To see the other types of publications on this topic, follow the link: ಸಮಾನತೆ.

Journal articles on the topic 'ಸಮಾನತೆ'

Create a spot-on reference in APA, MLA, Chicago, Harvard, and other styles

Select a source type:

Consult the top 50 journal articles for your research on the topic 'ಸಮಾನತೆ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ನಾಗರಾಜ, ಹರಿಜನ. "ಅಸ್ಪೃಶ್ಯತೆಯ ನಿರ್ಮೂಲನೆಯಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ". AKSHARASURYA JOURNAL 06, № 05 (2025): 105 to 113. https://doi.org/10.5281/zenodo.15504316.

Full text
Abstract:
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ್ಮದಾಗಿದ್ದು ಇದರ ಹೆಮ್ಮೆಯ ಸಂಗತಿಯೆಂದರೆ ಅದುವೇ ಸಮಾನತೆ ಎಂದು ಹೇಳಬಹುದು. ಭಾರತದ ಸರ್ಕಾರವು ಸಂವಿಧಾನ ಜಾರಿಯಾದಾಗಿನಿಂದ ಹಿಡಿದು ಪ್ರಸ್ತುತ ದಿನಮಾನದವರೆಗೆ ಇಲ್ಲಿನ ಪ್ರತಿಯೊಬ್ಬ ಪ್ರಜೆಯೂ ಭ್ರಾತೃತ್ವ ಭಾವನೆಯೊಂದಿಗೆ ಯಾವುದೇ ಜಾತಿ, ವರ್ಗ ಮತ್ತು ಮತಗಳ ಬೇಧಭಾವವಿಲ್ಲದೇ ʼನಾವೆಲ್ಲರೂ ಭಾರತೀಯರು, ನಾವೆಲ್ಲರೂ ಸಮಾನರು’ ಎನ್ನುವಂತೆ ಕಾಯ್ದೆ ಕಾನೂನುಗಳನ್ನ
APA, Harvard, Vancouver, ISO, and other styles
2

ಶ್ರೀನಿವಾಸ, ಎಸ್.ಜಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 01 to 10. https://doi.org/10.5281/zenodo.15490768.

Full text
Abstract:
ʼಕಾಯಕವೇ ಕೈಲಾಸʼ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದ್ದು ವಚನ ಸಾಹಿತ್ಯ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಗುರಿಯಿಟ್ಟು ನಡೆದ ದಾರ್ಶನಿಕ ಚಳುವಳಿ ವಚನ ಸಾಹಿತ್ಯ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು ಕೂತು ಉಣ್ಣುವ ವರ್ಗಗಳು ನಿರ್ಮಾಣವಾಗುವುದಕ್ಕೆ ಕಾರಣವಾಗಿರಬೇಕು, ಸಮಾಜದಲ್ಲಿ ಮೇಲ್ವರ್ಗವೆಂದು ಕರೆಸಿಕೊಂಡ ಜನರು ಸಮಾಜದ ಇತರರನ್ನು
APA, Harvard, Vancouver, ISO, and other styles
3

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
4

ಮುಗಳಿ, ಜಯಶ್ರೀ ಯ. "ಬಸವಣ್ಣನವರ ವಚನಗಳಲ್ಲಿ ಸಮಾನತೆ". International Journal of Kannada Research 11, № 1 (2025): 114–17. https://doi.org/10.22271/24545813.2025.v11.i1b.1090.

Full text
APA, Harvard, Vancouver, ISO, and other styles
5

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Full text
Abstract:
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
APA, Harvard, Vancouver, ISO, and other styles
6

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
7

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ
APA, Harvard, Vancouver, ISO, and other styles
8

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
9

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
10

ನಿಕಿತಾ, ರಮೇಶ ಚನ್ನಾಳೆ, та ಚಿಂತಾಮಣಿ ಮಹೇಶ. "ಕನ್ನಡ ಲಲಿತ ಪ್ರಬಂಧಗಳಲ್ಲಿ ಮಾನವೀಯ ಮೌಲ್ಯಗಳು". Aksharasurya Journal 05, № 05 (2025): 121 to 127. https://doi.org/10.5281/zenodo.14619654.

Full text
Abstract:
ಕನ್ನಡ ಸಾಹಿತ್ಯದ ಅನೇಕ ಬರಹಗಳು ಸಮಾನತೆ, ಸ್ತ್ರೀವಾದ, ವಾಸ್ತವತೆ, ಸಮಾಜಿಕ ದೃಷ್ಟಿಕೋನ, ಕಲ್ಪನೆ ಹೀಗೆ ಅನೇಕ ವಿಷಯಗಳ ಬಗೆಗೆ ಬೆಳಕು ಚಲ್ಲಿವೆ. ಅದೇ ರೀತಿಯಲ್ಲಿ ಲಲಿತ ಪ್ರಬಂಧಗಳು ಕೂಡ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮವನ್ನು ತಂದುಕೊಟ್ಟಿವೆ. ಲಲಿತ ಪ್ರಬಂಧಗಳು ಕೂಡ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿವೆ. ಮೌಲ್ಯಗಳಿಲ್ಲದೆ ಇದ್ದರೆ ಅದು ಸಾಹಿತ್ಯವಲ್ಲ. ಹಾಗಾಗಿ ಯಾವುದೇ ಸಾಹಿತ್ಯ ಮಾನವೀಯ ಮೌಲ್ಯಗಳು ಪ್ರಮುಖವಾಗಿ ಒಳಗೊಂಡಿರಲೇಬೇಕು. ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ ಎ.ಎನ್. ಮೂರ್ತಿರಾವ್ ಅವರ ಪ್ರಬಂಧಗಳು ಮತ್ತು ಭುವನೇಶ್ವರಿ ಹೆಗಡೆಯವರ ಲಲಿತ ಪ್ರಬಂಧಗಳು ಮಾನವೀಯ ಮೌಲ್ಯಗಳನ್ನು ಬಿತ್ತರಿಸಿವೆ. ಧಾರ್ಮಿಕ, ಸಮಾಜಿಕ, ಮಾನವೀಯ ಮೌಲ್ಯಗಳು ಬದುಕಿನ ಮೆಟ್ಟಿಲೇರಲು ಮೌಲ್ಯಗಳು ಪ್ರಮುಖವಾಗಿವೆ. ಮೌಲ್ಯಗಳು ಉತ್ತಮ ಸಮಾಜವನ
APA, Harvard, Vancouver, ISO, and other styles
11

ರೇಣುತಾಕ್ಷಿ. "ಶಿಕ್ಷಣವೆಂದರೆ ಜೀವನಕ್ಕೆ ಸಿದ್ಧತೆಯಲ್ಲ, ಶಿಕ್ಷಣವೇ ಜೀವನ". AKSHARASURYA JOURNAL 06, № 05 (2025): 169 to 174. https://doi.org/10.5281/zenodo.15504563.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದಂತೆ, ಶಿಕ್ಷಣ ಜೀವನಕ್ಕೆ ಸಿದ್ಧತೆ ಮಾತ್ರವಲ್ಲ, ಅದು ಜೀವನವೇ ಆಗಿದೆ. ಶಿಕ್ಷಣವು ಕೇವಲ ಉದ್ಯೋಗ ಅಥವಾ ಜೀವನೋದ್ಯಮಕ್ಕೆ ಪೂರಕವಾಗಿರುವುದಷ್ಟೇ ಅಲ್ಲ, ಅದು ವ್ಯಕ್ತಿಯ ಬುದ್ಧಿ, ಚಿಂತನೆ, ವ್ಯಕ್ತಿತ್ವ ಮತ್ತು ಸಮಾಜದ ಪ್ರಗತಿಗೆ ಸಹಾಯಕವಾಗಬೇಕು. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಶಿಕ್ಷಣವು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾಭ್ಯಾಸವು ವ್ಯಕ್ತಿಗೆ ಅರ್ಥಪೂರ್ಣ ಬದುಕನ್ನು ಕಟ್ಟಿಕೊಳ್ಳಲು, ಸ್ವತಂತ್ರವಾಗಿ ಚಿಂತಿಸಲು, ಹಾಗೂ ತಾನು ಎದುರಿಸುವ ಸವಾಲುಗಳಿಗೆ ಉತ್ತರಿಸಲು ಶಕ್ತಿಯನ್ನು ನೀಡುತ್ತದೆ. ಸಮೃದ್ಧ ಜೀವನಕ್ಕಾಗಿ ಕೇವಲ ಹಣಕಾಸಿನ ಪ್ರಗತಿಯನ್ನಷ್ಟೇ ಗಮನಿಸುವುದಕ್ಕಿಂತ, ಮಾನವೀಯತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಪಾ
APA, Harvard, Vancouver, ISO, and other styles
12

ಪ್ರಸನ್ನಕುಮಾರ್, ಕೆ. "ಅಂಬೇಡ್ಕರ್‌ರವರ ಸಾಮಾಜಿಕ ಚಿಂತನೆಗಳು". AKSHARASURYA JOURNAL 05, № 06 (2025): 110 to 116. https://doi.org/10.5281/zenodo.14788784.

Full text
Abstract:
ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಸಿಕೊಂಡ ಮಹಾನ್ ವ್ಯಕ್ತಿ. ಇವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಇವರು ದೇಶಕ್ಕಾಗಿ ಮಾಡಿದ ಹೋರಾಟಗಳು ಎಂತಹ ದುರ್ಬಲ ವ್ಯಕ್ತಿಗಳನ್ನೂ ಸಹ ಎಚ್ಚರಿಸುತ್ತದೆ. ಇವರ ಕೊಡುಗೆಯನ್ನು ಭಾರತೀಯ ಜನತೆ ಎಂದಿಗೂ ಮರೆಯುವುದಿಲ್ಲ. ಸಂವಿಧಾನ ರಚನೆಗೆ ಮಾತ್ರವಲ್ಲದೇ ಅವರ ಸೇವೆ ಜನತೆಯನ್ನು ಜಾಗೃತರಾಗಿ ಮಾಡುವ ಸಾಧನವಾಗಿದೆ ಎನ್ನಬಹುದು. ಅಂಬೇಡ್ಕರ್ ಅವರು ವೈಚಾರಿಕತೆಯ ನೆಲೆಯಲ್ಲಿ ಈ ದೇಶವನ್ನು ಮುಂದೆ ತೆಗೆದುಕೊಂಡು ಹೋಗಬೇಕೆಂಬ ಮಹದಾಶಯವನ್ನು ಹೊಂದಿರುವ ಅಪರೂಪ ವ್ಯಕ್ತಿ. ಈ ಹಿನ್ನಲೆಯಲ್ಲಿಯೇ ಅವರು “ಈ ದೇಶದಲ್ಲಿ ಗುಡಿ-ಗೋಪುರಗಳಿಗಿಂತ ಶಾಲೆಗಳು ತೆರೆದರೆ, ಆ ದೇಶ ಉದ್ದಾರವಾಗುತ್ತದೆ” ಎಂಬ ನಿಲುವನ್ನು ತ
APA, Harvard, Vancouver, ISO, and other styles
13

ಡಾ., ಬಸವರಾಜ ಯು. "ಬಳ್ಳಾರಿ ಜಿಲ್ಲೆಯಲ್ಲಿ ಒಣಭೂಮಿ ಬೇಸಾಯಗಾರರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು". International Journal of Advance Research in Multidisciplinary 2, № 4 (2024): 74–78. https://doi.org/10.5281/zenodo.14343817.

