Academic literature on the topic 'ಜಾತಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಜಾತಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಜಾತಿ"

1

ಸುಚಿತ್ರಾ, ಟಿ., та ಕೆ.ಎಸ್. ಗಿರಿಜಾ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜಾತಿ ನಿರ್ಮೂಲನೆ: ಒಂದು ವಿಶ್ಲೇಷಣೆ". AKSHARASURYA JOURNAL 06, № 05 (2025): 226 to 232. https://doi.org/10.5281/zenodo.15504688.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆ (Annihilation of Caste) ಕೃತಿ ಭಾರತೀಯ ಜಾತಿ ವ್ಯವಸ್ಥೆಯ ವಿರುದ್ಧ ನೀಡಿದ ಅತ್ಯಂತ ಪ್ರಬಲ ವಿಮರ್ಶೆಗಳಲ್ಲಿ ಒಂದಾಗಿದೆ. 1936ರಲ್ಲಿ ಜಾತ್ ಪಾತ್ ತೋಡಕ್ ಮಂಡಳಿಗೆ ಈ ಭಾಷಣವನ್ನು ನೀಡಲು ಉದ್ದೇಶಿಸಲಾಗಿತ್ತಾದರೂ, ಸಂಘಟಕರು ಅದರ ವಿಷಯವನ್ನು ತೀವ್ರವಾದದ್ದು ಎಂದು ಪರಿಗಣಿಸಿ ಅದನ್ನು ನಿರಾಕರಿಸಿದರು. ನಂತರ ಅಂಬೇಡ್ಕರ್ ಅವರು ಈ ಭಾಷಣವನ್ನು ಸ್ವತಃ ಪುಸ್ತಕ ರೂಪದಲ್ಲಿ ಪ್ರಕಟಿಸಿದರು. ಈ ಪ್ರಬಂಧದಲ್ಲಿ ಅಂಬೇಡ್ಕರ್ ಅವರ ಜಾತಿ ಸಂಬಂಧಿತ ಆಲೋಚನೆಗಳ ವಿಶ್ಲೇಷಣೆ, ಹಾಗೂ ಜಾತಿ ನಿರ್ಮೂಲನೆಗಾಗಿ ಅವರು ನೀಡಿದ ಸಂವಿಧಾನಾತ್ಮಕ ಕೊಡುಗೆಗಳನ್ನು ವಿಮರ್ಶಾತ್ಮಕವಾಗಿ ಚರ್ಚಿಸಲಾಗಿದೆ. ಜೊತೆಗೆ, ಈ ಕೃತಿಯ ಪ್ರಸ್ತುತತೆ ಮತ್ತು ಸಮಕಾಲೀನ ಜಾತಿ ರಾಜಕೀಯದ ಮೇಲೆ ಇದರ ಪರಿಣಾಮವನ್ನೂ ಅವಲೋಕಿಸಲಾಗುತ್ತದೆ.
APA, Harvard, Vancouver, ISO, and other styles
2

ಕುಮಾರಯ್ಯ, ಡಿ.ಎಸ್. "ಬಸವಣ್ಣನವರ ವಚನಗಳಲ್ಲಿ-ಜಾತಿ ನಿರಾಕರಣೆ". AKSHARASURYA JOURNAL 06, № 06 (2025): 26 to 31. https://doi.org/10.5281/zenodo.15580919.

Full text
Abstract:
ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಶರಣ ಸಮಾಜವು ಕುಲ, ಮತ, ಲಿಂಗ, ವರ್ಣ, ವರ್ಗಇವುಗಳಿಂದ ಮುಕ್ತವಾಗಿತ್ತು. ಬಸವಣ್ಣನವರು ಜಾತಿಯ ವಿಷ ಬೀಜವನ್ನು ಕಿತ್ತು ನವ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಸಾರಿದರು. ಮನುಧರ್ಮದ ಕರ್ಮಸಿದ್ದಾಂತವನ್ನು ಬಸವಣ್ಣನವರು ಅಲ್ಲಗಳೆದು ಕಾಯಕ ಸಿದ್ಧಾಂತವನ್ನು ಕಾರ್ಯಗತಗೊಳಿಸಿದರು. ಬಸವಣ್ಣನವರ ಚಿಂತನೆಗಳಲ್ಲಿ ಜಾತಿ ನಿರಾಕರಣೆಯೂ ಸಹ ಮಹತ್ವವಾದ ಚಿಂತನೆಯಾಗಿದೆ. ಜಾತಿ ನಿರಾಕರಣೆ ವಿಚಾರದಲ್ಲಿ ಎಲ್ಲರಿಗಿಂತ ಹೆಚ್ಚು ಮಾನಸಿಕ ಸಂಘರ್ಷವನ್ನು ಹೊಂದಿದವನು ಬಸವಣ್ಣನವರು, ಇಲ್ಲದಿದ್ದರೆ ‘ಉತ್ತಮ ಕುಲದಲ್ಲಿ ಹುಟ್ಟಿದನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯ ಎಂದು ಹೇಳುವ ನೋವು ಏಕಿರಬೇಕಿತ್ತು?’ ಉತ್ತಮ ಜಾತಿ ಸಂಕೋಲನೆಯಿಂದ ಬಿಡಿಸಿಕೊಂಡು ಹೊರಬರುವುದಕ್ಕಾಗಿ ತಾನು ಹುಟ್ಟಿದ ಜಾತಿಯನ್ನು ನಿರಾಕ
APA, Harvard, Vancouver, ISO, and other styles
3

ಡಾ., ಸ್ವಾಮಿ. "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಪರಿಚಯ". International Journal of Advance Research in Multidisciplinary 2, № 3 (2024): 258–61. https://doi.org/10.5281/zenodo.13292327.

