To see the other types of publications on this topic, follow the link: ಡಾ.

Journal articles on the topic 'ಡಾ'

Create a spot-on reference in APA, MLA, Chicago, Harvard, and other styles

Select a source type:

Consult the top 38 journal articles for your research on the topic 'ಡಾ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಶ್ರೀಧರ್, ಆರ್. "ಕಾರ್ಮಿಕರ ಹಿತರಕ್ಷಕ ಡಾ. ಬಾಬಾಸಾಹೇಬ್ ಅಂಬೇಡ್ಕರ್‌". AKSHARASURYA JOURNAL 06, № 05 (2025): 220 to 225. https://doi.org/10.5281/zenodo.15504669.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಹಾಗೂ ರಾಜಕೀಯ ಕೊಡುಗೆ ಅಪಾರ. ಬಹುಜನರ ಬವಣೆಯ ಬದುಕಿನೊಳಗೆ ಇಳಿದು ಲವಣದಂತೆ ಕರಗಿರುವ ಬಾಬಾಸಾಹೇಬರು ಅಪ್ಪಟ ಪ್ರಜಾಪ್ರಭುತ್ವವಾದಿ. ರೈತರು, ಕಾರ್ಮಿಕರು, ಹೆಣ್ಣು ಮಕ್ಕಳ ಉನ್ನತಿಗೆ ಹಾಗೂ ಸಕಲ ಜೀವಿಗಳ ಘನತೆಗೆ ಅಗತ್ಯವಾದ ಮಾರ್ಗಗಳನ್ನು ಶೋಧಿಸಿದ ಶ್ರೇಷ್ಠ ವಿಮೋಚಕ. ಭಾರತದಲ್ಲಿ ಕಾರ್ಮಿಕರಿಗೆ ಯಾವುದೇ ಹಕ್ಕುಗಳು ದೊರೆತಿದ್ದರೆ, ಕಾರ್ಮಿಕರು ಅದರ ಫಲಾನುಭವಿಗಳು ಆಗಿದ್ದರೆ ಅದರ ಸಂಪೂರ್ಣ‌ ಯಶಸ್ಸು ಬಾಬಾಸಾಹೇಬರಿಗೆ ಸಲ್ಲಬೇಕು. ಪ್ರಸ್ತುತ ಲೇಖನದಲ್ಲಿ ಜನಪರವಾದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಿದ ಬಾಬಾಸಾಹೇಬರ ಪಾತ್ರವನ್ನು ಅಭಿವ್ಯಕ್ತಿಸುವ ಪ್ರಯತ್ನ ಮಾಡಲಾಗಿದೆ.
APA, Harvard, Vancouver, ISO, and other styles
2

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
3

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
4

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
5

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
6

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
7

ಶೋಭಾರಾಣಿ, ಎನ್. "ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಪಾಶುಪತ-ಕಾಳಾಮುಖ ಸಾಧನ ಪಂಥ". AKSHARASURYA 03, № 05 (2024): 61–67. https://doi.org/10.5281/zenodo.10938065.

Full text
Abstract:
ಭಾರತೀಯ ಮತ್ತು ವಿಶೇಷವಾಗಿ ಕರ್ನಾಟಕದ ಆಧ್ಯಾತ್ಮಿಕ ಆರಾಧನಾ ಪಂಥಗಳಲ್ಲಿ ಪಾಶುಪತ-ಕಾಳಾಮುಖ ಪಂಥವು ಬಹು ಮುಖ್ಯವಾದುದು. ಆಧ್ಯಾತ್ಮಿಕ ಪರಂಪರೆಯ ಹಿನ್ನೆಲೆಯಲ್ಲಿ ಮಾತ್ರವಲ್ಲದೇ, ದೇವಾಲಯ ಮತ್ತು ವಾಸ್ತುಶಿಲ್ಪ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೂಡ ಈ ಸಾಧನಾ ಪಂಥದ ಸಾಧಕರು ನೀಡಿರುವ ಕೊಡುಗೆ ಅಪಾರವಾದುದು. ಕರ್ನಾಟಕದ ಬಹುತೇಕ ದೇವಾಲಯಗಳು ಪಾಶುಪತ-ಕಾಳಾಮುಖರಿಂದ ನಿರ್ಮಾಣಗೊಂಡಿವೆ. ಒಂದು ಕಾಲದಲ್ಲಿ ಅಂದರೆ ಕ್ರಿ.ಶ. 12ನೇ ಶತಮಾನಕ್ಕಿಂತ ಸಾಕಷ್ಟು ಪೂರ್ವದಲ್ಲೆ ಈ ಮಾರ್ಗವು ಕರ್ನಾಟಕದಲ್ಲಿ ಪ್ರಮುಖ ಆಧ್ಯಾತ್ಮಿಕ ಮಾರ್ಗವಾಗಿ ಪ್ರಭಾವಶಾಲಿಯಾಗಿತ್ತು. ಹಲವು ರಾಜರುಗಳು ಈ ಮಾರ್ಗಕ್ಕೆ ಪ್ರೋತ್ಸಾಹ ಮತ್ತು ಆಶ್ರಯವನ್ನು ನೀಡಿದ್ದಲ್ಲದೆ, ಸ್ವತಃ ಇದರ ಅನುಯಾಯಿಗಳೂ ಆಗಿದ್ದ ಉದಾಹರಣೆಗಳಿವೆ. ಲಾಕುಳೀಶ, ಕಾಳಾಮುಖ, ಪಾಶುಪತ, ಕಾಪಾಲಿಕ ಮೊದಲಾದ ದಕ್ಷಿಣಾಚ
APA, Harvard, Vancouver, ISO, and other styles
8

ಹುಲುಗಪ್ಪ, ಎನ್. ಎಚ್. "ಡಾ. ರಾಜಕುಮಾರ್ ಅವರ ಕನ್ನಡ ನಾಡು-ನುಡಿ ಸೇವೆ". AKSHARASURYA 04, № 02 (2024): 125 to 136. https://doi.org/10.5281/zenodo.11525959.

Full text
Abstract:
‘ತುಂಬಿದ ಕೊಡ ತುಳುಕುವುದಿಲ್ಲ’ ಎಂಬ ಗಾದೆ ಮಾತಿಗೆ ಡಾ. ರಾಜಕುಮಾರ್ ಅವರು ಸೂಕ್ತ ನಿದರ್ಶನವಾಗಿದ್ದಾರೆ. ಕನ್ನಡ ನಾಡು ಕಂಡ ಉಜ್ವಲ ಕನ್ನಡ ಪ್ರೇಮಿಗಳಲ್ಲಿ ಡಾ. ರಾಜಕುಮಾರ್ ಅವರು ಅಗ್ರಗಣ್ಯರಾಗಿ ನಿಲ್ಲುತ್ತಾರೆ. ಇವರು ಕನ್ನಡ ನಾಡು-ನುಡಿ, ಸಂಸ್ಕೃತಿ ಮೊದಲಾದವುಗಳಿಗೆ ತಮ್ಮ ವಿಶಿಷ್ಟ ವ್ಯಕ್ತಿತ್ವ, ಪ್ರತಿಭೆ ಹಾಗೂ ಐತಿಹಾಸಿಕ ಪಾತ್ರಗಳ ಮೂಲಕ ಸುವರ್ಣ ಅಂಚನ್ನು ಹೊದಿಸಿದ್ದಾರೆ. ರಾಜಕುಮಾರ್ ರವರು ಕೇವಲ ಶ್ರೇಷ್ಠ ನಟರಾಗಿರದೆ, ಕನ್ನಡ ನಾಡಿನ ಅಘೋಷಿತ ಸಾಂಸ್ಕೃತಿಕ ರಾಯಭಾರಿಯಾಗಿದ್ದು, ನೆಲ, ಜಲ, ಭಾಷೆಗೆ ಜನದನಿಯಾಗಿ ನಿಂತವರು. ಕನ್ನಡ ನಾಡು ಹಾಗೂ ಹೊರ ರಾಜ್ಯಗಳಲ್ಲಿನ ಹಲವಾರು ಸಾಮಾಜಿಕ ಅವಘಡಗಳು ನಡೆದಾಗ ರಾಜಕುಮಾರ್ ರವರು ಪಾದಯಾತ್ರೆ ಮಾಡಿ ನಿಧಿ ಸಂಗ್ರಹಿಸಿದರು. ರಾಜಕುಮಾರ್ ರವರು ಸರ್ಕಾರಿ ನೌಕರರಿಗೆ ಕಡ್ಡಾಯ ಕನ್ನ
APA, Harvard, Vancouver, ISO, and other styles
9

ಸುಮಾ, ವಸಂತ ಸಾವಂತ. "ಡಾ. ಅರ್ಜುನ ಗೊಳಸಂಗಿಯವರ ಕವಿತೆಗಳಲ್ಲಿ ಹೆಣ್ಣಿನ ಭಿನ್ನ ನೆಲೆಗಳು". AKSHARASURYA 04, № 03 (2024): 103 to 108. https://doi.org/10.5281/zenodo.12672812.

