To see the other types of publications on this topic, follow the link: ವರ್ಗ.

Journal articles on the topic 'ವರ್ಗ'

Create a spot-on reference in APA, MLA, Chicago, Harvard, and other styles

Select a source type:

Consult the top 43 journal articles for your research on the topic 'ವರ್ಗ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಚನ್ನವೀರಯ್ಯ. "ವಚನಗಳಲ್ಲಿನ ಜಾತಿ ಪದ್ಧತಿ ಮತ್ತು ಮೌಢ್ಯಗಳ ವಿಶ್ಲೇಷಣೆ". AKSHARASURYA 05, № 02 (2024): 135 to 142. https://doi.org/10.5281/zenodo.14035388.

Full text
Abstract:
ಹನ್ನೇರಡನೇ ಶತಮಾನವನ್ನು ವಚನ ಸಾಹಿತ್ಯದ ಪರ್ವಕಾಲ ಎಂದು ಕರೆಯಬಹುದು. ಏಕೆಂದರೆ ಜನಸಾಮಾನ್ಯರ ಆಡುಭಾಷೆಯ ಮೂಲಕ ಕನ್ನಡಭಾಷೆಯನ್ನು ಉತ್ತುಂಗಕ್ಕೆ ಏರಿಸಿದ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ. ಬಹು ಮುಖ್ಯವಾಗಿ ಜಾತಿ, ಮತ, ವರ್ಗ, ವರ್ಣ, ಮೇಲು, ಕೀಳು ಹಾಗೂ ಸಾಮಾಜಿಕ ಪಿಡುಗುಗಳಾದ ಮೂಢನಂಬಿಕೆಗಳು ಅನಿಷ್ಟಪದ್ದತಿಗಳ ಆಚರಣೆಯಿಂದ ಸಮಾಜದ ಅಭಿವೃದ್ಧಿಗೆ ಮಾರಕವಾದುದು ಎಂಬುದನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿ ಸಾಮಾಜಿಕ ಬದಾಲಾವಣೆಗೆ ಮುನ್ನುಡಿ ಬರೆದು ನವಮನ್ವಂತರಕೆ ದಾರಿ ದೀಪವಾದವರು. ಆ ಮೂಲಕ ಸಮಾಜದ ಪರಿವರ್ತನೆಗೆ ಶ್ರಮಿಸಿದರು. ಸಾಮಾಜಿಕ ಬದಲಾಣೆಯ ಜೊತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಅಂತಹ ಕೆಲವು ವಚನಕಾರರ ವಚನಗಳ ವಿಶ್ಲೇಷಣೆ ಈ ಲೇಖನದಲ್ಲಿ ಚರ್ಚಿಸಲಾಗಿದೆ.
APA, Harvard, Vancouver, ISO, and other styles
2

ವಾಣಿ, ಡಿ. ಎಸ್. "ಮಡಿವಾಳ ಮಾಚಿ ದೇವರವರ ಜೀವನ ಹಾಗೂ ಸಾಧನೆ". AKSHARASURYA JOURNAL 04, № 04 (2024): 144 to 150. https://doi.org/10.5281/zenodo.13284156.

Full text
Abstract:
ಹನ್ನೆರಡನೇ ಶತಮಾನ ಭಾರತೀಯ ಹಾಗೂ ಕರ್ನಾಟಕದ ಇತಿಹಾಸದಲ್ಲಿ ಬಹುಮುಖ್ಯ ಕಾಲಘಟ್ಟ. ಆ ಕಾಲದ ಶಿವಶರಣರು ಜೀವನದ ಹೊಸ ಮೌಲ್ಯಗಳನ್ನು ಎತ್ತಿ ಹಿಡಿದು ವರ್ಣಾಶ್ರಮ, ಧರ್ಮಗಳ ಹಂಗನ್ನು ಕಿತ್ತು ಬಿಸುಟು ಸಮತಾ ತತ್ವದ ತಳಹದಿಯ ಮೇಲೆ ಸಮಾಜವನ್ನು ನಿರ್ಮಿಸಲು ಹೆಣಗಿದವರು. ಸೃಷ್ಟಿಯಲ್ಲಿ ಎಲ್ಲರೂ ಸಮಾನರು ಮೇಲು-ಕೀಳು, ಲಕ್ಷಿತ-ಅಲಕ್ಷಿತ, ಸ್ತ್ರೀ-ಪುರುಷರೆಂಬ ಬೇಧ ಭಾವವಿಲ್ಲ ಎಂಬ ತತ್ವವನ್ನು ಬೋಧಿಸಿ ತಮ್ಮದೇ ಆದ ವಿಶಿಷ್ಟ ಧರ್ಮವನ್ನು ಬಸವಾದಿ ಪ್ರಮಥರು ಸಾಧಿಸಿದರು. ತಮ್ಮ ವೃತ್ತಿಯ ಹಿನ್ನೆಲೆಯಲ್ಲಿ ವರ್ಗ, ವರ್ಣ, ಜಾತಿಗಳಿಲ್ಲದ ಸರ್ವ ಸಮಾನತೆಯ ಹೊಸ ಸಮಾಜದ ನಿರ್ಮಾಣಕ್ಕೆ ಅವರು ಶ್ರಮಿಸಿದರು. ಅಂತಹ ವಚನಕಾರ ಮತ್ತು ಕ್ರಾಂತಿಕಾರರಲ್ಲಿ ಪ್ರಮುಖರಾದವರು ಮಡಿವಾಳ ಮಾಚಿದೇವ. ಇವರು ಬಸವಣ್ಣನಂತಹ ಮಹಾನುಭಾವರೊಂದಿಗೆ ಜೊತೆಗೂಡಿ ಸಮಾಜವನ್ನು ತಿದ್ದುವಂತಹ ಕೆ
APA, Harvard, Vancouver, ISO, and other styles
3

ಶರಣಪ್ಪ, ಆಡಕಾರ. "ವರ್ಗ ಸಂಘರ್ಷದ ನೆಲೆಯಲ್ಲಿ ಚಂದ್ರಶೇಖರ ಕಂಬಾರರ ನಾಯೀಕತೆ". AKSHARASURYA JOURNAL 06, № 01 (2025): 56 to 63. https://doi.org/10.5281/zenodo.14961420.

Full text
Abstract:
ಚಂದ್ರಶೇಖರ ಕಂಬಾರ ಅವರ ನಾಟಕಗಳು ಗ್ರಾಮೀಣ ಪ್ರದೇಶದಲ್ಲಿ ಕಂಡುಬರುವ ಜಮೀನ್ದಾರಿ ವ್ಯವಸ್ಥೆಯಲ್ಲಿನ ಕ್ರೌರ್ಯ, ಪೊಳ್ಳುವ್ಯಕ್ತಿತ್ವ, ಗೌಡನ ನೀರ್ವಿರ್ಯತನವನ್ನು ಹೆಚ್ಚು ಅನಾವರಣಗೊಳ್ಳಿಸುತ್ತವೆ. ಶ್ರೀಮಂತಿಕೆಯ ಸೊಕ್ಕಿನಲ್ಲಿರುವ ಗೌಡ ಊರಿನಲ್ಲಿನ ಹೆಣ್ಣುಮಕ್ಕಳನ್ನು ಅನುಭವಿಸುವೆ ಎಂಬ ಭ್ರಮಾ ಲೋಕದಲ್ಲಿ ಬದುಕು ಸಾಗಿಸುವಂತವನು. ಅಂತಹ ಗೌಡ ಶಾರಿಯಂತಹ ಹೆಣ್ಣನ್ನು ಭೋಗಿಸಬೇಕೆಂದು ಮನೆಗೆ ಕರೆ ತಂದು ಅವಳು ಆ ಮನೆಯ ಆಳು ಮಗನೊಟ್ಟಿಗೆ ಓಡಿ ಹೋಗುವ ವಿಷಯವನ್ನು ಕಂಬಾರರ ನಾಯಿಕತೆ ಚಿತ್ರಿಸುತ್ತದೆ. ಇಲ್ಲಿ ಸೋಮಣ್ಣನು ಕಾಲಿನಿಂದ ತೋರಿಸಿದ ಕೆಲಸವನ್ನು ತಲೆ ಮೇಲೆ ಹೊತ್ತು ಮಾಡುತ್ತಿದ್ದ ನಾಯಿಮಗ, ಶಾರಿಯ ಮಾತಿಗಳಿಂದ ಪ್ರೇರಣೆ ಪಡೆದು ಅವಳನ್ನು ಕಾಪಾಡುವ ನೆಪದಲ್ಲಿ ಸೋಮಣ್ಣನಿಂದ ಸ್ವಾತಂತ್ರ್ಯ ಪಡೆದುಕೊಳ್ಳುತ್ತಾನೆ. ಶಾರಿ ಇಲ್ಲಿ ಒಂದು ಸಮುದಾಯದ ಉದ
APA, Harvard, Vancouver, ISO, and other styles
4

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್‌ ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
5

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
6

ನವೀನ್, ಕುಮಾರ ಎ. ಜಿ. "ಅಂಬೇಡ್ಕರ್‌: ಅಸ್ಪೃಶ್ಯರ ಆರ್ಥಿಕ ಸ್ವಾವಲಂಬನೆಗಾಗಿ ನಡೆಸಿದ ಚಿಂತನೆಗಳು". AKSHARASURYA JOURNAL 06, № 05 (2025): 121 to 132. https://doi.org/10.5281/zenodo.15504345.

