To see the other types of publications on this topic, follow the link: ಸಂವಿಧಾನ.

Journal articles on the topic 'ಸಂವಿಧಾನ'

Create a spot-on reference in APA, MLA, Chicago, Harvard, and other styles

Select a source type:

Consult the top 23 journal articles for your research on the topic 'ಸಂವಿಧಾನ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ನಾಗರಾಜ, ಹರಿಜನ. "ಅಸ್ಪೃಶ್ಯತೆಯ ನಿರ್ಮೂಲನೆಯಲ್ಲಿ ಸಾಂವಿಧಾನಿಕ ನಿಬಂಧನೆಗಳ ಪಾತ್ರ". AKSHARASURYA JOURNAL 06, № 05 (2025): 105 to 113. https://doi.org/10.5281/zenodo.15504316.

Full text
Abstract:
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ್ಮದಾಗಿದ್ದು ಇದರ ಹೆಮ್ಮೆಯ ಸಂಗತಿಯೆಂದರೆ ಅದುವೇ ಸಮಾನತೆ ಎಂದು ಹೇಳಬಹುದು. ಭಾರತದ ಸರ್ಕಾರವು ಸಂವಿಧಾನ ಜಾರಿಯಾದಾಗಿನಿಂದ ಹಿಡಿದು ಪ್ರಸ್ತುತ ದಿನಮಾನದವರೆಗೆ ಇಲ್ಲಿನ ಪ್ರತಿಯೊಬ್ಬ ಪ್ರಜೆಯೂ ಭ್ರಾತೃತ್ವ ಭಾವನೆಯೊಂದಿಗೆ ಯಾವುದೇ ಜಾತಿ, ವರ್ಗ ಮತ್ತು ಮತಗಳ ಬೇಧಭಾವವಿಲ್ಲದೇ ʼನಾವೆಲ್ಲರೂ ಭಾರತೀಯರು, ನಾವೆಲ್ಲರೂ ಸಮಾನರು’ ಎನ್ನುವಂತೆ ಕಾಯ್ದೆ ಕಾನೂನುಗಳನ್ನ
APA, Harvard, Vancouver, ISO, and other styles
2

ಮಾನಸ, ಜಿ. "ಶ್ರೀಸಾಮಾನ್ಯವೇ ಭಗವನ್ ಮಾನ್ಯಂ, ಶ್ರೀಸಾಮಾನ್ಯನೇ ಭಗವದ್ ಧನ್ಯಂ (ಕುವೆಂಪು ವಿರಚಿತ 'ಧನ್ವಂತರಿ ಚಿಕಿತ್ಸೆ' ರಂಗಪ್ರಯೋಗವನ್ನು ಕುರಿತು)". AKSHARASURYA 03, № 06 (2024): 19 to 32. https://doi.org/10.5281/zenodo.11126849.

Full text
Abstract:
ಸ್ವಾತಂತ್ರ್ಯ ಪೂರ್ವದಲ್ಲಿ ರಚಿತವಾದ ಕುವೆಂಪುರವರ ಧನ್ವಂತರಿ ಚಿಕಿತ್ಸೆ ಕಥೆ, ಸ್ವಾತಂತ್ರ್ಯ ದೊರೆತ ಏಳು ದಶಕಗಳ ನಂತರವೂ ಪ್ರಸ್ತುತ ಸ್ಥಿತಿಗತಿಗಳನ್ನು ವರ್ಣಿಸುತ್ತದೆ. ಸ್ವಾತಂತ್ರ್ಯೋತ್ತರ ಭಾರತ ವರ್ಣ ಮತ ಜಾತಿ ಭೇದಗಳಿಲ್ಲದೆ ಸರ್ವರೂ ಸಮಾನರು ಎಂದು ಘೋಷಿಸಿ ಸರ್ವರ ಏಳಿಗೆಗೆ ಸಾಧನವಾಗುವ ಸರ್ವೋದಯ ತತ್ವಕ್ಕೆ ಒಂದು ಅಧಿಕಾರ ಮುದ್ರೆ ಬಿದ್ದಂತಾಯಿತು ಎಂದು ಕುವೆಂಪುರವರು ಭಾರತ ಸಂವಿಧಾನ ಜಾರಿಯಾದಾಗ ಸಂತಸ ವ್ಯಕ್ತಪಡಿಸುತ್ತಾರೆ. ಶ್ರೀಸಾಮಾನ್ಯರಿಗೆ ದೀಕ್ಷಾ ಗೀತೆ ಎಂಬ ಕವಿತೆಯಲ್ಲಿ ಕುವೆಂಪು ಕಣ್ಣಲ್ಲಿ ಕಂಡ ಭಾರತ ಸಂವಿಧಾನದ ಆಶಯವು ದ್ವನಿ ಪೂರ್ಣವಾಗಿ ಪ್ರಸ್ತುತ ಧನ್ವಂತರಿ ಚಿಕಿತ್ಸೆ ರಂಗಪ್ರಯೋಗದಲ್ಲಿ ಮೂಡಿ ಬಂದಿದೆ. ದೈವೀಪುರುಷರಾದ ವಿಶ್ವಾಮಿತ್ರರು,  ವಿಶ್ವವೈದ್ಯ ಧನ್ವಂತರಿಯು ಶ್ರೀಸಾಮಾನ್ಯರ ಅವತಾರವಾಗಿ ಕಾಣುತ್ತಾರೆ. ಮಹಾಗು
APA, Harvard, Vancouver, ISO, and other styles
3