Full text
Abstract:
ಮಾನವ ಸಮಾಜದಲ್ಲಿ ಸಂಘ ಜೀವಿಯಾಗಿ ಜೀವನ ನೆಡಸುತ್ತಿದ್ದಾನೆ. ಸಾಮಾಜವನ್ನು ಬಿಟ್ಟು ಬದುಕಲಾರನು. ಈ ಸಮಾಜದಲ್ಲಿ ಗೌರವಯುತವಾಗಿ ಜೀವನ ಮಾಡಲು ಕೆಲವು ಅವಶ್ಯಕವಾದ ಅಂಶಗಳು ಮುಖ್ಯವಾಗುತ್ತವೆ. ಏಕೆಂದರೆ ಇವು ಜೀವನಕ್ಕೆ ಅವಶ್ಯಕವಾಗಿರುವಂತಹ ಸಂಪನ್ಮೂಲಗಳಾಗಿವೆ. ಎಲ್ಲಾ ಸಂಪನ್ಮೂಲಗಳನ್ನು ಒಬ್ಬ ವ್ಯಕ್ತಿಯಿಂದ ಉತ್ಪಾದಿಸಲು ಸಾಧ್ಯವಿಲ್ಲ. ಅದ್ದರಿಂದ ಇತರೆ ಸಮಾಜದಲ್ಲಿನ ವ್ಯಕ್ತಿಗಳು ಕೂಡಿ ಕೆಲಸಮಾಡಿದರೆ ಸಂಪನ್ಮೂಲಗಳನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತಾನೆ. ಅದೇ ರೀತಿಯಲ್ಲಿ ಮಾನವ ಅಭಿವೃದ್ಧಿಗೆ ಅವಶ್ಯಕವಾದ ಸುಸ್ಥಿರ ಅಭಿವೃದ್ಧಿ ಗುರಿಗಳಾದ ಬಡತನ ನಿರ್ಮೂಲನೆ, ಹಸಿವುಮುಕ್ತ, ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಗುಣಮಟ್ಟದ ಶಿಕ್ಷಣ, ಲಿಂಗ ಸಮಾನತೆ, ಸ್ವಚ್ಛ ನೀರು, ನೈರ್ಮಲ್ಯ, ಅಗ್ಗವಾದ ಬದುಕು ಶುದ್ಧ ಗೌರವಯುತ ಕೆಲಸ ಮತ್ತು ನೆರವು, ಉದ್ಯಮ, ಆವಿ
APA, Harvard, Vancouver, ISO, and other styles
14

ಜೆ., ರಾಜ ಗುಂಡಾಪುರ. "ಕರ್ನಾಟಕದ ಜಾನಪದ ನಂಬಿಕೆಗಳು". AKSHARASURYA JOURNAL 04, № 05 Special Issue (2024): 35 to 42. https://doi.org/10.5281/zenodo.13294367.

Full text
Abstract:
ಜನರಿಗೆ ಸಂಬಂಧಿಸಿದ್ದು ಜನಪದ ಎಂದು ಸರಳವಾಗಿ ಹೇಳಬಹುದು. ಜೀವಕೋಟಿಯ ನಿರ್ದಿಷ್ಟ ಜನ ಸಮುದಾಯ ತನ್ನ ಉಳಿವಿಗೆ, ಸಂಸಾರಕ್ಕೆ, ಸಮಾಜಕ್ಕೆ, ಬದುಕಿಗೆ, ಸಾವಿಗೆ, ಹುಟ್ಟಿನಿಂದ ಅಂತ್ಯವರಿಗೂ ಕೆಲವು ಸಂಪ್ರದಾಯ ರೀತಿ ನೀತಿ, ಆಚಾರ-ವಿಚಾರ, ಆಚರಣೆ ಆಲೋಚನೆ ಮೊದಲಾದವುಗಳನ್ನು ರೂಢಿಗೆ ತಂದಿತ್ತು. ಇದೆಲ್ಲ ಜನಪದದ ಅಂಗವಾಯಿತು. ಜನರು ಮತ್ತು ಜನರಬದುಕು ಜನಪದವಾಯಿತು. ಜನಪದ ಶಬ್ದವು ಜನ, ಜನರ ಭಾಷೆ, ಅವರು ನೆಲೆಸಿರುವ ಸ್ಥಳ, ಜಾತಿ-ಪಂಗಡ, ಆಚಾರ-ವಿಚಾರ, ಕಲೆ, ಸಾಹಿತ್ಯ ಮೊದಲಾದವುಗಳೆಲ್ಲವನ್ನು ಒಳಗೊಂಡಿದೆ. ಆಚಾರ ವಿಚಾರಗಳಲ್ಲಿ ಏಕ ರೀತಿಯ ಗುಣಲಕ್ಷಣವಿರುವ, ಭೌತಿಕ ಹಾಗೂ ಭಾವನೆಗಳಲ್ಲಿ ಸಮಾನತೆ ಕಾಣುವ ಜನರ ಗುಂಪನ್ನು ಜನಪದ ಎಂದಿದ್ದಾರೆ. ಪರಂಪರೆಯತ್ತ ಮುಖ ಮಾಡಿರುವ ಯಾವುದೇ ಜನಸಮುದಾಯ ಜನಪದರು ಎನಿಸಿಕೊಳ್ಳುತ್ತಾರೆ. ಜನಪದಕ್ಕೆ ಸಂಬಂಧಿಸಿದ್ದು ಜನ
APA, Harvard, Vancouver, ISO, and other styles
15

ಶೀಲಾದೇವಿ, ಎಸ್. ಬಿರಾದಾರ. "ವೀರಾಂಗಿಣಿ ಅಕ್ಕಮಹಾದೇವಿ". AKSHARASURYA JOURNAL 04, № 06 (2024): 152 to 156. https://doi.org/10.5281/zenodo.13725661.

Full text
Abstract:
ಹಳೆಗನ್ನಡ ಸಾಹಿತ್ಯವು ರಾಜ್ಯಾಶ್ರಯದಲ್ಲಿಯೇ ಪಂಡಿತ ಪಾಮರರಿಗೆ ಮಾತ್ರ ಸಿಮಿತವಾಗಿತ್ತು. ಹನ್ನೆರಡನೆ ಶತಮಾನದಲ್ಲಿ ವಚನ ಸಾಹಿತ್ಯಯೂ ತೀರಾ ಸರಳ ಸಹಜವಾಗಿ ತಾವು ಬೋದಿಸುವುದು ಸಾಮಾನ್ಯನಿಗೂ ತಲುಪಬೇಕು ಎಂಬ ಆಶಯ ಹೊಂದಿದವರು. ಶಿವಶರಣರು ಶಿವಶರಣೆಯರ ಆಲೋಚನೆಗಳನ್ನು ಅನುಭವಗಳನ್ನು ವಿಚಾರಧಾರೆಗಳೆ ವಚನ. ಜನಸಾಮಾನ್ಯರ ಭಾಷೆಯಲ್ಲಿಯೆ ತಮ್ಮ ಭಾವನೆಗಳನ್ನು ಅನಿಸಿಕೆಗಳನ್ನು ತತ್ವಗಳನ್ನು ಹಾಗೂ ಅವರ ಆತ್ಮಾನುಭವಗಳೇ ವಚನರೂಪದಲ್ಲಿ ವ್ಯಕ್ತಪಡಿಸಿದ್ದು ವಚನ ಸಾಹಿತ್ಯ. ವಚನ ಸಾಹಿತ್ಯ ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವುದು ಕನ್ನಡ ಸಾಹಿತ್ಯದ ಹೆಮ್ಮೆಯಾಗಿದೆ. ವಚನ ಸಾಹಿತ್ಯದಲ್ಲಿ ಕಾಣಿಸುವ ವಿಶಿಷ್ಟ ಪ್ರತಿಭೆಯ ಮಹಿಳೆ ಅಕ್ಕಮಹಾದೇವಿ. ಕನ್ನಡ ಸಾಹಿತ್ಯದ ಮೊದಲ ಕವಿಯತ್ರಿ ಮತ್ತು ವಚನಗಾರ್ತಿ, 12 ನೆಯ ಶತಮಾನದ ಪ್ರಪ್ರಥಮವಾಗಿ ಪುರುಷರಿಗೆ ಸಮಾನವಾಗಿ ನಿಂ
APA, Harvard, Vancouver, ISO, and other styles
16

ಗಣೇಶ та ಹೆಚ್. ಎಸ್. ನಿಂಗರಾಜು. "ಆಧುನಿಕ ಕನ್ನಡ ಸಾಮಾಜಿಕ ನಾಟಕಗಳಲ್ಲಿ ಪ್ರತಿಯಜಮಾನಿಕೆಯ ಸ್ವರೂಪ". AKSHARASURYA JOURNAL 04, № 06 (2024): 63 to 73. https://doi.org/10.5281/zenodo.13724751.