Full text
Abstract:
ಎಪ್ಪತ್ತನೆಯ ದಶಕದಲ್ಲಿ ಕನ್ನಡದಲ್ಲಿ ಆರಂಭವಾದ ದಲಿತ ಮತ್ತು ಬಂಡಾಯ ಸಾಹಿತ್ಯ ಪಂಥ ನೊಂದವರ ದನಿಯಾಗಿ ಮೂಡಿ ಬಂದವು. ಆರಂಭದಲ್ಲಿ ‘ಇಕ್ರಲಾ ಒದಿರಲ’ ಎಂಬಂತಹ ಆಕ್ರೋಶ ಭರಿತ ಮಾತುಗಳನ್ನು ಆಡುತ್ತಲೇ ತನ್ನ ಸುತ್ತಲಿನವರು ತನ್ನ ಮೇಲೆ ಶತಮಾನಗಳ ಕಾಲ ಮಾಡುತ್ತಾ ಬಂದ ಅನ್ಯಾಯವನ್ನು ಜಾತಿ ವ್ಯವಸ್ಥೆಯ ಹೆಸರಿನಲ್ಲಿ ಮಾಡಿದ ಶೋಷಣೆಯನ್ನೂ ವಿರೋದಿಸಲೆಂದೇ ಈ ಸಾಹಿತ್ಯ ಪಂಥಗಳು ಮೂಡಿ ಬಂದವು. ನಂತರದಲ್ಲಿ ಆಕ್ರೋಶ ತುಸು ಕಡಿಮೆಯಾದಂತೆನಿಸಿದರೂ ಅದರ ಸ್ವರೂಪ ಬದಲಾಯಿತೇ ಹೊರತು ಆಳದ ಅಕ್ರೋಶ ಹೋಗಲಿಲ್ಲ.  ದಲಿತ ಸಾಹಿತ್ಯದ ಎರಡನೆಯ ತಲೆಮಾರಿನಲ್ಲಿ ಬಂದ ಲೇಖಕರು ಆಕ್ರೋಶಕ್ಕಿಂತ ಬದುಕನ್ನು ನಿರುಮ್ಮಳವಾಗಿ ಆದರೆ ಒಂದು ಅಭಿಮಾನ ತುಂಬಿದ ದನಿಯಲ್ಲಿ ಬಿತ್ತರಿಸಿದರು. ಅವರ ಸಾಲಿನಲ್ಲಿ ಬಂದ ಪ್ರಮುಖ ಕವಿ ಡಾ. ಅರ್ಜುನ ಗೊಳಸಂಗಿಯವರು. ಕರ್ನಾಟ
APA, Harvard, Vancouver, ISO, and other styles
10

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ. ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪ
APA, Harvard, Vancouver, ISO, and other styles
11

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ
APA, Harvard, Vancouver, ISO, and other styles
12

ನಾಗೇಶ್, ಎನ್. "೨೧ನೆಯ ಶತಮಾನದ ಕನ್ನಡ ನಾಟಕ ಮತ್ತು ರಂಗಭೂಮಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 114 to 120. https://doi.org/10.5281/zenodo.15504329.

Full text
Abstract:
ರಂಗಭೂಮಿಯೊಂದು ಜಾಗತೀಕ ಕಲಾಭಿವ್ಯಕ್ತಿ ಮಾಧ್ಯಮವಾಗಿದೆ, ನಾಟಕವು ಜಗತ್ತಿನ ಸಾಂಸ್ಕೃತಿಕ ಸೃಜನಶೀಲತೆಯ ಅಸ್ಮಿತೆಯ ಭಾಗವಾಗಿ ಲೋಕದರ್ಶನವನ್ನು ಒಡಮೂಡಿಸುವಲ್ಲಿ ಪ್ರಮುಖ ಸಾಹಿತ್ಯ ಪ್ರಕಾರವಾಗಿದೆ. ಶ್ರೇಷ್ಠ ದಾರ್ಶನಿಕರಾದ ಬುದ್ಧ, ಬಸವಣ್ಣ, ಡಾ. ಬಿ. ಆರ್. ಅಂಬೇಡ್ಕರ್‌, ಜ್ಯೋತಿ ಬಾ ಪುಲೆ, ಪೆರಿಯಾರ್, ನಾರಾಯಣಗುರುಗಳಂತಹ ಆದರ್ಶಪ್ರಾಯರಾದವರ ಜೀವನ ಆಧಾರಿತ ನಾಟಕಗಳನ್ನು ರಂಗರೂಪಕ್ಕೆ ತಂದು ಸಮುದಾಯಗಳತ್ತ ತೆಗೆದುಕೊಂಡು ಹೋಗುವ ಅನಿವಾರ್ಯತೆ ಈ ನಾಡಿಗಿದೆ. ಅಂಬೇಡ್ಕರ್‌ ಅವರು ʼತಳಸಮುದಾಯಗಳಿಗೆ ಮಾತ್ರವಲ್ಲದೆ ಎಲ್ಲ ಸಮುದಾಯಗಳಿಗೂ ಅಕ್ಷರದ ಮೂಲಕ ವಿಮೋಚನೆ ಸಾಧ್ಯ’ ಎಂಬುದನ್ನು ತಿಳಿಸಿಕೊಟ್ಟರು. ಇವರ ಬದುಕು, ಬರಹ ಮತ್ತು ಭಾಷಣಗಳಲ್ಲಿನ ಚಿಂತನಾಧಾರೆಗಳನ್ನು ಕನ್ನಡ ನಾಟಕ ಮತ್ತು ರಂಗಭೂಮಿಗೆ ಅಳವಡಿಕೊಳ್ಳುವುದರ ತುರ್ತು
APA, Harvard, Vancouver, ISO, and other styles
13

ಡಾ., ಸ್ವಾಮಿ. "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಪರಿಚಯ". International Journal of Advance Research in Multidisciplinary 2, № 3 (2024): 258–61. https://doi.org/10.5281/zenodo.13292327.