Full text
Abstract:
ಭಾರತದ ಪ್ರತಿಯೊಂದು ರಾಜ್ಯಗಳು ಸಹ ವಿವಿಧ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸಿವೆ. ಅಂಥ ನಿಗಮಗಳು ರಾಜ್ಯ ಸರ್ಕಾರಗಳ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಅಳವಡಿಸಿಕೊಂಡು ಅವುಗಳ ಅನುಷ್ಠಾನಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಬರುತ್ತಿವೆ. ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಜನರ ಸರ್ವತೋಮುಖ ಅಭಿವೃದ್ಧಿಗೆÀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ೨೦-೦೩-೧೯೭೫ರಂದು ಸ್ಥಾಪಿಸಲಾಗಿದೆ. ದಿನಾಂಕ ೧೬-೦೮-೨೦೦೫ ರಂದು ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಎಂದು ಮರುನಾಮಕರಣ ಮಾಡಲ್ಪಟ್ಟಿದೆ. ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿ ಡಾ.ಬಿ.ಆರ್.ಅಂಬೇ
APA, Harvard, Vancouver, ISO, and other styles
4

ಸಂಪತ್, ಬೆಟ್ಟಗೆರೆ. "ತೇಜಸ್ವಿ: ಪ್ರೀತಿ, ಜಾತಿ ಇತ್ಯಾದಿ". AKSHARASURYA JOURNAL 05, № 04 (2024): 69 to 93. https://doi.org/10.5281/zenodo.14289855.

Full text
Abstract:
ತೇಜಸ್ವಿಯವರ ಸಾಹಿತ್ಯ ಕುರಿತು ಒಂದು ನಿಟ್ಟಿನಿಂದ ತಮಾಷೆಯಾಗಿ ಅದರಲ್ಲಿ ಬರುವ ಬೈಗುಳಗಳನ್ನು ಸೀಮಿತ ದೃಷ್ಟಿಕೋನದಿಂದ ನೋಡುವ ಒಂದು ನೋಟ. ಅದರಂತೆ ಅದನ್ನು ತಪ್ಪಾಗಿ ಅರ್ಥೈಸಿಕೊಂಡು ತೇಜಸ್ವಿ ಎಂಬ ಜಾತ್ಯಾತೀತವಾದಿ ನಿಲುವಿನ ವ್ಯಕ್ತಿತ್ವವನ್ನೇ ಜಾತಿವಾದಿ ವ್ಯಕ್ತಿಯಾಗಿ ಒಂದೇ ದೃಷ್ಟಿಕೋನದಿಂದ ಏಕಮುಖಿ ಗ್ರಹಿಕೆಯಲ್ಲಿ ಕಂಡುಕೊಂಡಿರುವುದಕ್ಕೆ ಒಂದು ಪ್ರತಿಕ್ರಿಯಾತ್ಮಕ ವಿವೇಚನೆಯಾಗಿ ಈ ಲೇಖನ ನಿರೂಪಿತವಾಗಿದೆ.  ಉದಾಹರಣೆಗೆ ತೇಜಸ್ವಿಯವರ ಪರಿಸರದ ಕತೆ ಪುಸ್ತಕದಲ್ಲಿನ ಪಾತ್ರ ಕರಿಯಪ್ಪ ಮೇಲು ಜಾತಿಯ ಒಕ್ಕಲಿಗರ ಗೌಡ ಸಮುದಾಯದವನಾದುದರಿಂದ ಕೆಳವರ್ಗವೊಂದರ ಸಮುದಾಯದ ಪಾತ್ರವಾದ ಎಂಗ್ಟನನ್ನು ಬೈಗುಳದಲ್ಲಿ ಕೆಟ್ಟಪದಗಳನ್ನು ಬಳಸಿ ನಿಂದಿಸಿದ್ದಾನೆ; ಇದರಲ್ಲಿ ಹುಟ್ಟಿನ ಜಾತಿಯಿಂದ ಕರಿಯಪ್ಪನನ್ನೇ ಪ್ರತಿನಿಧಿಸುವ ತೇಜಸ್ವಿಯವರ ಒಕ್ಕಲಿಗ ಗೌಡ ಜ
APA, Harvard, Vancouver, ISO, and other styles
5

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
6

ಚನ್ನವೀರಯ್ಯ. "ವಚನಗಳಲ್ಲಿನ ಜಾತಿ ಪದ್ಧತಿ ಮತ್ತು ಮೌಢ್ಯಗಳ ವಿಶ್ಲೇಷಣೆ". AKSHARASURYA 05, № 02 (2024): 135 to 142. https://doi.org/10.5281/zenodo.14035388.