Full text
Abstract:
ಭಾರತದಂತಹ ದೇಶವು ಸಂಕೀರ್ಣವಾದ ಸಾಮಾಜಿಕ ವ್ಯವಸ್ಥೆಯನ್ನು ಹೊಂದಿದೆ.  ಅಂತಹ ಪ್ರಾಬಲ್ಯಗಳ ಆಧಾರವು ಸಂಕೀರ್ಣ ಸ್ವರೂಪವನ್ನು ಹೊಂದಿದೆ.  ಭಾರತದ ವರ್ಣ ಆಧಾರಿತ ಸಾಮಾಜಿಕ ವ್ಯವಸ್ಥೆಯಲ್ಲಿ, ವರ್ಣಾಸ್‌ನ ಮೇಲಿನ ಸ್ತರಗಳಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಪ್ರಾಬಲ್ಯ ವ್ಯವಸ್ಥೆಗಳು ಛಿದ್ರಗೊಳ್ಳುತ್ತಿವೆ.  ಸಬಾಲ್ಟರ್ನ್ ಅಡಿಯಲ್ಲಿ ಬರುವ ನಾಲ್ಕನೇ ವರ್ಣಾ, ಶೂದ್ರವರ್ಣ,  ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಭಾಗವಹಿಸುವಿಕೆಯಿಂದ ವಂಚಿತವಾಗಿದೆ. ಸಾಂಪ್ರದಾಯಿಕವಾಗಿ ಮೇಲ್ವರ್ಗದ  ಪ್ರಾಬಲ್ಯಗಳು ಕಠಿಣ ಅಭ್ಯಾಸಗಳನ್ನು ನಿರ್ಮಿಸುವ ಮೂಲಕ ಅಧೀನ ವರ್ಗವನ್ನು ಬಳಸಿಕೊಳ್ಳುತ್ತವೆ. ಈ ಅಧೀನ ನೆಲೆಗಳು ಮೇಲ್ಮಟ್ಟದ ಪ್ರಾಬಲ್ಯಗಳ ವಿರುದ್ಧ ಹೆಚ್ಚು ಸಹನೆ ಮತ್ತು ಮೂಕತನದಿಂದ ಪ್ರತಿಭಟಿಸಲು ಸಾಧ್ಯವಾಗುತ್ತಿಲ್ಲ. ಅವರ ನ
APA, Harvard, Vancouver, ISO, and other styles
17

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
18

ಕೆ., ಅನಂತಾಚಾರ್. "ʼಸ್ತ್ರೀ ಅಸ್ಮಿತೆ :ವಿಭಿನ್ನ ನೆಲೆಗಳುʼ ಕೃತಿಯ ಒಳನೋಟ". AKSHARASURYA JOURNAL 06, № 06 (2025): 17 to 25. https://doi.org/10.5281/zenodo.15580909.

Full text
Abstract:
ಹೆಣ್ಣು ಯಾವಾಗಲೂ ಒಂದು ಮೂಲೆಗುಂಪಿನಂತೆ ಎಂಬ ವಾದ ಸದಾ ಹರಡಿ ಹೋಗಿರುವ ಸಂದರ್ಭದಲ್ಲಿ ಚೇತನಾ ಹೆಗಡೆ ಅವರ “ಸ್ತ್ರೀ ಅಸ್ಮಿತೆ : ವಿಭಿನ್ನ ನೆಲೆಗಳು” ಕೃತಿಯು ವಿಭಿನ್ನ ಮಾದರಿಯ ಅಧ್ಯಯನವನ್ನು ನಮ್ಮ ಮುಂದಿಡುತ್ತದೆ. ಈ ಕೃತಿಯು ವ್ಯಕ್ತಿ ಮತ್ತು ವ್ಯಕ್ತಿತ್ವಗಳನ್ನು ಸದಾ ಕಾಲ ಬೇರೆಯಾಗಿ ಕಾಣುವ ವ್ಯತ್ಯಾಸಗಳಿಂದ ಹೊರತಾಗಿದೆ. ಹಾಗೆಂದ ಮಾತ್ರಕ್ಕೆ ಎಲ್ಲಾ ಒಂದೇ ಎಂದು ಭಾವಿಸುವ ಹಾಗಿಲ್ಲ. ಜೈವಿಕ ವ್ಯತ್ಯಾಸಗಳನ್ನು ಅಂಗೀಕರಿಸುತ್ತಲೇ ಹೆಣ್ಣಿನ ಅಸ್ಮಿತೆಯನ್ನು ಗುರುತಿಸುವ ಕೆಲಸವನ್ನು ಲೇಖಕಿ ಮಾಡಿದ್ದಾರೆ. ಹೆಣ್ಣು ಮತ್ತು ಹೆಣ್ತನವನ್ನು ಹೆಣ್ಣು ಅಧ್ಯಯನ ಮಾಡಿದಾಗ ಉಂಟಾಗುವ ತೀಕ್ಷ್ಣ ಬದಲಾವಣೆಗಳು ಮತ್ತು ಪರಿಣಾಮಗಳನ್ನು ಕಟ್ಟಿಕೊಡುವಲ್ಲಿ ಈ ಕೃತಿಯು ಪರಿಣಾಮಕಾರಿಯಾಗಿದೆ ಎನ್ನಲು ಅಡ್ಡಿಯಿಲ್ಲ. ವರ್ಜೀನಿಯಾ ವೂಲ್ಫ್ ಕೇಳುತ್ತಾಳೆ
APA, Harvard, Vancouver, ISO, and other styles
19

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
20

ವಾಣಿ, ಡಿ. ಎಸ್. "ಮಡಿವಾಳ ಮಾಚಿ ದೇವರವರ ಜೀವನ ಹಾಗೂ ಸಾಧನೆ". AKSHARASURYA JOURNAL 04, № 04 (2024): 144 to 150. https://doi.org/10.5281/zenodo.13284156.

Full text
Abstract:
ಹನ್ನೆರಡನೇ ಶತಮಾನ ಭಾರತೀಯ ಹಾಗೂ ಕರ್ನಾಟಕದ ಇತಿಹಾಸದಲ್ಲಿ ಬಹುಮುಖ್ಯ ಕಾಲಘಟ್ಟ. ಆ ಕಾಲದ ಶಿವಶರಣರು ಜೀವನದ ಹೊಸ ಮೌಲ್ಯಗಳನ್ನು ಎತ್ತಿ ಹಿಡಿದು ವರ್ಣಾಶ್ರಮ, ಧರ್ಮಗಳ ಹಂಗನ್ನು ಕಿತ್ತು ಬಿಸುಟು ಸಮತಾ ತತ್ವದ ತಳಹದಿಯ ಮೇಲೆ ಸಮಾಜವನ್ನು ನಿರ್ಮಿಸಲು ಹೆಣಗಿದವರು. ಸೃಷ್ಟಿಯಲ್ಲಿ ಎಲ್ಲರೂ ಸಮಾನರು ಮೇಲು-ಕೀಳು, ಲಕ್ಷಿತ-ಅಲಕ್ಷಿತ, ಸ್ತ್ರೀ-ಪುರುಷರೆಂಬ ಬೇಧ ಭಾವವಿಲ್ಲ ಎಂಬ ತತ್ವವನ್ನು ಬೋಧಿಸಿ ತಮ್ಮದೇ ಆದ ವಿಶಿಷ್ಟ ಧರ್ಮವನ್ನು ಬಸವಾದಿ ಪ್ರಮಥರು ಸಾಧಿಸಿದರು. ತಮ್ಮ ವೃತ್ತಿಯ ಹಿನ್ನೆಲೆಯಲ್ಲಿ ವರ್ಗ, ವರ್ಣ, ಜಾತಿಗಳಿಲ್ಲದ ಸರ್ವ ಸಮಾನತೆಯ ಹೊಸ ಸಮಾಜದ ನಿರ್ಮಾಣಕ್ಕೆ ಅವರು ಶ್ರಮಿಸಿದರು. ಅಂತಹ ವಚನಕಾರ ಮತ್ತು ಕ್ರಾಂತಿಕಾರರಲ್ಲಿ ಪ್ರಮುಖರಾದವರು ಮಡಿವಾಳ ಮಾಚಿದೇವ. ಇವರು ಬಸವಣ್ಣನಂತಹ ಮಹಾನುಭಾವರೊಂದಿಗೆ ಜೊತೆಗೂಡಿ ಸಮಾಜವನ್ನು ತಿದ್ದುವಂತಹ ಕೆ
APA, Harvard, Vancouver, ISO, and other styles
21

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
APA, Harvard, Vancouver, ISO, and other styles
22

ಸೌಮ್ಯ, ವಿ. "ಹೆಣ್ಣು ಹದ್ದಿನ ಸ್ವಯಂವರ: ಆಧುನಿಕತೆ ಹಾಗೂ ಸ್ತ್ರೀ ವಾದವನ್ನು ಅನುಲಕ್ಷಿಸಿ". AKSHARASURYA 04, № 03 (2024): 61 to 67. https://doi.org/10.5281/zenodo.12672703.

Full text
Abstract:
ಬಾನು ಮುಶ್ತಾಕ್ ರವರ ಬಹುತೇಕ ಕತೆಗಳು ಮಹಿಳೆಯ ಬದುಕಿನ ಕುರಿತು ಆಶಾವಾದವನ್ನು ಹೊಂದಿವೆ. ಇತ್ತೀಚೆಗೆ ಬಿಡುಗಡೆಯಾದ ಅವರ ಕಥಾಸಂಕಲನ ‘ಹೆಣ್ಣು ಹದ್ದಿನ ಸ್ವಯಂವರ’‌ ದಲ್ಲಿನ ಇದೇ ಶಿರ್ಷಿಕೆಯ ಕತೆ ಆಧುನಿಕತೆ ಹಾಗೂ ಸ್ತ್ರೀವಾದಗಳ ನೈತಿಕತೆಯ ಹುಡುಕಾಟದಲ್ಲಿ ತೊಡಗಿರುವ ಆಶಾವಾದವನ್ನು ಝಳಪಿಸಿದ ಕತೆಯೆಂದೆ ಅನಿಸಿದೆ. ಇಲ್ಲಿ ಅನ್ಯ ಬದುಕಿನಿಂದ ಪಡೆದುಕೊಂಡ ಆಧುನಿಕತೆ ಹಾಗೂ ಸಹಜ ಸಂವೇದಿತ ಆಧುನಿಕತೆ – ಇವೆರಡೂ ಸಹ ಪರಸ್ಪರ ಪ್ರಭಾವಕ್ಕೆ, ಪ್ರಚೋದನೆಗೆ ಒಳಗಾಗಿರುವಂತಿದೆ. ಇಂದು ಕಂಡುಬರುತ್ತಿರುವ ಸೃಜನಶೀಲತೆ ಮತ್ತು ಸ್ವಂತಿಕೆಯ ಹೊಸ ಬದುಕಿನ ದೃಷ್ಟಿಕೋನವು ಇಲ್ಲಿದೆ. ಅಲ್ಲದೆ, ಸ್ತ್ರೀವಾದಿ ಚಿಂತನೆಯ ತಾತ್ವಿಕತೆಯಾದ ಪ್ರಜ್ಞೆಯ ಜಾಗೃತಿ ಹಾಗೂ ಸ್ವಾಭಿವ್ಯಕ್ತಿಯ ಜಿಜ್ಞಾಸೆಯೂ ಇಲ್ಲಿ ಒಡಮೂಡಿದೆ. ಲೇಖಕಿಯ ಹೆಣ್ಣಿನ ಅಸ್ತ
APA, Harvard, Vancouver, ISO, and other styles
23

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ. ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪ
APA, Harvard, Vancouver, ISO, and other styles
24

ಅನುಷ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 72 to 77. https://doi.org/10.5281/zenodo.15490928.