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Full text
Abstract:
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
APA, Harvard, Vancouver, ISO, and other styles
4

ಪಂಕಜ, ಹೆಚ್. ಪಿ. "ಸಂಸತ್ತಿನ ಪ್ರಶ್ನಾವಳಿ". AKSHARASURYA 04, № 03 (2024): 133 to 137. https://doi.org/10.5281/zenodo.12672909.

Full text
Abstract:
ಭಾರತದ ಸಂವಿಧಾನ ವಿಶ್ವದ ಅತ್ಯಂತ ಬೃಹತ್ ಸಂವಿಧಾನ ಮತ್ತು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಆಡಳಿತದ ಅನುಕೂಲಕ್ಕಾಗಿ ದ್ವಿಸದನಗಳನ್ನೊಳಗೊಂಡ ಸಂಸತ್ ವ್ಯವಸ್ಥೆ ರಚನೆಯಾಗಿದೆ. ಪಾರ್ಲಿಮೆಂಟ್‌ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯ ರ ಅಧಿಕಾರ ದುರುಪಯೋಗ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸದಸ್ಯರು ಸಾರ್ವಜನಿಕ ಮಸೂದೆಯಾಗಲಿ ಖಾಸಗಿ ಮಸೂದೆಯಾಗಲಿ ವಿಷಯಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪಾರ್ಲಿಮೆಂಟ್ ನಲ್ಲಿ ಸಭೆಯ ನಿರ್ಣಯಗಳನ್ನು ಗೌರವಿಸುವ ಉದ್ದೇಶ ಹಾಗೂ ವ್ಯವಸ್ಥಿತ ರೀತಿಯಲ್ಲಿ ಸಭೆಯ ನಡಾವಳಿಗಳನ್ನು ಪಾಲಿಸಬೇಕು ಎಂಬ ಉದ್ದೇಶದಿಂದ ಪ್ರಶ್ನೆ ಕೇಳುವ ಅವಕಾಶ ಮತ್ತು ಉತ್ತರ ನೀಡಲು ಬೇಕಾಗುವ ಸುವ್ಯವಸ್ಥಿತ ಕ್ರಿಯೆಯಾಗಿದೆ.
APA, Harvard, Vancouver, ISO, and other styles
5

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
6

ಪ್ರಸನ್ನಕುಮಾರ್, ಕೆ. "ಅಂಬೇಡ್ಕರ್‌ರವರ ಸಾಮಾಜಿಕ ಚಿಂತನೆಗಳು". AKSHARASURYA JOURNAL 05, № 06 (2025): 110 to 116. https://doi.org/10.5281/zenodo.14788784.

Full text
Abstract:
ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಸಿಕೊಂಡ ಮಹಾನ್ ವ್ಯಕ್ತಿ. ಇವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಇವರು ದೇಶಕ್ಕಾಗಿ ಮಾಡಿದ ಹೋರಾಟಗಳು ಎಂತಹ ದುರ್ಬಲ ವ್ಯಕ್ತಿಗಳನ್ನೂ ಸಹ ಎಚ್ಚರಿಸುತ್ತದೆ. ಇವರ ಕೊಡುಗೆಯನ್ನು ಭಾರತೀಯ ಜನತೆ ಎಂದಿಗೂ ಮರೆಯುವುದಿಲ್ಲ. ಸಂವಿಧಾನ ರಚನೆಗೆ ಮಾತ್ರವಲ್ಲದೇ ಅವರ ಸೇವೆ ಜನತೆಯನ್ನು ಜಾಗೃತರಾಗಿ ಮಾಡುವ ಸಾಧನವಾಗಿದೆ ಎನ್ನಬಹುದು. ಅಂಬೇಡ್ಕರ್ ಅವರು ವೈಚಾರಿಕತೆಯ ನೆಲೆಯಲ್ಲಿ ಈ ದೇಶವನ್ನು ಮುಂದೆ ತೆಗೆದುಕೊಂಡು ಹೋಗಬೇಕೆಂಬ ಮಹದಾಶಯವನ್ನು ಹೊಂದಿರುವ ಅಪರೂಪ ವ್ಯಕ್ತಿ. ಈ ಹಿನ್ನಲೆಯಲ್ಲಿಯೇ ಅವರು “ಈ ದೇಶದಲ್ಲಿ ಗುಡಿ-ಗೋಪುರಗಳಿಗಿಂತ ಶಾಲೆಗಳು ತೆರೆದರೆ, ಆ ದೇಶ ಉದ್ದಾರವಾಗುತ್ತದೆ” ಎಂಬ ನಿಲುವನ್ನು ತ
APA, Harvard, Vancouver, ISO, and other styles
7

