Academic literature on the topic 'ಬಿ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಬಿ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಬಿ"

1

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪುನರುಜ್ಜೀವನಗೊಳಿಸಲು ಡಾ. ಬಿ. ಆರ್. ಅಂಬೇಡ್ಕರ್‌ು ಮಾಡಿದ ಚಿಂತನೆಗಳು, ಪ್ರಯೋಗಗಳು ಹೋರಾಟಗಳು ಮಹತ್ವ ಪಡೆದು ಸಮ ಸಮಾಜಕ್ಕೆ ಸಹಬಾಳ್ವೆಗೆ ಪೂರಕವಾಗಿವೆ. ಹೀಗೆ ಅಂಬೇಡ್ಕರ್‌ರು ಶೋಷಿತ ಸಮುದಾಯದ ಹೋರಾಟಕ್ಕೆ ಬಹುದೊಡ್ಡ ʼಐಕಾನ್’ ಆಗಿ ಹೊರಹೊಮ್ಮಿದರು, ಸ್ವಾಭಿಮಾನದ ಸಂಕೇತವಾದರು. 
APA, Harvard, Vancouver, ISO, and other styles
2

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ. ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪೋಣಿಸಿದ್ದಾರೆ. ದೇಹಕ್ಕೆ ಹೊಂದಿಕೊಳ್ಳುವ ಅಂಗಿಯನ್ನೆ ಹೊಲಿಯಬೇಕು. ಅಳತೆ ಮೀರಿದರೆ ಅದು ತನ್ನ ಬಾಹ್ಯ ಮತ್ತು ಅಂತರಂಗಕ್ಕೆ ಸರಿ ಹೊಂದುವುದಿಲ್ಲ. ಆಗ ಅದರ ನಿಜ ಸೌಂದರ್ಯವೂ ಹಾಳಾಗುತ್ತದೆ. ಹಾಗಾಗಿ ಭಾರತದಂತಹ ದೇಶಕ್ಕೆ ಸತ್ವಶಾಲಿಯಾಗಿ ಚಲಾವಣೆಗೊಳ್ಳುವ ಜೀವ ಸತ್ವವೆಂದರೆ ಅದು ಪ್ರಜಾಪ್ರಭುತ್ವ. ಎಲ್ಲರನ್ನೂ ಒಂದು ದಾರಕ್ಕೆ ಸೇರಿಸಿ ಕೊಂಡ್ಯೊಯುವ ಬೇಸುಗೆ ಎಂಬುದನ್ನರಿತು ಸಂವಿಧಾನದಲ್ಲಿ ಇದಕ್ಕೆ ಒಂದು ಸ್ಪರ್ಶ ನೀಡಿದ್ದಾರೆ. ಪ್ರಜಾಪ್ರಭುತ್ವ ಎನ್ನುವುದು ಪ್ರಜೆಗಳಿಂದ ಉತ್ಪನ್ನಗೊಳ್ಳುವ ಅಧಿಕಾರ. ಆ ಅಧಿಕಾರದಿಂದ ಜನರ ಆಶೋತ್ತರಗಳಿಗೆ, ಆಕಾಂಕ್ಷೆಗಳಿಗೆ, ಮನೋಭಾವಗಳಿಗೆ ಸ್ಪಂದನೆ, ಸಂವೇದನೆ, ಸಹವರ್ತಿತನ, ಸಹಭಾಗಿತ್ವಗಳು ಹುಟ್ಟು ಹಾಕಬೇಕು. ಜನ ಕಲ್ಯಾಣಕ್ಕೆ ಅನುವು ಮಾಡಿಕೊಡಬೇಕು. ಏಕೆಂದರೆ ಪ್ರತಿಯೊಂದು ಜೀವಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತೆಗಳು ಅಗತ್ಯ ಹಾಗೂ ಅನಿವಾರ್ಯವಾಗಿರುತ್ತವೆ. ಇವು ನೆಲೆಗೊಳ್ಳಲು ಪ್ರಜಾಪ್ರಭುತ್ವದಂತಹ ಅಂತಃಸತ್ವಬೇಕು. ದುರ್ದಮ್ಯವಾದ ಕಾಡಿನಂತೆ ಪ್ರತ್ಯೇಕತೆಯನ್ನು ಕಾಪಾಡಿಕೊಂಡು ಬಂದಿರುವ ವ್ಯವಸ್ಥೆಯು ಬೆರೆಯುವುದು ಕಷ್ಟಸಾಧ್ಯ. ಹಾಗಾಗಿ ಸಮಾಜಮುಖಿಯಾಗಿ, ಮುಖ್ಯವಾಹಿನಿಗೆ ತರಲು ಅವರ ಪ್ರಯತ್ನ ಅದಮ್ಯವಾದದ್ದು. ಪ್ರಜಾಪ್ರಭುತ್ವ ಎನ್ನುವುದು ಬಹು ಸಂಖ್ಯಾತರ ಪರವಾದ, ಅಲ್ಪ ಸಂಖ್ಯಾತರ ವಿರೋಧವಾದ ವರ್ತನೆಗಳು ಈ ಮಣ್ಣಿಗೆ ಒಗ್ಗವು. ಒಂದು ಸರ್ಕಾರ ಜನರಿಂದ ಆಯ್ಕೆಯಾದ ಮೇಲೆ ಅದರ ಕರ್ತವ್ಯ ಮತ್ತು ಜವಾಬ್ದಾರಿಗಳು ಮುಖ್ಯವಾಗುತ್ತವೆ. ಅದು ಸಂಧಿಸುವ ಹಾಗೂ ಕ್ರಮಿಸುವ ದಾರಿಯೂ ಗಮ್ಯವಾಗುತ್ತದೆ. ಕಟ್ಟಕಡೆಯ ವ್ಯಕ್ತಿಗೂ ಅವು ತಲುಪಬೇಕು. ಪ್ರಜಾಪ್ರಭುತ್ವದ ತತ್ವಗಳು ಸರ್ವಾಂಗೀಣ ಅಭಿವೃದ್ಧಿಗೆ ಕೊಟ್ಟ ಒತ್ತಾಸೆಗಳೇನು? ಅದರ ಸವಾಲುಗಳೇನು? ಎಂಬುದು ಚರ್ಚಿತ ವಿಷಯವಾಗುತ್ತದೆ. ಅಭಿವೃದ್ಧಿಯ ಪರಿಕಲ್ಪನೆಯಲ್ಲಿ ಸಾಮಾಜಿಕತೆ, ಶೈಕ್ಷಣಿಕತೆ, ಆರ್ಥಿಕತೆ ಹಾಗೂ ರಾಜಕೀಯ ಮುಂತಾದ ವಲಯಗಳಲ್ಲಿ ಅದು ಪ್ರವೇಶ ಪಡೆದು ಜನರ ಜೀವಾಳದಲ್ಲಿ ಅಸ್ಥಿತ್ವ ಪಡೆದ ರೀತಿಯೂ ಈ ಅಧ್ಯಯನದ ಪ್ರಧಾನ ಆಶಯವಾಗಿದೆ. 
APA, Harvard, Vancouver, ISO, and other styles
3