Full text
Abstract:
ಪ್ರಸ್ತುತ ಲೇಖನದಲ್ಲಿ ಹನ್ನೆರಡನೇಯ ಶತಮಾನದಲ್ಲಿದ್ದ ವಚನ ಸಾಹಿತ್ಯದ ಸಾಮಾಜಿಕ ಚಿಂತನೆಗಳು ವ್ಯಕ್ತವಾಗಿವೆ. ಆ ಕಾಲದಲ್ಲಿದ್ದ ಸಾಮಾಜಿಕ ಮೌಲ್ಯ ಪರಿವರ್ತನೆ ವಚನಕಾರರು ಸಮಾನ ನಾಯಕತ್ವವನ್ನು ಅನುಸರಿಸಿದ್ದು, ಜಾತಿ - ಧರ್ಮ, ಲಿಂಗ ತಾರತಮ್ಯ, ಮೇಲು - ಕೀಳು, ವಿಗ್ರಹಾರಾಧನೆ ದೇವಸ್ಥಾನಗಳ ನಿರ್ಮಾಣವನ್ನು ಖಂಡಿಸಿದರು ಹಾಗೂ ಇದಕ್ಕೆಲ್ಲ ವಿರೋಧಿಯಾಗಿದ್ದರು. ವೀರಶೈವ ಧರ್ಮದ ಪಂಚ ಸೂತ್ರಗಳು ಕಾಯಕದ ಮಹತ್ವವನ್ನು ತಿಳಿಸಿರುವುದು ಎಲ್ಲರಲ್ಲಿಯೂ ಸಮಾನತೆಯ ಭಾವ ಅಂದಿನ ಕಾಲಕ್ಕೆ ಹೇಗಿತ್ತು. ವಚನಕಾರರಾದ ಬಸವಣ್ಣನವರು ಮತ್ತು ಅಕ್ಕಮಹಾದೇವಿಯವರ ವಚನಗಳ ಗ್ರಹಿಕೆ, ವಚನ ಸಾಹಿತ್ಯ ಇಂದಿನ ಸಮಾಜಕ್ಕೆ ಏಕೆ ಪ್ರಸ್ತುತ ಹಾಗೂ ಸಣ್ಣದೊಂದು ಪದ್ಯವನ್ನು ವಿಷಯದ ಕುರಿತು ಒಳಗೊಂಡಿದೆ. 
APA, Harvard, Vancouver, ISO, and other styles
25

ಮಾನಸ, ಜಿ. "ಶ್ರೀಸಾಮಾನ್ಯವೇ ಭಗವನ್ ಮಾನ್ಯಂ, ಶ್ರೀಸಾಮಾನ್ಯನೇ ಭಗವದ್ ಧನ್ಯಂ (ಕುವೆಂಪು ವಿರಚಿತ 'ಧನ್ವಂತರಿ ಚಿಕಿತ್ಸೆ' ರಂಗಪ್ರಯೋಗವನ್ನು ಕುರಿತು)". AKSHARASURYA 03, № 06 (2024): 19 to 32. https://doi.org/10.5281/zenodo.11126849.

Full text
Abstract:
ಸ್ವಾತಂತ್ರ್ಯ ಪೂರ್ವದಲ್ಲಿ ರಚಿತವಾದ ಕುವೆಂಪುರವರ ಧನ್ವಂತರಿ ಚಿಕಿತ್ಸೆ ಕಥೆ, ಸ್ವಾತಂತ್ರ್ಯ ದೊರೆತ ಏಳು ದಶಕಗಳ ನಂತರವೂ ಪ್ರಸ್ತುತ ಸ್ಥಿತಿಗತಿಗಳನ್ನು ವರ್ಣಿಸುತ್ತದೆ. ಸ್ವಾತಂತ್ರ್ಯೋತ್ತರ ಭಾರತ ವರ್ಣ ಮತ ಜಾತಿ ಭೇದಗಳಿಲ್ಲದೆ ಸರ್ವರೂ ಸಮಾನರು ಎಂದು ಘೋಷಿಸಿ ಸರ್ವರ ಏಳಿಗೆಗೆ ಸಾಧನವಾಗುವ ಸರ್ವೋದಯ ತತ್ವಕ್ಕೆ ಒಂದು ಅಧಿಕಾರ ಮುದ್ರೆ ಬಿದ್ದಂತಾಯಿತು ಎಂದು ಕುವೆಂಪುರವರು ಭಾರತ ಸಂವಿಧಾನ ಜಾರಿಯಾದಾಗ ಸಂತಸ ವ್ಯಕ್ತಪಡಿಸುತ್ತಾರೆ. ಶ್ರೀಸಾಮಾನ್ಯರಿಗೆ ದೀಕ್ಷಾ ಗೀತೆ ಎಂಬ ಕವಿತೆಯಲ್ಲಿ ಕುವೆಂಪು ಕಣ್ಣಲ್ಲಿ ಕಂಡ ಭಾರತ ಸಂವಿಧಾನದ ಆಶಯವು ದ್ವನಿ ಪೂರ್ಣವಾಗಿ ಪ್ರಸ್ತುತ ಧನ್ವಂತರಿ ಚಿಕಿತ್ಸೆ ರಂಗಪ್ರಯೋಗದಲ್ಲಿ ಮೂಡಿ ಬಂದಿದೆ. ದೈವೀಪುರುಷರಾದ ವಿಶ್ವಾಮಿತ್ರರು,  ವಿಶ್ವವೈದ್ಯ ಧನ್ವಂತರಿಯು ಶ್ರೀಸಾಮಾನ್ಯರ ಅವತಾರವಾಗಿ ಕಾಣುತ್ತಾರೆ. ಮಹಾಗು
APA, Harvard, Vancouver, ISO, and other styles
26

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Full text
Abstract:
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
APA, Harvard, Vancouver, ISO, and other styles
27

ಕುಸುಮಾಂಜಲಿ, ಎಲ್. ಸಿ. ಜಗದೀಶ್. "ವಚನ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ". AKSHARASURYA JOURNAL 06, № 04 (2025): 11 to 18. https://doi.org/10.5281/zenodo.15490805.

Full text
Abstract:
ಇದರಲ್ಲಿ ವಚನ ಸಾಹಿತ್ಯ ಮತ್ತು ಸ್ತ್ರೀ ಸಂವೇದನೆಯ ಸಂಬಂದವನ್ನು ಹೇಳಲಾಗಿದೆ. ಸ್ತ್ರೀ ಸಂವೇನೆ ಎಂದರರೇನು ಮತ್ತು ಸ್ತ್ರೀವಾದಕ್ಕಿರುವ ಮೌಲ್ಯವು ಯಾವುದು ಹಾಗೂ ಸಂವೇದನೆ ಎಂದರೆ ಏನು ಎಂದು ವಿವರಿಸಲಾಗಿದೆ. ಆದರೆ ಸ್ತ್ರೀವಾದವನ್ನು ಇಲ್ಲಿ ಆನ್ವಯಿಕವಾಗಿ ಮಾತ್ರವೇ ಬಳಸಲಾಗಿದೆ. ಎಲ್ಲಿಯೂ ವಚನ ಕಾರ್ತಿಯರನ್ನು ಮತ್ತು ವಚನಗಳನ್ನು ಹೆಚ್ಚು ಉಲ್ಲೇಖಿಸಲಿಕ್ಕೆ ಹೋಗಲಿಲ್ಲ. 
APA, Harvard, Vancouver, ISO, and other styles
28

ಗಾಯತ್ರಿ, ಉಪ್ಪಾರ. "ಸಮಾನತೆಯ ಹರಿಕಾರ ಬಸವಣ್ಣ". AKSHARASURYA JOURNAL 04, № 05 Special Issue (2024): 70 to 74. https://doi.org/10.5281/zenodo.13294390.

Full text
Abstract:
ಬಸವಣ್ಣ 12ನೇಯ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಮನುಕುಲದ ಉದ್ಧಾರಕ್ಕಾಗಿ ಎಲ್ಲ ರಂಗದಲ್ಲಿಯೂ ಕ್ರಾಂತಿಗೈದ ಮಹಾನ್ ಪುರುಷ, ಕ್ರಾಂತಿಕಾರಿ. ಸಮಾಜದಲ್ಲಿನ ಅನಿಷ್ಟಗಳನ್ನು ತೆಗೆದುಹಾಕಲು ಶ್ರಮಿಸಿದರು. ವಚನಗಳ ಮುಖಾಂತರ ಸಮಾಜದ ಮಧ್ಯದಲ್ಲಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡಲು ಜನರ ಮಧ್ಯ ದುಮುಕಿ ಜನಸಾಮಾನ್ಯರಿಗೆ ತಿಳಿಯುವ ಭಾಷೆಯಲ್ಲಿ ವಚನಗಳ ಮೂಲಕ ಸಮಾಜದ ಅಂಕು, ಡೊಂಕುಗಳನ್ನು, ಢಾಂಬಿಕತೆಗಳನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿಗನ್ನಡ ವಚನಗಳ ಮೂಲಕ ನಿರೂಪಿಸಿದ ಮಹಾನ ನೇತಾರ. ಸದ್ಗುಣ ಸದಾಚಾರಗಳು ಯಾವುದೇ ಜಾತಿಗೆ ಮೀಸಲಾದವುಗಳಲ್ಲ ಇಲ್ಲವೆ ಹುಟ್ಟಿನಿಂದ ಬಂದವುಗಳೂ ಅಲ್ಲ. ಈ ಅಸ್ಪೃಶ್ಯತಾ ಭಾವನೆಯನ್ನು ಬಸವಣ್ಣನವರು ಸಂಪೂರ್ಣವಾಗಿ ತೆಗೆದುಹಾಕಿ ಸಮಾನತೆಯನ್ನು ತಮ್ಮ ಜೀವನದಲ್ಲಿ ಆಚರಣೆಗೆ ತಂದರು.
APA, Harvard, Vancouver, ISO, and other styles
29

ಲಕ್ಷ್ಮೀ, ಎಲ್. ಪೂಜಾರಿ. "ವಚನ ಚಳವಳಿ ಮತ್ತು ಮಹಿಳೆ". AKSHARASURYA JOURNAL 06, № 05 (2025): 54 to 59. https://doi.org/10.5281/zenodo.15504231.