Full text
Abstract:
ಇಂದು ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳ ಏಳಿಗೆಯು ಒಂದು ರಾಷ್ಟ್ರೀಯ ಸಮಸ್ಯೆಯಾಗಿ ಉಳಿಯುತ್ತ ಬಂದಿದೆ. ಕಳೆದ ನಲವತ್ತು ವರ್ಷಗಳಿಂದ ಅಂದರೆ 1991 ರಿಂದ ಮಾಹಿತಿ ತಂತ್ರಜ್ಞಾನದಿಂದ ಪ್ರಾರಂಭವಾಗಿ 2018ರ ಮೇಕಿಂಗ್ ಇಂಡಿಯಾ ವರೆಗೆ ಅನೇಕ ಯೋಜನೆಗಳು ಹತ್ತಾರು ಭಾಗ್ಯಗಳು ಅಪಾರ ಪ್ರಮಾಣದ ಆರ್ಥಿಕ ನೆರವು ನೀಡಲಾಗಿದೆ. ಆದರೂ ಸಮಾಜದಲ್ಲಿ ಆರ್ಥಿಕ ದುರ್ಬಲ ವರ್ಗ ಸಮಾಜಿಕವಾಗಿ ಮುಖ್ಯವಾಹಿನಿಯಲ್ಲಿ ಬಂದು ಮಹತ್ತರವಾದ ಸಾಧನೆ ಮಾಡುವಲ್ಲಿ ವಿಫಲವಾಗಿದೆ. ಬಡತನ ನಿರ್ಮೂಲನೆ ಅಸಾಧ್ಯವೇನೋ ಅನಿಸುವಷ್ಟರ ಮಟ್ಟಕ್ಕೆ ಬಂದು ನಿಂತಿದೆ. ದೌರ್ಜನ್ಯ, ದಬ್ಬಾಳಿಕೆ, ಕೊಲೆ, ಸುಲಿಗೆ, ಮೋಸ, ಸಂಪತ್ತಿನ ಕ್ರೋಢಿಕರಣಕ್ಕಾಗಿ ನಡೆಯುತ್ತ ಕಾನೂನೆ ಭಯಪಡುವ ಮಟ್ಟಕ್ಕೆ ನಡೆಯುತ್ತಿವೆ. ಇದರ ಪರಿಣಾಮ ಜನ ಅನ್ಯ ಧರ್ಮಕ್ಕೆ ಮತಾಂತರ ಹೊಂದುತ್ತ ಅಲ್ಲಿಯೂ ನೆಮ್ಮದಿ ಕಾಣದ
APA, Harvard, Vancouver, ISO, and other styles
7

ಕಾಂತರಾಜ, ಯಾದವ್ ಸಿ. "ದಲಿತ ಆತ್ಮಕತೆಗಳಲ್ಲಿ ಬಾಲ್ಯ ಮತ್ತು ಶಾಲಾ ಶಿಕ್ಷಣದ ನಿರೂಪಣೆಗಳು". AKSHARASURYA 06, № 02 (2025): 84 to 91. https://doi.org/10.5281/zenodo.15124072.

Full text
Abstract:
ಮನುಷ್ಯನ ಬದುಕಿನಲ್ಲಿ ಬಾಲ್ಯದ ಅನುಭವವು ತುಂಬಾ ಮುಖ್ಯವಾದದ್ದು. ಬಾಲ್ಯದ ಬದುಕು ಎಲ್ಲರಿಗೂ ಒಂದೇ ರೀತಿಯದಾಗಿರುವುದಿಲ್ಲ. ಆ ವಯಸ್ಸಿನ ಶಿಕ್ಷಣವೂ ಕೂಡ ಬಾಲ್ಯದ ಅನುಭವವಗಳನ್ನು ದಟ್ಟವಾಗಿ ಆವರಿಸಿಕೊಂಡಿರುತ್ತದೆ. ಜಾತಿಯಾಧಾರಿತ ಸಾಮಾಜಿಕ ವ್ಯವಸ್ಥೆಯೂ ಕೂಡ ಈ ಬಾಲ್ಯದ ಮೇಲೆ ಪ್ರಭಾವವನ್ನು ಬೀರುತ್ತದೆ. ಮೇಲ್ಜಾತಿ, ಮಧ್ಯಮ ಜಾತಿಗಳು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದ ಕುರಿತಂತೆ ಎಚ್ಚರಿಕೆಯಿಂದಿದ್ದರೆ, ತಳ ಸಮುದಾಯಗಳು ಮತ್ತು ಶ್ರಮಿಕ ವರ್ಗ ಮೂಲಭೂತ ಸೌಕರ್ಯಗಳಿಗಾಗಿಯೇ ಹೋರಾಟ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂಧರ್ಭದಲ್ಲಿ ಶಿಕ್ಷಣದ ಕುರಿತ ಮಾತು ಕನಸಿನ ಪಯಣವೇ ಸರಿ. ಹಸಿವು ಮತ್ತು ಅವಮಾನಗಳಾಚೆಗಿನ ಬದುಕನ್ನು ದಲಿತ ಆತ್ಮಕಥೆಗಳಲ್ಲಿ ಕಾಣಬಹುದು. ಶಾಲೆಯ ಕುರಿತಂತೆ, ಶಿಕ್ಷಕರ ಕುರಿತಂತೆ ದಲಿತ ಆತ್ಮಕತೆಗಳು ಚಿತ್ರಿಸುವ ಸೂಕ್ಷ್ಮ ಪ
APA, Harvard, Vancouver, ISO, and other styles
8

ಗಣೇಶ та ಹೆಚ್. ಎಸ್. ನಿಂಗರಾಜು. "ಆಧುನಿಕ ಕನ್ನಡ ಸಾಮಾಜಿಕ ನಾಟಕಗಳಲ್ಲಿ ಪ್ರತಿಯಜಮಾನಿಕೆಯ ಸ್ವರೂಪ". AKSHARASURYA JOURNAL 04, № 06 (2024): 63 to 73. https://doi.org/10.5281/zenodo.13724751.

Full text
Abstract:
ಭಾರತದಂತಹ ದೇಶವು ಸಂಕೀರ್ಣವಾದ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿದೆ.  ಅಂತಹ ಪ್ರಾಬಲ್ಯಗಳ ಆಧಾರವು ಸಂಕೀರ್ಣ ಸ್ವರೂಪವನ್ನು ಹೊಂದಿದೆ.  ಭಾರತದ ವರ್ಣ ಆಧಾರಿತ ಸಾಮಾಜಿಕ ವ್ಯವಸ್ಥೆಯಲ್ಲಿ, ವರ್ಣಾಸ್‌ನ ಮೇಲಿನ ಸ್ತರಗಳಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಪ್ರಾಬಲ್ಯ ವ್ಯವಸ್ಥೆಗಳು ಛಿದ್ರಗೊಳ್ಳುತ್ತಿವೆ.  ಸಬಾಲ್ಟರ್ನ್ ಅಡಿಯಲ್ಲಿ ಬರುವ ನಾಲ್ಕನೇ ವರ್ಣಾ, ಶೂದ್ರವರ್ಣ,  ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಭಾಗವಹಿಸುವಿಕೆಯಿಂದ ವಂಚಿತವಾಗಿದೆ. ಸಾಂಪ್ರದಾಯಿಕವಾಗಿ ಮೇಲ್ವರ್ಗದ  ಪ್ರಾಬಲ್ಯಗಳು ಕಠಿಣ ಅಭ್ಯಾಸಗಳನ್ನು ನಿರ್ಮಿಸುವ ಮೂಲಕ ಅಧೀನ ವರ್ಗವನ್ನು ಬಳಸಿಕೊಳ್ಳುತ್ತವೆ. ಈ ಅಧೀನ ನೆಲೆಗಳು ಮೇಲ್ಮಟ್ಟದ ಪ್ರಾಬಲ್ಯಗಳ ವಿರುದ್ಧ ಹೆಚ್ಚು ಸಹನೆ ಮತ್ತು ಮೂಕತನದಿಂದ ಪ್ರತಿಭಟಿಸಲು ಸಾಧ್ಯವಾಗುತ್ತಿಲ್ಲ. ಅವರ ನ
APA, Harvard, Vancouver, ISO, and other styles
9

ಕುಮಾರಯ್ಯ, ಡಿ.ಎಸ್. "ಬಸವಣ್ಣನವರ ವಚನಗಳಲ್ಲಿ-ಜಾತಿ ನಿರಾಕರಣೆ". AKSHARASURYA JOURNAL 06, № 06 (2025): 26 to 31. https://doi.org/10.5281/zenodo.15580919.

Full text
Abstract:
ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಶರಣ ಸಮಾಜವು ಕುಲ, ಮತ, ಲಿಂಗ, ವರ್ಣ, ವರ್ಗಇವುಗಳಿಂದ ಮುಕ್ತವಾಗಿತ್ತು. ಬಸವಣ್ಣನವರು ಜಾತಿಯ ವಿಷ ಬೀಜವನ್ನು ಕಿತ್ತು ನವ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಸಾರಿದರು. ಮನುಧರ್ಮದ ಕರ್ಮಸಿದ್ದಾಂತವನ್ನು ಬಸವಣ್ಣನವರು ಅಲ್ಲಗಳೆದು ಕಾಯಕ ಸಿದ್ಧಾಂತವನ್ನು ಕಾರ್ಯಗತಗೊಳಿಸಿದರು. ಬಸವಣ್ಣನವರ ಚಿಂತನೆಗಳಲ್ಲಿ ಜಾತಿ ನಿರಾಕರಣೆಯೂ ಸಹ ಮಹತ್ವವಾದ ಚಿಂತನೆಯಾಗಿದೆ. ಜಾತಿ ನಿರಾಕರಣೆ ವಿಚಾರದಲ್ಲಿ ಎಲ್ಲರಿಗಿಂತ ಹೆಚ್ಚು ಮಾನಸಿಕ ಸಂಘರ್ಷವನ್ನು ಹೊಂದಿದವನು ಬಸವಣ್ಣನವರು, ಇಲ್ಲದಿದ್ದರೆ ‘ಉತ್ತಮ ಕುಲದಲ್ಲಿ ಹುಟ್ಟಿದನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯ ಎಂದು ಹೇಳುವ ನೋವು ಏಕಿರಬೇಕಿತ್ತು?’ ಉತ್ತಮ ಜಾತಿ ಸಂಕೋಲನೆಯಿಂದ ಬಿಡಿಸಿಕೊಂಡು ಹೊರಬರುವುದಕ್ಕಾಗಿ ತಾನು ಹುಟ್ಟಿದ ಜಾತಿಯನ್ನು ನಿರಾಕ
APA, Harvard, Vancouver, ISO, and other styles
10

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
11

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
12

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
APA, Harvard, Vancouver, ISO, and other styles
13

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
14

ನಾಗರಾಜ, ಹರಿಜನ. "ಅಸ್ಪೃಶ್ಯತೆಯ ನಿರ್ಮೂಲನೆಯಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ". AKSHARASURYA JOURNAL 06, № 05 (2025): 105 to 113. https://doi.org/10.5281/zenodo.15504316.

Full text
Abstract:
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ್ಮದಾಗಿದ್ದು ಇದರ ಹೆಮ್ಮೆಯ ಸಂಗತಿಯೆಂದರೆ ಅದುವೇ ಸಮಾನತೆ ಎಂದು ಹೇಳಬಹುದು. ಭಾರತದ ಸರ್ಕಾರವು ಸಂವಿಧಾನ ಜಾರಿಯಾದಾಗಿನಿಂದ ಹಿಡಿದು ಪ್ರಸ್ತುತ ದಿನಮಾನದವರೆಗೆ ಇಲ್ಲಿನ ಪ್ರತಿಯೊಬ್ಬ ಪ್ರಜೆಯೂ ಭ್ರಾತೃತ್ವ ಭಾವನೆಯೊಂದಿಗೆ ಯಾವುದೇ ಜಾತಿ, ವರ್ಗ ಮತ್ತು ಮತಗಳ ಬೇಧಭಾವವಿಲ್ಲದೇ ʼನಾವೆಲ್ಲರೂ ಭಾರತೀಯರು, ನಾವೆಲ್ಲರೂ ಸಮಾನರು’ ಎನ್ನುವಂತೆ ಕಾಯ್ದೆ ಕಾನೂನುಗಳನ್ನ
APA, Harvard, Vancouver, ISO, and other styles
15

ಸಿ., ಬಿ. ಹೊನ್ನುಸಿದ್ಧಾರ್ಥ. "ನಿರಂಜನ 'ವಿಮೋಚನೆ' ಕಾದಂಬರಿ: ನಗರ ಬದುಕಿನ ವಾಸ್ತವ ಚಿತ್ರಣದ ಜೀವನ ವೃತ್ತಾಂತದ ಅನಾವರಣ". AKSHARASURYA 05, № 01 (2024): 33 to 42. https://doi.org/10.5281/zenodo.13870631.

