To see the other types of publications on this topic, follow the link: ವಚನ.

Journal articles on the topic 'ವಚನ'

Create a spot-on reference in APA, MLA, Chicago, Harvard, and other styles

Select a source type:

Consult the top 50 journal articles for your research on the topic 'ವಚನ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಗೌಡ., ಎಂ.ಟಿ. "ವಚನ ಸಾಹಿತ್ಯ: ಮಾನವ ಮೌಲ್ಯಗಳ ಪ್ರತಿಬಿಂಬ". AKSHARASURYA JOURNAL 06, № 04 (2025): 90 to 96. https://doi.org/10.5281/zenodo.15490961.

Full text
Abstract:
ವಚನವೆಂಬುದು ಕೇವಲ ಸಾಹಿತ್ಯ ಪ್ರಕಾರವಲ್ಲ ಅದು ಒಂದು ಚಳುವಳಿ ಕೂಡ ಆಗಿದೆ. ಅದನ್ನು ಸಮಾಜೋ ಧಾಶ್ರಮಿಕ ಚಳುವಳಿ, ಕಾಯಕ ಜೀವಿಗಳ, ಚಳುವಳಿ ಪರಿಪೂರ್ಣ ಚಳುವಳಿ ಎಂದು ಬಗೆಬಗೆಯಾಗಿ ಕನ್ನಡ ವಿದ್ವಾಂಸರು ಅದರ ಸ್ವರೂಪ ಮಹಿಮೆಯನ್ನು ಬಣ್ಣಿಸಿದ್ದಾರೆ. ವಚನ ಸಾಹಿತ್ಯ ಇಡೀ ಭಾರತೀಯ ಭಾಷೆಗಳಲ್ಲಿಯೇ ವಿಶಿಷ್ಟವಾದುದು. ಕನ್ನಡ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ನೀಡಿದ ಕೊಡುಗೆ ಆದಾಗಿದೆ ಎಂದರೂ ನಡೆಯುತ್ತದೆ. ಮಾನವ ಕುಲದ ಸರ್ವಾಂಗೀಣ ವಿಕಾಸಕ್ಕಾಗಿ ಶ್ರಮಿಸಿದ ಮಹಾತ್ಮರಾದ ಶಿವಶರಣರು ಅನನ್ಯ ಕೊಡುಗೆ ನೀಡಿರುವ ಜಗತ್ತಿನ ಅಪರೂಪದ ಸಾಹಿತ್ಯ ವಚನಗಳು. ವಚನಗಳು ಎಂದಾಕ್ಷಣ ನೆನಪಾಗುವುದೇ ಶಿವಶರಣರು. ಶರಣ ಪಂಥಕ್ಕೆ ಭಕ್ತಿಯ ಶಕ್ತಿಯೇ ಕೇಂದ್ರ ಬಿಂದು. ವಚನ ಸಾಹಿತ್ಯವು ಸವಿಸ್ತಾರವಾದ ಸಮುದ್ರದ ಆಳದಲ್ಲಿನ ಮುತ್ತು, ರತ್ನಗಳನ್ನು ಹೆಕ್ಕಿ ಅಳೆದು, ತೂಗಿ ಸ
APA, Harvard, Vancouver, ISO, and other styles
2

ಶೀಲಾದೇವಿ, ಎಸ್. ಬಿರಾದಾರ. "ವೀರಾಂಗಿಣಿ ಅಕ್ಕಮಹಾದೇವಿ". AKSHARASURYA JOURNAL 04, № 06 (2024): 152 to 156. https://doi.org/10.5281/zenodo.13725661.

Full text
Abstract:
ಹಳೆಗನ್ನಡ ಸಾಹಿತ್ಯವು ರಾಜ್ಯಾಶ್ರಯದಲ್ಲಿಯೇ ಪಂಡಿತ ಪಾಮರರಿಗೆ ಮಾತ್ರ ಸಿಮಿತವಾಗಿತ್ತು. ಹನ್ನೆರಡನೆ ಶತಮಾನದಲ್ಲಿ ವಚನ ಸಾಹಿತ್ಯಯೂ ತೀರಾ ಸರಳ ಸಹಜವಾಗಿ ತಾವು ಬೋದಿಸುವುದು ಸಾಮಾನ್ಯನಿಗೂ ತಲುಪಬೇಕು ಎಂಬ ಆಶಯ ಹೊಂದಿದವರು. ಶಿವಶರಣರು ಶಿವಶರಣೆಯರ ಆಲೋಚನೆಗಳನ್ನು ಅನುಭವಗಳನ್ನು ವಿಚಾರಧಾರೆಗಳೆ ವಚನ. ಜನಸಾಮಾನ್ಯರ ಭಾಷೆಯಲ್ಲಿಯೆ ತಮ್ಮ ಭಾವನೆಗಳನ್ನು ಅನಿಸಿಕೆಗಳನ್ನು ತತ್ವಗಳನ್ನು ಹಾಗೂ ಅವರ ಆತ್ಮಾನುಭವಗಳೇ ವಚನರೂಪದಲ್ಲಿ ವ್ಯಕ್ತಪಡಿಸಿದ್ದು ವಚನ ಸಾಹಿತ್ಯ. ವಚನ ಸಾಹಿತ್ಯ ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವುದು ಕನ್ನಡ ಸಾಹಿತ್ಯದ ಹೆಮ್ಮೆಯಾಗಿದೆ. ವಚನ ಸಾಹಿತ್ಯದಲ್ಲಿ ಕಾಣಿಸುವ ವಿಶಿಷ್ಟ ಪ್ರತಿಭೆಯ ಮಹಿಳೆ ಅಕ್ಕಮಹಾದೇವಿ. ಕನ್ನಡ ಸಾಹಿತ್ಯದ ಮೊದಲ ಕವಿಯತ್ರಿ ಮತ್ತು ವಚನಗಾರ್ತಿ, 12 ನೆಯ ಶತಮಾನದ ಪ್ರಪ್ರಥಮವಾಗಿ ಪುರುಷರಿಗೆ ಸಮಾನವಾಗಿ ನಿಂ
APA, Harvard, Vancouver, ISO, and other styles
3

ಲಕ್ಷ್ಮೀ, ಎಲ್. ಪೂಜಾರಿ. "ವಚನ ಚಳವಳಿ ಮತ್ತು ಮಹಿಳೆ". AKSHARASURYA JOURNAL 06, № 05 (2025): 54 to 59. https://doi.org/10.5281/zenodo.15504231.

Full text
Abstract:
ವಚನ ಸಾಹಿತ್ಯ ಹನ್ನೆರಡನೇ ಶತಮಾನದಲ್ಲಿ ಹುಟ್ಟಿಕೊಂಡಂತಹ ವಿಶಿಷ್ಟ ಸಾಹಿತ್ಯದ ಪ್ರಕಾರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಕಾಣುತ್ತೇವೆ. ಈ ಯುಗವನ್ನು ಸಾಮಾಜಿಕ ಪರಿವರ್ತನೆ ಯುಗ ಎಂದು ಕರೆಯುವಷ್ಟರಮಟ್ಟಿಗೆ ಬದಲಾವಣೆ ಆಗಿರುವುದನ್ನು ಕಾಣುತ್ತೇವೆ. ವಚನ ಎಂದರೆ ಮಾತು, ಉಕ್ತಿ ಎಂಬ ಅರ್ಥವನ್ನು ಹೊಂದಿದ್ದು ಗದ್ಯ ಪದ್ಯಗಳ ರೂಪದಲ್ಲಿ ಕಂಡುಬಂದಿದೆ ಮಹಿಳೆಯರ ಸಮಾನತೆಗೆ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ.ಶತಮಾನಗಳಿಂದ ಅಸ್ಪೃಳಾಗಿದ್ಧ ಅದೃಶ್ಯಳಾಗಿದ್ಧ ಹೆಣ್ಣನ್ನು ವಚನಕಾರರು ಮಾನವೀಯ ದೃಷ್ಟಿಯಿಂದ ಕಂಡಿದ್ದಾರೆ. ಪುರುಷನ ಹಾಗೆ ಮಹಿಳೆಗೆ ಸಮಾನವಾದ ಸ್ಥಾನವನ್ನು ನೀಡುವ ಮೂಲಕ 12ನೇ ಶತಮಾನದಲ್ಲಿ ವಚನಕಾರರು ಮಾಡಿದ ಒಂದು ಬೃಹತ್ ಬದಲಾವಣೆ ಇಡೀ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದೆ. ಸ್ತ್ರೀಯರ ಸಮಾನತೆಗಾಗಿ ಮಾಡಿದ ಮೊದಲ ಚಳುವ
APA, Harvard, Vancouver, ISO, and other styles
4

ಶ್ರೀನಿವಾಸ, ಎಸ್.ಜಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 01 to 10. https://doi.org/10.5281/zenodo.15490768.

Full text
Abstract:
ʼಕಾಯಕವೇ ಕೈಲಾಸʼ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದ್ದು ವಚನ ಸಾಹಿತ್ಯ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಗುರಿಯಿಟ್ಟು ನಡೆದ ದಾರ್ಶನಿಕ ಚಳುವಳಿ ವಚನ ಸಾಹಿತ್ಯ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು ಕೂತು ಉಣ್ಣುವ ವರ್ಗಗಳು ನಿರ್ಮಾಣವಾಗುವುದಕ್ಕೆ ಕಾರಣವಾಗಿರಬೇಕು, ಸಮಾಜದಲ್ಲಿ ಮೇಲ್ವರ್ಗವೆಂದು ಕರೆಸಿಕೊಂಡ ಜನರು ಸಮಾಜದ ಇತರರನ್ನು
APA, Harvard, Vancouver, ISO, and other styles
5

ಕುಸುಮಾಂಜಲಿ, ಎಲ್. ಸಿ. ಜಗದೀಶ್. "ವಚನ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ". AKSHARASURYA JOURNAL 06, № 04 (2025): 11 to 18. https://doi.org/10.5281/zenodo.15490805.

Full text
Abstract:
ಇದರಲ್ಲಿ ವಚನ ಸಾಹಿತ್ಯ ಮತ್ತು ಸ್ತ್ರೀ ಸಂವೇದನೆಯ ಸಂಬಂದವನ್ನು ಹೇಳಲಾಗಿದೆ. ಸ್ತ್ರೀ ಸಂವೇನೆ ಎಂದರರೇನು ಮತ್ತು ಸ್ತ್ರೀವಾದಕ್ಕಿರುವ ಮೌಲ್ಯವು ಯಾವುದು ಹಾಗೂ ಸಂವೇದನೆ ಎಂದರೆ ಏನು ಎಂದು ವಿವರಿಸಲಾಗಿದೆ. ಆದರೆ ಸ್ತ್ರೀವಾದವನ್ನು ಇಲ್ಲಿ ಆನ್ವಯಿಕವಾಗಿ ಮಾತ್ರವೇ ಬಳಸಲಾಗಿದೆ. ಎಲ್ಲಿಯೂ ವಚನ ಕಾರ್ತಿಯರನ್ನು ಮತ್ತು ವಚನಗಳನ್ನು ಹೆಚ್ಚು ಉಲ್ಲೇಖಿಸಲಿಕ್ಕೆ ಹೋಗಲಿಲ್ಲ. 
APA, Harvard, Vancouver, ISO, and other styles
6

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Full text
Abstract:
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
APA, Harvard, Vancouver, ISO, and other styles
7

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
8

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
9

ಸೋಮಶೇಖರ, ಎಂ. "ಹರಿಹರನ ರಗಳೆಯಲ್ಲಿ ಶರಣ ಕೆಂಬಾವಿ ಭೋಗಣ್ಣ". AKSHARASURYA 04, № 02 (2024): 145 to 156. https://doi.org/10.5281/zenodo.11525997.