Full text
Abstract:
ವಚನ ಸಾಹಿತ್ಯ ಹನ್ನೆರಡನೇ ಶತಮಾನದಲ್ಲಿ ಹುಟ್ಟಿಕೊಂಡಂತಹ ವಿಶಿಷ್ಟ ಸಾಹಿತ್ಯದ ಪ್ರಕಾರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಕಾಣುತ್ತೇವೆ. ಈ ಯುಗವನ್ನು ಸಾಮಾಜಿಕ ಪರಿವರ್ತನೆ ಯುಗ ಎಂದು ಕರೆಯುವಷ್ಟರಮಟ್ಟಿಗೆ ಬದಲಾವಣೆ ಆಗಿರುವುದನ್ನು ಕಾಣುತ್ತೇವೆ. ವಚನ ಎಂದರೆ ಮಾತು, ಉಕ್ತಿ ಎಂಬ ಅರ್ಥವನ್ನು ಹೊಂದಿದ್ದು ಗದ್ಯ ಪದ್ಯಗಳ ರೂಪದಲ್ಲಿ ಕಂಡುಬಂದಿದೆ ಮಹಿಳೆಯರ ಸಮಾನತೆಗೆ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ.ಶತಮಾನಗಳಿಂದ ಅಸ್ಪೃಳಾಗಿದ್ಧ ಅದೃಶ್ಯಳಾಗಿದ್ಧ ಹೆಣ್ಣನ್ನು ವಚನಕಾರರು ಮಾನವೀಯ ದೃಷ್ಟಿಯಿಂದ ಕಂಡಿದ್ದಾರೆ. ಪುರುಷನ ಹಾಗೆ ಮಹಿಳೆಗೆ ಸಮಾನವಾದ ಸ್ಥಾನವನ್ನು ನೀಡುವ ಮೂಲಕ 12ನೇ ಶತಮಾನದಲ್ಲಿ ವಚನಕಾರರು ಮಾಡಿದ ಒಂದು ಬೃಹತ್ ಬದಲಾವಣೆ ಇಡೀ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದೆ. ಸ್ತ್ರೀಯರ ಸಮಾನತೆಗಾಗಿ ಮಾಡಿದ ಮೊದಲ ಚಳುವ
APA, Harvard, Vancouver, ISO, and other styles
30

ಪಂಪಾಪತಿ, ವಿ. "ಮಾರಾಟದ ಸರಕಾಗಿರುವ ಹೆಣ್ಣಿನ ದೇಹ: ವೇಶ್ಯಾವಾಟಿಕೆಯ ಹಿನ್ನೆಲೆ". International Journal of Advance Research in Multidisciplinary 2, № 3 (2024): 310–14. https://doi.org/10.5281/zenodo.13318294.

Full text
Abstract:
ಸಾವಿರಾರು ವರ್ಷಗಳಿಂದ ಗಂಡಸರು ಹೆಣ್ಣಿನ ಬದುಕನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ. ಮಕ್ಕಳನ್ನು ಹೆರಲು ಹೆಂಡತಿ ಬೇಕು, ದೈಹಿಕ ಸುಖ ಪಡೆಯಲು ವ್ಯಭಿಚಾರಿಣಿ ಬೇಕು, ಆಧ್ಯಾತ್ಮಿಕ ಸುಖ ಪಡೆಯಲು ಸ್ತ್ರೀ ಕಲಾವಿದೆ ಬೇಕು. ಪುರುಷನ ಜೀವನದಲ್ಲಿ ಮಹಿಳೆಯ ಸ್ಥಾನದ ಸಂದರ್ಭದಲ್ಲಿ ಇದು ವ್ಯಕ್ತವಾಗುತ್ತದೆ. ದೈಹಿಕ ಸುಖದ ತೃಪ್ತಿಗಾಗಿ ಹೆಣ್ಣನ್ನು ಮಾರಾಟದ ವಸ್ತುವನ್ನಾಗಿ ಪರಿವರ್ತಿಸುವ ಆಲೋಚನೆಯು ಸೋಮಾರಿ, ಸೋಮಾರಿ ಮತ್ತು ಭೋಗವಾದಿ ಸಮಾಜದ ಫಲವತ್ತಾದ ಮನಸ್ಸಿನಿಂದ ಬರುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಸುಖಕರ, ನಿರ್ಮಲ ಜೀವನ ಸಾಧ್ಯವಾದರೆ ವೈವಾಹಿಕ ನೈತಿಕತೆಯಂತಹ ನಿರ್ಬಂಧಗಳನ್ನು ಹೇರಲಾಗುತ್ತಿತ್ತು. ನಂತರ, ಸೋಮಾರಿತನ ಮತ್ತು ಅವಲಂಬನೆಯ ಜೀವನದಲ್ಲಿ ಉದ್ಭವಿಸಿದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಈ ಕೃತಕ ನಿರ್ಬಂಧಗಳನ್ನು ರಚಿಸಲಾಯಿತು, ಆದರೆ ನಂತ
APA, Harvard, Vancouver, ISO, and other styles
31

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
32

ಸುನೀತಾ, ಮಹೇಶ್ವರಿ. "ಬಸವಣ್ಣನವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA 05, № 01 (2024): 134 to 138. https://doi.org/10.5281/zenodo.13871042.

Full text
Abstract:
೧೨ನೇ ಶತಮಾನದ ಆಂದೋಲನದ ನಾಯಕ ಮತ್ತು ಕೇಂದ್ರ ವ್ಯಕ್ತಿ ಆದ ಬಸವಣ್ಣ ಸಾಹಿತ್ಯದೃಷ್ಟಿಯಿಂದ ನೋಡಿದಾಗ ಆತ ಒಬ್ಬ ಅತ್ಯುತ್ತಮ ಕೃತಿಕಾರ ಸಮಾನತೆಯ ತತ್ವವನ್ನು ಸಾರಿದ ಹರಿಕಾರ ಎಂದು ಹೇಳುವುದು ಆಕಸ್ಮಿಕವೇ ಸರಿ. ಆತ ಹುಟ್ಟಿದ್ದು ಬಿಜಾಪುರ್ ಜಿಲ್ಲೆಯ ಬಸವನಬಾಗೇವಾಡಿ ಅಗ್ರಹಾರ ಎಂಬ ಊರಲ್ಲಿ ೧೧೩೪ಲ್ಲಿ ಜನನವಾಯಿತು. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಇವರು ಬಾಲ್ಯದಿಂದಲೇ ವೈದಿಕ ಸಂಸ್ಕೃತಿಯ ವಿರೋಧಿಗಳಾಗಿದ್ದರು. ಇವರು ಹುಟ್ಟಿದ್ದು ಉತ್ತಮ ಬ್ರಾಹ್ಮಣ ಮನೆತನದಲ್ಲಿ ಆದರು ದಲಿತ ವರ್ಗದ ಜೊತೆ ಬೆರೆತು ಅವರಿಗಾಗಿ ತನ್ನ ಜೀವನದುದ್ದಕ್ಕೂ ಹೋರಾಡಿದನೆಂದು ತಿಳಿದು ಬರುತ್ತದೆ. ಹೊಸ ಹೊಸ ಬಗೆಯ ಅನೇಕ ಸುಧಾರಣೆಗಳನ್ನು ಜಾರಿಗೆ ತಂದು ನಮ್ಮ ಆಡಳಿತವನ್ನು ಸರಳಗೊಳಿಸಿದರು. ಎಲ್ಲಾ ಶರಣರನ್ನು ಕೂಡಿಸಿ ಎಲ್ಲಾ ಜಾತಿಯವರೊಡನೆ ತಮ್ಮನ್ನು ತಾವು ತೊಡಗಿಸಿಕೊಂಡು ಸ
APA, Harvard, Vancouver, ISO, and other styles
33

ವಿಜಯ. "ಸ್ವಾತಂತ್ರ್ಯ ಹೋರಾಟ ಸಂದರ್ಭದ ನವೋದಯ ಕವನಗಳಲ್ಲಿ ಗಾಂಧೀಜಿ ಚಿತ್ರಣ". AKSHARASURYA JOURNAL 04, № 05 Special Issue (2024): 60 to 69. https://doi.org/10.5281/zenodo.13294388.

Full text
Abstract:
ಸಾವಿರ ಸಾವಿರ ಸಾಮಾನ್ಯರ ನಡುವೆ ಸಾವಿರ ಅಸಾಧಾರಣರು ಅಲ್ಲಿ ಇಲ್ಲಿ ಬಂದು ಹೋಗುತ್ತಾರೆ. ಅಂತಹ ಜನರು ಜಗತ್ತಿನಲ್ಲಿ ತಮ್ಮ ಹೆಸರನ್ನು ದಾಖಲಿಸುತ್ತಾರೆ. ಮನುಕುಲದ ಇತಿಹಾಸದಲ್ಲಿ ಎಲ್ಲರೂ ಬುದ್ಧನಂತೆ ಶಾಶ್ವತ ವೈಭವಕ್ಕೆ ಅರ್ಹರಾಗುವುದಿಲ್ಲ! ಎಲ್ಲರೂ ಬಸವಣ್ಣನವರಂತೆ ತಮ್ಮ ಗುರುತು ಬಿಡುವುದಿಲ್ಲ! ಎಲ್ಲರೂ ಮಹಾತ್ಮರಲ್ಲ! ತಮ್ಮ ವ್ಯಕ್ತಿತ್ವ ಹಾಗೂ ವಿಚಾರಧಾರೆಯಿಂದ ಇಡೀ ಜಗತ್ತಿನ ಜನರನ್ನು ಸೆಳೆದ ಮಹಾನ್ ಚೇತನ. ಮೋಹನ್ ದಾಸ್ ಕರಮಚಂದ್ ಗಾಂಧಿ, ಅಂತಹ ಅಪರಿಮಿತ ಪ್ರಭಾವದಲ್ಲಿ ಅನನ್ಯ. ಕನ್ನಡ ಕವಿಗಳು ಮಹಾತ್ಮಾ ಗಾಂಧಿಯನ್ನು ಅಪರೂಪದ ವ್ಯಕ್ತಿ ಎಂದು ಕರೆಯುತ್ತಾರೆ. ಅದರಲ್ಲೂ ಸ್ವಾತಂತ್ರ್ಯಪೂರ್ವದ ನವೋದಯ ಕವಿಗಳು ಹೇಗೆ ಬಣ್ಣಿಸಿದರು ಎಂಬುದನ್ನು ದಾಖಲಿಸುವ ಸಣ್ಣ ಪ್ರಯತ್ನ ಈ ಬರಹ.
APA, Harvard, Vancouver, ISO, and other styles
34

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
APA, Harvard, Vancouver, ISO, and other styles
35

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
36

ಇಲಿಯಾಸ, ಎಮ್. "ಮಕ್ಕಳ ಬೆಳವಣಿಗೆಯಲ್ಲಿ ಅಂಗನವಾಡಿಗಳ ಪಾತ್ರ". International Journal of Advance Research in Multidisciplinary 2, № 3 (2024): 262–65. https://doi.org/10.5281/zenodo.13284683.