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ್ಥಾನವಿಲ್ಲದೆ ತಲಾಂತರದಿಂದ ಶಿಕ್ಷಣ, ಸಮಾಜ, ಧರ್ಮ ರಾಜಕೀಯ ಆರ್ಥಿಕ ಹೀಗೆ ಹಲವಾರು ವಲಯಗಳಿಂದ ವಂಚಿತಳಾಗಿ ಕೇವಲ ನಾಲ್ಕು ಗೋಡೆಯ ನಡುವೆ ಅವನು ಕಟ್ಟಿದ ಗೋಡೆಯಲ್ಲಿಯೇ ಅವನ ಕುಟುಂಬ ಮಕ್ಕಳ ಪಾಲನೆ ಪೋಷಣೆಯಲ್ಲಿ ತನ್ನ ಜೀವನ ಮುಡುಪಾಗಿಟ್ಟಿದ್ದವಳು ಸಂಚಿ ಹೊನ್ನಮ್ಮ, ಮತ್ತು 12ನೇ ಶನಮಾನದಲ್ಲಿ ಅಕ್ಕಮಹಾದೇವಿ ಈ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿ ಅವಳನ್ನು ಆ ಬಂಧನದಿಂದ ಮುಕ್ತಗೊಳಿಸಲು ಹೋರಾಡಿ ಅವಳಿಗೆ ಅಕ್ಷರ ಪ್ರಪಂಚದೆಡೆ ಕೊಂಡುಯ್ಯವುದರ ಮೂಲಕ ಸಮಾಜ-ದಲ್ಲಿ ತನ್ನ ಅಸ್ಥತ್ವನ್ನು ಉಳಿಸಿಕೊಳ್ಳವುದರ ಬಗ್ಗೆ ಹೋರಾಡಿದಳು. ಅದೇ ರೀತಿ ಸಾವಿತ್ರಿ ಬಾಪುಲೆಯವರು ಅಕ್ಷರ ಕ್ರಾಂತಿ ಮತ್ತು ವಿಮೋಚನೆಗಾಗಿ ಒಂದು ಕ್ರಾಂತಿಯನ್ನೇ ಹುಟ್ಟಿ ಹಾಕಿದರು. ನಂತರದಲ್ಲಿ ಸಮಾಜದಲ್ಲಿ ತಾನು ವಂಚಿತವಾಗಿದ್ದ ಎಲ್ಲ ರಂಗದಲ್ಲಿಯೂ ಸಾಕ್ಷಿಯಾಗಿ ನಿಂತಳು ಇಂದು ಸಮಾಜದಲ್ಲಿ ಪುರುಷ ಸಮಾಜವನ್ನು ದಿಕ್ಕರಿಸಿ ಸ್ವತಂತ್ರ್ಯವಾಗಿ ಬಾಳುತ್ತಿದ್ದಾಳೆ ಎಂದರೆ ಅದಕ್ಕೆ ಮುಖ್ಯ ಸಾಕ್ಷಿ ಡಾ. ಬಿ. ಆರ್. ಅಂಬೇಡ್ಕರ್‌. ತಾವು ಕಾನೂನು ಮಂತ್ರಿಯಾಗಿದ್ದಾಗ ಹಾಗೂ ಭಾರತದಲ್ಲಿ ಇಡೀ ಸಮಾಜ ನೆಮ್ಮದಿಯಿಂದ ಬದುಕಲು ಸಹಾಯವಾಗುವಂತೆ ಸಂವಿಧಾನವನ್ನು ಕಟ್ಟಿ ಅದರಲ್ಲಿ ಮಹಿಳೆಯ ಅಭಿವೃದ್ದಿಗಾಗಿಯೇ ಕಾನೂನಿನಾತ್ಮಕವಾಗಿ ಕೆಲವು ಹಕ್ಕುಗಳನ್ನು ತಂದು ಅವಳನ್ನು ಮಾನಸಿಕವಾಗಿ ಭೌದ್ಧಿಕವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಗಟ್ಟಿಯಾಗಿ ನಿಂತು ಪುರುಷನಿಗೆ ಸರಿಸಮನಾಗಿ ದುಡಿತ್ತಿರುವ ಇಂದಿನ ಮಹಿಳೆ ಮುಖ್ಯ ಚೇತನ ಮತ್ತು ಬೆಂಬಲಾಗಿರುವ ಡಾ. ಅಂಬೇಡ್ಕರ್‌ವರ ಕೊಡುಗೆ, ತತ್ವ, ಸಾಧನೆಗಳ ಒಂದು ಚಿಂತನೆ ಈ ಲೇಖನದ ಉದೇಶವಾಗಿದೆ. 
APA, Harvard, Vancouver, ISO, and other styles
4