Full text
Abstract:
ಭಾರತದ ಪ್ರತಿಯೊಂದು ರಾಜ್ಯಗಳು ಸಹ ವಿವಿಧ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸಿವೆ. ಅಂಥ ನಿಗಮಗಳು ರಾಜ್ಯ ಸರ್ಕಾರಗಳ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಅಳವಡಿಸಿಕೊಂಡು ಅವುಗಳ ಅನುಷ್ಠಾನಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಬರುತ್ತಿವೆ. ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಜನರ ಸರ್ವತೋಮುಖ ಅಭಿವೃದ್ಧಿಗೆÀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ೨೦-೦೩-೧೯೭೫ರಂದು ಸ್ಥಾಪಿಸಲಾಗಿದೆ. ದಿನಾಂಕ ೧೬-೦೮-೨೦೦೫ ರಂದು ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಎಂದು ಮರುನಾಮಕರಣ ಮಾಡಲ್ಪಟ್ಟಿದೆ. ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿ ಡಾ.ಬಿ.ಆರ್.ಅಂಬೇ
APA, Harvard, Vancouver, ISO, and other styles
14

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Full text
Abstract:
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳ
APA, Harvard, Vancouver, ISO, and other styles
15

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ‘ಕಲಿಕೆ’ ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.‘ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ’ ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. ‘ದೇಶ ಸುತ್ತು ಇಲ್ಲವೇ ಕೋಶ ಓದು’ ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
APA, Harvard, Vancouver, ISO, and other styles
16

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
17

ಸುಚಿತ್ರಾ, ಟಿ., та ಕೆ.ಎಸ್. ಗಿರಿಜಾ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜಾತಿ ನಿರ್ಮೂಲನೆ: ಒಂದು ವಿಶ್ಲೇಷಣೆ". AKSHARASURYA JOURNAL 06, № 05 (2025): 226 to 232. https://doi.org/10.5281/zenodo.15504688.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆ (Annihilation of Caste) ಕೃತಿ ಭಾರತೀಯ ಜಾತಿ ವ್ಯವಸ್ಥೆಯ ವಿರುದ್ಧ ನೀಡಿದ ಅತ್ಯಂತ ಪ್ರಬಲ ವಿಮರ್ಶೆಗಳಲ್ಲಿ ಒಂದಾಗಿದೆ. 1936ರಲ್ಲಿ ಜಾತ್ ಪಾತ್ ತೋಡಕ್ ಮಂಡಳಿಗೆ ಈ ಭಾಷಣವನ್ನು ನೀಡಲು ಉದ್ದೇಶಿಸಲಾಗಿತ್ತಾದರೂ, ಸಂಘಟಕರು ಅದರ ವಿಷಯವನ್ನು ತೀವ್ರವಾದದ್ದು ಎಂದು ಪರಿಗಣಿಸಿ ಅದನ್ನು ನಿರಾಕರಿಸಿದರು. ನಂತರ ಅಂಬೇಡ್ಕರ್ ಅವರು ಈ ಭಾಷಣವನ್ನು ಸ್ವತಃ ಪುಸ್ತಕ ರೂಪದಲ್ಲಿ ಪ್ರಕಟಿಸಿದರು. ಈ ಪ್ರಬಂಧದಲ್ಲಿ ಅಂಬೇಡ್ಕರ್ ಅವರ ಜಾತಿ ಸಂಬಂಧಿತ ಆಲೋಚನೆಗಳ ವಿಶ್ಲೇಷಣೆ, ಹಾಗೂ ಜಾತಿ ನಿರ್ಮೂಲನೆಗಾಗಿ ಅವರು ನೀಡಿದ ಸಂವಿಧಾನಾತ್ಮಕ ಕೊಡುಗೆಗಳನ್ನು ವಿಮರ್ಶಾತ್ಮಕವಾಗಿ ಚರ್ಚಿಸಲಾಗಿದೆ. ಜೊತೆಗೆ, ಈ ಕೃತಿಯ ಪ್ರಸ್ತುತತೆ ಮತ್ತು ಸಮಕಾಲೀನ ಜಾತಿ ರಾಜಕೀಯದ ಮೇಲೆ ಇದರ ಪರಿಣಾಮವನ್ನೂ ಅವಲೋಕಿಸಲಾಗುತ್ತದೆ.
APA, Harvard, Vancouver, ISO, and other styles
18

ಭೀಮಣ್ಣ, ಎಚ್. "ಪ್ರಬಂಧ ಸಾಹಿತ್ಯ ಚರಿತ್ರೆಯ ವಿಸ್ತಾರ (ಡಾ. ಮಹಾದೇವ್ ಬಡಿಗೇರರವರ ಪ್ರಬಂಧ ಸಾಹಿತ್ಯ)". AKSHARASURYA 04, № 02 (2024): 157 to 161. https://doi.org/10.5281/zenodo.11526005.

Full text
Abstract:
ಕನ್ನಡ ಸಾಹಿತ್ಯದಲ್ಲಿ ಪ್ರಬಂಧ ಸಾಹಿತ್ಯವು ದಶಕಗಳಿಂದ ಬೆಳೆದು ಬಂದಿದೆ. ಕನ್ನಡ ಸಾಹಿತ್ಯದಲ್ಲಿ ಹಲವಾರು ಪ್ರಬಂಧಕಾರರು ತಮ್ಮ ಬರಹದ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತ ಗೊಳಿಸಿದ್ದಾರೆ. ಪ್ರಮುಖವಾಗಿ ಕನ್ನಡ ಸಾಹಿತ್ಯದಲ್ಲಿ ಪ್ರಬಂಧ ಸಾಹಿತ್ಯವನ್ನು ನಗೆ ಬರಹ, ವ್ಯಕ್ತಿ ಚಿತ್ರಗಳು, ನೀತಿ ಬೋದೆ, ಲಲಿತ ಪ್ರಬಂಧಗಳು ಎಂದು ಪರಿಗಣಿಸುತ್ತಿದ್ದರು. ನಂತರ ಇಂಗ್ಲಿಷ್ ಭಾಷೆಯ ಎಸ್ಸೆ ಪದಕ್ಕೆ ಸಂವಾಧಿಯಾಗಿ ಪ್ರಬಂಧ ಎಂದು ಕರೆಯತೊಡಗಿದರು. ಇದು ಕನ್ನಡ ಸಾಹಿತ್ಯದಲ್ಲಿ ಹೆಂಮ್ಮರವಾಗಿ ಬೆಳೆಯ ತೊಡಗಿತು. ಡಾ. ಮಹಾದೇವ ಬಡಿಗೇರವರು ಈ ಪ್ರಬಂಧ ಸಾಹಿತ್ಯದಲ್ಲಿ ಲಲಿತ ಪ್ರಬಂಧ ಸಾಹಿತ್ಯಕ್ಕೆ ಸಂಬಂಧಿಸಿದ ಹಲವಾರು ವಿಷಯಗಳನ್ನು ಸಂಶೋಧನೆ ಮಾಡುವುದರ ಮೂಲಕ ಒಂದೆಡೆ ಕಲೆ ಹಾಕಿ ಸಾಹಿತ್ಯ ಓದುಗರಿಗೆ ಕಟ್ಟಿಕೊಟ್ಟಿದ್ದಾರೆ. ಪ್ರಬಂಧ ಸಾಹಿತ್ಯದ ಸೂಕ್ಷ್ಮ ಸ
APA, Harvard, Vancouver, ISO, and other styles
19

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
20

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
21

Shankar, Pushpa V. "ಗಾಯಕ ಶಿಕಾಮಣಿ ಡಾ. ಎಲ್.ಮುತ್ತ ಯ್ಯ ಭಾಗವತ್ ರ್ ಅವರ ಕೃತಿ ವಿಶೇಷತೆ". Insieme Arti - Journal for Performing Arts 2, № 2 (2025): 31–40. https://doi.org/10.63984/iajpa.v2.i2.2025.31-40.

Full text
APA, Harvard, Vancouver, ISO, and other styles
22

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
23

ರೇಣುತಾಕ್ಷಿ. "ಶಿಕ್ಷಣವೆಂದರೆ ಜೀವನಕ್ಕೆ ಸಿದ್ಧತೆಯಲ್ಲ, ಶಿಕ್ಷಣವೇ ಜೀವನ". AKSHARASURYA JOURNAL 06, № 05 (2025): 169 to 174. https://doi.org/10.5281/zenodo.15504563.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದಂತೆ, ಶಿಕ್ಷಣ ಜೀವನಕ್ಕೆ ಸಿದ್ಧತೆ ಮಾತ್ರವಲ್ಲ, ಅದು ಜೀವನವೇ ಆಗಿದೆ. ಶಿಕ್ಷಣವು ಕೇವಲ ಉದ್ಯೋಗ ಅಥವಾ ಜೀವನೋದ್ಯಮಕ್ಕೆ ಪೂರಕವಾಗಿರುವುದಷ್ಟೇ ಅಲ್ಲ, ಅದು ವ್ಯಕ್ತಿಯ ಬುದ್ಧಿ, ಚಿಂತನೆ, ವ್ಯಕ್ತಿತ್ವ ಮತ್ತು ಸಮಾಜದ ಪ್ರಗತಿಗೆ ಸಹಾಯಕವಾಗಬೇಕು. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಶಿಕ್ಷಣವು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾಭ್ಯಾಸವು ವ್ಯಕ್ತಿಗೆ ಅರ್ಥಪೂರ್ಣ ಬದುಕನ್ನು ಕಟ್ಟಿಕೊಳ್ಳಲು, ಸ್ವತಂತ್ರವಾಗಿ ಚಿಂತಿಸಲು, ಹಾಗೂ ತಾನು ಎದುರಿಸುವ ಸವಾಲುಗಳಿಗೆ ಉತ್ತರಿಸಲು ಶಕ್ತಿಯನ್ನು ನೀಡುತ್ತದೆ. ಸಮೃದ್ಧ ಜೀವನಕ್ಕಾಗಿ ಕೇವಲ ಹಣಕಾಸಿನ ಪ್ರಗತಿಯನ್ನಷ್ಟೇ ಗಮನಿಸುವುದಕ್ಕಿಂತ, ಮಾನವೀಯತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಪಾ
APA, Harvard, Vancouver, ISO, and other styles
24