Full text
Abstract:
ಮಾರ್ಕ್ಸ್‌ವಾದಿ ಸಿದ್ಧಾಂತದಿಂದ ಪ್ರಭಾವಿತರಾದ ನಿರಂಜನರು ವೈಚಾರಿಕ ಚಿಂತನೆಯುಳ್ಳವರಾಗಿದ್ದರು. ಅವರ ಮೊದಲ ಕಾದಂಬರಿಯಾದ ‘ವಿಮೋಚನೆ’ಯೂ ವರ್ತಮಾನದಲ್ಲಿ ನಿಂತು ಭೂತವನ್ನು ಕೆಣಕುತ್ತಾ ಹೋಗುವ ನಿರೂಪಣಾ ತಂತ್ರಗಾರಿಕೆಯ ಮೂಲಕ ಕಾದಂಬರಿಯ ಉದ್ದಕ್ಕೂ ನೀತಿಯಿಂದ ಕೂಡಿದ ಸಾಮಾಜಿಕ ವ್ಯವಸ್ಥೆಯನ್ನು ವ್ಯಂಗ್ಯಭರಿತ ದಾಟಿಯಲ್ಲಿ ಕುಟುಕಿದ್ದಾರೆ. ಬಾಲ್ಯದಿಂದಲೂ ಕಡುಬಡತನದ ಬದುಕು ನಡೆಸಿದ್ದ ಕಥಾನಾಯಕ ಚಂದ್ರಶೇಖರನಿಗೆ ತನ್ನ ಬದುಕಿನಲ್ಲಿ ಉಂಟಾದ ದುರ್ಘಟನೆಗಳು ದೊಡ್ಡ ಹೊಡೆತವನ್ನು ನೀಡುತ್ತವೆ. ಅವನು ಇಟ್ಟ ಪ್ರೀತಿ, ವಿಶ್ವಾಸ, ನಂಬಿಕೆಗಳೇ ಅವನಿಗೆ ಮುಳುವಾಗಿ ಸಾಮಾಜಿಕ ವ್ಯವಸ್ಥೆ ಅವನ ಬಡತನವನ್ನು ತನ್ನ ಲಾಭಕ್ಕಾಗಿ ಬಳಸಿಕೊಂಡು ಅವನನ್ನು  ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಜೈಲು ಶಿಕ್ಷೆಗೆ ಒಳಗಾದ ಚಂದ್ರಶೇಖರ ತಾನು
APA, Harvard, Vancouver, ISO, and other styles
16

ವೆಂಕಟೇಶ್, ಬಿ. ಜಿ. "ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಕಾರ್ಮಿಕರ ಸಮಸ್ಯೆಗಳು". AKSHARASURYA JOURNAL 03, № 04. SPECIAL ISSUE. (2024): 170 to 174. https://doi.org/10.5281/zenodo.10930259.

Full text
Abstract:
ಕೃಷಿ ಕಾರ್ಮಿಕರು ಕೃಷಿ ಕ್ಷೇತ್ರದಲ್ಲಿ ಬೆಳೆ ನಾಟಿ, ಜಾನುವಾರುಗಳ ಪಾಲನೆ, ಕೊಯ್ಲು ಮತ್ತು ಸಂಸ್ಕರಣೆ ಮುಂತಾದ ಕಾರ್ಯದಲ್ಲಿ ಭಾಗವಹಿಸುತ್ತಾರೆ. ಕೃಷಿ ಚಟುವಟಿಕೆಯಲ್ಲಿ ಮಾನವ ಸಂಪನ್ಮೂಲವು ಅವಶ್ಯಕವಾಗಿ ಅಗತ್ಯವಿರುತ್ತದೆ. ಈ ಹಿನ್ನೆಲೆ ಕೃಷಿ ಕಾರ್ಮಿಕರು ದೀರ್ಘಾವಧಿವರೆಗೆ ವ್ಯವಸಾಯ ಭೂಮಿಯಲ್ಲಿ ದುಡಿಯುತ್ತಿರುತ್ತಾರೆ. ಅವರು ಕಾಲಾವಧಿ ಅಥವಾ ತಾತ್ಕಾಲಿಕ ಅವಧಿಯ ಆಧಾರದ ಮೇಲೆ ಕೆಲಸ ಮಾಡಬಹುದು. ಅಲ್ಲದೆ ಕೃಷಿಕರು ಅಥವಾ ಕೃಷಿ ಸಹಕಾರಿ ಸಂಸ್ಥೆಗಳಲ್ಲಿ ಕಾರ್ಯವನ್ನು ನಿರ್ವಹಿಸಬಹುದು. ಕೃಷಿ ಕಾರ್ಮಿಕರ ಸವಾಲುಗಳು ಮತ್ತು ಅನಿಶ್ಚಿತತೆಯ ಹೊರತಾಗಿಯೂ ಇದು ಜಾಗತಿಕ ಆಹಾರ ಉತ್ಪಾದನೆಯ ನಿರ್ಣಾಯಕ ಅಂಶವಾಗಿದೆ. ಪ್ರಪಂಚದ ಅನೇಕ ಭಾಗಗಳಲ್ಲಿ ಕೃಷಿ ಕಾರ್ಮಿಕರು ಅನೌಪಚಾರಿಕ ಮತ್ತು ಅನಿಯಂತ್ರಿತರಾಗಿದ್ದಾರೆ. ಅವರು ತಮ್ಮ ಹಕ್ಕುಗಳಿಗಾಗಿ ಹೋರಾಟವನ್ನು ನಡೆ
APA, Harvard, Vancouver, ISO, and other styles
17

ಹನುಮಂತಪ್ಪ, ಬ್ಯಾಡಗಿ. "ಬ್ಯಾಡಗಿ ತಾಲೂಕಿನ ಕೃಷಿ ಆಚರಣೆಗಳು". AKSHARASURYA 05, № 01 (2024): 50 to 58. https://doi.org/10.5281/zenodo.13870704.

Full text
Abstract:
ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಆದಿಮಾನವನು ಆರಂಭದಲ್ಲಿ ಗಡ್ಡೆ -ಗೆಣಸುಗಳನ್ನು ತಿನ್ನುತ್ತಾ ಒಂದೆಡೆ ನೆಲೆ ನಿಂತು ಕೃಷಿ ಆರಂಭಿಸಿದ. ಇದನ್ನು ಅನಾದಿಕಾಲದಿಂದಲೂ ನಮ್ಮ ಜನಪದರು ಮಾಡಿಕೊಂಡು ಬರುತ್ತಿದ್ದಾರೆ. ಕೃಷಿಯನ್ನು ನಮ್ಮ ಜನಪದರು ಹಬ್ಬದ ರೀತಿ ಆಚರಣೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಕೃಷಿಯನ್ನು ಮಾಡಲು ಅವಶ್ಯಕವಾಗಿ ಮಳೆಬೇಕು. ಮಳೆಯನ್ನು ಸಹ ಒಂದು ಆಚರಣೆಯಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಆಚರಣೆಯಲ್ಲಿ ನಮ್ಮ ಜನಪದರು ಮನೆಗಳಿಗೆ ಹೋಗಿ ಭಿಕ್ಷಾಟನೆ ಮಾಡಿಕೊಂಡು ಮಳೆ ಬರಲು ದೈವಕ್ಕೆ ಬೇಡಿಕೊಳ್ಳುತ್ತಾರೆ. ಅದೇ ರೀತಿ ಭಾದ್ರಪದ ಶುದ್ಧ ಅಷ್ಟಮಿಯಂದು ಜೋಕುಮಾರಸ್ವಾಮಿ ಹಬ್ಬವನ್ನು ಆಚರಿಸಿ ಮಳೆ ಬರಲು ಬೇಡಿಕೊಳ್ಳುತ್ತಾರೆ. ಭಾರತ ಸುಸಂಸೃತ ರಾಷ್ಟ್ರ. ಹಾಗಾಗಿ ಭಾರತೀಯರಿಗೆ ಪಂಚಾಂಗದ ಪ್ರಕಾರ ಹೊಸ ವರ್ಷ ಮಾರ್ಚ್-ಏಪ್ರಿಲ್ ತಿಂಗ
APA, Harvard, Vancouver, ISO, and other styles
18

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
19

ಶೈಲಜ, ಹಿರೇಮಠ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಬುಡಕಟ್ಟು ಮಹಿಳೆ: ಸ್ಥಾಪಿತ ಗ್ರಹಿಕೆಗಳಿಗೆ ಭಿನ್ನಮತ". AKSHARASURYA 05, № 02 (2024): 01 to 34. https://doi.org/10.5281/zenodo.14035474.