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂತಕರು, ಹೋರಾಟಗಾರರು ಕಾರಣೀಭೂತರಾದರು. ಇವರಲ್ಲಿ ಪ್ರಮುಖರಾದಂತಹ ಮಹಾತ್ಮ ಜ್ಯೋತಿರಾವ್ ಫುಲೆ, ಶಾಹುಮಹಾರಾಜ್, ನಾರಾಯಣಗುರು, ಪೆರಿಯಾರ್ ರಾಮಸ್ವಾಮಿ ನಾಯ್ಕರ್, ದೇವರಾಯ ಇಂಗಳೆ, ಸ್ವಾಮಿ ಧರ್ಮತೀರ್ಥ, ರಾಮಮನೋಹರ ಲೋಹಿಯಾ, ಬಿ. ಶ್ಯಾಮಸುಂದರ್ ಅವರ ಆಲೋಚನೆಗಳು ಅಂಬೇಡ್ಕರ್‌ ಚಿಂತನೆಗಳಿಗೆ ಪೂರಕವಾದವುಗಳಾಗಿವೆ. ಡಾ. ಬಿ. ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯನ್ನು ನಾವು ಪರ ಮತ್ತು ವಿರುದ್ಧವಾಗಿರುವಂತಹ ಸೈದ್ಧಾಂತಿಕ ನಿಲುವುಗಳ ಆಧಾರದ ಮೇಲೆ ವಿಶ್ಲೇಷಣೆ ಮಾಡಬೇಕಾಗಿದೆ. ಪ್ರಾಚೀನ ಕಾಲದಲ್ಲಿ ನಮ್ಮ ಭಾರತವು ಆಧ್ಯಾತ್ಮಿಕ ರಾಷ್ಟ್ರೀಯತೆಯನ್ನು ಹೊಂದಿತ್ತು ಎಂಬುದು ಕೆಲವು ಭಾರತೀಯ ಲೇಖಕರ ಅಭಿಪ್ರಾಯವಾಗಿದೆ. 
APA, Harvard, Vancouver, ISO, and other styles
5

ನಾಗೇಶ್, ಎನ್. "೨೧ನೆಯ ಶತಮಾನದ ಕನ್ನಡ ನಾಟಕ ಮತ್ತು ರಂಗಭೂಮಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 114 to 120. https://doi.org/10.5281/zenodo.15504329.