ಸಿದ್ಧಲಿಂಗಯ್ಯ та ಆರ್. ಶ್ರೀಧರ್. "ಕವಿಯನ್ನು ರೂಪಿಸಿದ ಪರಿಸರ... (The Environment Which Shaped Poet...)". AKSHARASURYA JOURNAL 05, № 04 (2024): 30 to 33. https://doi.org/10.5281/zenodo.14289519.

Full text
Abstract:
“ನನ್ನ ಬದುಕಿನ ಹಿನ್ನೆಲೆಯನ್ನು ನೆನೆಸಿಕೊಂಡರೆ ನಾನು ಯಾರೋ ಭೂಮಾಲೀಕರ ಮನೆಯ ಜೀತಗಾರನಾಗಿಯೋ, ಬೆಂಗಳೂರಿನ ಯಾವುದಾದರೂ ಗಿರಣಿಯ ಕಾರ್ಮಿಕನಾಗಿಯೋ ಇರಬೇಕಾಗಿತ್ತು. ಆದರೆ ಕೂದಲೆಳೆಯ ಅಂತರದಲ್ಲಿ ಪಾರಾದ ನಾನು ಅನೇಕರ ಸಹಾನುಭೂತಿ, ಪ್ರೀತಿ, ಕರುಣೆಯಿಂದ ಕವಿಯಾಗಿದ್ದೇನೆ, ಲೇಖಕನಾಗಿದ್ದೇನೆ. ನಾನು ನನ್ನ ಹಿನ್ನೆಲೆಯನ್ನು ಮರೆಯದೆ ಜೀತಗಾರರು, ಕೂಲಿಕಾರರು, ರೈತರು, ಕಾರ್ಮಿಕರು ಮತ್ತು ಜಾತೀಯತೆ, ಅಸ್ಪೃಶ್ಯತೆಯ ಕಾರಣದಿಂದ ನೊಂದ ಜೀವಿಗಳ ಪರವಾದ ನಿಲುವನ್ನು ರೂಢಿಸಿಕೊಂಡೆ. ಆದ್ದರಿಂದ ನನ್ನ ಸಾಹಿತ್ಯ ವಿಭಿನ್ನ ಮಾರ್ಗದಲ್ಲಿ ಮುನ್ನಡೆಯಲು ಕಾರಣವಾಯಿತು.” ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಗೊಂಡಿರುವ ‘ಡಾ. ಸಿದ್ಧಲಿಂಗಯ್ಯ: ಸಮಗ್ರ ಸಾಹಿತ್ಯ’ ಸಂಪುಟಗಳ (2018) ಲೇಖಕರ ಮಾತಿನಲ್ಲಿ ಈ ಸಾಲುಗಳನ್ನು ಓದುಗರು ಗಮನಿಸ
APA, Harvard, Vancouver, ISO, and other styles
25

ವಿಜಯಲಕ್ಷ್ಮಿ, ದತ್ತಾತ್ರೇಯ ದೊಡ್ಡಮನಿ. "ವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ". AKSHARASURYA JOURNAL 06, № 05 (2025): 241 to 248. https://doi.org/10.5281/zenodo.15504724.

Full text
Abstract:
ಆತ್ಮಕಥೆ ಕನ್ನಡ ಸಾಹಿತ್ಯದ ಒಂದು ಸಾಹಿತ್ಯ ಪ್ರಕಾರವಾಗಿ ಬೆಳೆದು ಬಂದಿರುವುದನ್ನು ನೋಡುತ್ತೇವೆ. ಮನುಷ್ಯನ ಸುತ್ತಲೂ ನಡೆಯುವ ಮತ್ತು ಅವರ ಅಂತರಾಳದಲ್ಲಿರುವ ಹೂರಣಗಳನ್ನು ಹೊರ ಹಾಕುವ ಒಂದು ಪ್ರಕಾರವಾಗಿ ಕಾಣುತ್ತೇವೆ. ಒಬ್ಬ ಮನುಷ್ಯನ ಇಡೀ ಬದುಕಿನಲ್ಲಿ ನಡೆದಂತಹ ತಪ್ಪು-ಸರಿ, ಸಿಹಿ-ಕಹಿ ಘಟನೆಗಳಿಗೆ ಅಕ್ಷರ ರೂಪವನ್ನು ನೀಡುತ್ತಾನೆ. ತಮ್ಮ ಅಂತರಾಳದ ತಮುಲಗಳನ್ನು ಸ್ವವಿಮರ್ಶೆಗೆ ಒಳಪಡಿಸಿಕೊಳ್ಳಲಾಗುತ್ತದೆ. ಆದರೆ ಬಾಬಾ ಸಾಹೇಬರು ಬರೆದ ಅವರ ಆತ್ಮಕಥೆಯಲ್ಲಿ ಅವರ ಬದುಕಿನ ಕಹಿ ಘಟನೆಗಳು ಹೇಗೆ ಮುಂದೆ ಅವರು ಇಡೀ ಸಮಾಜದ ಏಳಿಗೆಗಾಗಿ ಅವುಗಳನ್ನೆ ಆಧಾರವಾಗಿ ಬಳಸಿಕೊಂಡರು ಎನ್ನುವುದನ್ನು ಅವರ ಬದುಕೆ ನಮಗೆ ತೋರಿಸಿಕೊಡುತ್ತದೆ. ʼವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ’ ಇದು ಡಾ. ಬಿ.ಆರ್. ಅಂಬೇಡ್ಕರ್‌ ಅವರು ಬರೆದಿರುವ ಆತ್ಮಕಥ
APA, Harvard, Vancouver, ISO, and other styles
26

ಹನಮಂತಪ್ಪ, ಬನ್ನಿ. "ಡಾ.ಡಿ.ಕೆ. ಚಿತ್ತಯ್ಯ ಪೂಜಾರ್ ಅವರ ಹೊಟ್ಟಣ್ಣ ನಾಯಕನ ಕಥನ ಕಾವ್ಯದ ಅವಲೋಕನ". AKSHARASURYA 04, № 03 (2024): 95 to 102. https://doi.org/10.5281/zenodo.12672792.