Full text
Abstract:
ವಚನ ಸಾಹಿತ್ಯದ ಮಾತು ಬಂದ ತಕ್ಷಣವೇ ನಮ್ಮಲ್ಲಿ ಬಸವಾದಿ ಶರಣರ ಆಲೋಚನೆಗಳು ಸುಳಿದಾಡುತ್ತವೆ. ವಚನ ಸಾಹಿತ್ಯದ ಮೇಲೆ ಸಾಕಷ್ಟು ಸಂಶೋಧನೆಗಳು ನಡೆದಿದೆ; ನಡೆಯತ್ತಲೇ ಇದೆ. ವಚನ ಸಾಹಿತ್ಯವನ್ನು ಅಧ್ಯಯನದ ದೃಷ್ಟಿಯಿಂದ ಬಸವಪೂರ್ವ ಯುಗ (11ನೇ ಶತಮಾನ), ಬಸವ ಯುಗ (12-13ನೇ ಶತಮಾನ), ಬಸವೋತ್ತರ ಯುಗ (15-19ನೇ ಶತಮಾನ) ಹಾಗೂ ಆಧುನಿಕ ಯುಗ (20ನೇ ಶತಮಾನ) ಎಂದೂ ವಿಭಾಗಿಸಿಕೊಳ್ಳಲಾಗಿದೆ. ಈ ಸಾಹಿತ್ಯ ಸೃಷ್ಟಿಯ ಪ್ರಮುಖ ಕಾರಣ ಹಾಗೂ ಪ್ರೇರಣೆಗಳೆಂದರೆ ಶರಣ ಧರ್ಮದ ತತ್ವಗಳ ಪ್ರಸಾರ ಮಾಡುವುದು ಹಾಗೂ ಅಂದಿನ ಸಮಾಜದಲ್ಲಿನ ಅಸಮಾನತೆಯನ್ನು ಹೊಡೆದೋಡಿಸುವುದು. ಹನ್ನೊಂದನೆಯ ಶತಮಾನದಲ್ಲಿ ಈ ಕಾರ್ಯವನ್ನು ಕೈಗೊಂಡವರು ಕೊಂಡಗುಳಿ ಕೇಶಿರಾಜ, ಕೆಂಬಾವಿ ಭೋಗಣ್ಣ, ಶಂಕರದಾಸಿಮಯ್ಯ, ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಸಕಳೇಶ ಮಾದರಸ, ಜೇಡರದಾಸಿಮಯ್ಯ ಹಾಗೂ ಚಂದ
APA, Harvard, Vancouver, ISO, and other styles
10

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
APA, Harvard, Vancouver, ISO, and other styles
11

., ಡಾ ಎಂ ಬಿ ಸುರೇಶ. "ವಚನ ಸಾಹಿತ್ಯದಲ್ಲಿ ನೈತಿಕ ಮೌಲ್ಯಗಳು". International Journal of Kannada Research 9, № 4 (2023): 194–97. http://dx.doi.org/10.22271/24545813.2023.v9.i4c.919.

Full text
APA, Harvard, Vancouver, ISO, and other styles
12

ಸತ್ಯಮಂಗಲ, ಮಹಾದೇವ. "ವಚನ ಸಾಹಿತ್ಯದಲ್ಲಿ ಜೀವನಕೌಶಲ್ಯದ ಆಯಾಮಗಳು". AKSHARASURYA JOURNAL 05, № 04 (2024): 47 to 53. https://doi.org/10.5281/zenodo.14289637.

Full text
Abstract:
ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಜೀವನ ಕೌಶಲ್ಯಗಳನ್ನು ಬದುಕಿನ ಮೌಲ್ಯಗಳಾಗಿ ಅಳವಡಿಸಿಕೊಂಡು ‘ಅರಿತೆಡೆ ಶರಣ ಮರೆತೆಡೆ ಮಾನವ’ ಎಂಬ ಮಾತನ್ನು ಸಾಕ್ಷೀಕರಿಸುವಂತೆ ಬದುಕಿದವರು ಶಿವಶರಣರು. ವಚನ ರೂಪದಲ್ಲಿ ಬರೆದ ಅವರ ಅನುಭವದ ನುಡಿಗಳು, ಅವುಗಳಲ್ಲಿ ಅಡಗಿರುವ ಜೀವ ಕೌಶಲ್ಯಗಳನ್ನು, ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ 10 ಮುಖ್ಯವಾದ ಜೀವನ ಕೌಶಲ್ಯಗಳನ್ನು ತೌಲನಿಕವಾಗಿ ಅಧ್ಯಯನ ನಡೆಸಿ, ಜೀವನ ಕೌಶಲ್ಯಗಳನ್ನು ಒಳಗೊಂಡಿರುವ ವಚನಗಳನ್ನು ವಿಶ್ಲೇಷಿಸಲಾಗಿದೆ. ವಚನಗಳ ಅರ್ಥ, ವ್ಯಾಪ್ತಿ ಮತ್ತು ದೃಷ್ಟಿಕೋನ ವಿಶಾಲವಾದದ್ದು ಮನೋವೈಜ್ಞಾನಿಕವಾಗಿ ಅಧ್ಯಯನ ನಡೆಸಿದಾಗ ಅದು ಸಮುದ್ರದ ಅಲೆಗಳಂತೆ ಭಿನ್ನವೂ ಮತ್ತು ವೈವಿದ್ಯಪೂರ್ಣವೂ ಆದ ಅರ್ಥವಿವೇಚನೆಯ ಸಾಧ್ಯತೆಗಳನ್ನು ಓದುಗರಿಗೆ ತೆರೆದಿಡುವುದರ ಜೊತೆಗೆ ಇಂದಿನ ಒತ್ತಡಯುಕ್ತ ಬದುಕಿನಲ್ಲಿ ಕೌಶಲ
APA, Harvard, Vancouver, ISO, and other styles
13

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Full text
Abstract:
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು”. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
APA, Harvard, Vancouver, ISO, and other styles
14

ಅನುಷ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 72 to 77. https://doi.org/10.5281/zenodo.15490928.

Full text
Abstract:
ಪ್ರಸ್ತುತ ಲೇಖನದಲ್ಲಿ ಹನ್ನೆರಡನೇಯ ಶತಮಾನದಲ್ಲಿದ್ದ ವಚನ ಸಾಹಿತ್ಯದ ಸಾಮಾಜಿಕ ಚಿಂತನೆಗಳು ವ್ಯಕ್ತವಾಗಿವೆ. ಆ ಕಾಲದಲ್ಲಿದ್ದ ಸಾಮಾಜಿಕ ಮೌಲ್ಯ ಪರಿವರ್ತನೆ ವಚನಕಾರರು ಸಮಾನ ನಾಯಕತ್ವವನ್ನು ಅನುಸರಿಸಿದ್ದು, ಜಾತಿ - ಧರ್ಮ, ಲಿಂಗ ತಾರತಮ್ಯ, ಮೇಲು - ಕೀಳು, ವಿಗ್ರಹಾರಾಧನೆ ದೇವಸ್ಥಾನಗಳ ನಿರ್ಮಾಣವನ್ನು ಖಂಡಿಸಿದರು ಹಾಗೂ ಇದಕ್ಕೆಲ್ಲ ವಿರೋಧಿಯಾಗಿದ್ದರು. ವೀರಶೈವ ಧರ್ಮದ ಪಂಚ ಸೂತ್ರಗಳು ಕಾಯಕದ ಮಹತ್ವವನ್ನು ತಿಳಿಸಿರುವುದು ಎಲ್ಲರಲ್ಲಿಯೂ ಸಮಾನತೆಯ ಭಾವ ಅಂದಿನ ಕಾಲಕ್ಕೆ ಹೇಗಿತ್ತು. ವಚನಕಾರರಾದ ಬಸವಣ್ಣನವರು ಮತ್ತು ಅಕ್ಕಮಹಾದೇವಿಯವರ ವಚನಗಳ ಗ್ರಹಿಕೆ, ವಚನ ಸಾಹಿತ್ಯ ಇಂದಿನ ಸಮಾಜಕ್ಕೆ ಏಕೆ ಪ್ರಸ್ತುತ ಹಾಗೂ ಸಣ್ಣದೊಂದು ಪದ್ಯವನ್ನು ವಿಷಯದ ಕುರಿತು ಒಳಗೊಂಡಿದೆ. 
APA, Harvard, Vancouver, ISO, and other styles
15

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
16

ಸುಂದರಿ, ಡಿ. "ವಚನ ಚಳುವಳಿ ಮತ್ತು ಸಶಕ್ತ ಮಹಿಳೆ". International Journal of Kannada Research 3, № 4 (2017): 44–46. https://doi.org/10.22271/24545813.2017.v3.i4a.1072.

Full text
APA, Harvard, Vancouver, ISO, and other styles
17

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
18

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Full text
Abstract:
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
APA, Harvard, Vancouver, ISO, and other styles
19

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
20

ಸಿ., ನಾಗಭೂಷಣ. "ಗುಮ್ಮಳಾಪುರದ ಸಿದ್ಧಲಿಂಗ ಯತಿಗಳ ಶೂನ್ಯ ಸಂಪಾದನೆ: ಕೆಲವು ಟಿಪ್ಪಣಿಗಳು". AKSHARASURYA 06, № 02 (2025): 01 to 19. https://doi.org/10.5281/zenodo.15123743.

Full text
Abstract:
ಅಭಿನವ ಅಲ್ಲಮರೆಂದು ಖ್ಯಾತರಾದ ತೋಂಟದ ಸಿದ್ಧಲಿಂಗಯತಿಗಳು, ತಮ್ಮ ಶಿಷ್ಯ-ಪ್ರಶಿಷ್ಯ ಪರಂಪರೆಯ ಮೂಲಕ, ಗ್ರಂಥಸಂಪಾದನೆಯ ವಿಧಿವಿಧಾನಗಳನ್ನು ಅನ್ವಯಿಸಿ ವಚನಗಳನ್ನು ಸಂಕಲಿಸುವ ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ಕೈಗೊಂಡಿರುವುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿಯೇ ವಿಶಿಷ್ಟವಾದುದಾಗಿದೆ. ವಚನ ರಚನೆ ಹಾಗೂ ವಚನ ರಕ್ಷಣೆ, ವ್ಯಾಖ್ಯಾನ ಎರಡರಲ್ಲಿಯೂ ಸ್ಥಾನ ಪಡೆದಿದ್ದಾರೆ. ವಚನಗಳನ್ನು ಸಂಕಲಿಸುವ, ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ತಮ್ಮ ಶಿಷ್ಯ ಪ್ರಶಿಷ್ಯ ಪರಂಪರೆಯ ಮೂಲಕ ಅನುಷ್ಠಾನಗೊಳಿಸಿದರು. “ಕಲ್ಯಾಣ ಕ್ರಾಂತಿಯ ವಿಪ್ಲವದ ನಂತರ ಅಳಿದುಳಿದ ವಚನ ಸಾಹಿತ್ಯವನ್ನು ಸಂರಕ್ಷಿಸುವ ಶೋಧಿಸುವ, ಸಂಕಲಿಸುವ, ವ್ಯಾಖ್ಯಾನಿಸುವ ಮೂಲಕ ಕಾಪಾಡಿಕೊಂಡು ಬರಲು 15 ಮತ್ತು 16 ನೇ ಶತಮಾನದ ಸಂಕಲನಕಾರರು ಕಾರಣರಾಗಿದ್ದಾರೆ.
APA, Harvard, Vancouver, ISO, and other styles
21

ಶ್ರೀದೇವಿ та ಕುಂಬ್ಳೆ ಧನಂಜಯ. "ಶ್ರೀ ದೇವೀ ಮಹಾತ್ಮೆ ಮತ್ತು ಭಕ್ತಿ ಪರಂಪರೆ". AKSHARASURYA JOURNAL 04, № 04 (2024): 53 to 62. https://doi.org/10.5281/zenodo.13284021.

Full text
Abstract:
ನಮ್ಮ ಸಂಸ್ಕೃತಿಯಲ್ಲಿ ಹಲವು ರೂಪಗಳೊಂದಿಗೆ, ಹಲವು ಮಾರ್ಪಾಡುಗಳೊಂದಿಗೆ ಭಕ್ತಿ ಪರಂಪರೆಯು ನಾಡಿನಾದ್ಯಂತ ಹಬ್ಬಿಕೊಂಡು ಬಂದಿದೆ. ಸಾಹಿತ್ಯಕವಾಗಿಯೂ, ಸಾಂಸ್ಕೃತಿಕವಾಗಿಯೂ ಭಕ್ತಿ ಪರಂಪರೆಯು ಹಲವು ಆಯಾಮಗಳಲ್ಲಿ ಬಹುಮುಖ್ಯ ಸ್ಥಾನವನ್ನು ಪಡೆದುಕೊಳ್ಳುತ್ತದೆ. ಇದರಿಂದಾಗಿ ಜನಸಾಮಾನ್ಯರಲ್ಲಿರುವ ಭಕ್ತಿಯ ಭಾವ ಹಲವಾರು ವಿಧಾನಗಳ ಮೂಲಕ ಪ್ರಕಟಗೊಳ್ಳುತ್ತದೆ. ದೇವರನ್ನು ಪ್ರೀತಿಯಿಂದ, ಶ್ರದ್ಧಾ-ಭಕ್ತಿಯಿಂದ, ಆತ ನಮ್ಮವನೇ ಎಂಬ ಸಲಿಗೆಯಿಂದ, ಸಮರ್ಪಣಾ ಭಾವದಿಂದ ಹಲವರು ಹಲವು ರೀತಿಯಲ್ಲಿ ಒಲಿಸಿಕೊಳ್ಳುವ, ಸಾಕ್ಷಾತ್ಕರಿಸಿಕೊಳ್ಳುವ ಪ್ರಯತ್ನ ಭಕ್ತಿ ಪರಂಪರೆಯ ಪ್ರಾಮುಖ್ಯತೆ ಎಷ್ಟಿದೆ ಎಂಬುದನ್ನು ಹೇಳುತ್ತದೆ. ದೇವರ ಅನುಗ್ರಹಕ್ಕಾಗಿ ಜನರು ಇಂತಹ ವಿವಿಧ ಭಕ್ತಿ ಮಾರ್ಗದ ಮೂಲಕ ಪ್ರಯತ್ನಿಸುವುದೇ ಭಕ್ತಿ ಪರಂಪರೆಯ ವೈಶಿಷ್ಟ್ಯತೆ.ಭಕ್ತಿ ಪರಂಪರೆ ಎಂದಾಕ್ಷಣ
APA, Harvard, Vancouver, ISO, and other styles
22

ಶಂಕರ್, ಜ್ಯೋತಿ, та ಮಮತ ಬಿ ಆರ್. "ಶಿವಶರಣೆಯರ ವಚನಗಳಲ್ಲಿ ಪ್ರಾಣಿ ಪ್ರತಿಮೆ". Shanlax International Journal of Arts, Science and Humanities 12, S1-Oct (2024): 219–23. https://doi.org/10.34293/sijash.v12is1-oct.8308.