Full text
Abstract:
ಪ್ರಸ್ತುತ ಸಂದರ್ಭದಲ್ಲಿ ವಿಶಾಲಾರ್ಥ ದೃಷ್ಟಿಕೋನದ ಬರಹಗಾರರಾಗುವುದೆಂದರೆ, ಸಮಾಜದಲ್ಲಿನ ಜಾತಿ, ಪ್ರದೇಶ, ಬುಡಕಟ್ಟು, ಆದಿವಾಸಿ ಮತ್ತು ಜಂಡರ್ ಆಧಾರಿತ ಶ್ರೇಣೀಕರಣವನ್ನು ಮೀರುವುದೇ ಆಗಿದೆ; ಹಾಗಿದ್ದರೂ ಅಸಮಾನತೆಗೆ ಬುನಾದಿಯೊದಗಿಸುವ ಶ್ರೇಣೀಕರಣವನ್ನು ಅಸ್ಮಿತೆಯಾಗಿ, ಅನನ್ಯತೆಯಾಗಿ ಚಿಂತಕರು ನಿರೂಪಿಸಿದ್ದರ ಪರಿಣಾಮದಿಂದಾಗಿ, ಅಸಮಾನತೆಯನ್ನು ಸಮರ್ಥಿಸುವ ನಿರೂಪಣೆಗಳು ಸಾಹಿತ್ಯ ಲೋಕದಲ್ಲೂ ನಿರಾತಂಕವಾಗಿ ಮುಂದುವರೆದಿವೆ. ಬರಹಲೋಕದೊಳಗಿನ ಇಂತಹ ನಿರೂಪಣೆಯ ರಾಜಕಾರಣವೇ ಸತ್ಯವನ್ನು ಸೃಷ್ಟಿಸುತ್ತ, ಅದನ್ನು ಒಪ್ಪುವಂತೆ ಜ್ಞಾನದ ಅಧಿಕಾರದ ನೆಲೆಯಲ್ಲಿ ಒತ್ತಾಯಿಸುತ್ತದೆ; ಅಧ್ಯಯನದೊಳಗಿನ ಬರಹಗಾರರ ಉದ್ದೇಶದ ಭಾಗವಾಗಿ ನಿರೂಪಣೆಗೊಂಡ ನಿಲುವುಗಳನ್ನು ಸಮಸ್ಯೀಕರಿಸಿಕೊಂಡು ಮರುವಿಶ್ಲೇಷಣೆಗೆ ಒಳಪಡಿಸಬೇಕಿದೆ. ಈ ಉದ್ದೇಶದ ಹಿನ್ನೆಲೆಯಲ್ಲಿಯೇ ಮಹಿಳೆ
APA, Harvard, Vancouver, ISO, and other styles
20

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
21

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
22

ಶಶಿಕುಮಾರ್, ಬಿ. ಎಸ್., та ಪಿ. ರಾಜು ಎಲ್. "ಕರ್ನಾಟಕದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರು: ಯಶೋಧರಮ್ಮ ದಾಸಪ್ಪ". AKSHARASURYA JOURNAL 03, № 04. SPECIAL ISSUE. (2024): 188 to 201. https://doi.org/10.5281/zenodo.10930720.

Full text
Abstract:
1857ರ ಮಹಾಕ್ರಾಂತಿಯ ನಂತರ ಭಾರತ ರಾಷ್ಟ್ರೀಯ ಕಾಂಗ್ರೇಸ್ ಸ್ಥಾಪನೆಯೊಂದಿಗೆ ದೇಶದ ಸ್ವಾತಂತ್ರ್ಯ ಹೋರಾಟ ವಿಧಾನವು ವೇಗಪಡೆದುಕೊಂಡಿತು, ಅದರಲ್ಲೂ ಗಾಂಧೀಜಿಯವರ ಅಹಿಂಸಾತ್ಮಕ ಯುಗದಲ್ಲಿ ಸ್ವಾತಂತ್ರ್ಯ ಹೋರಾಟವಂತು ದೇಶದ ಮೂಲೆ-ಮೂಲೆಗೂ ಪಸರಿಸಿ, ದೇಶದಲ್ಲಿನ ರೈತರು, ಕಾರ್ಮಿಕರು, ವಿಧ್ಯಾರ್ಥಿಗಳು, ಮಧ್ಯಮ ವರ್ಗದವರು, ಮಹಿಳೆಯರು ಮುಂತಾದ ಎಲ್ಲಾ ವರ್ಗದ ಜನರು ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಈ ಕಾಲಾವಧಿಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಜ್ವಾಲೆಯಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಪುರುಷರೊಂದಿಗೆ ಸ್ತ್ರೀಯರು ಸಹಾ ಸರಿಸಮಾನವಾಗಿ ಭಾಗವಹಿಸಿ, ಅಪಾರ ತ್ಯಾಗ ಮತ್ತು ಕಷ್ಟಸಹಿಷ್ಣುತೆಯೊಂದಿಗೆ ಸ್ವಾತಂತ್ರ್ಯ ಸಾಧನೆಯಲ್ಲಿ ಪುರುಷರೊಂದಿಗೆ ಸಮಾನ ಪಾತ್ರವಹಿಸಿ ವಿಜೃಂಬಿಸಿದ ಮಹಿಳಾ ಸ್ವಾ
APA, Harvard, Vancouver, ISO, and other styles
23

ವಿಜಯಲಕ್ಷ್ಮಿ, ದತ್ತಾತ್ರೇಯ ದೊಡ್ಡಮನಿ. "ಯಾಜ್ಞಸೇನಿಯ ಆತ್ಮಕಥನ: ದಲಿತತ್ವದ ನೆಲೆಗಳು". AKSHARASURYA JOURNAL 04, № 06 (2024): 135 to 142. https://doi.org/10.5281/zenodo.13725621.

Full text
Abstract:
ದಲಿತರು ಎಂದರೆ ಶೋಷಿತರು ಎನ್ನುವುದು ಕೇವಲ ಹಾಳೆಗಳಲ್ಲಿ, ಅಕ್ಷರ ರೂಪದಲ್ಲಿ ಮಾತ್ರ ಉಳಿದುಕೊಂಡಿದೆ. ಸಮಾಜದಲ್ಲಿ ಅದು ರೂಢಿಗೆ ಬಂದೇ ಇಲ್ಲ. ದಲಿತ ಎಂದರೆ ಕೇವಲ ಜಾತಿ ಸೂಚಕ ಪದವಾಗಿ ಮಾತ್ರ ಬಳಕೆಯಲ್ಲಿದೆ. ಎಲ್ಲಾ ವಿದ್ವಾಂಸರ ಹೇಳಿಕೆ ಗಳನ್ನು ಆಧಾರವಾಗಿಟ್ಟುಕೊಂಡು, ಯಾವುದೇ ವರ್ಗದ ಶೋಷಿತ ಮಹಿಳೆಯನ್ನು ದಲಿತ ಮಹಿಳೆ ಎಂದು ಗುರುತಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿಯೇ ಮಹಾಭಾರತದಲ್ಲಿ ಮುಖ್ಯ ಪಾತ್ರವಾಗಿ ಕಾಣುವ ದ್ರೌಪದಿಯು ಮಾನಸಿಕವಾಗಿ, ಕೆಲವೊಮ್ಮೆ ದೈಹಿಕವಾಗಿ ನಿರಂತರವಾಗಿ ಶೋಷಣೆಗೆ ಒಳಗಾಗಿದ್ದಾಳೆ. ಆದ್ದರಿಂದಲೇ ಈ ಲೇಖನದಲ್ಲಿ ಯಾಜ್ಞಸೇನೆಯನ್ನು ದಲಿತ ಸ್ತ್ರೀ ಎಂದು, ಅವಳ ಪ್ರಜ್ಞಾಪೂರ್ವಕವಾದ ವ್ಯವಸ್ಥೆಯ ವಿರುದ್ಧವಾದ ಧ್ವನಿಯನ್ನು ದಲಿತತ್ವದ ಧ್ವನಿಯಾಗಿ ಗುರುತಿಕೊಂಡು ಈ ಲೇಖನದಲ್ಲಿ ಚರ್ಚಿಸಿಲಾಗಿದೆ.
APA, Harvard, Vancouver, ISO, and other styles
24

ಬಸವರಾಜ, ಬಾರಕೇರ. "ಶತಕಗೈದ ತಡಹಾಳ ಸಹಕಾರಿ ಸಂಘ". AKSHARASURYA 06, № 02 (2025): 155 to 158. https://doi.org/10.5281/zenodo.15124216.

Full text
Abstract:
ಜನರ ಸೇವೆಯೇ ಜನಾರ್ಧನನ ಸೇವೆ ಎಂಬಂತೆ ಪ್ರಾಚೀನ ಕಾಲದಿಂದಲೂ ಭಾರತ ಸೇವೆಯಲ್ಲಿ ಎತ್ತಿದ ಕೈ. ಅಂತೆಯೇ ಕರ್ನಾಟಕದಲ್ಲಿಯೂ ಕೂಡಾ ಸಹಕಾರ ಸಂಘಗಳು ಸ್ವಾತಂತ್ರ್ಯಪೂರ್ವದಿಂದಲೂ ಸೇವೆಗೆ ಸಿದ್ಧವಾಗಿವೆ. ಅನೇಕ ಬಡ ಮತ್ತು ಮಧ್ಯಮ ವರ್ಗದ ಜನರು ಹಾಗೂ ಅಂಚೀಕರಣಗೊಂಡ ಸಮೂಹಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಗದಗ ಜಿಲ್ಲೆಯ ಕಣಗಿನಹಾಳದಲ್ಲಿ ಇಡೀ ಭಾರತದಲ್ಲಿಯೇ ಪ್ರಥಮ ಕೃಷಿಪತ್ತಿನ ಸಹಕಾರಿ ಸಂಘ ಸ್ಥಾಪನೆಯಾಯಿತು. ರೈತರ ಏಳಿಗೆ ಬಯಸಲು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ 1922ರಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಸ್ಥಾಪನೆಯಾಯಿತು. ಇಂದು ಅನೇಕ ರೀತಿಯ ಆರ್ಥಿಕ ಸಾಮಾಜಿಕ ಸರಕಾರಿ ಯೋಜನೆಗಳ ಸಹಾಯವನ್ನು ಗ್ರಾಮೀಣ ಜನರಿಗೆ ನೀಡುವಲ್ಲಿ ಯಶಸ್ವಿಯಾದ ಕೃಷಿಪತ್ತಿನ ಸಹಕಾರಿ ಸಂಘದ ಕುರಿತಾದ ಮಾಹಿತಿ ಪ್ರಸ್ತುತ ಲೇಖನದಲ
APA, Harvard, Vancouver, ISO, and other styles
25

ಸುನೀತಾ, ಮಹೇಶ್ವರಿ. "ಬಸವಣ್ಣನವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA 05, № 01 (2024): 134 to 138. https://doi.org/10.5281/zenodo.13871042.