Full text
Abstract:
ಒಂದು ನಿರ್ಧಿಷ್ಟ ಜನಸಮೂಹವನ್ನು ಸಂಕೇತಿಸುವುದು ಜನಪದ. ಜನಪದರು ಮೌಖಿಕ ಮಾಧ್ಯಮದಲ್ಲಿ ಉಳಿಸಿಕೊಂಡು ಬಂದ ಜ್ಞಾನವನ್ನು ಜಾನಪದ ಎಂದು ಕರೆಯಬಹುದು. ಜಾನಪದ ಸಮಸ್ತ ಜನತೆಯ ಸಂಸ್ಕೃತಿಗೆ ಸಂಬಂಧಿಸಿದ ಒಂದು ಪರಂಪರೆ. ಇಂತಹ ಜನಪದವು ಅನೇಕ ಪ್ರಕಾರಗಳನ್ನು ಹೊಂದಿದ್ದು ಕಥನ ಕಾವ್ಯವೂ ಒಂದಾಗಿದೆ. ಅಂತಹ ಪ್ರಮುಖ ಕಥನ ಕಾವ್ಯಗಳಲ್ಲಿ ಡಾ. ಚಿತ್ತಯ್ಯ ಪೂಜಾರ್ ಅವರು ಸಂಶೋಧಿಸಿ ಸಂಪಾದಿಸಿರುವ ‘ಮುಮ್ಮಡಿ ಹೊಟ್ಟಣ್ಣ ನಾಯಕನ ಕಥನ ಕಾವ್ಯ’ವೂ ಒಂದು.  ಕಥನ ಕಾವ್ಯಗಳನ್ನು ಸಂಶೋಧಿಸಿ, ಸಂಗ್ರಹಿಸಿ, ಪರಿಷ್ಕರಿಸಿ ಪ್ರಕಟಿಸುವುದು ಸುಲಭದ ಮಾತಲ್ಲ. “ಇದು ಒಂದು ರೀತಿ ಕುಮಾರವ್ಯಾಸ ಭಾರತದ ಅಧ್ಯಯನ ಇದ್ದ ಹಾಗೆ. ‘ಕಲಿಯದವರಿಗೆ ಕಾಮಧೇನು ಕಲಿತವರಿಗೆ ಗಂಟಲು ಗಾಣ’. ಈ ಕಥನ ಕಾವ್ಯದ ಸಂಶೋಧನೆಯೂ ಹಾಗೆಯೇ. ಇದರ ಆಳ, ಅಗಲ, ಎತ್
APA, Harvard, Vancouver, ISO, and other styles
27

ಅಂಜಿನಪ್ಪ, ಎಲ್.ಟಿ. "ಕನ್ನಡದಲ್ಲಿ ಮೀಸಲಾತಿ ಚಳವಳಿಯ ಇತಿಹಾಸ: ಒಂದು ಅವಲೋಕನ". AKSHARASURYA JOURNAL 06, № 06 (2025): 01 to 10. https://doi.org/10.5281/zenodo.15580870.

Full text
Abstract:
ಪ್ರಸ್ತುತ ಈ ಲೇಖನದಲ್ಲಿ ಭಾರತದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆ ಶೂದ್ರರು ಅನುಭವಿಸಿದ ಯಾತನೆಗಳು, ಹನ್ನೆರಡನೇ ಶತಮಾನದಲ್ಲಿ ಆದ ಸಾಮಾಜಿಕ ಕ್ರಾಂತಿಗಳು, ಸ್ವಾತಂತ್ರ ಪೂರ್ವದಲ್ಲಿನ ಮೀಸಲಾತಿ ಕ್ರಮಗಳು ನಂತರದ ಬೆಳವಣಿಗೆಯನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ಕೊಲ್ಲಾಪುರದ ಶಾಹುಮಹಾರಾಜರು ಹಿಂದುಳಿದವರಿಗೆ ಶೇಕಡ 50ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ ಎಂಬ ಹೆಗ್ಗಳಿಕೆ ಪಾತ್ರವಾದ ರೀತಿ ಹಾಗೂ ಅವರ ಕೈಗೊಂಡ ಕಾರ್ಯವೈಖರಿಗಳನ್ನು ಇಲ್ಲಿ ತಿಳಿಸಲಾಗಿದೆ. ಜೊತೆಗೆ ನಾಲ್ವಡಿ ಕೃಷ್ಣರಾಜ ಒಡೆಯರು ಹಿಂದುಳಿದವರಿಗೆ ನೀಡಿದ ಕೊಡುಗೆಗಳು ಅವರ ಅಧಿಕಾರವಧಿಯಲ್ಲಿ ಜಾರಿಗೆ ತಂದ ಮಿಲ್ಲರ್ ಆಯೋಗ, ಮಿಲ್ಲರ್ ಆಯೋಗವು ಆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನೀಡುತ್ತಿದ್ದ ತಾರತಮ್ಯ ಸಂಬಳದ ಸೌಲತ್ತುಗಳು ಇತರ ಸೌಲತ್ತುಗಳು ಹಾಗೂ ಆಯೋಗ ಕ
APA, Harvard, Vancouver, ISO, and other styles
28

PRITHVIRAJ, B. "ಕುವೆಂಪು ಮತ್ತು ಕಂಬಾರರ ನಾಟಕಗಳು ಮುಂದಿಡುವ ರಂಗಕಲ್ಪನೆ". AKSHARASURYA JOURNAL 03, № 03 (2024): 111 to 121. https://doi.org/10.5281/zenodo.10775182.

Full text
Abstract:
ಪ್ರಸುತ್ತ ಸಂಶೋಧಾನ ಲೇಖನವು ಕುವೆಂಪು ಮತ್ತು ಕಂಬಾರರ ಕೃತಿಗಳಲ್ಲಿ ಹೊಸತನು ಹುಡುಕುವ ಪ್ರಯತ್ನವನ್ನು ಮಾಡಲಾಗಿದೆ. ಕುಂವೆಪು ಅವರಲ್ಲಿ ನವೋದಯ ಪ್ರಜ್ಞೆ ಕಾಣಿಸಿದ್ದರೆ ಕಂಬಾರರಲ್ಲಿ ದಲಿತರ ಪರ ಪ್ರಜ್ಞೆ ಕಾಣಿಸಿಕೊಂಡಿದೆ. ಈ ಲೇಖನವನ್ನು ವೀರೆಶ್ ಬಡೀಗಾರ್‌ರವರ ‘ಕನ್ನಡ ಸಾಹಿತ್ಯ ಪರಂಪರೆ ಮತ್ತು ಕಂಬಾರರು’ & ಉತ್ಥಾನಭಾರೀಘಾಟ್‌ಅವರ ‘ಕುವೆಂಪು ನಾಟಕಗಳು ಮುಂದಿಡುವ ರಂಗಕಲ್ಪನೆ’ ಎಂಬ ಪುಸ್ತಕಗಳ ಹಿನ್ನಲೆಯಲ್ಲಿ ಬರೆಯಲಾಗಿದೆ. ಇದುವರೆಗೂ ಸಾಹಿತ್ಯ ವಲಯದಲ್ಲಿ ಕಂಬಾರರನ್ನು ಕೇವಲ ಅವರ ಸೃಜನಶೀಲ ಕಲಾಕೃತಿಗಳ ಮೂಲಕವಷ್ಟೇ ಹೆಚ್ಚು ಚರ್ಚಿಸಿದ್ದು ಕಾಣುತ್ತದೆ. ಕಂಬಾರರ ಸೃಜನಶೀಲ ಬರಹಗಳ ಜಗತ್ತು ಒಂದು ಕಡೆಯಾದರೆ, ಸಂಶೋದನೆ, ಜಾನಪದ, ಸಂಪಾದನೆ ಹಾಗೂ ವೈಚಾರಿಕತೆಗೆ ಸಂಬಂಧಿಸಿದ ಸೃಜನೇತರ ಬರಹ ಇನ್ನೊಂದು
APA, Harvard, Vancouver, ISO, and other styles
29

ಅರುಣ್‌ಕುಮಾರ್, ಬಿ., та ರಾಮಕೃಷ್ಣಯ್ಯ ಕೆ. "ಆಧುನಿಕ ಕನ್ನಡ ರಂಗಭೂಮಿಯಲ್ಲಿ ರಂಗನಿರ್ದೇಶಕರಾಗಿ ಬಿ. ವಿ. ಕಾರಂತರ ಕೊಡುಗೆ". AKSHARASURYA JOURNAL 06, № 03 (2025): 01 to 10. https://doi.org/10.5281/zenodo.15343656.