Full text
Abstract:
ಜಗತ್ತಿನ ಸಾಂಸ್ಕೃತಿಕ ಇತಿಹಾಸವನ್ನು ಗಮನಿಸಿದರೆ ನಮ್ಮ ಕನ್ನಡ ನಾಡಿನ ಶರಣಸಂಸ್ಕೃತಿಯು ಮಹತ್ತರವಾದುದು. ೧೨ನೇ ಶತಮಾನದಲ್ಲಿ ಪ್ರವರ್ಧಮಾನಕ್ಕೆ ಬಂದ ಶರಣ ಸಂಸ್ಕೃತಿ ಹಾಗೂ ವಚನ ಸಾಹಿತ್ಯವು ಅಂದಿನ ಸಮಾಜದಲ್ಲಿ ನೆಲೆಯೂರಿದ್ದ ಅನೇಕ ಮೂಢನಂಬಿಕೆಗಳು, ಅಂಧಶ್ರದ್ಧೆಗಳು, ಅಂಧ ಆಚರಣೆಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಲು ಸಹಾಯಕವಾಗಿದ್ದವು. ಬಸವಣ್ಣನವರಿಂದ ಸ್ಥಾಪಿತವಾದ ಅನುಭವ ಮಂಟಪದಲ್ಲಿ ಎಲ್ಲಾ ಶರಣರು ತನ್ನ ಅನುಭವ, ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದಕ್ಕಾಗಿ ಅವರು ಬಳಸಿಕೊಂಡ ಮಾಧ್ಯಮವೇ ವಚನಗಳು. ಶಿವಶರಣರು ಸಮಾಜದಲ್ಲಿ ಕಂಡ ಅನೇಕ ವಿಷಯಗಳನ್ನು ತಮ್ಮ ಮನದ ಅಂತರಾಳದಲ್ಲಿ ತುಡಿಯುತ್ತಿರುವ ಭಾವನೆಗಳನ್ನು ಸಮರ್ಪಕವಾಗಿ ವ್ಯಕ್ತಪಡಿಸಲು ಅನೇಕ ಪ್ರತಿಮೆಗಳನ್ನು ಬಳಸಿಕೊಂಡರು. ಅವುಗಳಲ್ಲಿ ಪ್ರಾಣಿ ಪ್ರತಿಮೆ ಕೂಡ ಒಂದಾಗಿದೆ.
APA, Harvard, Vancouver, ISO, and other styles
23

ಚನ್ನವೀರಯ್ಯ. "ವಚನಗಳಲ್ಲಿನ ಜಾತಿ ಪದ್ಧತಿ ಮತ್ತು ಮೌಢ್ಯಗಳ ವಿಶ್ಲೇಷಣೆ". AKSHARASURYA 05, № 02 (2024): 135 to 142. https://doi.org/10.5281/zenodo.14035388.

Full text
Abstract:
ಹನ್ನೇರಡನೇ ಶತಮಾನವನ್ನು ವಚನ ಸಾಹಿತ್ಯದ ಪರ್ವಕಾಲ ಎಂದು ಕರೆಯಬಹುದು. ಏಕೆಂದರೆ ಜನಸಾಮಾನ್ಯರ ಆಡುಭಾಷೆಯ ಮೂಲಕ ಕನ್ನಡಭಾಷೆಯನ್ನು ಉತ್ತುಂಗಕ್ಕೆ ಏರಿಸಿದ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ. ಬಹು ಮುಖ್ಯವಾಗಿ ಜಾತಿ, ಮತ, ವರ್ಗ, ವರ್ಣ, ಮೇಲು, ಕೀಳು ಹಾಗೂ ಸಾಮಾಜಿಕ ಪಿಡುಗುಗಳಾದ ಮೂಢನಂಬಿಕೆಗಳು ಅನಿಷ್ಟಪದ್ದತಿಗಳ ಆಚರಣೆಯಿಂದ ಸಮಾಜದ ಅಭಿವೃದ್ಧಿಗೆ ಮಾರಕವಾದುದು ಎಂಬುದನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿ ಸಾಮಾಜಿಕ ಬದಾಲಾವಣೆಗೆ ಮುನ್ನುಡಿ ಬರೆದು ನವಮನ್ವಂತರಕೆ ದಾರಿ ದೀಪವಾದವರು. ಆ ಮೂಲಕ ಸಮಾಜದ ಪರಿವರ್ತನೆಗೆ ಶ್ರಮಿಸಿದರು. ಸಾಮಾಜಿಕ ಬದಲಾಣೆಯ ಜೊತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಅಂತಹ ಕೆಲವು ವಚನಕಾರರ ವಚನಗಳ ವಿಶ್ಲೇಷಣೆ ಈ ಲೇಖನದಲ್ಲಿ ಚರ್ಚಿಸಲಾಗಿದೆ.
APA, Harvard, Vancouver, ISO, and other styles
24

ಬೋರಯ್ಯ, ಪಿ. ಕೆ. "ತತ್ವಪದಕಾರ ಲಿಂಗಯ್ಯನವರ ತತ್ವಪದಗಳ ಜೀವಾಳ". AKSHARASURYA 05, № 02 (2024): 42 to 49. https://doi.org/10.5281/zenodo.14034913.

Full text
Abstract:
ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಹಾಗೂ ವೇದ ಉಪನಿಷತ್ತುಗಳಿಂದ ಪ್ರಭಾವಿತರಾದ ಲಿಂಗಯ್ಯನವರು ತತ್ವಪದಕಾರರಾಗಿ, ವೇದಾಂತಿಗಳಾಗಿ, ಒಬ್ಬ ಆದರ್ಶ ಶಿಕ್ಷಕರಾಗಿ, ಕವಿಗಳಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಆಧ್ಯಾತ್ಮಿಕ ಕಥೆಗಳು, ನಾಟಕ, ಜೀವನ ಚರಿತ್ರೆ, ಸಾವಿರಾರು ತತ್ವಪದಗಳನ್ನು ಬರೆದು, ಸಾಮಾಜಿಕ ವ್ಯವಸ್ಥೆಯಲ್ಲಿ ಬಡವರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟವನ್ನು ಮಾಡುವುದರ ಮೂಲಕ ಜನರಲ್ಲಿ, ಶಾಂತಿ ಸಾಮರಸ್ಯದ ಬೆಳಕನ್ನು ಚೆಲ್ಲವುದರ ಕಡೆಗೆ ಮುಖ ಮಾಡಿ ಚಲಿಸಿದ್ದೆ ಅಪಾರ. ವೈದಿಕರನ್ನು ಮತ್ತು ವೈದಿಕತೆಯನ್ನು ತನ್ನ ಅಂತರಂಗದಿಂದಲೇ ಗ್ರಹಿಸಿ, ಅವರ ಆಚರಣೆಗಳನ್ನು ಪ್ರಶ್ನಿಸಿ, ಅವರು ತಮ್ಮ ತತ್ವಪದಗಳಲ್ಲಿ ವಿಶ್ಲೇಷಿಸಿರುವುದು ಗಮನಾರ್ಹ. ಹಾಗೆಯೇ ಸಮಾಜದಲ್ಲಿ ಅನೇಕ ರೀತಿಯ ಆಚರಣೆಗಳಲ್ಲಿ ಜಾತಿ, ಮತ, ಮಡಿ-
APA, Harvard, Vancouver, ISO, and other styles
25

ವನಜಾಕ್ಷಿ, ಆರ್ ಹಳ್ಳಿಯವರ, та ಕುಮಾರ್ ಜೆ. ಪ್ರವೀಣ್. "ಕನ್ನಡ ಸಾಹಿತ್ಯದಲ್ಲಿ ಮಹಿಳೆಯ ಸ್ಥಾನಮಾನ". AKSHARASURYA JOURNAL 04, № 04 (2024): 68 to 75. https://doi.org/10.5281/zenodo.13284039.

Full text
Abstract:
ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾದುದು. ಚರಿತ್ರೆಯ ಎಲ್ಲಾ ಕಾಲಘಟ್ಟಗಳಲ್ಲೂ‌ ಸಾಹಿತ್ಯದ ಮೂಲಕ ವರ್ತಮಾನದ ತಲ್ಲಣಗಳನ್ನು ವಿಶೇಷವಾಗಿ ಮಹಿಳೆಯ ದುಃಖ ದುಮ್ಮಾನಗಳಿಗೆ ಒತ್ತು ಕೊಟ್ಟು ನೋವುಗಳನ್ನು ಮಹಿಳಾ ಸಾಹಿತಿಗಳು ಹೇಗೆ ಚಿತ್ರಿಸಿದ್ದಾರೆ ಎಂಬುದನ್ನು ಉದಾಹರಣೆಗಳ ಮೂಲಕ ಇಲ್ಲಿ ಚರ್ಚಿಸಲಾಗಿದೆ. ವಚನ ಸಾಹಿತ್ಯದಿಂದ ಹಿಡಿದು ಆಧುನಿಕ ಕನ್ನಡ‌ ಸಾಹಿತ್ಯದ ಉಪಲಬ್ಧವಿರುವ ಮಹಿಳಾ ಸಾಹಿತಿಗಳನ್ನು ಗುರುತಿಸಿ ಪ್ರಾತಿನಿಧಿಕವಾಗಿ ಒಂದು ವಚನವನ್ನು ಮತ್ತು ಆಯ್ದ ಸಾಲುಗಳನ್ನು ಈ ಲೇಖನದಲ್ಲಿ ವಿಮರ್ಶಿಸಲಾಗಿದೆ. ಆ ಮೂಲಕ ಕನ್ನಡ ಸಾಹಿತ್ಯದಿಂದ ಮಹಿಳೆ ಸ್ಥಾನಮಾನವನ್ನು ಅರಿಯುವ ಪ್ರಯತ್ನ ಮಾಡಲಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆ ಸಾಹಿತ್ಯಿಕವಾಗಿ ಎದುರಿಸುತ್ತಿರುವ ಸವಾಲನ್ನು ಕೂಡ ತುಣುಕಾಗಿ ಅರ್ಥೈಸಲಾಗಿದೆ. ಸ
APA, Harvard, Vancouver, ISO, and other styles
26

ಮಾರುತಿ, ಮಂಜಪ್ಪ ಚಲವಾದಿ. "ಮಂಟೇಸ್ವಾಮಿ ಕಾವ್ಯದಲ್ಲಿ ಶಾಕ್ತ-ಶೈವಗಳ ಸಂಘರ್ಷ". AKSHARASURYA JOURNAL 05, № 06 (2025): 41 to 52. https://doi.org/10.5281/zenodo.14788714.

Full text
Abstract:
ಶ್ರಮಣ ಧಾರೆಯು ಈ ನೆಲದ ಅತಿಪುರಾತನವಾದ ವಿಚಾರಧಾರೆ. ಸರ್ವ-ಸಾಮರಸ್ಯಮಯಿಯಾದ ಈ ಧಾರೆ ನಾಡಿನುದ್ದಗಲಕ್ಕೂ ವಿಸ್ತರಿಸಿತ್ತು. ಕಾಲ-ಪಲ್ಲಟದಿಂದಾಗಿ ಬಹುತ್ವವನ್ನು ಕೊಲ್ಲುವ ಏಕತ್ವದ ವಲಸೆ ಧಾರೆ ಇಲ್ಲಿನ ಸಮತೆಯೊಳಗೆ ಅಸಮತೆಯ ವಿಷಬೀಜ ಬಿತ್ತಿ ತನ್ನ ಕಾರ್ಯವನ್ನು ಸಾಧು ಮಾಡಿಕೊಂಡಿತು. ಈ ವಿಷಬೀಜ ಮುಂದೆ ಗಿಡವಾಗಿ, ಮರವಾಗಿ ಎಲ್ಲೆಡೆಯು ಹಬ್ಬಿ ವಿಷಲೀನವಾಗುವ ಹೊತ್ತಿನಲ್ಲಿ ವಿಷಕಂಠರಾಗಿ ಬುದ್ಧ, ನಾಗಾರ್ಜುನ, ಸರಹಪಾದ, ಚಾರ್ವಾಕ, ಮುಂದೆ ಕನ್ನಡ ನಾಡಿನಲ್ಲಿ ಇದಕ್ಕೆ ವಚನ ಚಳವಳಿ ಕೈಜೋಡಿಸಿ ಬುಡ ಸಮೇತ ಕಿತ್ತೊಗೆಯುವ ಕಾರ್ಯ ಕೈಗೊಂಡರು. ವಿಷಪ್ರೇರಿತ ವೈದಿಕ ಚಿಂತನೆಯನ್ನು ಬಗ್ಗುಬಡಿಯಲು ಮಧ್ಯಕಾಲೀನ ಸಂದರ್ಭದಲ್ಲಿ ಅನೇಕ ತಾಂತ್ರಿಕರು ಬೀದಿಗಿಳಿದರು. ಅಂತಹ ಮಹತ್ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದವನು ಮಂಟೇಸ್ವಾಮಿ. ಅವೈದಿಕದೊಳಗುದಿಸುತ್ತಿದ್ದ ವೈದಿ
APA, Harvard, Vancouver, ISO, and other styles
27

ಮಾಧವ, ಎಂ. ಕೆ. "ಬಸವಣ್ಣನ ವಚನಗಳಲ್ಲಿ ಸಮ ಸಮಾಜದ ಪ್ರಸ್ತುತತೆ". AKSHARASURYA 04, № 02 (2024): 27 to 32. https://doi.org/10.5281/zenodo.11525708.