Full text
Abstract:
ಹನ್ನೇರಡನೇ ಶತಮಾನವನ್ನು ವಚನ ಸಾಹಿತ್ಯದ ಪರ್ವಕಾಲ ಎಂದು ಕರೆಯಬಹುದು. ಏಕೆಂದರೆ ಜನಸಾಮಾನ್ಯರ ಆಡುಭಾಷೆಯ ಮೂಲಕ ಕನ್ನಡಭಾಷೆಯನ್ನು ಉತ್ತುಂಗಕ್ಕೆ ಏರಿಸಿದ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ. ಬಹು ಮುಖ್ಯವಾಗಿ ಜಾತಿ, ಮತ, ವರ್ಗ, ವರ್ಣ, ಮೇಲು, ಕೀಳು ಹಾಗೂ ಸಾಮಾಜಿಕ ಪಿಡುಗುಗಳಾದ ಮೂಢನಂಬಿಕೆಗಳು ಅನಿಷ್ಟಪದ್ದತಿಗಳ ಆಚರಣೆಯಿಂದ ಸಮಾಜದ ಅಭಿವೃದ್ಧಿಗೆ ಮಾರಕವಾದುದು ಎಂಬುದನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿ ಸಾಮಾಜಿಕ ಬದಾಲಾವಣೆಗೆ ಮುನ್ನುಡಿ ಬರೆದು ನವಮನ್ವಂತರಕೆ ದಾರಿ ದೀಪವಾದವರು. ಆ ಮೂಲಕ ಸಮಾಜದ ಪರಿವರ್ತನೆಗೆ ಶ್ರಮಿಸಿದರು. ಸಾಮಾಜಿಕ ಬದಲಾಣೆಯ ಜೊತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಅಂತಹ ಕೆಲವು ವಚನಕಾರರ ವಚನಗಳ ವಿಶ್ಲೇಷಣೆ ಈ ಲೇಖನದಲ್ಲಿ ಚರ್ಚಿಸಲಾಗಿದೆ.
APA, Harvard, Vancouver, ISO, and other styles
7

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
8

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
9

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
10

ಮುನಿರಾಜ, ಎ. "ಪ್ಯಾಸೆಂಜರ್ ಗಾಡಿ". AKSHARASURYA 03, № 06 (2024): 68 to 73. https://doi.org/10.5281/zenodo.11127063.

Full text
Abstract:
ಮನುಷ್ಯನ ಸ್ವಭಾವವು ಏಕಾಂತದಲ್ಲಿದ್ದಾಗಲೂ, ಸಭೆಯಲ್ಲಿದ್ದಾಗಲೂ ಬಹು ವ್ಯತ್ಯಾಸವಾಗಿಯೇ ವರ್ತಿಸುತ್ತದೆ. ಏಕೆಂದರೆ ಅದಕ್ಕೆ ಒಳಗೆ ಒಂದು ಭಯ ಕಾಡುತ್ತಿರುತ್ತದೆ. ಅದೆಂದರೆ ವ್ಯಕ್ತಿ ತಾನು ವಾಸಿಸುತ್ತಿರುವ ಪರಿಸರದ ಸಾಮಾಜಿಕ ಕಟ್ಟಳೆಗಳು. ತನಗೆ ಇಷ್ಟವಿರಲಿ ಇಲ್ಲದಿರಲಿ ಅವುಗಳನ್ನು ಪಾಲಿಸಲೇಬೇಕು. ಇದು ಬಹುವಾಗಿ ಇತರ ಜನರೆದುರು ಪಾಲಿಸಿದಂತೆ ನಟಿಸಿದರೂ ಏಕಾಂತದಲ್ಲಿ, ಅಂತರಂಗದಲ್ಲಿ ಅದಕ್ಕೆ ಹಲವು ಸಲ ನೆಲೆಯೇ ಇರುವುದಿಲ್ಲ. ಇಂತಹ ಅನೇಕ ಅಮೂರ್ತ ಕಲ್ಪನೆಗಳಲ್ಲಿ ಒಂದು ಜಾತಿ. ಇದು ಎಷ್ಟೋ ಸಮಾಜಗಳನ್ನು ತನ್ನ ಬಡಬಾನಲದ ಒಡಲಿಗೆ ಆಹಾರವಾಗಿಸಿದೆ; ಇಂದಿಗೂ ಆಗಿಸುತ್ತಿದೆ ಕೂಡ. ಅಂತೆಯೇ ಲಿಂಗಭೇದ. ಗಂಡು-ಹೆಣ್ಣಿನ ನಡುವಿನ ಶಾರೀರಿಕ ಕ್ಷಮತೆಯ ಗುಣಾವಗುಣಗಳನ್ನು ನಿಷ್ಕರ್ಷಿಸಿ ಒಡಂಬಡದ ಜನರು ಇವರಿಬ್ಬರ ಸಮಾನತೆಯ ದೀಪಕ್ಕೆ ಎಣ್ಣೆಯನ್ನೇ ಹಾಕರು. ಅದು
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!