Full text
Abstract:
ಆಧುನಿಕ ಕನ್ನಡ ರಂಗಭೂಮಿಯ ನಿರ್ದೇಶಕರಾಗಿರುವ ಬಿ. ವಿ. ಕಾರಂತ ಅವರು ಬಾಲ್ಯದಲ್ಲಿ ಬೆಳೆದದ್ದು ಕನ್ನಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ. ಅವರ ಕಣ್ಣುಗಳು, ಮತ್ತು ಕಿವಿಗಳು ಯಕ್ಷಗಾನ, ಜಾತ್ರೆ, ಕೋಲ, ರಥೋತ್ಸವ, ಪದ-ದಾನಗಳು ಮತ್ತು ವಿವಿಧ ಸಂಗೀತ ವಾದ್ಯಗಳ ಧ್ವನಿ ವಿನ್ಯಾಸಗಳಿಗೆ ತೆರೆದುಕೊಂಡವು. ಇವರು ಪ್ರಸಿದ್ಧ ಗುಬ್ಬಿ ವೀರಣ್ಣ ಕಂಪನಿಯವರು ಪುತ್ತೂರಿನಲ್ಲಿ ಬೀಡುಬಿಟ್ಟಾಗ ಅಲ್ಲಿ ‘ಕೃಷ್ಣಲೀಲಾ’ ನಾಟಕವನ್ನು ನೋಡಿ ನಾಟಕದ ಕಡೆಗೆ ಆಸಕ್ತರಾದರು. ನಂತರ ಅವರು ಗುಬ್ಬಿ ಕಂಪನಿಗೆ ಸೇರಿಕೊಂಡರು. ಅವರು ಡಾ. ರಾಜಕುಮಾರರಂತಹ ಹಿರಿಯರ ನಟರ ಜೊತೆಗೆ ಅಭಿನಯವನ್ನು ಮಾಡಿದರು. ಗುಬ್ಬಿ ವೀರಣ್ಣನವರು ಕಾರಂತರನ್ನು ಸ್ನಾತಕೋತ್ತರ ಪದವಿ ಅಭ್ಯಾಸಕ್ಕೆ ಬನಾರಸ್ ವಿಶ್ವವಿದ್ಯಾಲಯಕ್ಕೆ ಕಳುಹಿಸಿದರು. ಅಲ್ಲಿ ಅವರು ಹಿಂದೂಸ್ತಾನಿ ಸಂಗೀತವನ್ನು ಕಲಿತ
APA, Harvard, Vancouver, ISO, and other styles
30

ಶಶಾಂಕ, ಕೆ. ಎಸ್. "ಸ್ವಾತಂತ್ರ್ಯ ಪೂರ್ವದಲ್ಲಿ ಮಂಡ್ಯ ಜಿಲ್ಲೆಯಲ್ಲಾದ ಸಮಾಜೋ-ರಾಜಕೀಯದ ಸ್ಥಿತ್ಯಂತರ". AKSHARASURYA JOURNAL 03, № 04. SPECIAL ISSUE. (2024): 09 to 23. https://doi.org/10.5281/zenodo.10929613.

Full text
Abstract:
‘ಸಕ್ಕರೆಯ ಸೀಮೆ’ ಎಂದು ಪ್ರಖ್ಯಾತಿ ಪಡೆದುಕೊಂಡಿರುವ ಮಂಡ್ಯ ಜಿಲ್ಲೆ ಇಂದು ರಾಜಕೀಯ, ಸಾಮಾಜಿಕ ಹಾಗೂ ಕೃಷಿ ಕ್ಷೇತ್ರದಲ್ಲಿ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ. ಇದಕ್ಕೆಲ್ಲಾ ಕಾರಣ ಮಂಡ್ಯ ಜಿಲ್ಲೆಯ ಜೀವನಾಡಿ ಕನ್ನಂಬಾಡಿ ಕಟ್ಟೆಯಾಗಿದೆ. ಮೈಸೂರಿನ ಅರಸ ನಾಲ್ವಡಿಯವರನ್ನು ರಾಷ್ಟ್ರಪಿತ ಮಹಾತ್ಮಗಾಂಧಿಯವರು ರಾಜರ್ಷಿಯೆಂದು ಕರೆದರು. ಇದಕ್ಕೆ ನಾಲ್ವಡಿಯವರ ಪ್ರಜಾಹಿತಾತ್ಮಕ ಧೋರಣೆಗಳು. ಸರ್ವಾಧಿಕಾರಿಯೊಬ್ಬ ಪ್ರಜಾಸತ್ತಾತ್ಮಕ ಮನೋಭಾವ ತಳೆಯುವುದು ಜಗತ್ತಿನ ರಾಜಕೀಯ ಇತಿಹಾಸದಲ್ಲಿಯೇ ಅಪರೂಪದ ಸಂಗತಿಯಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ಏಷ್ಯಾ ಖಂಡದಲ್ಲಿಯೇ ಮೊದಲ ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಹಾಗೆಯೇ ಮಂಡ್ಯ ಜಿಲ್ಲೆಯಲ್ಲಿ ಕೃಷ್ಣರಾಜ ಸಾಗರ ಅಣೆಕಟ್ಟನ್ನು ನಿರ್ಮಿಸಿದರು. ಹ
APA, Harvard, Vancouver, ISO, and other styles
31

ಎಂ., ಎಂ. ಕಲಬುರ್ಗಿ. "ನನ್ನಿಯೊಳಿನತನಯಂ". AKSHARASURYA 03, № 05 (2024): 01–13. https://doi.org/10.5281/zenodo.10937959.

Full text
Abstract:
“ಸಂಶೋಧನೆಯೆನ್ನುವುದು ಅಲ್ಪ ವಿರಾಮ, ಅರ್ಧವಿರಾಮಗಳ ಮೂಲಕ ಪೂರ್ಣವಿರಾಮಕ್ಕೆ ಸಾಗುವ ಕ್ರಿಯೆಯಾಗಿದೆ... ಸಂಶೋಧನೆ ಎನ್ನುವುದು ಸುಳ್ಳು ಇತಿಹಾಸದ ಮೂಲಕ ವರ್ತಮಾನದಲ್ಲಿ ಹುಟ್ಟುಹಾಕುತ್ತಲಿರುವ ಶೋಷಣೆಯನ್ನು ಹತ್ತಿಕ್ಕಲು, ನಿಜ ಇತಿಹಾಸವನ್ನು ಶೋಧಿಸಿಕೊಡುವುದು ಸಂಶೋಧಕನ ಕರ್ತವ್ಯವಾಗಿದೆ. ಅಂದರೆ ಸಂಶೋಧನೆಯೆಂಬುದು ಕೇವಲ ಇತಿಹಾಸದ ಶೋಧವಲ್ಲ. ಸುಳ್ಳು ಇತಿಹಾಸವನ್ನು ಮುಂದುಮಾಡಿಕೊಂಡು ವರ್ತಮಾನವನ್ನು ದುರುಪಯೋಗ ಮಾಡಿಕೊಳ್ಳುವವರೊಂದಿಗೆ ನಡೆಸುವ ಹೋರಾಟವೂ ಆಗಿದೆ. ಸತ್ಯವೆಂಬ ಭೂತಕಾಲದ ಬಲದಿಂದ ಅಸತ್ಯವೆಂಬ ವರ್ತಮಾನ ಕಾಲವನ್ನು ಸರಿಪಡಿಸುವುದಾಗಿದೆ...” ಎನ್ನುವ ಮೂಲಕ ಸತ್ಯಶೋಧಕರೂ ಸಮಗ್ರ ಸಂಶೋಧಕರೂ ಎಂದು ಪ್ರಸಿದ್ಧರಾದ ಡಾ.ಎಂ.ಎಂ.ಕಲಬುರ್ಗಿ ಅವರು ಈ ನಾಡು ಕಂಡ ಶ್ರೇಷ್ಠ ಚಿಂತಕರು. ಅವರ ಅಧ್ಯಯನ ಮತ್ತು ಕೊಡುಗೆಗಳು ಶಾಸನಶಾಸ್ತ್
APA, Harvard, Vancouver, ISO, and other styles
32

ಕವಿತಾ, ಆರ್., та ಜಮದಂಡಿ ರಾಜಶೇಖರ. "ಹಾಸ್ಯ ಲೋಕ ಸ್ವರ್ಗ ಸುಖ (ನಕ್ಕರೆ ಅದೇ ಸ್ವರ್ಗ)". International Journal of Philosophy and Languages (IJPL) 2, № 1 (2023): 48–52. https://doi.org/10.5281/zenodo.8170677.