Full text
Abstract:
ಮಗು ಹುಟ್ಟುವ ಮುಂಚೆಯಿAದ ತನ್ನ ಬಾಲ್ಯಾವಸ್ಥೆ ದಾಟುವವರೆಗೆ ಅದರ ಪೋಷಣೆಯ ಪಾತ್ರ ಅತಿ ಮಹತ್ವದ್ದಾಗಿದೆ. ಮುಖ್ಯವಾಗಿ ಹಿಂದುಳಿದ ಸಮುದಾಯದ ಮಕ್ಕಳ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಭಾರತದಲ್ಲಿ ಇದರ ಹೊಣೆಯನ್ನು ಅಂಗನವಾಡಿಗಳ ಮೂಲಕ ಸ್ವತಃ ಸರ್ಕಾರವೇ ವಹಿಸಿಕೊಂಡಿರುವುದು ಜವಾಬ್ದಾರಿಯುತ ನಡೆಯಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರು ತಮ್ಮ ಕೆಲಸದ ಕರ್ತವ್ಯಗಳನ್ನು ಪ್ರವರ್ತಕ ರೀತಿಯಲ್ಲಿ ನಿರ್ವಹಿಸುತ್ತಾರೆ ಮತ್ತು ಉತ್ತಮ ಸಾಧನಗಳನ್ನು ಸೃಜನಾತ್ಮಕ ಮತ್ತು ಪ್ರಾಯೋಗಿಕ ರೀತಿಯಲ್ಲಿ ಬಳಸುತ್ತಾರೆ. ಅಂಗನವಾಡಿ ಕಾರ್ಯಕರ್ತೆಯರ ಮುಖ್ಯ ಉದ್ದೇಶವು ಮಕ್ಕಳ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತದೆ.
APA, Harvard, Vancouver, ISO, and other styles
37

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ‘ಕಲಿಕೆ’ ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.‘ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ’ ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. ‘ದೇಶ ಸುತ್ತು ಇಲ್ಲವೇ ಕೋಶ ಓದು’ ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
APA, Harvard, Vancouver, ISO, and other styles
38

ಶ್ರೀಧರ್, ಆರ್. "ಸಿದ್ಧಲಿಂಗಯ್ಯನವರ ಕಾವ್ಯ: ಸಾಮಾಜಿಕ ಕ್ರೋಧದ ನೆಲೆಯಿಂದ ಆಧ್ಯಾತ್ಮಿಕ ಅನ್ವೇಷಣೆಯ ಕಡೆಗೆ". AKSHARASURYA JOURNAL 05, № 06 (2025): 01 to 07. https://doi.org/10.5281/zenodo.14788682.

Full text
Abstract:
ಕವಿ ಸಿದ್ಧಲಿಂಗಯ್ಯನವರ ಮೊದಲ ʼಹೊಲೆಮಾದಿಗರ ಹಾಡುʼ ಕವನ ಸಂಕಲನದಿಂದ ಅವರ ಕಡೆಯ ʼಬೋಧಿವೃಕ್ಷದ ಕೆಳಗೆʼ ಸಮಗ್ರ ಕಾವ್ಯದ ಶೀರ್ಷಿಕೆಗಳನ್ನು ರೂಪಕದಂತೆ ಪರಿಭಾವಿಸುವುದಾದರೆ, ಸಮಾಜದಲ್ಲಿನ ಶೋಷಣೆ, ತಾರತಮ್ಯ, ಅಸಮಾನತೆಯಿಂದ ಕನಲಿ ಸಂಘರ್ಷದ ಪ್ರತಿಕ್ರಿಯೆ ಹಾಗೂ ಕೀಳರಿಮೆಯಿಂದ ನರಳುತ್ತಿದ್ದ ವಿಸರ್ಜಿತ ಲೋಕದಿಂದ ಹುಟ್ಟಿದ ಬಂಡಾಯದಂತೆ ಸ್ಫೋಟಿಸಿದ ಅವರ ಕವಿತೆಗಳು ಸಮ ಸಮಾಜದ ಹಂಬಲವಾದ ಸಾಮರಸ್ಯದ ಕಡೆಗೆ ಸಾಗಿರುವ ಸೃಜನಶೀಲ ಪಯಣದ ವಿಕಾಸ ಎಂದು ವ್ಯಾಖ್ಯಾನಿಸಬಹುದು. ಇಲ್ಲಿ ಆತ್ಯಂತಿಕ ತೀವ್ರತೆಯಿಂದ ಹುಟ್ಟಿದ ಬಂಡಾಯ ಸಮುದಾಯದಲ್ಲಿ ಸ್ವಾಭಿಮಾನ ಹಾಗೂ ಮಾನವ ಘನತೆಯನ್ನು ಮೂಡಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಸಮಷ್ಟಿ ಬದುಕನ್ನು ಕುರಿತ ಗಾಢ ವಿಷಾದ ಈ ಅನ್ಯಾಯದ ವ್ಯವಸ್ಥೆ ಬದಲಾಗಬೇಕೆಂಬ ಹಂಬಲ ಇಲ್ಲಿನ ಕವಿತೆಗಳು ಪ್ರತಿಪಾದಿಸುವ ನಿಲುವು.ಸ
APA, Harvard, Vancouver, ISO, and other styles
39

ಗಣೇಶ, (ಚಿಕ್ಕಮಗಳೂರು ಗಣೇಶ). "ಹಿಂದುಳಿದ ವರ್ಗಗಳ ಚಳವಳಿ: ಚಾರಿತ್ರಿಕ ಹಿನ್ನೆಲೆ, ಸ್ವರೂಪ ಹಾಗೂ ಮಹತ್ವ". AKSHARASURYA JOURNAL 03, № 04. SPECIAL ISSUE. (2024): 38 to 49. https://doi.org/10.5281/zenodo.10929675.

Full text
Abstract:
ಕನ್ನಡ ನೆಲದಲ್ಲಿ ಬಸವಣ್ಣನ ಸಾಂಸ್ಕೃತಿಕ ನಾಯಕತ್ವದಲ್ಲಿ ವಚನ ಸಾಹಿತ್ಯಾಭಿವ್ಯಕ್ತಿಯ ಮೂಲಕ ಜರುಗಿದ ಸಮಾನತೆಯ ಚಿಂತನೆಯ ಹೋರಾಟ ಚರಿತ್ರೆಯಲ್ಲಿ ಮಹತ್ವದ್ದಾಗಿದೆ. ಅದು ಸಂಭವಿಸಿದ ಕಾಲ 12ನೆಯ ಶತಮಾನ. ಅದರ ತರುವಾಯ 19ನೆಯ ಶತಮಾನದಲ್ಲಿ ‘ಬ್ರಾಹ್ಮಣ್ಯ ಆಡಳಿತಶಾಹಿ ಯಜಮಾನಿಕೆ’ ವಿರುದ್ಧ ಹಿಂದುಳಿದ ವರ್ಗಗಳನ್ನು ಜಾಗೃತಿಗೊಳಿಸಲು ಕೆಳಕಾಣಿಸಿದ ಹೋರಾಟಗಳು ಮಹತ್ವದ ಪಾತ್ರ ವಹಿಸಿದವು. ಮಹಾರಾಷ್ಟ್ರದ ಜೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ದಂಪತಿಗಳು ‘ಸತ್ಯಶೋಧಕ ಸಮಾಜ’ದ ಮುಖಾಂತರ, ಬ್ರಾಹ್ಮಣ್ಯ ಪ್ರಾಬಲ್ಯದ ವಿರೋಧ-ಶೂದ್ರ ದಲಿತರಿಗೆ ಸಮಾನತೆಯ ಹಕ್ಕು-ಮಹಿಳೆಯರ ಶಿಕ್ಷಣದ ಸಲುವಾಗಿ ಹಗಲಿರುಳು ಹೋರಾಡಿದರು. ಶಾಹು ಮಹಾರಾಜರು ತಮ್ಮ ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಬ್ರಾಹ್ಮಣೇತರರಿಗೆ ಅವಕಾಶ ನೀಡುವ ಉದ್ದೇಶದಿಂದ ಉದ
APA, Harvard, Vancouver, ISO, and other styles
40

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Full text
Abstract:
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳ
APA, Harvard, Vancouver, ISO, and other styles
41

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
42

ಮುನಿರಾಜ, ಎ. "ಪ್ಯಾಸೆಂಜರ್ ಗಾಡಿ". AKSHARASURYA 03, № 06 (2024): 68 to 73. https://doi.org/10.5281/zenodo.11127063.

Full text
Abstract:
ಮನುಷ್ಯನ ಸ್ವಭಾವವು ಏಕಾಂತದಲ್ಲಿದ್ದಾಗಲೂ, ಸಭೆಯಲ್ಲಿದ್ದಾಗಲೂ ಬಹು ವ್ಯತ್ಯಾಸವಾಗಿಯೇ ವರ್ತಿಸುತ್ತದೆ. ಏಕೆಂದರೆ ಅದಕ್ಕೆ ಒಳಗೆ ಒಂದು ಭಯ ಕಾಡುತ್ತಿರುತ್ತದೆ. ಅದೆಂದರೆ ವ್ಯಕ್ತಿ ತಾನು ವಾಸಿಸುತ್ತಿರುವ ಪರಿಸರದ ಸಾಮಾಜಿಕ ಕಟ್ಟಳೆಗಳು. ತನಗೆ ಇಷ್ಟವಿರಲಿ ಇಲ್ಲದಿರಲಿ ಅವುಗಳನ್ನು ಪಾಲಿಸಲೇಬೇಕು. ಇದು ಬಹುವಾಗಿ ಇತರ ಜನರೆದುರು ಪಾಲಿಸಿದಂತೆ ನಟಿಸಿದರೂ ಏಕಾಂತದಲ್ಲಿ, ಅಂತರಂಗದಲ್ಲಿ ಅದಕ್ಕೆ ಹಲವು ಸಲ ನೆಲೆಯೇ ಇರುವುದಿಲ್ಲ. ಇಂತಹ ಅನೇಕ ಅಮೂರ್ತ ಕಲ್ಪನೆಗಳಲ್ಲಿ ಒಂದು ಜಾತಿ. ಇದು ಎಷ್ಟೋ ಸಮಾಜಗಳನ್ನು ತನ್ನ ಬಡಬಾನಲದ ಒಡಲಿಗೆ ಆಹಾರವಾಗಿಸಿದೆ; ಇಂದಿಗೂ ಆಗಿಸುತ್ತಿದೆ ಕೂಡ. ಅಂತೆಯೇ ಲಿಂಗಭೇದ. ಗಂಡು-ಹೆಣ್ಣಿನ ನಡುವಿನ ಶಾರೀರಿಕ ಕ್ಷಮತೆಯ ಗುಣಾವಗುಣಗಳನ್ನು ನಿಷ್ಕರ್ಷಿಸಿ ಒಡಂಬಡದ ಜನರು ಇವರಿಬ್ಬರ ಸಮಾನತೆಯ ದೀಪಕ್ಕೆ ಎಣ್ಣೆಯನ್ನೇ ಹಾಕರು. ಅದು
APA, Harvard, Vancouver, ISO, and other styles
43

ಪ್ರಕಾಶ. "ವಚನಕಾರ್ತಿಯರಲ್ಲಿ ಬಂಡಾಯದ ನೆಲೆಗಳು". AKSHARASURYA JOURNAL 06, № 04 (2025): 56 to 63. https://doi.org/10.5281/zenodo.15490899.