Full text
Abstract:
೧೨ನೇ ಶತಮಾನದ ಆಂದೋಲನದ ನಾಯಕ ಮತ್ತು ಕೇಂದ್ರ ವ್ಯಕ್ತಿ ಆದ ಬಸವಣ್ಣ ಸಾಹಿತ್ಯದೃಷ್ಟಿಯಿಂದ ನೋಡಿದಾಗ ಆತ ಒಬ್ಬ ಅತ್ಯುತ್ತಮ ಕೃತಿಕಾರ ಸಮಾನತೆಯ ತತ್ವವನ್ನು ಸಾರಿದ ಹರಿಕಾರ ಎಂದು ಹೇಳುವುದು ಆಕಸ್ಮಿಕವೇ ಸರಿ. ಆತ ಹುಟ್ಟಿದ್ದು ಬಿಜಾಪುರ್ ಜಿಲ್ಲೆಯ ಬಸವನಬಾಗೇವಾಡಿ ಅಗ್ರಹಾರ ಎಂಬ ಊರಲ್ಲಿ ೧೧೩೪ಲ್ಲಿ ಜನನವಾಯಿತು. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಇವರು ಬಾಲ್ಯದಿಂದಲೇ ವೈದಿಕ ಸಂಸ್ಕೃತಿಯ ವಿರೋಧಿಗಳಾಗಿದ್ದರು. ಇವರು ಹುಟ್ಟಿದ್ದು ಉತ್ತಮ ಬ್ರಾಹ್ಮಣ ಮನೆತನದಲ್ಲಿ ಆದರು ದಲಿತ ವರ್ಗದ ಜೊತೆ ಬೆರೆತು ಅವರಿಗಾಗಿ ತನ್ನ ಜೀವನದುದ್ದಕ್ಕೂ ಹೋರಾಡಿದನೆಂದು ತಿಳಿದು ಬರುತ್ತದೆ. ಹೊಸ ಹೊಸ ಬಗೆಯ ಅನೇಕ ಸುಧಾರಣೆಗಳನ್ನು ಜಾರಿಗೆ ತಂದು ನಮ್ಮ ಆಡಳಿತವನ್ನು ಸರಳಗೊಳಿಸಿದರು. ಎಲ್ಲಾ ಶರಣರನ್ನು ಕೂಡಿಸಿ ಎಲ್ಲಾ ಜಾತಿಯವರೊಡನೆ ತಮ್ಮನ್ನು ತಾವು ತೊಡಗಿಸಿಕೊಂಡು ಸ
APA, Harvard, Vancouver, ISO, and other styles
26

ಡಾ., ಶರತ್. ಎ.ಎಂ, ಎಂ ಎಸ್ ಮಂಜುನಾಥ್ ಡಾ. та ಕೆ ವಿ ವಿನಂತಿ. "ಗ್ರಾಮೀಣ ಅಭಿವೃದ್ಧಿಯಲ್ಲಿ ಮಹಾತ್ಮಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪಾತ್ರ". International Journal of Advance and Applied Research 4, № 16 (2023): 121–31. https://doi.org/10.5281/zenodo.7939987.

Full text
Abstract:
ಭಾರತ ಒಂದು ಹಳ್ಳಿಗಳ ದೇಶ. ಇಲ್ಲಿ ಸುಮಾರು ಐದು ಲಕ್ಷಕ್ಕಿಂತಲೂ ಅಧಿಕ ಹಳ್ಳಿಗಳಿವೆ. 2001 ರ ಪ್ರಕಾರ ಸುಮಾರು 742 ದಶಲಕ್ಷ ಜನರು ಅಂದರೆ, ಶೇಕಡ 72.2ಕ್ಕಿಂತಲೂ ಅಧಿಕ ಜನರು ಗ್ರಾಮಾಂತರ ಪ್ರದೇಶಗಳಲ್ಲಿ ವಾಸವಾಗಿದ್ದಾರೆ, ಕಳೆದ ಐದು ದಶಕಗಳ ಅಭಿವೃದ್ಧಿಯ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ನಿವಾರಿಸುವಲ್ಲಿ ವಿಫಲಗೊಂಡಿದ್ದು, ಗ್ರಾಮೀಣ ಭಾರತ ಹಲವು ಸಮಸ್ಯೆಗಳ ಆಗರವಾಗಿಯೇ ಉಳಿದುಕೊಂಡಿದೆ. ಬಡತನ, ನಿರುದ್ಯೋಗ, ಮೂಲಭೂತ ಸೌಕರ್ಯಗಳ ಅಜ್ಞಾನ, ಮುಂತಾದ ಸಮಸ್ಯೆಗಳು ಗ್ರಾಮೀಣ ಭಾರತ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಾಗಿವೆ. ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಬಡತನ ಬಹುಮುಖ್ಯ ಪಾತ್ರ ವಹಿಸುತ್ತದೆ. ಬಡತನ ಎಂಬುದು ಜನರ ಭರವಸೆ ರಹಿತ ನಿಕೃಷ್ಟ ಜೀವನದ ಪರಿಸ್ಥಿತಿಯಾಗಿದೆ. ಸಮಾಜದ ಒಂದು ವರ್ಗದ ಜನರು ತಮ್ಮ ಮೂಲವಶ್
APA, Harvard, Vancouver, ISO, and other styles
27

ಮಾನಸ, ಜಿ. "ಶ್ರೀಸಾಮಾನ್ಯವೇ ಭಗವನ್ ಮಾನ್ಯಂ, ಶ್ರೀಸಾಮಾನ್ಯನೇ ಭಗವದ್ ಧನ್ಯಂ (ಕುವೆಂಪು ವಿರಚಿತ 'ಧನ್ವಂತರಿ ಚಿಕಿತ್ಸೆ' ರಂಗಪ್ರಯೋಗವನ್ನು ಕುರಿತು)". AKSHARASURYA 03, № 06 (2024): 19 to 32. https://doi.org/10.5281/zenodo.11126849.

Full text
Abstract:
ಸ್ವಾತಂತ್ರ್ಯ ಪೂರ್ವದಲ್ಲಿ ರಚಿತವಾದ ಕುವೆಂಪುರವರ ಧನ್ವಂತರಿ ಚಿಕಿತ್ಸೆ ಕಥೆ, ಸ್ವಾತಂತ್ರ್ಯ ದೊರೆತ ಏಳು ದಶಕಗಳ ನಂತರವೂ ಪ್ರಸ್ತುತ ಸ್ಥಿತಿಗತಿಗಳನ್ನು ವರ್ಣಿಸುತ್ತದೆ. ಸ್ವಾತಂತ್ರ್ಯೋತ್ತರ ಭಾರತ ವರ್ಣ ಮತ ಜಾತಿ ಭೇದಗಳಿಲ್ಲದೆ ಸರ್ವರೂ ಸಮಾನರು ಎಂದು ಘೋಷಿಸಿ ಸರ್ವರ ಏಳಿಗೆಗೆ ಸಾಧನವಾಗುವ ಸರ್ವೋದಯ ತತ್ವಕ್ಕೆ ಒಂದು ಅಧಿಕಾರ ಮುದ್ರೆ ಬಿದ್ದಂತಾಯಿತು ಎಂದು ಕುವೆಂಪುರವರು ಭಾರತ ಸಂವಿಧಾನ ಜಾರಿಯಾದಾಗ ಸಂತಸ ವ್ಯಕ್ತಪಡಿಸುತ್ತಾರೆ. ಶ್ರೀಸಾಮಾನ್ಯರಿಗೆ ದೀಕ್ಷಾ ಗೀತೆ ಎಂಬ ಕವಿತೆಯಲ್ಲಿ ಕುವೆಂಪು ಕಣ್ಣಲ್ಲಿ ಕಂಡ ಭಾರತ ಸಂವಿಧಾನದ ಆಶಯವು ದ್ವನಿ ಪೂರ್ಣವಾಗಿ ಪ್ರಸ್ತುತ ಧನ್ವಂತರಿ ಚಿಕಿತ್ಸೆ ರಂಗಪ್ರಯೋಗದಲ್ಲಿ ಮೂಡಿ ಬಂದಿದೆ. ದೈವೀಪುರುಷರಾದ ವಿಶ್ವಾಮಿತ್ರರು,&nbsp; ವಿಶ್ವವೈದ್ಯ ಧನ್ವಂತರಿಯು ಶ್ರೀಸಾಮಾನ್ಯರ ಅವತಾರವಾಗಿ ಕಾಣುತ್ತಾರೆ. ಮಹಾಗು
APA, Harvard, Vancouver, ISO, and other styles
28

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ&rsquo; ʼಬಾಬಾ ಸಾಹೇಬ್&rsquo; ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್&zwnj;ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್&zwnj; ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು.&nbsp;ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್&zwnj; ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
29

ತ್ರಿವೇಣಿ. "ಸಾಮಾಜಿಕ ಹರಿಕಾರ ಬಸವಣ್ಣ". AKSHARASURYA JOURNAL 04, № 04 (2024): 139 to 143. https://doi.org/10.5281/zenodo.13284139.

Full text
Abstract:
ಪ್ರಭುತ್ವದ ಮೇಲಾಟಕ್ಕೆ ಪರ್ಯಾಯವಾಗಿ ಜನಶಕ್ತಿ ರೂಪುಗೊಳ್ಳಬೇಕೆಂದು ಬಯಸುತ್ತಿದ್ದ ಬಸವಣ್ಣನವರು ಕಾಯಕ-ದಾಸೋಹಗಳ ಮುಖೇನ ಅದನ್ನು ಸಾಧಿಸುವ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಕಾಳಜಿಯುಳ್ಳ ಸಮಾನ ಮನಸ್ಕರ ಸಂಘಟನೆಯಿಂದ ಮಾತ್ರ ಇಂಥದ್ದನ್ನು ಸಾಧಿಸಲು ಸಾಧ್ಯವೆಂಬ ನಿಲುವಿನಲ್ಲಿ, ಜಾತಿ, ವರ್ಣ, ವರ್ಗಗಳೇ ಮೊದಲಾದ ಎಲ್ಲ ಬಂಧನಗಳನ್ನು ಮೀರಿದ &lsquo;ಅನುಭವ ಮಂಟಪ&rsquo; ಎಂಬ ಒಂದು ಅದ್ಭುತ ವೇದಿಕೆಯನ್ನು ರೂಪಿಸಿದರು. ಅನುಭವಮಂಟಪದಲ್ಲಿ ಎಲ್ಲರೂ ಸಮಾನಭಾವದಲ್ಲಿ ಸಾಮಾಜಿಕ ಒಳಿತಿನ ಉದ್ದೇಶದಿಂದ ಸೇರಿ ಪರಸ್ಪರ ಚರ್ಚೆ ಮಾಡಿದರು. ಆ ಮೂಲಕ ಅಂದೇ ಪ್ರಜಾಪ್ರಭುತ್ವಕ್ಕೆ ಅಡಿಗಲ್ಲನ್ನು ಹಾಕಿದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇನ್ನಿಲ್ಲದ ಮಹತ್ವ ನೀಡಿದ ಅನುಭವ ಮಂಟಪವು ಶರಣ ಶರಣೆಯರೆಲ್ಲ ಲಿಂಗ-ಜಾತಿಬೇಧಗಳಿಲ್ಲದಂತೆ ಒಗ್ಗೂಡಲು ಇಂಬು ನೀಡಿತು. ಇಂ
APA, Harvard, Vancouver, ISO, and other styles
30

ಡಾ., ಬಸವರಾಜ ಯು. "ಒಣಭೂಮಿ ಬೇಸಾಯದ ಬೆಳೆಗಳ ಉತ್ಪಾದನೆ". International Journal of Advance Research in Multidisciplinary 2, № 4 (2024): 69–73. https://doi.org/10.5281/zenodo.14343589.

