಮೂರ್ತಿ ಜಿ. "ಶರಣರಲ್ಲಿ ಕಾಯಕ ನಿಷ್ಠೆ". International Journal For Multidisciplinary Research 6, № 6 (2024). https://doi.org/10.36948/ijfmr.2024.v06i06.33534.

Full text
APA, Harvard, Vancouver, ISO, and other styles
28

ಎಂ., ತಿಪ್ಪೇಸ್ವಾಮಿ. "ಚಿತ್ರದುರ್ಗ ಜಿಲ್ಲೆಯ ತತ್ವಪದಗಳಲ್ಲಿನ ಸಾಮಾಜಿಕ ಮೌಲ್ಯಗಳು". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 22–27. http://dx.doi.org/10.59176/kjksp.v3i1.2334.

Full text
Abstract:
ತತ್ವಪದಗಳ ಮುಖ್ಯ ಉದ್ದೇಶ ಸಮಾಜದಲ್ಲಿ ಬದಲಾವಣೆಯನ್ನು ತರುವುದಾಗಿದೆ. ಸಮಾಜದಲ್ಲಿ ಸಮಾನತೆ, ಸಹಕಾರ, ಸಹಬಾಳ್ವೆಯ ಜೊತೆಗೆ ಸಮಾಜದ ಮನುಜರು ಅರಿವಿನ ಹಾದಿ ಹಿಡಿದು ಬದುಕುವುದರಿಂದ ಸಮಾಜಕ್ಕು ಕ್ಷೇಮ ಎಂಬುದನ್ನು ಅರಿತಿದ್ದರಿಂದಲೆ ಶರಣರು, ಹರಿದಾಸರು, ತತ್ವಪದಕಾರರೆಲ್ಲರೂ ತಮ್ಮ ವಚನಗಳ ಮೂಲಕ, ಕೀರ್ತನೆಗಳ ಮೂಲಕ, ತತ್ವಪದಗಳ ಮೂಲಕ ಸಮಾಜಕ್ಕೆ ತಿಳಿಸುವಂತಹ ಪ್ರಯತ್ನ ಪಟ್ಟರು. ಆಧ್ಯಾತ್ಮಿಕ ಅನುಸಂಧಾನದ ಜೊತೆಜೊತೆಗೆ ಸಮಾಜವನ್ನು ಎಚ್ಚರಿಸುವುದರೊಂದಿಗೆ ಶುದ್ಧೀಕರಿಸುವ ಕಾರ್ಯವನ್ನು ತತ್ವಪದಕಾರರು ನಿರಂತರವಾಗಿ ಮಾಡಿಕೊಂಡು ಬಂದಿರುವುದನ್ನು ಗಮನಿಸಬಹುದು. ಈ ಭಾಗದ ತತ್ವಪದಕಾರರು ಬಯಲು ಸೀಮೆಯ, ಬರದ ನಾಡಿನ ಜನರ ಕಷ್ಟದ ಬದುಕನ್ನು ಕಂಡಿದ್ದರಿAದ ತಮ್ಮ ತತ್ವಪದಗಳಲ್ಲಿ ಸಮಾಜವನ್ನು ತಿದ್ಧುವಂತಹ, ಬದಲಾವಣೆಯನ್ನು ತರುವಂತಹ, ಹಣತೆಯನ್ನು ಹಚ್ಚಿದ್ದಾರ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!