Full text
Abstract:
ಕನ್ನಡ ಸಾಹಿತ್ಯದಲ್ಲಿ ೧೨ನೇ ಶತಮಾನವನ್ನು ವಚನಗಳ ಯುಗವೆಂದು ಕರೆಯಲಾಗುತ್ತದೆ. ಬಸವಣ್ಣ ವಚನ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದವನು. ತನ್ನ ವಚನಗಳ ಮೂಲಕ ‘ಕಾಯಕವೇ ಕೈಲಾಸ’ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದರು. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಆರಿಸಿ ಹೊರಟ ದಾರ್ಶನಿಕ ಬಸವಣ್ಣ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು
APA, Harvard, Vancouver, ISO, and other styles
28

ಶಂಕರ್ಸ, ಜ್ಯೋತಿ, та ಮಾರುತಿ ಜಿ. "ಹರಿದಾಸ ಸಾಹಿತ್ಯದ ಉಗಮ ಮತ್ತು ವಿಕಾಸ". Shanlax International Journal of Arts, Science and Humanities 12, S1-Oct (2024): 250–53. https://doi.org/10.34293/sijash.v12is1-oct.8316.

Full text
Abstract:
ಕರ್ನಾಟಕದಲ್ಲಿ ಮಧ್ಯಕಾಲೀನ ಕನ್ನಡ ಸಾಹಿತ್ಯವು ಸಾಂಸ್ಕೃತಿಕ ಇತಿಹಾಸದ ದೃಷ್ಟಿಯಿಂದ ಅತ್ಯಂತ ಮಹತ್ವ ಪೂರ್ಣವಾದ ಕಾಲಘಟ್ಟವಾಗಿದೆ. ನಡುಗನ್ನಡ ಸಾಹಿತ್ಯವು ಪ್ರಮುಖವಾಗಿ ವಚನ ಸಾಹಿತ್ಯ, ಹರಿದಾಸ ಸಾಹಿತ್ಯ ಪರಂಪರೆಯ ತನ್ನದೇ ಆದ ತಾತ್ವಿಕ ನಿಲುವುಗಳೊಂದಿಗೆ ಕನ್ನಡ ಸಾಹಿತ್ಯ ಚರಿತ್ರೆಯ ಪ್ರಮುಖ ಘಟ್ಟವಾಗಿದೆ. ಶಾಸ್ತç ಸಾಹಿತ್ಯಗಳಿಗೆ ಪ್ರಮುಖ ಆಧಾರ- ‘ಮಾನವನ ಬದುಕು-ಬದುಕುವ ಬಗೆ”೧ ಎಂಬುದಾಗಿದೆ. ಪುರಂದರದಾಸರು ಹೇಳುವ “ಮಾನವ ಜನ್ಮ ದೊಡ್ಡದು,ಇದನು ಹಾನಿ ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರಾ”, “ಈಸಬೇಕು ಇದ್ದು ಜಯಿಸಬೇಕು” ‘ಚಿಂತನಾ ಲಹರಿಯು ಮೂಲ ಬೇರುಗಳನ್ನು ‘ಶಾಸ್ತç ಸಾಹಿತ್ಯ’ದಲ್ಲಿ ಮನಗಾಣಬಹುದು. ಆದ್ದರಿಂದ ಹರಿದಾಸರಲ್ಲಿರುವ ಬಾಳಿನ ಚಿಂತನೆಗಳ ಮೂಲ ನೆಲೆಗಟ್ಟು, ವ್ಯಕ್ತಿತ್ವ ವಿಚಾರಗಳಿಗೆ ಸ್ಫೂರ್ತಿ- ಭಾರತೀಯ ಶಾಸ್ತçದಲ್ಲಿನ ತಳಹದಿಯ ವಿಚಾ
APA, Harvard, Vancouver, ISO, and other styles
29

ಉಮಾಶಂಕರ, ಓ. ಎಂ. "ನಾಗಚಂದ್ರನ ಪಂಪರಾಮಾಯಣದಲ್ಲಿ 'ಲಕ್ಷ್ಮಣ'". AKSHARASURYA JOURNAL 04, № 06 (2024): 55 to 62. https://doi.org/10.5281/zenodo.13724671.

Full text
Abstract:
ಕಾವ್ಯದ ಪಾತ್ರಗಳನ್ನು ಸಮಾಜಮುಖಿಯಾಗಿಸುವುದು ಕವಿಯ ಸಾಮಾಜಿಕ ಕಾಳಜಿಯ ಪ್ರತೀಕವಾಗಿದೆ. ಇಂತಹ ಪಲ್ಲಟಾತ್ಮಕ ಚಿಂತನೆಯನ್ನು ಭಾರತದ ವಿವಿಧ ಬುಡಕಟ್ಟುಗಳ ರಾಮಾಯಣ-ಮಹಾಭಾರತದ ಕಥೆಗಳಲ್ಲಿ ಕಾಣುವಂತೆ ನಾಗಚಂದ್ರನ ರಾಮಚಂದ್ರಚರಿತ ಪುರಾಣಂನಲ್ಲೂ ಕಾಣಬಹುದಾಗಿದೆ. ನಾಗಚಂದ್ರನ ಮಾತುಗಾರಿಕೆ, ಮನುಷ್ಯ ಸ್ವಭಾವದ ಪರಿಚಯ, ಶ್ರೇಷ್ಠ ರೀತಿಯ ಪಾತ್ರ ಚಿತ್ರಣ ಇವುಗಳು ಉನ್ನತ ಮಟ್ಟದವು. ಈ ಕಾವ್ಯವು ರಾಮಕೇಂದ್ರಿತ ಕಥನವೇ ಆದರೂ ಪೂರ್ಣಕಾವ್ಯವನ್ನು ಲಕ್ಷಿಸಿದಾಗ ಲಕ್ಷ್ಮಣನು ಅನುನಾಯಕ ಅಥವಾ ಉಪನಾಯಕ ಎನ್ನುವುದಕ್ಕಿಂತ ‘ನಾಯಕನೇ ಹೌದು’ ಎಂಬಂತೆ ಕಾವ್ಯಾಭ್ಯಾಸಕರಿಗೆ ಕಾಣುತ್ತಾನೆ. ಕಾವ್ಯದ ಉದ್ದಕ್ಕೂ ಕಾಣುವ ಕಾರ್ಯೋತ್ಸುಕತೆಯೂ ಪೌರುಷವು ಲಕ್ಷ್ಮಣನದು. ಲಕ್ಷ್ಮಣನು ಕಥಾನಾಯಕನಲ್ಲ. ಆದರೆ ಕಥೆಯ ಉದ್ದಕ್ಕೂ ಪಾತ್ರವಹಿಸಿದ್ದಾನೆ. ರಾಮನು ಪಿತೃವಚನ ಪ
APA, Harvard, Vancouver, ISO, and other styles
30

ಶೋಭಾರಾಣಿ, ಎನ್. "ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಪಾಶುಪತ-ಕಾಳಾಮುಖ ಸಾಧನ ಪಂಥ". AKSHARASURYA 03, № 05 (2024): 61–67. https://doi.org/10.5281/zenodo.10938065.

Full text
Abstract:
ಭಾರತೀಯ ಮತ್ತು ವಿಶೇಷವಾಗಿ ಕರ್ನಾಟಕದ ಆಧ್ಯಾತ್ಮಿಕ ಆರಾಧನಾ ಪಂಥಗಳಲ್ಲಿ ಪಾಶುಪತ-ಕಾಳಾಮುಖ ಪಂಥವು ಬಹು ಮುಖ್ಯವಾದುದು. ಆಧ್ಯಾತ್ಮಿಕ ಪರಂಪರೆಯ ಹಿನ್ನೆಲೆಯಲ್ಲಿ ಮಾತ್ರವಲ್ಲದೇ, ದೇವಾಲಯ ಮತ್ತು ವಾಸ್ತುಶಿಲ್ಪ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೂಡ ಈ ಸಾಧನಾ ಪಂಥದ ಸಾಧಕರು ನೀಡಿರುವ ಕೊಡುಗೆ ಅಪಾರವಾದುದು. ಕರ್ನಾಟಕದ ಬಹುತೇಕ ದೇವಾಲಯಗಳು ಪಾಶುಪತ-ಕಾಳಾಮುಖರಿಂದ ನಿರ್ಮಾಣಗೊಂಡಿವೆ. ಒಂದು ಕಾಲದಲ್ಲಿ ಅಂದರೆ ಕ್ರಿ.ಶ. 12ನೇ ಶತಮಾನಕ್ಕಿಂತ ಸಾಕಷ್ಟು ಪೂರ್ವದಲ್ಲೆ ಈ ಮಾರ್ಗವು ಕರ್ನಾಟಕದಲ್ಲಿ ಪ್ರಮುಖ ಆಧ್ಯಾತ್ಮಿಕ ಮಾರ್ಗವಾಗಿ ಪ್ರಭಾವಶಾಲಿಯಾಗಿತ್ತು. ಹಲವು ರಾಜರುಗಳು ಈ ಮಾರ್ಗಕ್ಕೆ ಪ್ರೋತ್ಸಾಹ ಮತ್ತು ಆಶ್ರಯವನ್ನು ನೀಡಿದ್ದಲ್ಲದೆ, ಸ್ವತಃ ಇದರ ಅನುಯಾಯಿಗಳೂ ಆಗಿದ್ದ ಉದಾಹರಣೆಗಳಿವೆ. ಲಾಕುಳೀಶ, ಕಾಳಾಮುಖ, ಪಾಶುಪತ, ಕಾಪಾಲಿಕ ಮೊದಲಾದ ದಕ್ಷಿಣಾಚ
APA, Harvard, Vancouver, ISO, and other styles
31

ಲಕ್ಷ್ಮಿದೇವಿ, ಎನ್‌. "ಬಾಚಿಕಾಯಕದ ಕಾಳವ್ವೆಯ ವಚನದಲ್ಲಿ ಕಾಯಕ, ಮಾತು ಮತ್ತು ವ್ರತ ಪ್ರಜ್ಞೆ". AKSHARASURYA 04, № 03 (2024): 117 to 124. https://doi.org/10.5281/zenodo.12672873.

Full text
Abstract:
ವಚನಗಳಲ್ಲಿ ನಾವು ವಿಚಾರ ಸ್ವಾತಂತ್ರ್ಯದ ಪರಾಕಾಷ್ಟೆಯನ್ನು ಕಾಣುತ್ತೇವೆ. “ಉದರ ನಿಮಿತ್ತಂ ಬಹುಕೃತ ವೇಷಂ” ಎಂಬ ಮಾತೊಂದಿದೆ. ಹೊಟ್ಟೆ ಹೊರೆಯುವುದಕ್ಕಾಗಿ ಮಾನವ ಅನೇಕ ವೇಷಗಳನ್ನು ಕೈಗೊಳ್ಳುತ್ತಾನೆ. ಆದರೆ ಶರಣರು ಹೊಟ್ಟೆ ಹೊರೆಯುವ ಕಾಯಕದ ಮೂಲಕ ದಾಸೋಹ ಸಿದ್ಧಾಂತವನ್ನು ಅನುಭಾವದ ಮೂಲಕ ಸಮಾಜಕ್ಕೆ ಸಾರಿದವರು. ಅಸಮಾನತೆಯ ಸಮಾಜದಲ್ಲಿ ಶೂದ್ರರಿಗೆ, ಅಸ್ಪೃಶ್ಯರಿಗೆ, ಹೆಣ್ಣಿಗೆ ಸಮಾನ ಸ್ಥಾನಮಾನವನ್ನು ತಂದುಕೊಟ್ಟ ಕೀರ್ತಿ ಬಸವಣ್ಣನರಿಗೆ ಸಲ್ಲುತ್ತದೆ. ೧೨ನೇ ಶತಮಾನದ ಸಮಾಜದಲ್ಲಿ ಅಕ್ಷರ ಕ್ರಾಂತಿಯ ಮೂಲಕ ಸ್ತ್ರೀ-ಪುರುಷ ಸಮಾನತೆಯನ್ನು ಪಡೆದದ್ದು ಪವಾಡವೇ ಸರಿ. ಅದರಲ್ಲೂ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಮಹಿಳೆ ಅನುಭವ ಮಂಟಪದ ಗೋಷ್ಠಿಯಲ್ಲಿ ಪುರುಷನಷ್ಟೇ ಸಮಾನತೆಯನ್ನು ಕೈಗೊಂಡಿದ್ದು ಸಮಾಜಿಕ ಕ್ರಾಂತಿ ಎನ್ನಬಹುದು. ಅವರಲ್ಲಿ
APA, Harvard, Vancouver, ISO, and other styles
32

ಗಣೇಶ, (ಚಿಕ್ಕಮಗಳೂರು ಗಣೇಶ). "ಹಿಂದುಳಿದ ವರ್ಗಗಳ ಚಳವಳಿ: ಚಾರಿತ್ರಿಕ ಹಿನ್ನೆಲೆ, ಸ್ವರೂಪ ಹಾಗೂ ಮಹತ್ವ". AKSHARASURYA JOURNAL 03, № 04. SPECIAL ISSUE. (2024): 38 to 49. https://doi.org/10.5281/zenodo.10929675.