ಗಣೇಶ. "ಧರ್ಮ ಮತ್ತು ಅಂಬೇಡ್ಕರ್‌". AKSHARASURYA JOURNAL 06, № 05 (2025): 46 to 53. https://doi.org/10.5281/zenodo.15504212.

Full text
Abstract:
ಅಂಬೇಡ್ಕರ್‌ ಭಾರತದ ಒಬ್ಬ ಶ್ರೇಷ್ಠ ಪ್ರತಿಭಾವಂತ ಬುದ್ಧಿ ಜೀವಿ ಮತ್ತು ಮೇಧಾವಿ. ಪ್ರಪಂಚದ ಅಪ್ರತಿಮ ಚಿಂತಕರ ಸಾಲಿನಲ್ಲಿ ನಿಲ್ಲಬಲ್ಲ, ಮೇರು ವ್ಯಕ್ತಿತ್ವವುಳ್ಳ ಚಿಂತನಶೀಲ ವ್ಯಕ್ತಿ. ಅವರು ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಆಸಕ್ತಿ ಮತ್ತು ಕುತೂಹಲದಿಂದ ಅಮೂಲಾಗ್ರವಾಗಿ ಅಧ್ಯಯನ ಮಾಡಿದ್ದರು. ಧರ್ಮವನ್ನು ಕುರಿತಂತೆ ರಾಬರ್ಟ್ ಸನ್ ಸ್ಮಿತ್ ಅವರ ಪರಿಕಲ್ಪನೆಯನ್ನು ಅಂಬೇಡ್ಕರ್‌ ಹಿಂದೂ ಧರ್ಮದ ತತ್ವಜ್ಞಾವನ್ನು ಕುರಿತ ತಮ್ಮ ಕೃತಿಯಲ್ಲಿ ಹೀಗೆ ಉಲ್ಲೇಖಿಸಿದ್ದಾರೆ. ಧರ್ಮ ಯಾವುದೇ ಕಾರಣಕ್ಕೂ ದುರ್ಬಲರನ್ನು ಶೋಷಿಸುವ ಅಸ್ತ್ರವಾಗಬಾರದು. ಹಿಂದೂ ಧಾರ್ಮಿಕ ವ್ಯವಸ್ಥೆಯಲ್ಲಿ ದೈವಿಕ ಪ್ರಭುತ್ವದ ಲಿಖಿತ ಸಂವಿಧಾನ ಮತ್ತು ಪುರೋಹಿತಶಾಹಿಯ ಅಘೋಷಿತ ಪ್ರಾಬಲ್ಯವನ್ನು ಕಾಪಾಡಿಕೊಂಡು ಬರಲಾಗಿದೆ. ಈ ಧರ್ಮದಲ್ಲಿ ಬಹುಸಂಖ್ಯಾತ ಹಿಂದುಳಿದ
APA, Harvard, Vancouver, ISO, and other styles
8

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
9

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ‘ಕಲಿಕೆ’ ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.‘ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ’ ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. ‘ದೇಶ ಸುತ್ತು ಇಲ್ಲವೇ ಕೋಶ ಓದು’ ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
APA, Harvard, Vancouver, ISO, and other styles
10

ಡಿ., ಪುರುಷೋತ್ತಮ. "ಟಿಪ್ಪು: ಐತಿಹಾಸಿಕ ವ್ಯಕ್ತಿ ಕುರಿತು ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 50 to 58. https://doi.org/10.5281/zenodo.10929686.