Full text
Abstract:
ಕೃಷಿಬೆಳೆಗಳ ಉತ್ಪಾದನೆಯು ಬಿತ್ತನೆಯ ಪ್ರದೇಶ ಹಾಗೂ ಅದಕ್ಕೆ ಪೋಷಕಾಂಶಗಳನ್ನು ಹೊದಗಿಸುವುದರ ಮೇಲೆ ಬೆಳೆಯನ್ನು ಅಂದಾಜಿಸಬಹುದು. ಅಧಿಕ ಪ್ರಮಾಣದ ಇಳಿವರಿಯನ್ನು ಪಡೆಯಲು ಅವಧಿಗೆ ಸರಿಯಾಗಿ ನೀರನ್ನು ಹೊದಗಿಸಿ ಗೊಬ್ಬರ, ಕಳೆತೆಗೆಯುವುದು, ಹಾಗೂ ಸರಿಯಾದ ಸಮಯಕ್ಕೆ ಬೆಳೆಯನ್ನು ಕಟಾವು ಮಾಡಿದರೆ ಉತ್ತಮವಾದ ಫಲವನ್ನು ಪಡೆಯಬಹುದಾಗಿದೆ. ಅದರೆ ಒಣಭೂಮಿ ಬೇಸಾಯದಲ್ಲಿ ಅದಕ್ಕೆ ವಿಧಾನವನ್ನು ಬಳಸಬೇಕಾಗಿದೆ. ಕಾರಣ ಮಳೆಯನ್ನು ಅವಲಂಭಿಸಿ ಬೆಳೆಯನ್ನು ಬೆಳೆಯುವಂತಹ ಒಂದು ಕೃಷಿ ವಿಧಾನವಾಗಿದ್ದು ಮಳೆಯು ಈ ಕೃಷಿಯ ಮುಖ್ಯ ಭೂಮಿಕೆಯಾಗಿದೆ. ಮಳೆಯಯ ವರ್ಷದಲ್ಲಿ ಇಂತಿಷ್ಟೆ ದಿನ ಬರುತ್ತದೆ ಎಂದು ಹೇಳುವುದು ಸಾಧ್ಯವಿಲ್ಲ ಏಕೆಂದರೆ ಅನಿಶ್ಚಿತವಾದ ರೀತಿಯಲ್ಲಿ ಮಳೆ ಬರುತ್ತೆದೆ ಒಂದು ವರ್ಷ ಉತ್ತಮವಾದ ಮಳೆ ಬಂದರೆ ನಂತರ ವರ್ಷವು ಬರ ಅಥವಾ ಕ್ಷಾಮವು ಬರುವಂತಹ ಸಂದರ್
APA, Harvard, Vancouver, ISO, and other styles
31

USHA. "ಉತ್ತರ ರಾಮಾಯಣ ಆಧಾರಿತ ಕನ್ನಡ ಕಾವ್ಯಗಳು". AKSHARASURYA JOURNAL 03, № 03 (2024): 56 to 62. https://doi.org/10.5281/zenodo.10775072.

Full text
Abstract:
ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡಿರುವ ರಾಮಾಯಣ ಶಕ್ತಿಯುತ ಶ್ರವ್ಯಕಾವ್ಯವಾಗಿ ರಚನೆಯಾಗಿದ್ದು, ಈ ರಾಮಾಯಣದ ಮೂಲಕ ಸಾವಿರಾರು ವರ್ಷಗಳ ಹಿಂದಿನ ಇನ್ನು ಮುಂಬರುವ ಲಕ್ಷಾಂತರ ವರ್ಷಗಳ ಜನರ ಬದುಕಿಗೆ ಪ್ರಜ್ಞಾವಂತ ಪ್ರಗತಿಯನ್ನು, ಪ್ರಜ್ಞೆಯ ಜೀವನವನ್ನು ಕಟ್ಟಿ ಕೊಡುತ್ತದೆ. ವಾಲ್ಮೀಕಿ ವಿರಚಿತ ರಾಮಾಯಣದ ಉತ್ತರ ರಾಮಾಯಣ ಭಾಗವು 14 ವರ್ಷ ವನವಾಸ ಮುಗಿಸಿ ಸೀತೆಯನ್ನು ಅಪಹರಿಸಿದ್ದ ರಾವಣನನ್ನು ಸಂಹರಿಸಿ, ಅಯೋಧ್ಯೆಗೆ ಹಿಂತಿರುಗಿ, ಪಟ್ಟಾಭಿಷೇಕವಾದ ನಂತರದ ಭಾಗವೇ ಉತ್ತರ ರಾಮಾಯಾಣ. ಈ ಭಾಗ ಪ್ರಕ್ಷಿಪ್ತ ಎಂಬ ವಾದ ವಿವಾದಗಳು ನಡೆದರೂ ಉತ್ತರ ರಾಮಾಯಣಕ್ಕೆ ಸಂಬಂಧಿಸಿದ ಹಲವಾರು ಭಾಗಶಃ ಹಾಗೂ ಪೂರ್ಣ ಪ್ರಮಾಣದ ಕೃತಿಗಳು ಕನ್ನಡದಲ್ಲಿ ರಚನೆಯಾದವು. ಕನ್ನಡ ಉತ್ತರ ರಾಮಾಯಣದಲ್ಲಿ ನಾರಾಯಣ, ನರಸ, ತಿರುಮಲೆ ವೈದ್ಯ, ಯೋಗೀಂದ್ರ, ಸೋಸಲೆ ಅಯ್ಯಶಾಸ್ತ್ರಿ ಇವರು
APA, Harvard, Vancouver, ISO, and other styles
32

ಚಿಕ್ಕಮಗಳೂರು, ಗಣೇಶ. "ವರ್ತಮಾನದ ಕನ್ನಡಿಯಲ್ಲಿ ಕನಕ ದರ್ಶನ". AKSHARASURYA JOURNAL 04, № 05 Special Issue (2024): 06 to 16. https://doi.org/10.5281/zenodo.13294272.

Full text
Abstract:
ಭಕ್ತಿಯ ಖಾಸಗಿ ವಿಚಾರಗಳನ್ನು ಸಮಾಜ ಸುಧಾರಣೆಗೆ ಮಾಧ್ಯಮವಾಗಿ ಬಳಸಿಕೊಂಡ ಕನಕದಾಸರು ಕನ್ನಡ ನಾಡಿನ ಅನನ್ಯ ಭಕ್ತಿ ಕವಿ. ಅವರು ವಾಸಿಸುತ್ತಿದ್ದ ಮಧ್ಯಕಾಲೀನ ಅವಧಿಯು ಸಂಕೀರ್ಣವಾಗಿತ್ತು. ಇದು ಧರ್ಮ ಮತ್ತು ಆಡಳಿತದ ನಡುವಿನ ತೀವ್ರ ಸಂಘರ್ಷದ ಅವಧಿ. ಅಲ್ಲಿ ಅವರು ಹರಿದಾಸ ಚಳವಳಿಯ ಮುಖವಾಣಿಯಾಗಿ ನಮ್ಮನ್ನು ಭೇಟಿಯಾಗುತ್ತಾರೆ. ಆ ಚಳವಳಿಯ ತತ್ತ್ವಶಾಸ್ತ್ರವು ಮೇಲ್ನೋಟಕ್ಕೆ ಉದಾರವಾದದ್ದಾಗಿತ್ತು. ಆಂತರಿಕವಾಗಿ ದೋಷಯುಕ್ತ, ತಾರತಮ್ಯ ಮತ್ತು ಅಸಮ ನೆಲ. ಕನಕನೂ ತನ್ನ ಹಿನ್ನಲೆಯಲ್ಲಿ ಇಟ್ಟುಕೊಂಡಿರುವ ಎಲ್ಲ ಸೈದ್ಧಾಂತಿಕ ಗೊಂದಲಗಳಲ್ಲಿ ಸಿಲುಕಿಕೊಳ್ಳುತ್ತಾನೆ. ವ್ಯಾಸಕೂಟ ಮತ್ತು ದಾಸಕೂಟಗಳು ತಾತ್ವಿಕ ಸಂಘರ್ಷದ ನಡುವೆ ತಮ್ಮನ್ನು ತಾವು ಪ್ರತಿಪಾದಿಸಲು ಹೆಣಗಾಡುತ್ತವೆ.&nbsp; ಚಳವಳಿಯ ಪರಿಸರದಲ್ಲೂ ಅಪಾರ ಒಂಟಿತನ ಅನುಭವಿಸಿದ ಕವಿ. ಇದಕ್ಕೆ ಕಾರಣವೆ
APA, Harvard, Vancouver, ISO, and other styles
33

ಶಿವರಾಜು, ಎನ್. "ಅಗ್ನಿ ಶ್ರೀಧರ್ ರವರ ಎದೆಗಾರಿಕೆ: ವಿಮರ್ಶಾತ್ಮಕ ವಿಶ್ಲೇಷಣೆ". AKSHARASURYA 03, № 05 (2024): 88–93. https://doi.org/10.5281/zenodo.10938094.

Full text
Abstract:
ಕಳೆದ ಇಪ್ಪತ್ತು ವರ್ಷಗಳ ಅವಧಿಯಲ್ಲಿ ಕನ್ನಡ ಸಾಹಿತ್ಯದಲ್ಲಿ ಪ್ರಕಟವಾದ ಅಸಲೀ ಕಥನಗಳ ಪೈಕಿ ಅಗ್ನಿ ಶ್ರೀಧರ್ ರವರ &lsquo;ಎದೆಗಾರಿಕೆ&rsquo; ಕಾದಂಬರಿಗೆ ಮಹತ್ವದ ಸ್ಥಾನವಿದೆ. ಕಥೆಯೊಳಗಿರುವ ಪ್ರೇಮ ಕಥೆಯೂ ಓದುಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಅಗ್ನಿ ಶ್ರೀಧರ್ ರವರು ಭೂಗತ ಜಗತ್ತಿನ ತಲ್ಲಣಗಳನ್ನು ವಿಭಿನ್ನ ಶೈಲಿಯಲ್ಲಿ ಈ ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ. ಎದೆಗಾರಿಕೆ ಸೋನ ಎಂಬ ಮುಂಬೈನ ಸುಫಾರಿ ಕಿಲ್ಲರ್ ನ ಬದುಕಿನ ತಲ್ಲಣಗಳನ್ನು ಕುರಿತು ಮಾತನಾಡುತ್ತದೆ. ಭಾರತದಂತಹ ದೇಶದಲ್ಲಿ ಉದ್ಯೋಗ ದೊರೆಯದ ಕೆಲ ನಿರುದ್ಯೋಗಿ ಯುವಕರು ಕಾರಣಾಂತರಗಳಿಂದ ಭೂಗತ ಜಗತ್ತನ್ನು ಪ್ರವೇಶಿಸುತ್ತಾರೆ.&nbsp; ಪ್ರಸ್ತುತ ಕೃತಿಯು ಕೆಳ ಮಧ್ಯಮ ವರ್ಗದ ಜನತೆಯ ಬದುಕಿನ ತಲ್ಲಣಗಳನ್ನು ಕುರಿತು ಮಾತನಾಡುತ್ತದೆ. ಏಕೆಂದರೆ ಪ್ರಸ್ತುತ ಕಾದಂಬರಿಯ ಕಥಾನಾಯಕ,
APA, Harvard, Vancouver, ISO, and other styles
34

ಲಕ್ಷ್ಮೀ, ಎಲ್. ಪೂಜಾರಿ. "ವಚನ ಚಳವಳಿ ಮತ್ತು ಮಹಿಳೆ". AKSHARASURYA JOURNAL 06, № 05 (2025): 54 to 59. https://doi.org/10.5281/zenodo.15504231.