Full text
Abstract:
೧೨ನೇ ಶತಮಾನದ ವಚನಚಳವಳಿಯೇ ಚಾರಿತ್ರಿಕವಾಗಿ ಬಹುದೊಡ್ಡ ಪ್ರಮಾಣದ ಬಂಡಾಯಕ್ಕೆ ನೂತನ ಅಯಾಸವನ್ನು ನೀಡಿತು. ಸುಮಾರು ಮೂವತ್ತೆರಡು ಜನ ಶರಣೆಯರು ವಚನಗಳನ್ನು ರಚಿಸಿ ಶ್ರೇಷ್ಠ ಚಿಂತಕಿಯರಾದರು ಅವರು ಸಮಾಜದ ಡಾಂಭಿಕತೆಯ ವಿರುದ್ಧ ಪ್ರತಿಭಿಟಿಸಿದ ರೀತಿ ಅಗಮ್ಯವಾದುದು. ಲಿಂಗಭೇದ ನಿರಾಕರಣೆ, ಮನೋಪ್ರವೃತ್ತಿಗಳ ವಿರುದ್ಧ ಪ್ರತಿಭಟನೆ ಮಾಡಿರುವುದು ಅವರ ಜ್ಞಾನ, ಆತ್ಮಸ್ಥೈರ್ಯ ಹಾಗೂ ಅವರ ಒಳಗಿನ ಬಂಡಾಯ ಗುಣಕ್ಕೆ ಸಾಕ್ಷಿಯಾಗಿದೆ.ಪುರುಷ ಪ್ರಧಾನ ಸಮಾಜವು ತನ್ನ ಹಿತಾಶಕ್ತಿಯನ್ನು ಕಾಯ್ದುಕೊಂಡು ಮಹಿಳೆಯನ್ನು ಕತ್ತಲೆಯ ಕೂಪಕ್ಕೆ ತಳ್ಳಿತ್ತು ೧೨ನೇಯ ಶತಮಾನದ ಬಸವಾದಿ ಶರಣರು ಮಹಿಳೆಯರ ಬದುಕಿನಲ್ಲಿದ್ದ ಕತ್ತಲೆಯನ್ನು ಸರಿಸಿ ಬೆಳಕಿನ ಮಾರ್ಗವನ್ನು ದರ್ಶಿಸಿದರು ಮನುಷ್ಯನ ಸಣ್ಣತನವನ್ನು ಶಮನಗೊಳಿಸಿ ಸಮಾನತೆಯ ತಳಹದಿಯ ಮೇಲೆ ಮಾನವೀಯವಾದ ಸಮಸಂಸ್ಕೃತಿಯ ಸಮಾಜ
APA, Harvard, Vancouver, ISO, and other styles
44

Pinto, Melwyn. "ಕುಡ್ಮಿ, ಗೌಡ್ ಸಾರಸ್ವತ್ ಆನಿ ಕಥೊಲಿಕ್ ಕಾಜಾರಾಂನಿ ಸಮಾನ್ ರಿತಿ ರಿವಾಜಿ: ಏಕ್ ಅಧ್ಯಯನ್". MJES Journal of Amar Konkani 1, № 2 (2021): 34–52. https://doi.org/10.69852/aloy.mjesjak.1.2/17853/.

Full text
Abstract:
ಭಾರತಾಂತ್ ಲಗ್ನಾಬಾಂಧ್ ಮ್ಹಳ್ಯಾರ್ ಫಕತ್ ದಾದ್ಲ್ಯಾ ಆನಿ ಸ್ತ್ರೀಯೆ ಮದ್ಲೊ ಕಾನೂನ್ಬೊದ್ಧ್ ಲೈಂಗಿಕ್ ಎಕ್ವಟ್ ಮಾತ್ರ್ ನ್ಹಯ್, ಬಗಾರ್ ಸಮಾಜೆನ್ ಒಪುನ್ ಘೆತ್ಲ್ಲೊತ ಏಕ್ ಸಾಮಾಜಿಕ್ ಬಾಂಧ್. ದೆಕುನ್ ಭಾರತಾಂತ್ ಲಗ್ನ್ ದೊಗಾಂ ವೆಕ್ತಿಮಧೆಂ ನ್ಹಯ್, ಕಾಜಾರ್ ಜಾತೆಲ್ಯಾ ದೊಗಾಂ ವ್ಯಕ್ತಿಚ್ಯಾ ಕುಟ್ಮಾಂಚೆಂ ಮಿಲನ್ ಅಶೆಂ ಲೆಕ್ತಾತ್. ಹಾಕಾ ಲಾಗೊನ್ ಕಾಜಾರಾ ಕಾರ್ಯಾಂತ್ ಸಯ್ರಿಂ, ಸೆಜಾರ್ ಆನಿ ಸಮಾಜ್ಚ್್ ಮೆತೆರ್ ಜಾತಾ. ಸಾಮಾನ್ಯ್ ಜಾವ್ನ್ ಎಕಾ ಧರ್ಮಾಚ್ಯಾ ವಿವಿದ್ ಜಾತಿಂ ಮಧೆಂ ಕಾಜಾರಾ ಕಾರ್ಯಾಚ್ಯಾ ರಿತಿ-ರಿವಾಜಿಂನಿ ಚಡ್ ಫರಕ್ ದಿಸಾನಾ ತರೀ ವಿವಿಧ್ ಧರ್ಮಾಂ ಮಧೆಂ ಸಮಾನ್ ರಿತಿ ರಿವಾಜಿ ಆಸ್ಚ್ಯೊ ಅಪ್ರೂಬ್. ಪುಣ್ ಕುಡ್ಮಿ ಆನಿ ಜಿಎಸ್ಬಿರ ಲೋಕ್ ಹಿಂದು ಜಾವ್ನಾಸ್ಲ್ಯಾರೀ ಕ್ರಿಸ್ತಾಂವಾಂಚ್ಯಾ ಕಾಜಾರಾಂನಿ ಪಳೆಂವ್ಚ್ಯೊ ಜಾಯ್ತ್ಯೊ ರಿವಾಜಿ ತಾಂ
APA, Harvard, Vancouver, ISO, and other styles
45

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
46

ರಮೇಶ್. "ನಿರಂಜನರ ಬರವಣಿಗೆಯಲ್ಲಿ ಮಾರ್ಕ್ಸ್‌ವಾದ". AKSHARASURYA 06, № 02 (2025): 75 to 83. https://doi.org/10.5281/zenodo.15124060.

Full text
Abstract:
ನಿರಂಜನರು ಸಾಹಿತ್ಯವಲಯದಲ್ಲಿ ಉಂಟುಮಾಡಿದ ಸಾಮಾಜಿಕ ಹೋರಾಟ ಬಹಳ ಮುಖ್ಯವಾದುದು. ಸಾಹಿತ್ಯ ಮತ್ತು ಬದುಕನ್ನು ಏಕ ರೀತಿಯಲ್ಲಿ ಕಂಡುಕೊಂಡವರು. ಸಾಮಾಜಿಕ ಬದ್ಧತೆಯನ್ನು ಕೊನೆಯವರೆಗೂ ಉಳಿಸಿಕೊಂಡವರು. ಬಾಲ್ಯದಲ್ಲಿ ಗಾಂಧಿವಾದಕ್ಕೆ ಮನಸೋತು, ಅನಂತರ ಸಮಾಜವಾದದತ್ತ ಒಲವು ಬೆಳಸಿಕೊಂಡರು. ಹರೆಯದಲ್ಲಿ ಸಮತಾವಾದದ ಸಿದ್ದಾಂತಗಳಿಂದ ಪ್ರಭಾವಿತರಾಗಿ ಮಾರ್ಕ್ಸ್‌ವಾದಿಯಾಗಿ ಕಮ್ಯೂನಿಸ್ಟ್ ಪಕ್ಷದ ಸಕ್ರಿಯ ಸದಸ್ಯರಾಗಿ ದುಡಿದವರು ನಿರಂಜನರು. ʼಸ್ವಾತಂತ್ರ್ಯ ಚಳವಳಿ, ಏಕೀಕರಣ ಚಳವಳಿ, ಹಿಂದೂ ಸಾಂಸ್ಕೃತಿಕ ಪುನರುಜ್ಜೀವನ ಚಳವಳಿಗಳು ಸೊಕ್ಕೇರಿ ಒಟ್ಟಿಗೆ ಕ್ರಿಯಾನಿರತವಾಗಿದ್ದಾಗ, ಮಾರ್ಕ್ಸ್‌ವಾದದಿಂದ ಆಕರ್ಷಿತವಾಗಿ, ಅಖಿಲಭಾರತ ಚಳವಳಿಯ ಒಂದು ಭಾಗವಾಗಿ ಕನ್ನಡ ಪ್ರಗತಿಶೀಲ ಚಳವಳಿಯು ಹುಟ್ಟಿಕೊಂಡಿತು. ಶಿವರಾಯರು ಬೆಳೆಬೆಳೆಯುತ್ತಾ ಗಾಂಧೀ ಪ
APA, Harvard, Vancouver, ISO, and other styles
47

ಶಂಭುಲಿಂಗ, ಹುಬ್ಬಳ್ಳಿ. "ಶಿವಶರಣರ ದೃಷ್ಟಿಯಲ್ಲಿ ಆರ್ಥಿಕ ಸಿದ್ಧಾಂತ". AKSHARASURYA 03, № 06 (2024): 137 to 142. https://doi.org/10.5281/zenodo.11127274.