Full text
Abstract:
ಭಾರತವು ರಾಜ ಮಹಾ ರಾಜರಿಂದ ಅನುಭವಿಸಿದ ಪ್ರಭುತ್ವದ ಕಲ್ಪನೆ, ಬ್ರಿಟೀಷರಿಂದ ಕಲಿತ ಪ್ರಭುತ್ವದ ಪಾಠ, ಸ್ವಾತಂತ್ರ್ಯ ನಂತರ ನಾವು ಅನುಭವಿಸುತ್ತಿರುವ ಪ್ರಜಾಪ್ರಭುತ್ವದ ಕಲ್ಪನೆಗಳಲ್ಲಿ ಬಹಳ ವೈರುಧ್ಯ ಮತ್ತು ವ್ಯತ್ಯಾಸಗಳು ಇವೆ. ಪ್ರಜಾಪ್ರಭುತ್ವದ ದೃಷ್ಟಿಯಿಂದ ಇತಿಹಾಸವನ್ನು ನೋಡಿದರೆ ಬ್ರಿಟೀಷರು, ಇಲ್ಲಿಯ ರಾಜ ಮಹಾರಾಜರುಗಳೆಲ್ಲರೂ ಪ್ರಜಾಪ್ರಭುತ್ವದ ವಿರೋಧಿಗಳೆಂದೇ ಬರೆಯಬೇಕಾಗುತ್ತದೆ. ಏಕೆಂದರೆ ಅವರುಗಳು ಯಾರು ಇಂದಿನ ಸಂವಿಧಾನ ದತ್ತವಾದ ಪ್ರಭುತ್ವನ್ನು ನಡೆಸಿಲ್ಲ. ಪ್ರಜಾಪ್ರಭುತ್ವ ಕಲ್ಪನೆಯಿಂದ ಇತಿಹಾಸ ನೋಡುವುದು ಕೂಡ ತಪ್ಪು. ಏಕೆಂದರೆ ಆ ಕಾಲದ ಚರಿತೆಯಲ್ಲಿ ಇಲ್ಲದನ್ನು ಕಾಣ ಬಯಸಿದರೆ ಅದು ಸಿಗುವುದಿಲ್ಲ. ಇದರಿಂದ ನಮ್ಮ ಪ್ರಭುತ್ವ ಒಪ್ಪುವ ಚರಿತ್ರೆ ನಮಗೆ ಲಬ್ಧವಾಗುವುದಿಲ್ಲ. ಕಾಲ ಪ್ರಜ್ಞೆ ಇರದೆ, ಚಾರಿತ್ರರಿಕ ದೃಷ್ಟಿ ಇರದೆ ಬರೆದ
APA, Harvard, Vancouver, ISO, and other styles
11

ಶುಭಾ, ಮರವಂತೆ. "ಮಹಿಳಾ ಯಕ್ಷಗಾನದ ಸವಾಲುಗಳು ಮತ್ತು ಸಾಧ್ಯತೆ". Aksharasurya Journal 05, № 05 (2025): 48 to 54. https://doi.org/10.5281/zenodo.14619490.

Full text
Abstract:
ಮಹಿಳೆಯರಿಗೆ ಹೊಂದುವ ಕಥಾ ಸಂವಿಧಾನ, ನವೀನ ತಂತ್ರ ಪರಿಕರಗಳನ್ನು ನಾವೇ ಕಂಡುಕೊಳ್ಳುದರ ಮೂಲಕ ಯಕ್ಷರಂಗದಲ್ಲೊಂದು ಮಹಿಳಾ ಲೋಕವನ್ನು ಸೃಷ್ಟಿಸುವ ಸವಾಲು ನಮ್ಮ ಮುಂದಿದೆ. ನಮ್ಮ ನಡೆಯಲ್ಲಿ ಅನನ್ಯತೆಯ ದಾರಿ ಗುರುತುಗಳು ಬೇಕಾಗಿವೆ. ಪ್ರಯೋಗಶೀಲ ಮನಸ್ಸು ಬೆಳೆದರೆ ಯಕ್ಷಗಾನದ ಏಕತಾನತೆಯನ್ನು ಮಹಿಳೆಯರು ಮುರಿದು ಮರು ಕಟ್ಟಲು ಸಾಧ್ಯವಿದೆ. ಮೊದಲು ಮಹಿಳೆಯರು ಯಕ್ಷಗಾನ ನೋಡುವುದೆ ಅಪರಾಧವೆಂದು ಭಾವಿಸುವ ಕಾಲಘಟ್ಟದಿಂದ ಬಹುದೂರ ಬಂದಿದ್ದೇವೆ. ಗಂಡಸೊಬ್ಬನೆ ಕಲಾವಿದನಾಗಿ ಅವನಷ್ಟಕ್ಕೆ ಇದ್ದು ಕುಟುಂಬದಿಂದ ದೂರ ಉಳಿದು ಬದುಕುತ್ತಿದ್ದ ಕಾಲ ಈಗ ಬದಲಾಗಿದೆ. ಹೆಣ್ಣು ಮಕ್ಕಳಿಂದಾಗಿ ಮನೆ ಮನೆಯು ಕಲಾ ಕುಟೀರವಾಗಿದೆ. ಮಹಿಳೆ ತಾನೂ ಕಲಾವಿದೆಯಾಗಿ ಮಕ್ಕಳನ್ನೂ ಆ ದೆಸೆಯಲ್ಲಿ ಪ್ರೋತ್ಸಾಹಿಸುತ್ತಾ ಕುಟುಂಬವನ್ನೆ ಆ ಕಡೆಗೆ ಚಲಿಸುವಂತೆ ಮಾಡುತ್ತಿರುವುದು ವಿಶ್
APA, Harvard, Vancouver, ISO, and other styles
12