Full text
Abstract:
ವಚನ ಸಾಹಿತ್ಯ ಹನ್ನೆರಡನೇ ಶತಮಾನದಲ್ಲಿ ಹುಟ್ಟಿಕೊಂಡಂತಹ ವಿಶಿಷ್ಟ ಸಾಹಿತ್ಯದ ಪ್ರಕಾರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಕಾಣುತ್ತೇವೆ. ಈ ಯುಗವನ್ನು ಸಾಮಾಜಿಕ ಪರಿವರ್ತನೆ ಯುಗ ಎಂದು ಕರೆಯುವಷ್ಟರಮಟ್ಟಿಗೆ ಬದಲಾವಣೆ ಆಗಿರುವುದನ್ನು ಕಾಣುತ್ತೇವೆ. ವಚನ ಎಂದರೆ ಮಾತು, ಉಕ್ತಿ ಎಂಬ ಅರ್ಥವನ್ನು ಹೊಂದಿದ್ದು ಗದ್ಯ ಪದ್ಯಗಳ ರೂಪದಲ್ಲಿ ಕಂಡುಬಂದಿದೆ ಮಹಿಳೆಯರ ಸಮಾನತೆಗೆ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ.ಶತಮಾನಗಳಿಂದ ಅಸ್ಪೃಳಾಗಿದ್ಧ ಅದೃಶ್ಯಳಾಗಿದ್ಧ ಹೆಣ್ಣನ್ನು ವಚನಕಾರರು ಮಾನವೀಯ ದೃಷ್ಟಿಯಿಂದ ಕಂಡಿದ್ದಾರೆ. ಪುರುಷನ ಹಾಗೆ ಮಹಿಳೆಗೆ ಸಮಾನವಾದ ಸ್ಥಾನವನ್ನು ನೀಡುವ ಮೂಲಕ 12ನೇ ಶತಮಾನದಲ್ಲಿ ವಚನಕಾರರು ಮಾಡಿದ ಒಂದು ಬೃಹತ್ ಬದಲಾವಣೆ ಇಡೀ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದೆ. ಸ್ತ್ರೀಯರ ಸಮಾನತೆಗಾಗಿ ಮಾಡಿದ ಮೊದಲ ಚಳುವ
APA, Harvard, Vancouver, ISO, and other styles
35

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Full text
Abstract:
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
APA, Harvard, Vancouver, ISO, and other styles
36

ನಾಯಕರ, ಹುಲುಗಪ್ಪ. "ಕಂಪ್ಲಿಯ 'ಕುಮಾರ ರಾಮ': ಒಂದು ಚಾರಿತ್ರಿಕ ನೋಟ". AKSHARASURYA 03, № 05 (2024): 107–13. https://doi.org/10.5281/zenodo.10938118.

Full text
Abstract:
ಮಧ್ಯಕಾಲೀನ ಕರ್ನಾಟಕದ ಇತಿಹಾಸದಲ್ಲಿ ಕುಮಾರ ರಾಮನ ಇತಿಹಾಸ ಭವ್ಯವಾದುದು ಮತ್ತು ಅಮೋಘವಾದುದು. ತಾನು ಬದುಕಿ ಬಾಳಿದ ಕಡಿಮೆ ಅವಧಿಯಲ್ಲಿ ಚರಿತ್ರೆಯನ್ನು ಸೃಷ್ಟಿಸಿದ ತಳಸಮುದಾಯದ ವ್ಯಕ್ತಿ ಎಂದರೆ ಕುಮಾರರಾಮ. ಇವರ ಕುಮ್ಮಟದುರ್ಗದ ಮನೆತನದ ಇತಿಹಾಸ ಕೇವಲ ಐವತ್ತು ವರ್ಷ. ಆ ಸಂದರ್ಭದಲ್ಲಿ ಉತ್ತರ ಭಾರತದ ಬಲಾಢ್ಯ ಮುಸ್ಲಿಂ ಸೈನ್ಯವನ್ನು ದಕ್ಷಿಣದ ಕಡೆಗೆ ಬಾರದಂತೆ ತಡೆದಿದ್ದ ವ್ಯಕ್ತಿ ಕುಮಾರರಾಮ. ಅಂತಹ ವ್ಯಕ್ತಿಯ ಐತಿಹಾಸಿಕ ನೋಟವನ್ನು ಈ ಲೇಖನದ ಮೂಲಕ ಕಟ್ಟಿಕೊಡುವ ಪ್ರಯತ್ನವನ್ನು ಮಾಡಿದ್ದೇನೆ. ವಿಜಯನಗರ ಪೂರ್ವದ ಇತಿಹಾಸದಲ್ಲಿ ಕುಮ್ಮಟದ ನಾಯಕರ ಮನೆತನದಲ್ಲಿ ಮೂರನೇಯ ಹಾಗೂ ಕೊನೆಯ ಅರಸನಾಗಿ ಕುಮಾರ ರಾಮ ಉಲ್ಲೇಖಿತನಾಗಿದ್ದ. ಐತಿಹಾಸಿಕ ಆಕರಗಳಲ್ಲಿ ಈತನ ಬಗೆಗೆ ಹೆಚ್ಚಿನ ವಿವರಗಳು ಲಭಿಸದೆ ಹೋದರೂ ಮೌಖಿಕ ಸಾಹಿತ್ಯ ಪರಂಪರೆಯಲ್ಲಿ, ಆಧುನಿಕ ಪೂರ್
APA, Harvard, Vancouver, ISO, and other styles
37

ಜ್ಯೋತಿ, ಕೆ. ಎಸ್. "ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ದೇಸಿ ಸಂಸ್ಕೃತಿ". AKSHARASURYA JOURNAL 03, № 04. SPECIAL ISSUE. (2024): 126 to 138. https://doi.org/10.5281/zenodo.10929863.

Full text
Abstract:
ಕನ್ನಡದ ಪ್ರಸಿದ್ಧ ನಾಟಕಕಾರರಲ್ಲಿ ಚಂದ್ರಶೇಖರ ಕಂಬಾರರು ಪ್ರಮುಖರಾಗಿದ್ದಾರೆ. ಘೋಡಗೇರಿಯಲ್ಲಿ ಜನಿಸಿದ ಕಂಬಾರರು ಹಳ್ಳಿ ಬದುಕಿನ ವಿವಿಧ ಮಜಲುಗಳನ್ನು ನೋಡುತ್ತಾ ಅನುಭವಿಸುತ್ತಲೇ ಬಾಲ್ಯವನ್ನು ಕಳೆದವರು. ತಾಯಿ ಚೆನ್ನಮ್ಮ ಹಾಡುಗಾರ್ತಿಯೂ, ಕತೆಗಾರ್ತಿಯೂ ಆಗಿದ್ದರು. ಮಾವ ರಾಮಪ್ಪ ವಿಭಿನ್ನ ವ್ಯಕ್ತಿತ್ವದ ಕ್ರಿಯಾಶೀಲ ವ್ಯಕ್ತಿ. ಸುಲದಾಳದಲ್ಲಿದ್ದ ದೊಡ್ಡಮ್ಮನೂ ಅದ್ಭುತ ಕತೆಗಾರ್ತಿ. ವರ್ಷದಲ್ಲಿ ಕನಿಷ್ಠ ಮೂರು ತಿಂಗಳುಗಳ ಕಾಲ ದೊಡ್ಡಮ್ಮನೊಂದಿಗೆ ಕಳೆಯುವುದು ಕಂಬಾರರಿಗೆ ರೂಢಿಯಾಗಿತ್ತು. ಇವರೆಲ್ಲರ ಬಾಯಿಯಿಂದ ಹಾಡು ಕೇಳುವುದು, ಕತೆಕೇಳುವುದು ಕಂಬಾರರಿಗೆ ಬಹು ಮೆಚ್ಚಿನ ವಿಷಯವಾಗಿತ್ತು. ಹೀಗಾಗಿ ಬಾಲ್ಯದಲ್ಲಿಯೇ ಇವರಿಗೆ ಅಧೋಲೋಕದ ಮಾಟ, ಮಂತ್ರ, ತಂತ್ರ ವಿದ್ಯೆಗಳ ವಿಸ್ಮಯ ಪ್ರಪಂಚವೂ ಪರಿಚಯವಾಗಿತ್ತು. ಹೀಗಾಗಿಯೇ ಇವರ ನಾಟಕಗಳಲ್ಲಿ ಜನಪದ ಜಗ
APA, Harvard, Vancouver, ISO, and other styles
38

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್&zwnj; ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್&zwnj;&zwnj;ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
39

ವಿಜಯಲಕ್ಷ್ಮೀ, ಸುಬ್ಬರಾವ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಗೀತನಾಟಕ ಪ್ರವೇಶ: ಸಂಸ್ಕೃತ ನಾಟಕ ಮತ್ತು ನಾಟಕದಲ್ಲಿ ಸಂಗೀತ". AKSHARASURYA 05, № 01 (2024): 01 to 32. https://doi.org/10.5281/zenodo.13870268.