Full text
Abstract:
<strong>ಉದ್ದೇಶ</strong>: <em>ಹಾಸ್ಯ ಬರೀ ಸಂತಸವನ್ನು ನೀಡುವುದಲ್ಲ. ಹಾಸ್ಯ ಪರಸ್ಪರ ಆತ್ಮೀಯತೆಯನ್ನು ಆಸ್ವಾದಿಸುವುದಕ್ಕೆ ಇರುವ ಒಂದು ಶಕ್ತಿ. ಹಣದಿಂದ ಒಬ್ಬ ವ್ಯಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ ಹಾಸ್ಯದಿಂದ / ನಗುವಿನಿಂದ ವ್ಯಕ್ತಿಯನ್ನು ಗೆಲ್ಲಲು ಸಾಧ್ಯ ಮತ್ತು ದೃಢವಾಗಿ ನಿಲ್ಲಲು ಸಾಧ್ಯ.</em> <em>ಪ್ರೀತಿ </em><em>ಮತ್ತು</em> <em>ನಗು ಎಷ್ಟು ಚಿಕ್ಕ ಪದ. ಆದರೆ ಆ ಪದಗಳಿಗೆ ಇಡೀ ಜಗತ್ತನ್ನು ಗೆಲ್ಲುವ ಶಕ್ತಿ ಇದೆ. ನಗು ಇರುವ ಕಡೆ ಪ್ರೀತಿ ಬೆಳೆಯುತ್ತೆ. ಪ್ರೀತಿ ಬೆಳೆದ ಕಡೆ ನಗು ತುಂಬಿರುತ್ತೆ.</em> <em>ಹಾಸ್ಯ ಪ್ರಜ್ಞೆಯನ್ನು ಎಲ್ಲರನ್ನು ಮೂಡಿಸಿ ನಗು-ನಗುತ್ತಾ ಇರುವಂತೆ ಮಾಡುವುದೇ ಇದರ ಉದ್ದೇಶ. ಅಷ್ಟೇ ಅಲ್ಲ ಇತರರ ಗಮನವನ್ನು ಆಕರ್ಷಿಸುವುದು. ಸಾಮರಸ್ಯವನ್ನು ಸೃಷ್ಟಿಸುವುದು. ಸಂದೇಶವನ್ನು ಸ್ಮರಣಾರ್ಹವಾ
APA, Harvard, Vancouver, ISO, and other styles
33

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್&zwnj; ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
34

Pinto, Melwyn. "ಸತಾಚೊ ಸೊಧ್ ಆನಿ ಸತಾಚ್ಯಾ ಸ್ಥಾಪನಾ ಮಧೆಂ ಸಂಸೊಧ್". MJES Journal of Amar Konkani 2, № 2 (2023): 4–7. https://doi.org/10.69852/aloy.mjesjak.2.2/17945/.

Full text
Abstract:
ಕನ್ನಡಾಚೊ ವಿಮರ್ಶಕ್, ಸಂಸೊಧ್ಕಾ.ರ್ ಆನಿ ತುಮಕೂರು ವಿಶ್ವವಿದ್ಯಾಲಯಾಚ್ಯಾ ಕನ್ನಡ ವಿಭಾಗಾಚೊ ಪ್ರೊಫೆಸರ್ ಡಾ| ನಿತ್ಯಾನಂದ ಶೆಟ್ಟಿನ್ ಆಯ್ಲೆವಾರ್ ಲಿಕ್ಲ್ಲೆಂ ಪುಸ್ತಕ್ ಮಾರ್ಗಾನ್ವೇಷಣೆ: ಸಾಹಿತ್ಯ ಸಂಶೋಧನೆಯ ರೀತಿ ನೀತಿ. ಹ್ಯಾ ಪುಸ್ತಕಾಂತ್ ಸಂಸೊಧಾವಿಶಿಂ ತಾಣೆಂ ಸಾಂಗ್ಚೊ ಏಕ್ ಪ್ರಮುಕ್ ವಿಚಾರ್ ಅಸೊ ಆಸಾ. ದೋನ್ ರಿತಿಂಚೆ ಸಂಸೊಧ್ ಸಾಧ್ಯ್ ಆಸಾತ್: ಪಯ್ಲೊ ಸತಾಚೆಂ ಸ್ಥಾಪನ್ (ಸತ್ಯ ಸ್ಥಾಪನೆ) ಕರ್ಚೊ ವಯ್ವಾಟಿ ‘ಸಂಸೊಧ್’ ಆನಿ ದುಸ್ರೊ ಸತಾಚೊ ಸೊಧ್ (ಸತ್ಯ ಶೋಧನೆ) ಕರ್ಚೊ ವಸ್ತುನಿಷ್ಟ್ ಸಂಸೊಧ್. ಹ್ಯಾ ದೊನಾಂ ಮಧೆಂ ವಿಶೇಸ್ ಫರಕ್ ಆಸಾ. ಸತಾಚೆಂ ಸ್ಥಾಪನ್ ಕರ್ಚೆಂ ಬೋವ್ ಸಲೀಸ್. ಮ್ಹಜ್ಯೆಲಾಗಿಂ ಥೊಡಿಂ ಪೂರ್ವ್ಪೀ್ಡಿತ್ ಕಲ್ಪನಾಂ ಆಸಾತ್. ಸಮಾಜ್ಯೆ ವಿಶಿಂ, ಹೆರ್ ಜಾತಿ ಧರ್ಮಾ ವಿಶಿಂ, ವಾ ಮ್ಹಾಕಾ ಜಾಯ್ನಾತ್ಲ್ಲ್ಯಾಂ ವಿಶಿಂ ಮ್ಹಜ್ಯೊ ಥೊ
APA, Harvard, Vancouver, ISO, and other styles
35

SHA, SHETTAR. "ಬೌದ್ಧರು ನಿರ್ಮಿಸಿದ ಪ್ರಾಕೃತ ಜಗದ್ವಲಯ". AKSHARASURYA JOURNAL 03, № 03 (2024): 01 to 25. https://doi.org/10.5281/zenodo.10774933.

Full text
Abstract:
ಕನ್ನಡ ಸಾಹಿತ್ಯ, ಸಂಸ್ಕೃತಿ, ಶಾಸನ, ಚರಿತ್ರೆ, ಭಾಷೆಯ ಕುರಿತು ಆಳವಾದ ಸಂಶೋಧನೆ ನಡೆಸಿ ಹೊಸ ತಿಳಿವು ನೀಡುವ ಮೂಲಕ ಕನ್ನಡದ ಮನಸುಗಳನ್ನು ಬೆಳಗಿದ ಸಂಶೋಧಕರಲ್ಲಿ ಪ್ರೊ.ಷ.ಶೆಟ್ಟರ್ ಅವರು ಅಗ್ರಗಣ್ಯರಾಗಿದ್ದಾರೆ. ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಜನಿಸಿದ್ದು 11 ಡಿಸೆಂಬರ್ 1935ರಂದು ಬಳ್ಳಾರಿ ಜಿಲ್ಲೆ ಹಡಗಲಿ ತಾಲ್ಲೂಕಿನ ಹಂಪಸಾಗರದಲ್ಲಿ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್&zwnj;ನಲ್ಲಿ ಉನ್ನತ ವ್ಯಾಸಂಗ ಮಾಡಿದ ಇವರು ಸಾಹಿತ್ಯ, ಚರಿತ್ರೆ, ಪ್ರಾಕ್ತನಶಾಸ್ತ್ರ, ಶಾಸನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕಾವ್ಯ ಕುರಿತು ಸುಮಾರು 30ಕ್ಕೂ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಇವರ ಸಂಶೋಧನೆಗಳ ಕೊಡುಗೆ ಬಹಳ ಇತ್ತು. ಕೇಂಬ್ರಿಜ್, ಹಾರ್ವರ್ಡ್,
APA, Harvard, Vancouver, ISO, and other styles
36

ರಾಗೌ, (ರಾಮೇಗೌಡ), та ಭೈರಪ್ಪ ಎಂ. "ಗಾದೆ". AKSHARASURYA JOURNAL 04, № 06 (2024): 01 to 34. https://doi.org/10.5281/zenodo.13724358.