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
13

ಮನೋಹರ, ಕೆ. ಜಿ. "ಶಾಸ್ತ್ರೀಯ ಭಾಷಾ ಸ್ಥಾನಮಾನದ ಚಾರಿತ್ರಿಕ ಹಿನ್ನೋಟ". AKSHARASURYA 03, № 05 (2024): 94–106. https://doi.org/10.5281/zenodo.10938108.

Full text
Abstract:
ಅತ್ಯಂತ ಪ್ರಾಚೀನವೂ ಸ್ವತಂತ್ರವೂ ಸುದೀರ್ಘ ಸಮೃದ್ಧ ಸಾಹಿತ್ಯ ಪರಂಪರೆಯನ್ನು ಉಳ್ಳದ್ದು ಮತ್ತು ಹೆಚ್ಚು ಜನಬಳಕೆಯಲ್ಲ್ಲಿದ್ದ ಭಾಷೆಯನ್ನು ಶಾಸ್ತ್ರೀಯ ಭಾಷೆ ಎಂದು ಕರೆಯುತ್ತಾರೆ. ಶಾಸ್ತ್ರೀಯ ಎನ್ನುವುದಕ್ಕೆ ಸನಾತನ, ಪ್ರಾಚೀನ, ಪಾರಂಪರಿಕ, ಶಾಸ್ತ್ರ ಸಮ್ಮತವಾದ ಎಂಬರ್ಥಗಳಿವೆ. ಪ್ರಪಂಚದ ಅತಿ ಪ್ರಾಚೀನ ಮತ್ತು ಸಮೃದ್ಧವಾದ ಭಾಷೆಗಳನ್ನು ಕ್ಲಾಸಿಕಲ್ ಭಾಷೆಗಳೆಂದು, ಶಾಸ್ತ್ರೀಯ ಭಾಷೆಗಳೆಂದು ಕರೆಯುತ್ತಾರೆ. ಪ್ರಪಂಚದಲ್ಲಿರುವ ಶಾಸ್ತ್ರೀಯ (ಕ್ಲಾಸಿಕಲ್) ಭಾಷೆಗಳನ್ನು ಯುನೆಸ್ಕೋ ಮೂರು ವರ್ಗದಲ್ಲಿ ಗುರುತಿಸಿದೆ. ಅವುಗಳೆಂದರೆ: ಇಂಡೋ ಯುರೋಪಿಯನ್ ಭಾಷೆಗಳು - ಕ್ಲಾಸಿಕಲ್ ಗ್ರೀಕ್, ಲ್ಯಾಟಿನ್, ಸಂಸ್ಕೃತ, ಕ್ಲಾಸಿಕಲ್, ಪರ್ಷಿಯನ್.ಆಪ್ರೊ ಏಷಿಯಾಟಿಕ್ ಭಾಷೆಗಳು - ಕ್ಲಾಸಿಕಲ್ ಅರೇಬಿಕ್, ಹೀಬ್ರೂ.ಸಿನೋ ಟಿಬೇಟಿಯನ್ ಭಾಷೆಗಳು - ಕ್ಲಾಸಿಕಲ್ ಚೈನೀಸ್.&
APA, Harvard, Vancouver, ISO, and other styles
14

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
15

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
16

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
APA, Harvard, Vancouver, ISO, and other styles
17

ಕೇಶವ, ಬಂಗೇರ ಬಿ., та ಕುಂಬ್ಳೆ ಧನಂಜಯ. "ತುಳು ನಾಟಕ ಆಧಾರಿತ ಚಲನಚಿತ್ರಗಳು: ಪ್ರೇರಣೆ ಮತ್ತು ಅನನ್ಯತೆ". AKSHARASURYA 06, № 02 (2025): 20 to 30. https://doi.org/10.5281/zenodo.15123892.