Full text
Abstract:
ಬಹುಮುಖ ಪ್ರತಿಭೆಯ ಡಾ.ವಿಜಯಾ ಸುಬ್ಬರಾಜ್ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಾಯಿ ಲಕ್ಷ್ಮಿ, ಹಾಗೂ ತಂದೆ ಸೀತಾರಾಂ ಅವರು. ಓದಿದ್ದು ಬೆಂಗಳೂರಿನಲ್ಲೇ. ಕನ್ನಡ ಮತ್ತು ಇಂಗ್ಲಿಷ್&zwnj;ನಲ್ಲಿ ಎಂ.ಎ ಮತ್ತು ಎಲ್.ಎಲ್.ಬಿ. ಪದವೀಧರೆಯಾದವರು. ಫ್ರೆಂಚ್ ಭಾಷೆಯ ಡಿಪ್ಲೊಮ ಪದವಿಯನ್ನೂ ಹಿಂದಿ ಸಾಹಿತ್ಯರತ್ನ ಪದವಿಯನ್ನೂ ಅಧ್ಯಯನ ಮಾಡಿದವರು. ಎಂ.ಇ.ಎಸ್. ಕಾಲೇಜಿನಲ್ಲಿ ಸುದೀರ್ಘ ಕಾಲ ಪ್ರಾಧ್ಯಾಪಕ ಹುದ್ದೆ ನಿರ್ವಹಿಸುತ್ತಲೇ ನಿರಂತರವಾಗಿ ಹಲವು ಮಾಧ್ಯಮಗಳಲ್ಲಿ ತಮ್ಮ ಪ್ರಯೋಗಶೀಲತೆಯನ್ನು ದುಡಿಸಿಕೊಂಡವರು, ಕಥೆ, ಕವಿತೆ, ನಾಟಕ, ಕಾದಂಬರಿ, ಪ್ರವಾಸ ಕಥನ, ಅನುವಾದ, ವೈಚಾರಿಕ ಬರೆಹ, ವಿಮರ್ಶೆ, ಸಂಶೊಧನೆ ಮುಂತಾದ ವಿಭಿನ್ನ ಪ್ರಕಾರಗಳಲ್ಲಿ ಅವರ ಶಕ್ತಿ, ಪ್ರತಿಭೆಗಳು ಬೆಳಗಿವೆ. ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯ ಓದುವ ಬರೆಯುವ ಹವ್ಯಾಸ ರೂಢಿಸಿಕ
APA, Harvard, Vancouver, ISO, and other styles
40

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Full text
Abstract:
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್&zwnj;ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
APA, Harvard, Vancouver, ISO, and other styles
41

ತೀ.ನಂ., ಶ್ರೀಕಂಠಯ್ಯ, та ಕುಪ್ಪನಹಳ್ಳಿ ಎಂ. ಭೈರಪ್ಪ ಸಂಯೋಜನೆ:. "ಕನ್ನಡದಲ್ಲಿ ಕಾವ್ಯಲಕ್ಷಣ ಗ್ರಂಥಗಳು". Aksharasurya Journal 05, № 05 (2025): 01 to 37. https://doi.org/10.5281/zenodo.14619428.

Full text
Abstract:
<strong>ದೇಶಭಾಷಾ ವಿದ್ವದ್ವಲಯದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ</strong>&lsquo;ಭಾರತೀಯ ಕಾವ್ಯ ಮೀಮಾಂಸೆ&rsquo; ಎಂಬ ಮಹೋನ್ನತ ಕಾವ್ಯ-ಶಾಸ್ತ್ರ ಗ್ರಂಥದ ಮೂಲಕ ಕನ್ನಡ ದೇಶಭಾಷಾ ವಿದ್ವದ್ವಲಯದ ವಿಶ್ವಾತ್ಮಕತೆಯನ್ನು ಸಾಕಾರಗೊಳಿಸಿದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ ಅವರು. ಆಚಾರ್ಯ ಬಿ.ಎಂ.ಶ್ರೀ. ಅವರ ಪರಂಪರೆಯಲ್ಲಿ ಅವರ ಉತ್ತರಾಧಿಕಾರಿ ಎಂಬಂತೆ ನಡೆದು ಜನಪ್ರಿಯ ಅಧ್ಯಾಪಕರೂ ಸಂಮೋಹಕ ಭಾಷಣಕಾರರೂ ಆಗಿ ಪ್ರಸಿದ್ಧರಾದವರು; ಕನ್ನಡದ ವಿಶ್ವವಿದ್ಯಾನಿಲಯಗಳಲ್ಲಿ ಭಾಷಾಶಾಸ್ತ್ರದ ಅಧ್ಯಯನಕ್ಕೆ ಬುನಾದಿಯನ್ನು ಹಾಕಿದವರು; ಆಧುನಿಕ ಕನ್ನಡ ನಿಘಂಟಿನ ರಚನೆಗಾಗಿ ತಮ್ಮ ಸಮಯ, ಶಕ್ತಿ ಸಾಮರ್ಥ್ಯಗಳನ್ನೂ, ವಿದ್ವತ್ತನ್ನೂ ವಿನಿಯೋಗಿಸಿದ ದಿಗ್ಗಜರಲ್ಲಿ ಒಬ್ಬರು. ಅವರನ್ನು ಸಮಕಾಲೀನರು ಕಂಡಂತೆ ಅವರ ಬೋಧಿಸತ್ವ ಸನ್ನಿಭ ಮನೋಹರ ವ್ಯಕ್ತಿತ್ವವನ್
APA, Harvard, Vancouver, ISO, and other styles
42

Bharati sangappa Gaddi. "ಬಸವರಾಜ ಕಟ್ಟೀಮನಿ ಅವರ ಜ್ಞಾಲಾಮುಖಿಯ ಮೇಲೆ ಕಾದಂಬರಿಯಲ್ಲಿ ವರ್ಗ ಸಂಘರ್ಷ". ShodhKosh: Journal of Visual and Performing Arts 4, № 2 (2023). https://doi.org/10.29121/shodhkosh.v4.i2.2023.5619.

Full text
Abstract:
ಜ್ವಾಲಾಮುಖಿಯ ಮೇಲೆ ಪ್ರಗತಿಶೀಲ ಸಾಹಿತ್ಯದ ಒಂದು ಹೆಸರಾಂತ ಕೃತಿ. ಕಾರ್ಮಿಕ ಶೋಷಣೆ, ಪ್ರತಿಭಟನೆಯ ಹಿನ್ನೆಲೆ - ಹುಟ್ಟು, ಅದರ ಪರಿಮಾಣಾತ್ಮಕ ಬೆಳವಣಿಗೆ, ಸಂಘರ್ಷದ ಕ್ರಿಯಾರೂಪವನ್ನು ಸಾಧ್ಯಂತರವಾಗಿ ಸೆರೆ ಹಿಡಿದ ಕೃತಿ. ಗಾಂಧಿವಾದಿಯಾಗಿದ್ದ ಕಾಂಗ್ರೆಸಿಗ ಚಂದ್ರಣ್ಣ ಸಾಮ್ಯವಾದಿಯಾಗಿ ಪರಿವರ್ತನೆಯಾಗುವ ಬಗೆ ಸಂಘರ್ಷದ ಬೆಳವಣಿಗೆ ಸಹ ಆಗಿದೆ.ವರ್ಗ ಸಂಘರ್ಷವೆನ್ನುವುದು ಒಂದು ವೈಯಕ್ತಿಕ ಕ್ರಿಯೆ ಮತ್ತು ಪ್ರತಿಭಟನೆಯಾಗಿರದೆ ಅದರದೇ ಆದ ನಿಯಮದಲ್ಲಿ ಮೂಡಿಬರಬೇಕಾಗುತ್ತದೆ. ಅದರ ಹಿನ್ನೆಲೆ, ಮುನ್ನೆಲೆ, ಚಲನಶೀಲತೆ ಇವೆಲ್ಲ ಇಲ್ಲಿಯ ರಚನೆಯಲ್ಲಿ ಪಡಿಮೂಡಿದೆ.ಸ್ವಾತಂತ್ರ್ಯ ಬಂದರೂ ಹಿಂದೂಸ್ಥಾನದ ಬಹುಸಂಖ್ಯಾತರಿಗೆ ಆರ್ಥಿಕ ' ಸ್ವಾತಂತ್ರ್ಯ ಲಭಿಸಲಿಲ್ಲ. ಅವರ ಕಷ್ಟಪರಂಪರೆ ದೂರವಾಗಿಲ್ಲ. ರೈತ-ಕೂಲಿಕಾರರ ರಾಜ್ಯ ಸ್ಥಾಪಿಸುವುದೇ ಕಾಂಗ್ರೆಸ್ಸಿನ ಗುರಿಯ
APA, Harvard, Vancouver, ISO, and other styles
43

ಎನ್., ಚಂದ್ರಶೇಖರ್. "ಛಲವಾದಿ ಸಮುದಾಯದ ಪಾರಂಪರಿಕ ಹಿನ್ನೋಟ ಹಾಗೂ ವಾಸ್ತವ ಸ್ಥಿತಿ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2022, 1–10. http://dx.doi.org/10.59176/kjksp.v1i2.2210.

Full text
Abstract:
ಪ್ರಜಾಪ್ರಭುತ್ವ ಪರಿಕಲ್ಪನೆಯನ್ನು ಒಳಗೊಂಡ ಭಾರತ ಜಾತಿಗಳಿಂದ ಕೂಡಿದ ಜಾತ್ಯತೀತ ರಾಷ್ಟç. ಇಲ್ಲಿ ಜಾತ್ಯತೀತ ಎಂಬುದು ವಾಸ್ತವವಾಗಿ ಯಾವುದೇ ಒಂದು ಧರ್ಮ, ವರ್ಣ ಮತ್ತು ವರ್ಗದ ಕಟ್ಟುಪಾಡುಗಳಿಗೆ ಅಧೀನವಾಗದ ಸಾರ್ವತ್ರಿಕ ದೃಷ್ಟಿಕೋನವನ್ನು ಹೊಂದಿದ ಸ್ಥಿತಿಯಾಗಿದೆ. ಆದರೆ ಅದಕ್ಕೆ ವ್ಯತಿರಿಕ್ತವೆಂಬAತೆ ಈ ನೆಲದಲ್ಲಿ ನಾವು ಕಂಡುAಡ ವೈವಿಧ್ಯಮಯ ಅನುಭವಗಳು ಚಾರಿತ್ರಿಕ, ಪೌರಾಣಿಕ, ಆಧ್ಯಾತ್ಮಿಕ, ಧಾರ್ಮಿಕ ಸಾಮಾಜಿಕ, ಹಾಗೂ ರಾಜಕೀಯ ಹಿನ್ನೆಲೆಯಿಂದ ಬಹಳ ಭಿನ್ನವಾದದ್ದು ಮತ್ತು ಆಚರಣೆಯ ರೂಪದಲ್ಲಿ ಅಷ್ಟೇ ಜಟಿಲವಾದದ್ದೂ ಆಗಿದೆ ಎಂಬುದರಲ್ಲಿ ಅತಿಶಯೋಕ್ತಿಯಿಲ್ಲ. ಆ ಕಾರಣದಿಂದಲೇ ಇಂದಿಗೂ ಶ್ರೇಷ್ಠತೆಯ ಕುಲಮದದಿಂದ ಹೊರಬರಲಾಗದ ಕೆಲವಾರು ಜಾತಿಗಳು ಬಹುಸಂಖ್ಯಾತರಾದ ಹಲವಾರು ಜಾತಿಗಳ ವಿರುದ್ಧ ತಮ್ಮ ಅಸ್ತಿತ್ವಕ್ಕಾಗಿ ಹಸಿದ ಹೆಬ್ಬಾವುಗಳಂತೆ ಬುಸುಗುಡು
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!