Full text
Abstract:
ಕನ್ನಡ ನೆಲದಲ್ಲಿ ಬಸವಣ್ಣನ ಸಾಂಸ್ಕೃತಿಕ ನಾಯಕತ್ವದಲ್ಲಿ ವಚನ ಸಾಹಿತ್ಯಾಭಿವ್ಯಕ್ತಿಯ ಮೂಲಕ ಜರುಗಿದ ಸಮಾನತೆಯ ಚಿಂತನೆಯ ಹೋರಾಟ ಚರಿತ್ರೆಯಲ್ಲಿ ಮಹತ್ವದ್ದಾಗಿದೆ. ಅದು ಸಂಭವಿಸಿದ ಕಾಲ 12ನೆಯ ಶತಮಾನ. ಅದರ ತರುವಾಯ 19ನೆಯ ಶತಮಾನದಲ್ಲಿ ‘ಬ್ರಾಹ್ಮಣ್ಯ ಆಡಳಿತಶಾಹಿ ಯಜಮಾನಿಕೆ’ ವಿರುದ್ಧ ಹಿಂದುಳಿದ ವರ್ಗಗಳನ್ನು ಜಾಗೃತಿಗೊಳಿಸಲು ಕೆಳಕಾಣಿಸಿದ ಹೋರಾಟಗಳು ಮಹತ್ವದ ಪಾತ್ರ ವಹಿಸಿದವು. ಮಹಾರಾಷ್ಟ್ರದ ಜೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ದಂಪತಿಗಳು ‘ಸತ್ಯಶೋಧಕ ಸಮಾಜ’ದ ಮುಖಾಂತರ, ಬ್ರಾಹ್ಮಣ್ಯ ಪ್ರಾಬಲ್ಯದ ವಿರೋಧ-ಶೂದ್ರ ದಲಿತರಿಗೆ ಸಮಾನತೆಯ ಹಕ್ಕು-ಮಹಿಳೆಯರ ಶಿಕ್ಷಣದ ಸಲುವಾಗಿ ಹಗಲಿರುಳು ಹೋರಾಡಿದರು. ಶಾಹು ಮಹಾರಾಜರು ತಮ್ಮ ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಬ್ರಾಹ್ಮಣೇತರರಿಗೆ ಅವಕಾಶ ನೀಡುವ ಉದ್ದೇಶದಿಂದ ಉದ
APA, Harvard, Vancouver, ISO, and other styles
33

ಗಣೇಶ. "ಧರ್ಮ ಮತ್ತು ಅಂಬೇಡ್ಕರ್‌". AKSHARASURYA JOURNAL 06, № 05 (2025): 46 to 53. https://doi.org/10.5281/zenodo.15504212.

Full text
Abstract:
ಅಂಬೇಡ್ಕರ್‌ ಭಾರತದ ಒಬ್ಬ ಶ್ರೇಷ್ಠ ಪ್ರತಿಭಾವಂತ ಬುದ್ಧಿ ಜೀವಿ ಮತ್ತು ಮೇಧಾವಿ. ಪ್ರಪಂಚದ ಅಪ್ರತಿಮ ಚಿಂತಕರ ಸಾಲಿನಲ್ಲಿ ನಿಲ್ಲಬಲ್ಲ, ಮೇರು ವ್ಯಕ್ತಿತ್ವವುಳ್ಳ ಚಿಂತನಶೀಲ ವ್ಯಕ್ತಿ. ಅವರು ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಆಸಕ್ತಿ ಮತ್ತು ಕುತೂಹಲದಿಂದ ಅಮೂಲಾಗ್ರವಾಗಿ ಅಧ್ಯಯನ ಮಾಡಿದ್ದರು. ಧರ್ಮವನ್ನು ಕುರಿತಂತೆ ರಾಬರ್ಟ್ ಸನ್ ಸ್ಮಿತ್ ಅವರ ಪರಿಕಲ್ಪನೆಯನ್ನು ಅಂಬೇಡ್ಕರ್‌ ಹಿಂದೂ ಧರ್ಮದ ತತ್ವಜ್ಞಾವನ್ನು ಕುರಿತ ತಮ್ಮ ಕೃತಿಯಲ್ಲಿ ಹೀಗೆ ಉಲ್ಲೇಖಿಸಿದ್ದಾರೆ. ಧರ್ಮ ಯಾವುದೇ ಕಾರಣಕ್ಕೂ ದುರ್ಬಲರನ್ನು ಶೋಷಿಸುವ ಅಸ್ತ್ರವಾಗಬಾರದು. ಹಿಂದೂ ಧಾರ್ಮಿಕ ವ್ಯವಸ್ಥೆಯಲ್ಲಿ ದೈವಿಕ ಪ್ರಭುತ್ವದ ಲಿಖಿತ ಸಂವಿಧಾನ ಮತ್ತು ಪುರೋಹಿತಶಾಹಿಯ ಅಘೋಷಿತ ಪ್ರಾಬಲ್ಯವನ್ನು ಕಾಪಾಡಿಕೊಂಡು ಬರಲಾಗಿದೆ. ಈ ಧರ್ಮದಲ್ಲಿ ಬಹುಸಂಖ್ಯಾತ ಹಿಂದುಳಿದ
APA, Harvard, Vancouver, ISO, and other styles
34

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Full text
Abstract:
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್‌ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
APA, Harvard, Vancouver, ISO, and other styles
35

ಸುನೀತಾ, ಮಹೇಶ್ವರಿ. "ಬಸವಣ್ಣನವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA 05, № 01 (2024): 134 to 138. https://doi.org/10.5281/zenodo.13871042.

Full text
Abstract:
೧೨ನೇ ಶತಮಾನದ ಆಂದೋಲನದ ನಾಯಕ ಮತ್ತು ಕೇಂದ್ರ ವ್ಯಕ್ತಿ ಆದ ಬಸವಣ್ಣ ಸಾಹಿತ್ಯದೃಷ್ಟಿಯಿಂದ ನೋಡಿದಾಗ ಆತ ಒಬ್ಬ ಅತ್ಯುತ್ತಮ ಕೃತಿಕಾರ ಸಮಾನತೆಯ ತತ್ವವನ್ನು ಸಾರಿದ ಹರಿಕಾರ ಎಂದು ಹೇಳುವುದು ಆಕಸ್ಮಿಕವೇ ಸರಿ. ಆತ ಹುಟ್ಟಿದ್ದು ಬಿಜಾಪುರ್ ಜಿಲ್ಲೆಯ ಬಸವನಬಾಗೇವಾಡಿ ಅಗ್ರಹಾರ ಎಂಬ ಊರಲ್ಲಿ ೧೧೩೪ಲ್ಲಿ ಜನನವಾಯಿತು. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಇವರು ಬಾಲ್ಯದಿಂದಲೇ ವೈದಿಕ ಸಂಸ್ಕೃತಿಯ ವಿರೋಧಿಗಳಾಗಿದ್ದರು. ಇವರು ಹುಟ್ಟಿದ್ದು ಉತ್ತಮ ಬ್ರಾಹ್ಮಣ ಮನೆತನದಲ್ಲಿ ಆದರು ದಲಿತ ವರ್ಗದ ಜೊತೆ ಬೆರೆತು ಅವರಿಗಾಗಿ ತನ್ನ ಜೀವನದುದ್ದಕ್ಕೂ ಹೋರಾಡಿದನೆಂದು ತಿಳಿದು ಬರುತ್ತದೆ. ಹೊಸ ಹೊಸ ಬಗೆಯ ಅನೇಕ ಸುಧಾರಣೆಗಳನ್ನು ಜಾರಿಗೆ ತಂದು ನಮ್ಮ ಆಡಳಿತವನ್ನು ಸರಳಗೊಳಿಸಿದರು. ಎಲ್ಲಾ ಶರಣರನ್ನು ಕೂಡಿಸಿ ಎಲ್ಲಾ ಜಾತಿಯವರೊಡನೆ ತಮ್ಮನ್ನು ತಾವು ತೊಡಗಿಸಿಕೊಂಡು ಸ
APA, Harvard, Vancouver, ISO, and other styles
36

ರೇಷ್ಮಾ, ಟಿ. ಎಸ್. "ಸಂಕ್ರಾಂತಿ ನಾಟಕದ ವಿಭಿನ್ನ ನೆಲೆಗಳು". AKSHARASURYA 03, № 06 (2024): 74 to 85. https://doi.org/10.5281/zenodo.11127096.

Full text
Abstract:
ಕಾವ್ಯ, ಕಥೆ, ಕಾದಂಬರಿಗಳಂತೆ ನಾಟಕ ಒಂದು ಸಾಹಿತ್ಯ ಪ್ರಕಾರ. ದೃಶ್ಯದ ಮೂಲಕ ರಂಗ ಮಾಧ್ಯಮದಲ್ಲೂ ಶ್ರವ್ಯದ ಮೂಲಕ ಸಾಹಿತ್ಯ ಮಾಧ್ಯಮದಲ್ಲೂ ಸಲ್ಲುವುದರಿಂದ ಒಂದು ವಿಶಿಷ್ಟ ಮಾಧ್ಯಮವೆನಿಸಿದೆ. ಜೀವನದ ಸಂಗತಿಗಳನ್ನು ಅರ್ಥವತ್ತಾಗಿ ಪರಿಣಾಮಕಾರಿಯಾಗಿ ನಟನೆಯ ಮೂಲಕ ತಿಳಿಯಪಡಿಸುವುದು ನಾಟಕದ ಉದ್ದೇಶ. ಪ್ರೇಕ್ಷಕರಿಗೆ ಆನಂದ ನೀಡುವುದು ಅದರ ಪರಿಣಾಮದ ಉದ್ದೇಶ. ಸಮಕಾಲೀನ ನಾಟಕಕಾರರಲ್ಲಿ ಲಂಕೇಶ್ ಅವರು ಮುಖ್ಯರು. ಪಾಶ್ಚತ್ಯ ಆಧುನಿಕ ನಾಟಕ ಚಳುವಳಿಯ ಪರಿಚಯ ಪ್ರಭಾವಗಳಿಂದ ಸ್ಫೂರ್ತಿಗೊಂಡು ವಿಭಿನ್ನ ಬಗೆಯ ನಾಟಕಗಳನ್ನು ರಚಿಸಿದ ಲಂಕೇಶರು ಕನ್ನಡದ ನವ್ಯ ನಾಟಕಗಾರರಲ್ಲಿ ಪ್ರಮುಖರಾಗಿದ್ದಾರೆ. ಪ್ರಸ್ತುತ ಪ್ರಬಂಧದಲ್ಲಿ ಲಂಕೇಶರ ಸಂಕ್ರಾಂತಿ ನಾಟಕದ ವಿಭಿನ್ನ ನೆಲೆಗಳನ್ನು ವಿವರಿಸಲಾಗಿದೆ. ಸಂಕ್ರಾಂತಿ ನಾಟಕದಲ್ಲಿ ಚರಿತ್ರೆಯ ವಸ್ತು ಮತ್ತು ವ್ಯಕ್ತಿಗಳನ್
APA, Harvard, Vancouver, ISO, and other styles
37

V., Shivananda. "ಔತ್ತರೇಯ ಭಾರತೀಯ ಭಾಷೆ-ಕೃತಿಗಳಲ್ಲಿ ಕರ್ನಾಟಕ ಸಂಸ್ಕೃತಿಯ ಕೆಲವು ಉಲ್ಲೇಖಗಳು". ಔತ್ತರೇಯ ಭಾರತೀಯ ಭಾಷೆ-ಕೃತಿಗಳಲ್ಲಿ ಕರ್ನಾಟಕ ಸಂಸ್ಕೃತಿಯ ಕೆಲವು ಉಲ್ಲೇಖಗಳು 03, № 02 (2024): 1–18. https://doi.org/10.5281/zenodo.10656661.