Full text
Abstract:
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಅತೀ ಪ್ರಾಚೀನ ಭಾಷೆ. ವರ್ತಮಾನದಲ್ಲಿ ವಿಶ್ಲೇಷಣೆ ಮಾಡಿದರೆ ತುಳು ಹೊರತಾಗಿ ಇತರ ನಾಲ್ಕು ದ್ರಾವಿಡ ಭಾಷೆಗಳಾದ ಕನ್ನಡ, ಮಲೆಯಾಳಂ, ತಮಿಳು ತೆಲುಗು ಭಾಷೆಗಳು ತಮ್ಮ ವ್ಯಾಪ್ತಿಯ ರಾಜ್ಯವನ್ನೇ ಹೊಂದಿವೆ. ಆದರೆ ತುಳು ಭಾಷೆಯು ಕನ್ನಡ ಭಾಷೆಯೊಂದಿಗೆ ಸೌಹಾರ್ದವಾಗಿದ್ದು ಆತ್ಮೀಯವಾಗಿದೆ. ಇತಿಹಾಸಕಾಲದ ತುಳುನಾಡಿನ ವಿಸ್ತಾರ ಕಾಲಕ್ರಮೇಣ ಕುಂದುತ್ತಾ ಬಂತು. ಈಗ ತುಳುನಾಡೆಂದರೆ ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳೆಂದು ತಿಳಿಯಬಹುದು. ಈ ಭಾಗದಲ್ಲಿ ಭಾಷೆ, ಸಂಸ್ಕೃತಿ, ಉಡುಗೆ ತೊಡುಗೆ, ಹಬ್ಬ ಹರಿದಿನಗಳು, ತಿಂಡಿ-ತಿನಿಸುಗಳು ಕೌಟುಂಬಿಕ ಪದ್ಧತಿ, ಕೃಷಿ ಚಟುವಟಿಕೆಗಳು ಎಲ್ಲವೂ ಪರಂಪರೆಯೊಂದಿಗೆ ಸಾಗಿಬಂದಿದೆ. ಸಹಸ್ರಾರು ವರ್ಷಗಳಿಂದ ಪರಂಪರೆ, ಸಂಪ್ರದಾಯ ತಲೆಮಾರುಗಳೊಂದಿಗೆ ಅಂತರ್ಗತವಾಗಿದೆ. ಆಧುನಿಕತ
APA, Harvard, Vancouver, ISO, and other styles
18

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್‌ ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
19

ಮಂಜುನಾಥ, ಕೆ.ಎಸ್. "ಬತ್ತಾಡ ಜನಾಂಗ-ಒಂದು ಅಧ್ಯಯನ". Aksharasurya Journal 05, № 05 (2025): 71 to 76. https://doi.org/10.5281/zenodo.14619547.

Full text
Abstract:
ಭಾರತದ ಮೇಲೆ ಪ್ರಭುತ್ವ ಸಾಧಿಸಲು ಬಂದ ಬ್ರಿಟಿಷರು ಸಾಮಾಜಿಕ ಕೆಳಸ್ತರದಲ್ಲಿರುವ ಜನರನ್ನು ಮತ್ತು ಅವರ ಜನಜೀವನವನ್ನು ಸಂಶೋಧನ ದೃಷ್ಟಿಯಿಂದ ನೋಡಿದರೆ ವಿನಃ ಈ ಜನರನ್ನು ಮುನ್ನೆಲೆಗೆ ತರುವ ಪ್ರಯತ್ನ ಪಡಲಿಲ್ಲ. ಹಿಂದಿನಿಂದ ಬಂದ ತಾರತಮ್ಯದ ವ್ಯವಸ್ಥೆಯನ್ನು ಹಾಗೆಯೇ ಮುಂದುವರಿಸಿದರು. ಹಾಗಾಗಿ ದೇಶದ ಮಹಾನ್ ನಾಯಕರಾದ ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ಇಂತಹ ಮನೋಧ್ಯೇಯವನ್ನು ವಿರೋಧಿಸಿದರು. ಸ್ವಾತಂತ್ರ್ಯಪೂರ್ವದಲ್ಲಿ ಇಂಗ್ಲೀಷ್ ಶಿಕ್ಷಣ ಪಡೆದವರಲ್ಲಿ ಆಧುನಿಕ ಪ್ರಜ್ಞೆ ಬೆಳೆಯುತ್ತಿದ್ದ ಕಾಲದಲ್ಲಿ ಬತ್ತಾಡ ಜನ ಸಮುದಾಯಗಳ ಜೀವನದಲ್ಲಿ ಅಂತಹ ಗಮನಾರ್ಹವಾದ ಬದಲಾವಣೆಗಳೇನೂ ಆಗಿರಲಿಲ್ಲ. ಅಂದಿನ ಮುಖ್ಯ ಬೆಳವಣಿಗೆಯೆಂದರೆ ಉದಾರವಾದ ಮಾನವೀಯತೆಯಷ್ಟೇ. ಆದರೆ ದೇಶಕ್ಕೆ ಸ್ವಾತಂತ್ರ್ಯಬಂದ ನಂತರದಲ್ಲಿ ಸಂವಿಧಾನದ ಶಾಸನಗಳಿಂದ ಸಾಮಾಜಿಕ ಚಲನೆ ಕಾಣಿಸಿಕೊಂ
APA, Harvard, Vancouver, ISO, and other styles
20