Full text
Abstract:
ಸಮಚಿತ್ತತೆಯ ಶೋಧಕ-ಸಾಧಕರಾಗಿ ಡಾ.ರಾಗೌ (ರಾಮೇಗೌಡ)&nbsp; &nbsp; ಡಾ.ರಾಗೌ(ರಾಮೇಗೌಡ) ಅವರು ಕನ್ನಡ ನವೋತ್ತರ ಯುಗದ ಪ್ರಮುಖ ಕವಿಯಾಗಿ, ವಿಮರ್ಶಕರಾಗಿ, ಸಂಶೋಧಕರಾಗಿ, ಶಾಸ್ತ್ರೀಯ ಮತ್ತು ಜಾನಪದ ವಿದ್ವಾಂಸರಾಗಿ ಹೊಮ್ಮಿದ ವಿಶಿಷ್ಟ ಲೇಖಕರು. ಕಾವ್ಯ, ವಿಮರ್ಶೆ, ಜಾನಪದ ಅಧ್ಯಯನ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ಸಂಶೋಧನೆ ಮೊದಲಾದ ಕ್ಷೇತ್ರಗಳಲ್ಲಿ ರಾಗೌ ತಮ್ಮನ್ನು ತೊಡಗಿಸಿಕೊಂಡು ಸಾಹಿತ್ಯಕಯಾನವನ್ನು ವಿಕಾಸಪಡಿಸಿಕೊಂಡವರು. ಸದಾ ಸಂಕ್ರಮಣಶೀಲವಾದ ಆಧುನಿಕ ಕನ್ನಡ ಸಾಹಿತ್ಯದ ಬಾನಂಗಳವನ್ನು ತನ್ನದೇ ನೆಲೆಯಲ್ಲಿ ನಿಂತು ನಿಟ್ಟಿಸುತ್ತಾ ತಮ್ಮ ಸಾಧನೆಯ ಸಾಮರ್ಥ್ಯವನ್ನು ತೋಡಿಸಿಕೊಂಡವರು ರಾಗೌ, ತಮ್ಮ ಅವಲೋಕನದಲ್ಲೂ ಕ್ರಿಯಾಶೀಲತೆಯಲ್ಲೂ ಇಂತಹುದೊಂದು ದೂರವನ್ನು, ನಿರ್ಲಿಪ್ತತೆಯನ್ನು ಅಂತರ್ಗತಗೊಳಿಸಿಕೊಂಡು ಬರೆಯುತ್ತಾ ಬಂದುದರಿಂದ ಅವರು ಒಂದು
APA, Harvard, Vancouver, ISO, and other styles
37

ಡಾ., ಶ್ರೀನಿವಾಸ ಹಾವನೂರು. "ಡಾ. ಫರ್ಡಿನಾಂಡ್ ಕಿಟೆಲ್". 18 липня 2023. https://doi.org/10.5281/zenodo.8161007.

Full text
Abstract:
ಕಿಟೆಲ್ ಪೂರ್ವದ ಹೊಸಗನ್ನಡ ಸಾಹಿತ್ಯ ಕ್ರಿಸ್ತಶಕಾರಂಭದಿಂದ ಹರಿದು ಬಂದ ಕನ್ನಡ ಸಾಹಿತ್ಯವಾಹಿನಿಗೆ ಪಾಶ್ಚಾತ್ಯ ಸಂಪರ್ಕವೆಂಬ ಹೊಸ ನೀರು ಸೇರಿದಂದಿನಿಂದ ಹೊಸಗನ್ನಡ ಸಾಹಿತ್ಯದ ಆರಂಭವಾಯಿತು. ಪಾಶ್ಚಾತ್ಯರ ಸಂಪರ್ಕವು ವಾಸ್ಕೋ-ದ-ಗಾಮನ ಕಾಲದಿಂದಲೇ ಒದಗಿ ಬಂದಿದ್ದರೂ ಜನಜೀವನದ ಮೇಲೆ ಅದರ ಪರಿಣಾಮವಾಗಿರಲಿಲ್ಲ. ಕ್ರಿ.ಶ. ೧೮೧೮ರಲ್ಲಿ ಪೇಳ್ವೆಯವರು ಅಳಿದ ಮೇಲೆ ಹಾಗೂ ಪ್ರದೇಶಗಳಲ್ಲಿ ಬ್ರಿಟಿಶ್ ಆಡಳಿತವು ನೆಲೆಗೊಂಡಂದಿನಿಂದ ಪಾಶ್ಚಾತ್ಯ ಸಂಪರ್ಕವು ಸ್ಪಷ್ಟವಾಗಿ ತಲೆದೋರಿತು. ಹೀಗೆ ೧೯ನೆಯ ಶತಮಾನದ ಆರಂಭದಿಂದಲೇ ಸಾಹಿತ್ಯೋದ್ಯಮದಲ್ಲಿ ಅದರ ಪ್ರಭಾವವು ಕಂಡುಬರತೊಡಗಿತು.
APA, Harvard, Vancouver, ISO, and other styles
38

ಆರ್., ಕವಿತಾ, та ರಾಜಶೇಖರ ಜಮದಂಡಿ. "ಹಾಸ್ಯ ಲೋಕ ಸ್ವರ್ಗ ಸುಖ (ನಕ್ಕರೆ ಅದೇ ಸ್ವರ್ಗ)". International Journal of Philosophy and Languages (IJPL), 30 червня 2023, 48–52. http://dx.doi.org/10.47992/ijpl.2583.9934.0013.

Full text
Abstract:
ಉದ್ದೇಶ: ಹಾಸ್ಯ ಬರೀ ಸಂತಸವನ್ನು ನೀಡುವುದಲ್ಲ. ಹಾಸ್ಯ ಪರಸ್ಪರ ಆತ್ಮೀಯತೆಯನ್ನು ಆಸ್ವಾದಿಸುವುದಕ್ಕೆ ಇರುವ ಒಂದು ಶಕ್ತಿ. ಹಣದಿಂದ ಒಬ್ಬ ವ್ಯಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ ಹಾಸ್ಯದಿಂದ / ನಗುವಿನಿಂದ ವ್ಯಕ್ತಿಯನ್ನು ಗೆಲ್ಲಲು ಸಾಧ್ಯ ಮತ್ತು ದೃಢವಾಗಿ ನಿಲ್ಲಲು ಸಾಧ್ಯ. ಪ್ರೀತಿ ಮತ್ತು ನಗು ಎಷ್ಟು ಚಿಕ್ಕ ಪದ. ಆದರೆ ಆ ಪದಗಳಿಗೆ ಇಡೀ ಜಗತ್ತನ್ನು ಗೆಲ್ಲುವ ಶಕ್ತಿ ಇದೆ. ನಗು ಇರುವ ಕಡೆ ಪ್ರೀತಿ ಬೆಳೆಯುತ್ತೆ. ಪ್ರೀತಿ ಬೆಳೆದ ಕಡೆ ನಗು ತುಂಬಿರುತ್ತೆ. ಹಾಸ್ಯ ಪ್ರಜ್ಞೆಯನ್ನು ಎಲ್ಲರನ್ನು ಮೂಡಿಸಿ ನಗು-ನಗುತ್ತಾ ಇರುವಂತೆ ಮಾಡುವುದೇ ಇದರ ಉದ್ದೇಶ. ಅಷ್ಟೇ ಅಲ್ಲ ಇತರರ ಗಮನವನ್ನು ಆಕರ್ಷಿಸುವುದು. ಸಾಮರಸ್ಯವನ್ನು ಸೃಷ್ಟಿಸುವುದು. ಸಂದೇಶವನ್ನು ಸ್ಮರಣಾರ್ಹವಾಗಿ ಪರಿವರ್ತಿಸುವುದು. ಉದ್ವೇಗ, ಉದ್ರೇಕಗಳನ್ನು ಉಪಶಮನ ಮಾಡುವುದು. ಸ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!