Full text
Abstract:
ಕನ್ನಡ ಸಾರಸ್ವತ ಲೋಕದಲ್ಲಿ ಎಲೆಮರೆಯ ಕಾಯಿಯಂತಿದ್ದು ಕನ್ನಡ ಸಂಶೋಧನ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಯಾಗಿ ವಿಸ್ತರಿಸಿದ ಹಾಗೂ ಶ್ರೀಮಂತಗೊಳಿಸಿದ ವಿದ್ವಾಂಸರಲ್ಲಿ ಡಾ.ವಿ.ಶಿವಾನಂದ ಅವರು ಪ್ರಮುಖರು. ಅತ್ಯುತ್ತಮ ಕನ್ನಡ ಪ್ರಾಧ್ಯಾಪಕರಾಗಿ, ನಿರಂತರ ಅಧ್ಯಯನಶೀಲ ವಿದ್ವಾಂಸರಾಗಿ, ಪ್ರಥಮಶ್ರೇಣಿಯ ಸಂಶೋಧಕರಾಗಿ, ಶ್ರೇಷ್ಠ ಭಾಷಾವಿಜ್ಞಾನಿಯಾಗಿ ಅವರು ತಮ್ಮ ವಿದ್ವತ್ ಪ್ರತಿಭೆಯನ್ನು ಬೋಧನೆ ಮತ್ತು ಬರಹಗಳಲ್ಲಿ ಧಾರೆಯೆರೆದು ಕನ್ನಡ ಸಾರಸ್ವತ ಪ್ರಪಂಚವನ್ನು ಶ್ರೀಮಂತಗೊಳಿಸಿದವರು. ಶ್ರೀಯುತರು ಮೂಲತಃ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಕನಮಡಿ ಗ್ರಾಮದವರು. ತಂದೆ ಗುರುಪಾದಯ್ಯ, ತಾಯಿ ರಾಚಮ್ಮ. ಹುಟ್ಟಿದ್ದು 1-5-1941. ಪ್ರಾಥಮಿಕ ಶಿಕ್ಷಣವನ್ನು ಕನಮಡಿಯಲ್ಲಿ, ನಂತರ ಶ್ರೀ ಶರಣಬಸವೇಶ್ವರ ಹೈಸ್ಕೂಲ್‌ನಲ್ಲಿ ಹಾಗೂ ಶ್ರೀಶರಣಬಸವೇಶ್ವರ ಕಲ
APA, Harvard, Vancouver, ISO, and other styles
38

ಮಲ್ಲಿಕಾರ್ಜುನ, ಎಂ.ಸಿ. "ಸರ್ವಜ್ಞನ ವಚನಗಳಲ್ಲಿ ಕೃಷಿವಿಜ್ಞಾನ". AKSHARASURYA 06, № 02 (2025): 124 to 132. https://doi.org/10.5281/zenodo.15124134.

Full text
Abstract:
ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣ ಸನ್ನಿವೇಶದ ಪ್ರಭಾವದಿಂದಾಗಿ ಗ್ರಾಮೀಣ ಜನತೆ ಮತ್ತು ಯುವಕರು ಕೃಷಿಯಿಂದ ವಿಮುಖರಾಗಿ ನಗರ ಬದುಕಿಗೆ ಆಕರ್ಷಿತರಾಗಿ ನಗರಗಳನ್ನು ಸೇರುತ್ತಿದ್ದಾರೆ. ಇನ್ನೂ ಕೆಲ ಪ್ರಯೋಗಶೀಲ ಯುವ ಮನಸ್ಸುಗಳು, ಇಂಜಿನಿಯರ್‌ಗಳು ಕೃಷಿಗೆ ಆಕರ್ಷಿತರಾಗಿ ಹಳ್ಳಿಗಳಿಗೆ ಬಂದು ನೆಲೆಸಿ, ಕೃಷಿಯಲ್ಲಿ ಅನೇಕ ಪ್ರಯೋಗಗಳನ್ನು ನಡೆಸಿ ಯಶಸ್ವಿಯಾಗುತ್ತಿದ್ದಾರೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ನಮ್ಮ ಯುವಕರು ಮತ್ತು ಗ್ರಾಮೀಣ ಜನತೆ ಹೆಜ್ಜೆಹಾಕುತ್ತಿದ್ದಾರೆ. ನಮ್ಮ ಹಳ್ಳಿಗಳಲ್ಲಿ ಬಹುಪಾಲು ಕೂಲಿಕಾರ್ಮಿಕರಿಲ್ಲದೆ, ಕೆಲ ಕುಟುಂಬದಲ್ಲಿ ಸದಸ್ಯರೂ ಇಲ್ಲದೆ ಇಂದು ನಮ್ಮ ಹಳ್ಳಿಗಳು ವೃದ್ಧರ ಆಶ್ರಯ ತಾಣಗಳಾಗಿ ಮಾರ್ಪಡುತ್ತಿವೆ. ಇಂದು ಕೃಷಿಯನ್ನು ಉಳಿಸಿಕೊಳ್ಳುವುದು ನಮ್ಮ ಹಳ್ಳಿಗಳ ಅಸ್ತಿತ್ವದ ಪ್ರಶ್ನೆಯಾಗಿ ಕಾಡುತ್ತಿದೆ. ನಮ್ಮ ಜನ
APA, Harvard, Vancouver, ISO, and other styles
39

ರಮೇಶ್. "ಯಯಾತಿ ನಾಟಕದಲ್ಲಿ ಸಾಮಾಜಿಕ ಸಂಘರ್ಷ". AKSHARASURYA JOURNAL 06, № 03 (2025): 41 to 51. https://doi.org/10.5281/zenodo.15343867.

Full text
Abstract:
ಗಿರೀಶ್ ಕಾರ್ನಾಡರು ಬಹುಮುಖ ವ್ಯಕ್ತಿತ್ವವುಳ್ಳವರು ನಾಟಕಕಾರ ನಿರ್ದೇಶಕ ನಟ ಪ್ರಾಧ್ಯಾಪಕರಾಗಿ ಹಲವು ಕ್ಷೇತ್ರಗಳಲ್ಲಿ ದುಡಿದವರು ಪದ್ಮಶ್ರೀ, ಪದ್ಮಭೂಷಣ, ಕರ್ನಾಟಕ ನಾಟಕ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಜ್ಞಾನಪೀಠ ಪ್ರಶಸ್ತಿ ವಿಜೇತರು ನಾನಾ ಕ್ಷೇತ್ರಗಳಲ್ಲಿ ಪಾಂಡಿತ್ಯ ಪಡೆದವರು ನಾಗಮಂಡಲ, ತುಘಲಕ್, ಹಯವದನ, ಹಿಟ್ಟಿನ ಹುಂಜ, ತಲೆದಂಡ ಯಯಾತಿ ನಾಟಕಗಳನ್ನು ರಚಿಸಿದ್ದಾರೆ. ಕನ್ನಡಕ್ಕೆ ವಿಶ್ವ ಮಾನ್ಯತೆಯನ್ನು ತಂದುಕೊಟ್ಟವರು.  ಯಯಾತಿ ಪೌರಾಣಿಕ ವ್ಯಕ್ತಿ, ಪಾಂಡವರ ಪೂರ್ವಜರಲ್ಲಿ ಒಬ್ಬ ನಹುಷನ ಮಗ ಅವನಿಗೆ ಇಬ್ಬರು ಹೆಂಡತಿಯರು, ಶರ್ಮಿಷ್ಠೆ ಮತ್ತು ದೇವಯಾನಿ ಶರ್ಮಿಷ್ಠೆ ರಾಕ್ಷಸರಾಜನ ಮಗಳು, ದೇವಯಾನಿ ಅಸುರರ ಗುರು ಶುಕ್ರಾಚಾರ್ಯರ ಮಗಳು ಪುರಾಣಗಳಲ್ಲಿ ಬರುವ ಯಯಾತಿ ಬದುಕನ್ನು ಆಯ್ಕೆ ಮಾಡಿಕೊಂಡು ದೇವಯಾನಿ ಮದುವೆಯ ನಂತರದ ಕಥೆಯ
APA, Harvard, Vancouver, ISO, and other styles
40

BASAVARAJU, M. "ಸರ್ವಜ್ಞನ ತ್ರಿಪದಿಗಳಲ್ಲಿ ಗುರುವಿನ ಮಹತ್ವ". AKSHARASURYA JOURNAL 03, № 03 (2024): 141 to 145. https://doi.org/10.5281/zenodo.10775233.

Full text
Abstract:
ಪ್ರಸ್ತುತ ಲೇಖನವು ಸರ್ವಜ್ಞನ ತ್ರಿಪದಿಗಳಲ್ಲಿ ಗುರುವಿನ ಮಹತ್ವ ಮತ್ತು ಗುರು ಹಾಗೂ ಶಿಷ್ಯರ ನಡುವಿನ ಸಂಬಂಧದ ಕುರಿತು ಚರ್ಚಿಸುತ್ತದೆ. ಈ ಕುರಿತು ಸರ್ವಜ್ಞನಲ್ಲಿ 80 ಕ್ಕೂ ಹೆಚ್ಚು ತ್ರಿಪದಿಗಳು ಸಿಗುತ್ತದೆ. ಶಿಕ್ಷಣದ ದೃಷ್ಟಿಯಿಂದ ನೋಡಿದರೆ ಸರ್ವಜ್ಞನು ಒಬ್ಬ ಸಾಮಾಜಿಕ ಗುರು ಎಂದು ಹೇಳಬಹುದು. ಇಂದು ಗುರು ಮತ್ತು ಶಿಷ್ಯರ ನಡುವಿನ ಸಂಬಂಧದಲ್ಲಿ ಬಿರುಕು ಇದೆ. ಗುರುವಿನ ಮಹತ್ವ, ಗುರು ಪದ್ಧತಿ, ಗುರುಬೋಧ ವಿಷಯ, ಗುರುಕರಣ ವಿಷಯ ಮತ್ತು ಗುರುವಿನಿಂದ ಮುಕ್ತಿ ಇತ್ಯಾದಿ.  ಸರ್ವಜ್ಞ ದೃಷ್ಟಿಯಲ್ಲಿ ಗುರು ಒಬ್ಬ ಶಿವ, ಕರುಣಾಮಯಿ, ಜ್ಯೋತಿ, ಮಾರ್ಗದರ್ಶಕ, ಬಂಧು, ದೈವ, ಕಲ್ಪವೃಕ್ಷ, ಮತ್ತು ಕಾಮದೇನು. ಇದನ್ನು ತನ್ನ ತ್ರಿಪದಿಗಳಲ್ಲಿ ಉಪಮಾ, ಯಮಕ, ರೂಪಕ ಮತ್ತು ದೃಷ್ಟಾಂತ ಅಲಂಕಾರಗಳ ಮೂಲಕ ವಿವರಿಸಿದ್ದಾನೆ.
APA, Harvard, Vancouver, ISO, and other styles
41

ಎನ್., ಎಸ್. ಸತೀಶ್. "ಅಲ್ಲಮನ ವಚನದ ವಿವೇಚನೆ". AKSHARASURYA JOURNAL 05, № 04 (2024): 41 to 46. https://doi.org/10.5281/zenodo.14289593.

Full text
Abstract:
ಅಲ್ಲಮ ಈ ವಚನದಲ್ಲಿ ಮುಸುರೆ ಹಾಗು ನೊಣವನ್ನು ಉಪಮೆ ನೀಡುವುದರ ಮೂಲಕ ವಿಷಯಾಸೆಗಳನ್ನು ಮುಸುರೆಯೆಂದು ಸಾಮಾನ್ಯ ಮನುಷ್ಯನ ಮನಸ್ಸನ್ನು ನೊಣವೆಂದು ಹೇಳಿದ್ದಾನೆ. ಮುಸುರೆ ಅಲ್ಪಾವಧಿಯದ್ದಾಗಿದ್ದು ಸ್ವಲ್ಪ ಸಮಯದ ಅನಂತರ ಕೊಳೆತು ನಾರುತ್ತದೆ ಅಂತೆಯೇ ವಿಷಯಾಸಕ್ತಿಗಳು ಆ ಕ್ಷಣಕ್ಕೆ ಸಂತಸವನ್ನು ತಂದು ಕೊಟ್ಟರೂ ದೀರ್ಘಾವಧಿಯಲ್ಲಿ ತನ್ನ ಮನಸ್ಸಿನ ಶಾಂತಿಯನ್ನು ಕಳೆದುಕೊಳ್ಳುತ್ತಾ, ಚಿತ್ತ ವಿಕೃತಿಗೆ ಒಳಗಾಗುವುದಲ್ಲದೆ ಅವನು ತನ್ನ ವ್ಯಕ್ತಿತ್ವ ನಾರುವಂತೆ ಮಾಡಿಕೊಳ್ಳುತ್ತಾನೆ. ಇನ್ನು ಮತ್ತೊಂದು ಆಯಾಮವನ್ನು ನೋಡುವುದಾದರೆ ಮುಸುರೆಯ ಮಡಕೆ ಮನುಷ್ಯನ ಲೋಭತನದ ಕ್ರೋಢೀಕರಣ ಇದು ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತದೆ. ನೊಣ ಈ ಕ್ರೋಢೀಕರಣವನ್ನು ಹರಡುವ ಸಾಂಕ್ರಾಮಿಕ ರೋಗದ ಮನೋಭಾವದಂತೆ ಕಾಣುತ್ತದೆ.  ನೊಣದ ಸ್ವಭಾವದಲ್ಲಿನ ಚಂಚಲತೆ, ಪಶುವಿನಲ್ಲಿ
APA, Harvard, Vancouver, ISO, and other styles
42

ಪುಟ್ಟಸ್ವಾಮಿ, ಎನ್. ಎನ್., та ಪುಟ್ಟಸ್ವಾಮಿ. "ಎ. ಪಂಕಜ ಅವರ ಕಾದಂಬರಿಗಳಲ್ಲಿ ದುರಂತ ನಾಯಕಿಯರು". AKSHARASURYA 04, № 02 (2024): 87 to 97. https://doi.org/10.5281/zenodo.11525869.