ಕಮಲಾ, ಹಂಪನಾ, та ಎಂ. ಭೈರಪ್ಪ ಕುಪ್ಪನಹಳ್ಳಿ. "ಜೈನ ದೃಷ್ಟಿಯಲ್ಲಿ ಸ್ತ್ರೀ". AKSHARASURYA 03, № 06 (2024): 01 to 18. https://doi.org/10.5281/zenodo.11126790.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಜಗತ್ತಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಮೂಡಿಸಿದವರಲ್ಲಿ ಡಾ.ಕಮಲಾ ಹಂಪನಾ ಅವರು ಪ್ರಮುಖರಾಗಿದ್ದಾರೆ. ಕಥೆ, ಕಾವ್ಯ, ನಾಟಕ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಕೃಷಿ ಮಾಡಿರುವ ಹಲವಾರು ಲೇಖಕಿಯರು ನಮಗೆ ಸಿಗುತ್ತಾರೆ. ಆದರೆ ಸಂಶೋಧನೆ, ಸಂಪಾದನೆಯಂಥ ವಿದ್ವತ್ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಮಹತ್ತರವಾದ ಕಾಣ್ಕೆಯನ್ನು ನೀಡಿದ ಲೇಖಕಿಯರು ಅಪರೂಪ. ಅಂತಹ ಅಪರೂಪದ ಸಂಶೋಧಕಿಯರಲ್ಲಿ ಕಮಲಾ ಹಂಪನಾ ಅವರು ಅಗ್ರಗಣ್ಯರಾಗಿ ಕಾಣುತ್ತಾರೆ. ಸಾಮಾಜಿಕ ತಾರತಮ್ಮ ಹಾಗೂ ಲಿಂಗ ತಾರತಮ್ಯಗಳ ನಡುವೆ ಹಲವಾರು ಸವಾಲುಗಳನ್ನು ದಾಟಿಕೊಂಡು ಅಧ್ಯಯನ ನಡೆಸಿ, ಬೋಧನೆ-ಸಂಶೋಧನೆಯ ಬೇಸಾಯದಲ್ಲಿ ಗುರುತರವಾದ ಸಾಧನೆಗೈದು ಮಾದರಿ ಮಹಿಳೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಡಾ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ೧
APA, Harvard, Vancouver, ISO, and other styles
21

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
22

ವಿಜಯಲಕ್ಷ್ಮೀ, ಸುಬ್ಬರಾವ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಗೀತನಾಟಕ ಪ್ರವೇಶ: ಸಂಸ್ಕೃತ ನಾಟಕ ಮತ್ತು ನಾಟಕದಲ್ಲಿ ಸಂಗೀತ". AKSHARASURYA 05, № 01 (2024): 01 to 32. https://doi.org/10.5281/zenodo.13870268.