Full text
Abstract:
12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಅಂದಿನ ಸಮಾಜದ ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತಹ ಸುಧಾರಣೆಯನ್ನು ತರಲು ಬಯಸಿದರು. ಪ್ರತಿಯೊಬ್ಬ ವ್ಯಕ್ತಿಯೂ ಕಾಯಕದಲ್ಲಿ ತೊಡಗಬೇಕು. ಆ ಕಾಯಕದಿಂದ ಬಂದ ಹಣದಿಂದ ತನ್ನ ಅಗತ್ಯತೆಗಳನ್ನು ಪೂರೈಸಿಕೊಂಡು ಉಳಿದ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು ಎಂಬುದು ಶರಣರ ಆಲೋಚನೆಯಾಗಿತ್ತು. ಜೊತೆಗೆ ಸಮಾಜದಲ್ಲಿನ ಸಂಪತ್ತು ಎಲ್ಲ ಜನರಿಗೆ ಸಮಾನವಾಗಿ ಹಂಚಿಕೆ ಆಗಬೇಕು ಎಂಬ ಪರಿಕಲ್ಪನೆಯನ್ನು ಹೊಂದಿದ್ದರು. ಅಂತೆಯೆ ‘ಶಿವಶರಣರ ದೃಷ್ಟಿಕೋನದಲ್ಲಿ ಆರ್ಥಿಕ ಸಿದ್ದಾಂತ’ ಎಂಬ ಈ ಲೇಖನದಲ್ಲಿ ಅರ್ಥಶಾಸ್ತ್ರದ ಪರಿಕಲ್ಪನೆಗಳಾದ ಕೃಷಿ, ಉದ್ಯೋಗ, ಉತ್ಪಾದನೆ, ವಿತರಣೆ, ಆದಾಯ, ಅನುಭೋಗ, ಉಳಿತಾಯ ಮುಂತಾದ ಅಂಶಗಳ ಬಗ್ಗೆ ಬೆಳಕನ್ನು ಚೆಲ್ಲಲಾಗಿದೆ. ಉ
APA, Harvard, Vancouver, ISO, and other styles
48

ಕಮಲಾ, ಹಂಪನಾ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಜೈನ ದೃಷ್ಟಿಯಲ್ಲಿ ಸ್ತ್ರೀ". AKSHARASURYA 03, № 06 (2024): 01 to 18. https://doi.org/10.5281/zenodo.11126790.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಜಗತ್ತಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರಲ್ಲಿ ಡಾ.ಕಮಲಾ ಹಂಪನಾ ಅವರು ಪ್ರಮುಖರಾಗಿದ್ದಾರೆ. ಕಥೆ, ಕಾವ್ಯ, ನಾಟಕ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಕೃಷಿ ಮಾಡಿರುವ ಹಲವಾರು ಲೇಖಕಿಯರು ನಮಗೆ ಸಿಗುತ್ತಾರೆ. ಆದರೆ ಸಂಶೋಧನೆ, ಸಂಪಾದನೆಯಂಥ ವಿದ್ವತ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಮಹತ್ತರವಾದ ಕಾಣ್ಕೆಯನ್ನು ನೀಡಿದ ಲೇಖಕಿಯರು ಅಪರೂಪ. ಅಂತಹ ಅಪರೂಪದ ಸಂಶೋಧಕಿಯರಲ್ಲಿ ಕಮಲಾ ಹಂಪನಾ ಅವರು ಅಗ್ರಗಣ್ಯರಾಗಿ ಕಾಣುತ್ತಾರೆ. ಸಾಮಾಜಿಕ ತಾರತಮ್ಮ ಹಾಗೂ ಲಿಂಗ ತಾರತಮ್ಯಗಳ ನಡುವೆ ಹಲವಾರು ಸವಾಲುಗಳನ್ನು ದಾಟಿಕೊಂಡು ಅಧ್ಯಯನ ನಡೆಸಿ, ಬೋಧನೆ-ಸಂಶೋಧನೆಯ ಬೇಸಾಯದಲ್ಲಿ ಗುರುತರವಾದ ಸಾಧನೆಗೈದು ಮಾದರಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ೧
APA, Harvard, Vancouver, ISO, and other styles
49

Rodrigues, Francis. "ಲುವಿಸ್ ಮಸ್ಕರೇನ್ಹಸ್- ಎಕ್ಲೊ ಪತ್ರ್ಕಾರ್ ಜಾವ್ನ್". MJES Journal of Amar Konkani 4, № 1 (2025): 46–54. https://doi.org/10.69852/aloy.mjesjak.4.1/17594.

Full text
Abstract:
ಗಾಂವ್ಚ್ಯಾ ಕೊಂಕ್ಣಿ ಲೊಕಾಕ್ ತಾಂಚ್ಯಾಚ್ ಭಾಶೆಂತ್ ಲೌಕಿಕ್ ವಾಚಪ್ ವಾಚುಂಕ್ ದೀಜೆ ಆನಿ ತ್ಯಾ ಮಾರಿಫಾತ್ ಕೊಂಕ್ಣಿ ಭಾಸ್ ಆನಿ ಸಂಸ್ಕೃತಿ ಉರಯ್ಜೆ ಮ್ಹಳ್ಳ್ಯಾ ಆಶಯಾಂ ಸವೆಂ ಸುರ್ವಾತ್ಲಲ್ಯಾ ಕೊಂಕ್ಣಿ ದಿರ್ವೆಂ ಪತ್ರಾನ್ ನ್ಹಯ್ ಫಕತ್ ಕಾನಡಿ ಲಿಪಿಂತ್ಲ್ಯಾ ಕೊಂಕ್ಣಿ ಸಾಹಿತ್ಯಾಚೆಂ ಭಂಡಾರ್ ಭರ್ಲೆಂ, ಬಗಾರ್ ಕಾನಡಿ ಕೊಂಕ್ಣಿ ಕಥೊಲಿಕಾಂಚ್ಯಾ ಸಾಮಾಜಿಕ್ ಆನಿ ರಾಜಕೀಯ್ ಜಿಣ್ಯೆಚೆರ್ಯಿ ವ್ಹಡ್ ಮಾಪಾಚೊ ಪ್ರಭಾವ್ ಘಾಲೊ. ತ್ಯಾ ಕಾಳಾರ್ ಚಡ್ ಆನಿ ಚಡ್ ವಿದೇಶಿಪಣ್ ಪಾಂಗ್ರುನ್ ಆಸ್ಲಲ್ಯಾ ಆಮ್ಚ್ಯೆ ಸಮಾಜೆ ಥಂಯ್ ರಾಷ್ಟ್ರಿಕ್ ವೊಡ್ನಿ ಉಬ್ಜೊಂಕ್ ಆನಿ ವಾಡೊಂಕ್ಯಿ ಕಾರಣ್ ಜಾಲೆಂ. ಗಾಂವ್ಚ್ಯಾ ಫಿರ್ಗಜಾಂನಿ ಸ್ಥಳೀಯ್ ಯಾಜಕಾಂಕ್ ಫಾವೊ ತೊ ಅಧಿಕಾರ್ ಮೆಳ್ಳೊ. ಲೊಕಾ ಮಧೆಂ ಜಾಗೃತಿ ವಾಡ್ಲಿ ಆನಿ ಫುಡಾರಾಂತ್ ವ್ಹಡ್ ಮಾಪಾಚ್ಯಾ ಕೊಂಕ್ಣಿ ಪತ್ರಿಕೋದ್ಯಮ್ ವ
APA, Harvard, Vancouver, ISO, and other styles
50

ರಂಗಲಕ್ಷ್ಮಿ, ಪಿ. ಎ. "ಕುವೆಂಪುರವರ ಸಾಹಿತ್ಯದಲ್ಲಿ ಸಾಮಾಜಿಕ ಪ್ರಜ್ಞೆ: ಒಂದು ಚಿಂತನೆ". AKSHARASURYA 05, № 01 (2024): 128 to 133. https://doi.org/10.5281/zenodo.13871017.

Full text
Abstract:
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕುವೆಂಪು ಎಂಬ ಹೆಸರಿನಲ್ಲಿ ಪ್ರಸಿದ್ದವಾಗಿರುವ ಕವಿ. ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ಕೆಲಸ ನಿರ್ವಹಿಸಿದ್ದಾರೆ. ಈ ಲೇಖನದಲ್ಲಿ ಕವಿ ಕುವೆಂಪು ಅವರ ಸಾಹಿತ್ಯದಲ್ಲಿ ಕಂಡು ಬಂದಿರುವ ಸಾಮಾಜಿಕ ಕಳಕಳಿ ಹೇಗೆ ಮೂಡಿಬಂದಿದೆ ಎಂದು ಕೆಲವು ಪದ್ಯಗಳ ಉದಾಹರಣೆಯನ್ನು ತೆಗೆದುಕೊಂಡು ವಿವರಿಸಲಾಗಿದೆ. ಸುಂದರವಾದ ಮಲೆನಾಡಿನ ಕುಪ್ಪಳ್ಳಿಯಲ್ಲಿ ಕವಿ ಕುವೆಂಪು ಅವರ ಜನನ 1904 ನೇ ಇಸವಿ ಡಿಸೆಂಬರ್ 29 ರಂದು ಆಯಿತು. ಆ ಕಾಲದ ಮಲೆನಾಡು ಈಗಿನಂತೆ ತೆಳ್ಳಗಿರಲಿಲ್ಲ. ಸಹ್ಯಾದ್ರಿ ಶ್ರೇಣಿ ಎಂದು ಕರೆಯುವ ಪ್ರದೇಶದಲ್ಲಿ ದಟ್ಟವಾದ ಅರಣ್ಯವಿತ್ತು. ಇಂಥಹ ಮಲೆನಾಡಿನ ಗರ್ಭದಲ್ಲಿ ಜನ್ಮತಾಳಿದ ಕವಿ ಕುವೆಂಪುವಿಗೆ ಪೂರ್ವ ಜನ್ಮದ ಪುಣ್ಯವೇ ಮೈವೆತ್ತಂತೆ ಅನಿಸಿತು. ಚಿಕ್ಕವಯಸ್ಸಿನಿಂದಲೂ ಪ್ರಕೃತಿಯ ಜೊತೆಯಲ್ಲಿಯೇ ಬೆಳೆದ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!