Full text
Abstract:
ಯಾವುದೇ ಸಾಹಿತಿಯಾದರೂ ಸಹ ಸಮಕಾಲೀನ ಸಮಾಜದ ನೈಜ ಜೀವನವನ್ನು ಇಲ್ಲವೇ ತಮ್ಮ ಮನದ ಭಾವನೆಗಳನ್ನು ಯಥಾವತ್ತಾಗಿ ಹೇಳುವಲ್ಲಿಯೂ ಕೂಡ ಆತನ ಸೃಜನಶೀಲತೆ ದುಡಿಯುತ್ತದೆ. ಎ. ಪಂಕಜ ಅವರು ಮಹಿಳಾ ಸಾಹಿತ್ಯ ಪರಂಪರೆಯಲ್ಲಿ ‘ಸಮನ್ವಯ ಸಾಹಿತ್ಯದ ಲೇಖಕಿ’ ಎಂದೇ ಪರಿಚಿತರು. ಇವರು ತಮ್ಮ ಕಾದಂಬರಿ ಮುಖೇನ ಸನ್ನಿವೇಶವನ್ನು ಪ್ರಸ್ತುತಪಡಿಸುತ್ತಾರೆಯೇ ಹೊರತು ಪ್ರತಿಭಟಿಸುವವರಲ್ಲ. ಕೆಲವೊಮ್ಮೆ ಆ ನಿಟ್ಟಿನ ಛಾಯೆಯನ್ನ ಕಾಣಬಹುದೇ ಹೊರತು ಯಾವ ಪಾತ್ರಗಳೂ ಸಹ ಬಲವಾಗಿ ಪ್ರತಿಭಟಿಸುವುದಿಲ್ಲ. ವಿಶೇಷವೆಂದರೆ ಇವರ ಕಾದಂಬರಿಗಳೆಲ್ಲವೂ ಭಾಗಶಃ ಸ್ತ್ರೀ ಕೇಂದ್ರಿತವೇ. ಆದರೂ ಸ್ತ್ರೀ ಪರವಾಗಿ ನಿಂತದ್ದು ಬಹಳ ಕಡಿಮೆ. ಸ್ತ್ರೀಯನ್ನು ಕೇಂದ್ರವಾಗಿಸಿಕೊಂಡು ಕುಟುಂಬದ ಜೊತೆಗೇ ಸಮಕಾಲೀನ ಸಾಮಾಜಿಕ ಬದುಕನ್ನು, ಹೆಣ್ಣಿನ ಸಾಮಾಜಿಕ ಸ್ಥಾನಮಾನವನ್ನು ಪ್ರಸ್ತುತಪಡಿ
APA, Harvard, Vancouver, ISO, and other styles
43

ದಿವಾಕರ, ಜೆ., та ಎಸ್. ಶಿವಣ್ಣ. "ಆಲಿಸುವ ಕೌಶಲವರ್ಧನೆಯಲ್ಲಿ ನಾಟಕಕಲೆ". AKSHARASURYA 04, № 01 (2024): 09 to 17. https://doi.org/10.5281/zenodo.11162027.

Full text
Abstract:
ರಂಗಭೂಮಿಯ ಪ್ರಮುಖ ಕಲೆಯಾದ ನಾಟಕ ಕಲೆಯು ಮಕ್ಕಳಾದಿಯಾಗಿ ದೊಡ್ಡವರಿಗೂ ಕೂಡ ಶಿಕ್ಷಣ, ಮಾಹಿತಿ, ಮನರಂಜನೆಯನ್ನು ನೀಡುತ್ತದೆ. ಈ ನಾಟಕ ಕಲೆಯಲ್ಲಿ ಪಾಲ್ಗೊಂಡ ವ್ಯಕ್ತಿಯ ಮಾತೃ ಭಾಷೆಯ ಪ್ರಯೋಗವು ಸೂಕ್ತವಾಗಿರುತ್ತದೆ. ಇದಕ್ಕೆ ಕಾರಣ ಅವರಲ್ಲಿ ಆಗಿರುವ ಭಾಷೆಯ ವಿಕಾಸ ಮತ್ತು ಬೆಳವಣಿಗೆ ಹಾಗೂ ಭಾಷೆಯ ಕೌಶಲಗಳು. ಈ ಕೌಶಲಗಳನ್ನು ನಾಟಕ ಕಲೆ ಹೇಗೆ ಕಲಿಸುತ್ತದೆ? ಎಂಬ ಪ್ರಶ್ನೆ ಮುಖೇನ ಉತ್ತರ ಹುಡುಕಲು ಈ ಲೇಖನ ಪ್ರಯತ್ನಿಸುತ್ತದೆ. ಕನ್ನಡ ಭಾಷಾ ಕೌಶಲಗಳ ಕಲಿಕೆಯಲ್ಲಿ ನಾಟಕ ಕಲೆ. ಭಾಷೆ ಕಲಿಕೆಯೆಂಬುದು ಮೂಲತಃ ಭಾಷಾ ಕೌಶಲಗಳ ಕಲಿಕೆಯೇ ಆಗಿದೆ. ಭಾಷೆಯ ಪ್ರಬುದ್ಧತೆ ಸಿದ್ದಿಸುವುದು ಹಾಗೂ ಭಾಷಾ ಕೌಶಲಗಳು ಲಭಿಸುವುದು ಭಾಷಾಂಶಗಳ ಪರಿಣಿತಿಯಿಂದ ಮಾತ್ರ. ಭಾಷಾಕಲಿಕೆಯ ಪ್ರಕ್ರಿಯೆಯಲ್ಲಿ ಆಲಿಸುವುದು, ನೋಡುವುದು, ಮಾತನಾಡುವುದು, ಓದುವುದು, ಬರೆಯುವುದು ಮತ
APA, Harvard, Vancouver, ISO, and other styles
44

ವಿಜಯಲಕ್ಷ್ಮೀ, ಸುಬ್ಬರಾವ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಗೀತನಾಟಕ ಪ್ರವೇಶ: ಸಂಸ್ಕೃತ ನಾಟಕ ಮತ್ತು ನಾಟಕದಲ್ಲಿ ಸಂಗೀತ". AKSHARASURYA 05, № 01 (2024): 01 to 32. https://doi.org/10.5281/zenodo.13870268.

Full text
Abstract:
ಬಹುಮುಖ ಪ್ರತಿಭೆಯ ಡಾ.ವಿಜಯಾ ಸುಬ್ಬರಾಜ್ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಾಯಿ ಲಕ್ಷ್ಮಿ, ಹಾಗೂ ತಂದೆ ಸೀತಾರಾಂ ಅವರು. ಓದಿದ್ದು ಬೆಂಗಳೂರಿನಲ್ಲೇ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎಂ.ಎ ಮತ್ತು ಎಲ್.ಎಲ್.ಬಿ. ಪದವೀಧರೆಯಾದವರು. ಫ್ರೆಂಚ್ ಭಾಷೆಯ ಡಿಪ್ಲೊಮ ಪದವಿಯನ್ನೂ ಹಿಂದಿ ಸಾಹಿತ್ಯರತ್ನ ಪದವಿಯನ್ನೂ ಅಧ್ಯಯನ ಮಾಡಿದವರು. ಎಂ.ಇ.ಎಸ್. ಕಾಲೇಜಿನಲ್ಲಿ ಸುದೀರ್ಘ ಕಾಲ ಪ್ರಾಧ್ಯಾಪಕ ಹುದ್ದೆ ನಿರ್ವಹಿಸುತ್ತಲೇ ನಿರಂತರವಾಗಿ ಹಲವು ಮಾಧ್ಯಮಗಳಲ್ಲಿ ತಮ್ಮ ಪ್ರಯೋಗಶೀಲತೆಯನ್ನು ದುಡಿಸಿಕೊಂಡವರು, ಕಥೆ, ಕವಿತೆ, ನಾಟಕ, ಕಾದಂಬರಿ, ಪ್ರವಾಸ ಕಥನ, ಅನುವಾದ, ವೈಚಾರಿಕ ಬರೆಹ, ವಿಮರ್ಶೆ, ಸಂಶೊಧನೆ ಮುಂತಾದ ವಿಭಿನ್ನ ಪ್ರಕಾರಗಳಲ್ಲಿ ಅವರ ಶಕ್ತಿ, ಪ್ರತಿಭೆಗಳು ಬೆಳಗಿವೆ. ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯ ಓದುವ ಬರೆಯುವ ಹವ್ಯಾಸ ರೂಢಿಸಿಕ
APA, Harvard, Vancouver, ISO, and other styles
45

Dalavai, Kasturevva Basappa. "ಕನ್ನಡದ ವಚನ ಭಾರತ". ShodhKosh: Journal of Visual and Performing Arts 5, № 3 (2024). https://doi.org/10.29121/shodhkosh.v5.i3.2024.5452.

Full text
Abstract:
ನಮ್ಮ ದೇಶದ ಪ್ರಾಚೀನ ಸಾಹಿತ್ಯಗಳಲ್ಲಿ ಮಹಾಕಾವ್ಯವೆಂದೋ ಇತಿಹಾಸವೆಂದೋ ಪ್ರಸಿದ್ಧವಾಗಿರುವ ಮಹಾಭಾರತವನ್ನು ದೇಶಭಾಷೆಗಳಲ್ಲಿ ಪುನಾರಚಿಸಿಕೊಳ್ಳುವ ಒಂದು ಪರಂಪರೆ ಅತ್ಯಂತ ಸಮೃದ್ಧವಾಗಿ ಬೆಳೆದು ಬಂದಿದೆ. ಆದಿಕವಿ ಪಂಪನ ವಿಕ್ರಮಾರ್ಜುನ ವಿಜಯಂ, ಕುಮಾರವ್ಯಾಸನ ಕರ್ಣಾಟ ಭಾರತ ಕಥಾಮಂಜರಿ, ಪರಮದೇವ ಕವಿಯ ತುರಂಗ ಭಾರತ, ಸುಕುಮಾರಭಾರತಿಯ ಚಾಯಣ ಭಾರತ, ಸೂತ ಭಾರತ ಹೀಗೆ ಹಳೆಗನ್ನಡ ಹಾಗೂ ನಡುಗನ್ನಡ ಸಂದರ್ಭದಲ್ಲಿ ಕಾವ್ಯರೂಪದಲ್ಲಿ ಹಲವಾರು ಕೃತಿಗಳು ರಚನೆಯಾಗಿವೆ. ಪ್ರತಿಯೊಂದು ಕಾವ್ಯವೂ ತನ್ನ ಸತ್ವಾತಿಶಯದಿಂದ ಅನನ್ಯವಾಗಿದೆ. ಹೊಸಗನ್ನಡ ಗದ್ಯ ಸಂದರ್ಭದಲ್ಲಿ ಇಂತಹ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಮತ್ತು ಅತ್ಯಂತ ಜನಪ್ರಿಯತೆಯನ್ನು ಜನಪ್ರೀತಿಯನ್ನು ಪಡೆದುಕೊಂಡಿರುವ ಮತ್ತು ಚಿರಕೃತಿಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು; ಎ. ಆರ್. ಕೃಷ್ಣಶಾಸ್ತ್ರ
APA, Harvard, Vancouver, ISO, and other styles
46

-, Dr S. M. Gangadharaiah. "ವಚನ ಪ್ರತಿಭೆ: ಬೌದ್ಧಿಕ ಪ್ರತಿಭಟನೆಯ ನಿಲುವುಗಳು (Vachana Pratibhe: Bouddhika Pratibhataneya Niluvugalu". International Journal For Multidisciplinary Research 6, № 5 (2024). http://dx.doi.org/10.36948/ijfmr.2024.v06i05.28390.