Full text
Abstract:
ಬಹುಮುಖ ಪ್ರತಿಭೆಯ ಡಾ.ವಿಜಯಾ ಸುಬ್ಬರಾಜ್ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಾಯಿ ಲಕ್ಷ್ಮಿ, ಹಾಗೂ ತಂದೆ ಸೀತಾರಾಂ ಅವರು. ಓದಿದ್ದು ಬೆಂಗಳೂರಿನಲ್ಲೇ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎಂ.ಎ ಮತ್ತು ಎಲ್.ಎಲ್.ಬಿ. ಪದವೀಧರೆಯಾದವರು. ಫ್ರೆಂಚ್ ಭಾಷೆಯ ಡಿಪ್ಲೊಮ ಪದವಿಯನ್ನೂ ಹಿಂದಿ ಸಾಹಿತ್ಯರತ್ನ ಪದವಿಯನ್ನೂ ಅಧ್ಯಯನ ಮಾಡಿದವರು. ಎಂ.ಇ.ಎಸ್. ಕಾಲೇಜಿನಲ್ಲಿ ಸುದೀರ್ಘ ಕಾಲ ಪ್ರಾಧ್ಯಾಪಕ ಹುದ್ದೆ ನಿರ್ವಹಿಸುತ್ತಲೇ ನಿರಂತರವಾಗಿ ಹಲವು ಮಾಧ್ಯಮಗಳಲ್ಲಿ ತಮ್ಮ ಪ್ರಯೋಗಶೀಲತೆಯನ್ನು ದುಡಿಸಿಕೊಂಡವರು, ಕಥೆ, ಕವಿತೆ, ನಾಟಕ, ಕಾದಂಬರಿ, ಪ್ರವಾಸ ಕಥನ, ಅನುವಾದ, ವೈಚಾರಿಕ ಬರೆಹ, ವಿಮರ್ಶೆ, ಸಂಶೊಧನೆ ಮುಂತಾದ ವಿಭಿನ್ನ ಪ್ರಕಾರಗಳಲ್ಲಿ ಅವರ ಶಕ್ತಿ, ಪ್ರತಿಭೆಗಳು ಬೆಳಗಿವೆ. ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯ ಓದುವ ಬರೆಯುವ ಹವ್ಯಾಸ ರೂಢಿಸಿಕ
APA, Harvard, Vancouver, ISO, and other styles
23

ತೀ.ನಂ., ಶ್ರೀಕಂಠಯ್ಯ, та ಕುಪ್ಪನಹಳ್ಳಿ ಎಂ. ಭೈರಪ್ಪ ಸಂಯೋಜನೆ:. "ಕನ್ನಡದಲ್ಲಿ ಕಾವ್ಯಲಕ್ಷಣ ಗ್ರಂಥಗಳು". Aksharasurya Journal 05, № 05 (2025): 01 to 37. https://doi.org/10.5281/zenodo.14619428.

Full text
Abstract:
<strong>ದೇಶಭಾಷಾ ವಿದ್ವದ್ವಲಯದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ</strong>&lsquo;ಭಾರತೀಯ ಕಾವ್ಯ ಮೀಮಾಂಸೆ&rsquo; ಎಂಬ ಮಹೋನ್ನತ ಕಾವ್ಯ-ಶಾಸ್ತ್ರ ಗ್ರಂಥದ ಮೂಲಕ ಕನ್ನಡ ದೇಶಭಾಷಾ ವಿದ್ವದ್ವಲಯದ ವಿಶ್ವಾತ್ಮಕತೆಯನ್ನು ಸಾಕಾರಗೊಳಿಸಿದ ಮೇರುವಿದ್ವಾಂಸರು ಪ್ರೊ.ತೀ.ನಂ.ಶ್ರೀ ಅವರು. ಆಚಾರ್ಯ ಬಿ.ಎಂ.ಶ್ರೀ. ಅವರ ಪರಂಪರೆಯಲ್ಲಿ ಅವರ ಉತ್ತರಾಧಿಕಾರಿ ಎಂಬಂತೆ ನಡೆದು ಜನಪ್ರಿಯ ಅಧ್ಯಾಪಕರೂ ಸಂಮೋಹಕ ಭಾಷಣಕಾರರೂ ಆಗಿ ಪ್ರಸಿದ್ಧರಾದವರು; ಕನ್ನಡದ ವಿಶ್ವವಿದ್ಯಾನಿಲಯಗಳಲ್ಲಿ ಭಾಷಾಶಾಸ್ತ್ರದ ಅಧ್ಯಯನಕ್ಕೆ ಬುನಾದಿಯನ್ನು ಹಾಕಿದವರು; ಆಧುನಿಕ ಕನ್ನಡ ನಿಘಂಟಿನ ರಚನೆಗಾಗಿ ತಮ್ಮ ಸಮಯ, ಶಕ್ತಿ ಸಾಮರ್ಥ್ಯಗಳನ್ನೂ, ವಿದ್ವತ್ತನ್ನೂ ವಿನಿಯೋಗಿಸಿದ ದಿಗ್ಗಜರಲ್ಲಿ ಒಬ್ಬರು. ಅವರನ್ನು ಸಮಕಾಲೀನರು ಕಂಡಂತೆ ಅವರ ಬೋಧಿಸತ್ವ ಸನ್ನಿಭ ಮನೋಹರ ವ್ಯಕ್ತಿತ್ವವನ್
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!