Full text
Abstract:
ಇಂದು ವಚನಾಧ್ಯಯನದ ಮೂಲತತ್ವಗಳನ್ನು ಅಧ್ಯಯನಿಸುವ ಸಂದರ್ಭದಲ್ಲಿ ವಚನಗಳ ಹುಟ್ಟಿನ ಸಂದರ್ಭವನ್ನು ಕುರಿತು ತೀವ್ರವಾದ ಚರ್ಚೆಯನ್ನು ಆರಂಭಿಸುವುದೊಳಿತು. ಏಕೆಂದರೆ ವಚನ ಪ್ರತಿಭೆಯ ಸಾರ್ಥಕ್ಯತೆಯು ಅವುಗಳು ಅಭಿವ್ಯಕ್ತಿಸುವ ವೈಚಾರಿಕ ಪ್ರತಿಮೆಗಳಲ್ಲಿ ನಿಂತಿದೆ ಎಂದು ವಿದ್ವಾಂಸರು ಅಭಿಪ್ರಾಯಪಡುತ್ತಾರೆ. ವಚನವೆನ್ನುವ ಪ್ರಕಾರವೇ ವಿಶಿಷ್ಟವಾದುದು. ಪದ್ಯವೂ ಅಲ್ಲದ ಗದ್ಯವೂ ಅಲ್ಲದ ಅವೆರಡಕ್ಕಿಂತಲೂ ಸರಳವಾದ ಪದ್ಯದ ಲಾಲಿತ್ಯವನ್ನು, ಗದ್ಯದ ಹೃದ್ಯತನವನ್ನು ಹೊಂದಿದ ಅಪರೂಪದ ಸಾಹಿತ್ಯಕ ಪ್ರಕಾರವಾಗಿ ಒದಗಿಬರುತ್ತದೆ. ಅದರ ರಚನೆಗಳಲ್ಲಿ ಸೂತ್ರರೂಪವನ್ನು ಕಾಣುತ್ತೇವೆ. ಪ್ರತಿ ವಚನವು ದರ್ಶನಶಾಸ್ತ್ರದ ಮೂರು ವೈಲಕ್ಷಣಗಳಾದ ಈಶ್ವರ, ಜೀವ, ಜಗತ್ತು ಇವುಗಳನ್ನು ಕುರಿತು ಹೇಳುತ್ತದೆ. ಈ ಮೂರರ ಸಂಬಂಧವನ್ನು ಮೂಲಭೂತವಾಗಿಟ್ಟುಕೊಂಡು ತರ್ಕಬದ್ಧವಾಗಿ ಅನುಭವಸ
APA, Harvard, Vancouver, ISO, and other styles
47

ಜಿ., ಡಾ ಭಾಗ್ಯಮ್ಮ. "ವಚನಗಳಲ್ಲಿ ಶಿವಯೋಗಾಂಗಗಳು ಒಂದು ವಿವೇಚನೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 березня 2022, 61–73. http://dx.doi.org/10.59176/kjksp.v1i1.2179.

Full text
Abstract:
ವಚನ ಸಾಹಿತ್ಯದಲ್ಲಿ ವಚನಕಾರರ ಯೋಗತತ್ವವು ಒಟ್ಟಾರೆಯಾಗಿ ಯೋಗಜೀವನದಲ್ಲಿ ಸಾಧಕರ ವ್ಯಕ್ತಿತ್ವದ ಸಮಗ್ರ ತಿಳುವಳಿಕೆಯನ್ನು ಪ್ರಸ್ತುತಪಡಿಸುತ್ತದೆ. ಯೋಗ ಸಾಧನೆಗೆ ವಚನಗಳಲ್ಲಿನ ಯೋಗತಂತ್ರದ ತತ್ವಜ್ಞಾನದ ಮಾರ್ಗದರ್ಶನ ಅವಶ್ಯಕ. ಈ ಜಾಗತೀಕರಣ ಸಮಾಜದಲ್ಲಿ ಯೋಗದ ಅಭ್ಯಾಸಿಗಳ ದೃಷ್ಟಿಕೋನ ವಿಶಾಲಗೊಳಿಸಿದರೆ ವಚನಕಾರರ ಯೌಗಿಕ ನೆಲೆಯನ್ನು ಅರ್ಥಸಿಕೊಳ್ಳಲು ಸಾಧ್ಯ.
APA, Harvard, Vancouver, ISO, and other styles
48

ಹಿಮಾನಂದ್, ರೇಖಾ. "ವಚನಯುಗ - ಲಿಂಗತ್ವ ಪರಿಕಲ್ಪನೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 1–8. http://dx.doi.org/10.59176/kjksp.v3i1.2331.

Full text
Abstract:
ಸ್ತ್ರೀ-ಪುರುಷನ ಅಸ್ತಿತ್ವವು ಲಿಂಗ ವ್ಯವಸ್ಥೆಯಿಂದ ನಿರ್ಧರಿಸಲ್ಪಡುತ್ತದೆ. ಲಿಂಗ, ಲಿಂಗತ್ವ, ಲೈಂಗಿಕತೆ ದೃಷ್ಟಿಯಿಂದ ಪುರುಷನಿಗಿಂತ ಸ್ತ್ರೀಯ ಸ್ಥಾನಮಾನಗಳು ನಗಣ್ಯವೇ ಆಗಿವೆ. ಲಿಂಗ ಎನ್ನುವುದು ಸ್ತ್ರೀ ಪುರುಷರ ನಡುವಿನ ಜೈವಿಕ ವ್ಯತ್ಯಾಸಗಳನ್ನು ತಿಳಿಸುವಂತಹ ಪರಿಕಲ್ಪನೆಯಾದರೆ, ಲಿಂಗತ್ವ ಎನ್ನುವುದು ಸಂಸ್ಕೃತಿಯಿಂದ ನಿರ್ಮಿತವಾದ ಒಂದು ಸಾಮಾಜಿಕ ಸೃಷ್ಟಿ. ಬಿನ್ನ ಜೈವಿಕತೆಯ ಕಾರಣದಿಂದಾಗಿ ಸ್ತ್ರೀ ಪುರುಷರು ಮಾಡಬಹುದಾದ ಅಥವಾ ಮಾಡಬಾರದ ಕಾರ್ಯಗಳಲ್ಲಿ ವ್ಯತ್ಯಾಸಗಳಿರಬೇಕೆನ್ನುವುದು ಸಂಸ್ಕೃತಿ ನಿರ್ಮಾಣ ಮಾಡಿ ಪೋಷಿಸಿಕೊಂಡು ಬಂದಿರುವ ಲಿಂಗತ್ವದ ಭಿನ್ನತೆಗಳೆ ಆಗಿವೆ. ಸಂಸ್ಕೃತಿ ನಿರ್ಮಿತಿಯ ಲಿಂಗಾಧಾರಿತ ವ್ಯವಸ್ಥೆಯಲ್ಲಿ ಮಹಿಳೆ ಹೊಂದಿರುವ ಜೈವಿಕ ವೈಶಿಷ್ಟ್ಯತೆಗಳಾದ ಗರ್ಭದಾರಣೆ, ತಾಯ್ತನ, ಮಕ್ಕಳ ಲಾಲನೆ-ಪಾಲನೆಯ ಜವಾಬ್ದಾರಿಗಳನ್ನು ನಿ
APA, Harvard, Vancouver, ISO, and other styles
49

Belale, Kumar, та K. Chandrakath. "ಸಿದ್ಧರಾಮನನಿಜವಚನಗಳಲ್ಲಿ ಲಿಂಗ ವಿಕಳಾವಸ್ಥೆಯ ಭಾವ". ShodhKosh: Journal of Visual and Performing Arts 5, № 1 (2024). https://doi.org/10.29121/shodhkosh.v5.i1.2024.3597.

Full text
Abstract:
ಹನ್ನೆರಡನೆಯ ಶತಮಾನದಲ್ಲಿ ಶಿವಶರಣ ಶರಣೆಯರು ತಮ್ಮ ಆದರ್ಶ ದಾಂಪತ್ಯ ಜೀವನವನ್ನು ನಡೆಸಿ ತಾವು ತಮ್ಮ ತಮ್ಮ ಆರಾಧ್ಯ ದೈವವನ್ನು ದರ್ಶಿಸಿ ಮುಂದಿನವರಿಗೆ ಮಾರ್ಗದರ್ಶಿಗಳಾಗಿದ್ದಾರೆ. ವೀರಶೈವ ಭಕ್ತರಲ್ಲಿ “ಶರಣ ಸತಿ ಲಿಂಗ ಪತಿ’ ಭಾವ ಮೊದಲಿನಿಂದಲೂ ಆಚರಣೆಯಲ್ಲಿದ್ದುದು ಕಂಡು ಬರುತ್ತದೆ. ವಚನ ಸಾಹಿತ್ಯ ಇದಕ್ಕೆ ಸಾಕ್ಷಿಯಾಗಿ ನಿಂತಿದೆ. ಲೌಖಿಕ ಭೂಮಿಕೆಯಿಂದ ಅಧ್ಯಾತ್ಮಿಕತೆಯ ಕಡೆಗೆ ಒಲಿದಿರುವುದು ಶರಣರ ಜೀವನದಿಂದ ತಿಳಿದು ಬರುವ ಅಂಶ. ಅವರು ಉಂಡು ಉಪವಾಸಿಗಳು, ಮದುವೆಯಾಗಿಯೂ ಬ್ರಹ್ಮಚಾರಿಗಳು ಎಂಬ ಮಾತಿಗೆ ಉದಾಹರಣೆಯಾಗಿ ನಮ್ಮ ಮುಂದೆ ಇದ್ದಾರೆ. ಶಿವಶರಣರಲ್ಲಿ ಬಹು ಪ್ರಮುಖರಾದ ಸಿದ್ಧರಾಮರು ಸಹ ಈ ವಿಷಯದ ಬಗೆಗೆ ಪ್ರಸ್ತಾಪಿಸಿದ್ದಾರೆ.ಸತಿ-ಪತಿ ಭಾವದ ವಚನಗಳುಸಿದ್ದರಾಮನಲ್ಲಿ ವಿಶೇಷವಾಗಿವೆ. ಸಿದ್ದರಾಮ ತನ್ನನ್ನು ಹೆಣ್ಣಾಗಿಯೂ ಕಪಿಲಸಿದ್ಧಮಲ್ಲಿ
APA, Harvard, Vancouver, ISO, and other styles
50

ಹೆಚ್. ಎಸ್., ಸಂತೋಷ. "ಮಹಿಳಾ ತತ್ವಪದಕಾರ್ತಿಯರ ಅನುಭಾವದ ನೆಲೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2023, 124–31. http://dx.doi.org/10.59176/kjksp.v2i2.2308.

Full text
Abstract:
ಇತಿಹಾಸದಲ್ಲಿ ಹೆಚ್ಚು ಚರ್ಚೆಗೆ ಒಳಪಟ್ಟ ಪಾತ್ರ ಮಹಿಳೆಯ ಪಾತ್ರ ಮಹಿಳೆಯರ ಬಗೆಗೆ ಶತ ಶತಮಾನಗಳಿಂದಲೂ ಪ್ರಾಚೀನ ಕನ್ನಡ ಸಾಹಿತ್ಯಗಳಿಂದ ಹಿಡಿದು ಆಧುನಿಕ ಕಾಲಘಟ್ಟದವರೆಗೂ ವಿಭಿನ್ನ ನೆಲೆಯಲ್ಲಿ ಚರ್ಚೆ ಮಾಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಂಪರೆಯಲ್ಲಿ ವಚನ, ಸ್ವರವಚನ, ಕೀರ್ತನೆ, ತತ್ವಪದಗಳು ವಿಭಿನ್ನ ಆಶಯಗಳೊಂದಿಗೆ ಬೆಳೆದು ಬಂದಿದೆ. ಅದರಲ್ಲೂ ಸಾಹಿತ್ಯವೇ ಸೃಷ್ಟಿಯಾಗಿಲ್ಲ ಎಂಬ ಕಾಲದಲ್ಲಿ ಹದಿನಾರರಿಂದ ಇಪ್ಪತ್ತನೇಯ ಶತಮಾನದ ಅವಧಿಯಲ್ಲಿ ತತ್ವಪದ ಸಾಹಿತ್ಯವು ಹುಟ್ಟಿ ಸಮಾಜದ ಜನಮಾನಸದಲ್ಲಿ ಆಳವಾಗಿ ಬೇರೂರಿತು. ವಚನಗಳ ಸಮಾಜಮುಖಿಯ ಆಯಾಮ, ಕೀರ್ತನೆಗಳ ಭಕ್ತಿಯ ಆಯಾಮ, ಸ್ವರ ವಚನಗಳ ಅನುಭಾವಿಕ ಆಯಾಮಗಳ ಪ್ರಭಾವ ಪ್ರೇರಣೆಯಿಂದ ತತ್ವಪದ ಸಾಹಿತ್ಯವು ಹುಟ್ಟಿತು. ಪರಮಾತ್ಮನ ಬಗೆಗಿನ ಅನುಭವ ಈ ಪದ್ಯಗಳಲ್ಲಿ ವ್ಯಕ್ತ ಗೊಂಡಿರುವುದರಿಂದ ಇವಕ್ಕೆ ಅನುಭ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!