Full text
Abstract:
ರಂಗಭೂಮಿಯೊಂದು ಜಾಗತೀಕ ಕಲಾಭಿವ್ಯಕ್ತಿ ಮಾಧ್ಯಮವಾಗಿದೆ, ನಾಟಕವು ಜಗತ್ತಿನ ಸಾಂಸ್ಕೃತಿಕ ಸೃಜನಶೀಲತೆಯ ಅಸ್ಮಿತೆಯ ಭಾಗವಾಗಿ ಲೋಕದರ್ಶನವನ್ನು ಒಡಮೂಡಿಸುವಲ್ಲಿ ಪ್ರಮುಖ ಸಾಹಿತ್ಯ ಪ್ರಕಾರವಾಗಿದೆ. ಶ್ರೇಷ್ಠ ದಾರ್ಶನಿಕರಾದ ಬುದ್ಧ, ಬಸವಣ್ಣ, ಡಾ. ಬಿ. ಆರ್. ಅಂಬೇಡ್ಕರ್‌, ಜ್ಯೋತಿ ಬಾ ಪುಲೆ, ಪೆರಿಯಾರ್, ನಾರಾಯಣಗುರುಗಳಂತಹ ಆದರ್ಶಪ್ರಾಯರಾದವರ ಜೀವನ ಆಧಾರಿತ ನಾಟಕಗಳನ್ನು ರಂಗರೂಪಕ್ಕೆ ತಂದು ಸಮುದಾಯಗಳತ್ತ ತೆಗೆದುಕೊಂಡು ಹೋಗುವ ಅನಿವಾರ್ಯತೆ ಈ ನಾಡಿಗಿದೆ. ಅಂಬೇಡ್ಕರ್‌ ಅವರು ʼತಳಸಮುದಾಯಗಳಿಗೆ ಮಾತ್ರವಲ್ಲದೆ ಎಲ್ಲ ಸಮುದಾಯಗಳಿಗೂ ಅಕ್ಷರದ ಮೂಲಕ ವಿಮೋಚನೆ ಸಾಧ್ಯ’ ಎಂಬುದನ್ನು ತಿಳಿಸಿಕೊಟ್ಟರು. ಇವರ ಬದುಕು, ಬರಹ ಮತ್ತು ಭಾಷಣಗಳಲ್ಲಿನ ಚಿಂತನಾಧಾರೆಗಳನ್ನು ಕನ್ನಡ ನಾಟಕ ಮತ್ತು ರಂಗಭೂಮಿಗೆ ಅಳವಡಿಕೊಳ್ಳುವುದರ ತುರ್ತು ಇದೆ. ಈ ನಿಟ್ಟಿನಲ್ಲಿ ಸಾಕಷ್ಟು ರಂಗಕರ್ಮಿಗಳು ಮತ್ತು ನಾಟಕಕಾರರು ದಾಪುಗಾಲು ಇಟ್ಟಿರುವುದು ಭವಿಷ್ಯದ ಭರವಸೆಯ ಧ್ಯೋತಕವಾಗಿದೆ. ಹೊಸ ತಲೆಮಾರಿನ ರಂಗ ನಿರ್ದೇಶಕರಾದ ಕೆ. ಪಿ. ಲಕ್ಷ್ಮಣ್ ಅವರು ತಮ್ಮ ರಂಗರೂಪಗಳಾದ ʼದಕ್ಲಕಥಾ ದೇವಿ ಕಾವ್ಯ’, ʼಪಂಚಮ ಪದ’ ಮತ್ತು ʼಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ನಾಟಕಗಳಲ್ಲಿ ಡಾ ಬಿ. ಆರ್, ಅಂಬೇಡ್ಕರ್‌ ಅವರ ತತ್ವಸಿದ್ಧಾಂತಗಳನ್ನು ಅಳವಡಿಸಿಕೊಂಡಿರುವುದು ವಿಶೇಷವಾಗಿದೆ. ʼಪಂಚಮ ಪದ’ ರಂಗರೂಪದಲ್ಲಿ ತಳಸಮುದಾಯಗಳ ಜೀವನಚರಿತ್ರೆಯನ್ನು ದೃಶ್ಯಕಾವ್ಯವಾಗಿಸಿರುವುದು ದಲಿತ ಚಳುವಳಿಗಳು ರೂಪುಗೊಂಡ ಇತಿಹಾಸವನ್ನು ನೆನಪಿಸುತ್ತದೆ. ಈ ರಂಗರೂಪವು ವ್ಯಕ್ತಿ ಘನತೆಯ ಗುರುತುಗಳನ್ನು ಕಂಡುಕೊಳ್ಳುವ ಮಾರ್ಗವಾಗಿದೆ. ಈಗೆ ಹಲವಾರು ನಾಟಕಕಾರರು ಹಾಗೂ ನಾಟಕಕಾರ್ತಿಯರು ತಮ್ಮ ನಾಟಕಗಳಲ್ಲಿ ಸಂವಿಧಾನಾತ್ಮಕ ಚಿಂತನೆಗಳ ಎಳೆಗಳನ್ನು ತಂದಿರುವುದು ಗುರುತಿಸಬಹುದು. 
APA, Harvard, Vancouver, ISO, and other styles
6

ಡಾ., ಸ್ವಾಮಿ. "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಪರಿಚಯ". International Journal of Advance Research in Multidisciplinary 2, № 3 (2024): 258–61. https://doi.org/10.5281/zenodo.13292327.

Full text
Abstract:
ಭಾರತದ ಪ್ರತಿಯೊಂದು ರಾಜ್ಯಗಳು ಸಹ ವಿವಿಧ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸಿವೆ. ಅಂಥ ನಿಗಮಗಳು ರಾಜ್ಯ ಸರ್ಕಾರಗಳ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಅಳವಡಿಸಿಕೊಂಡು ಅವುಗಳ ಅನುಷ್ಠಾನಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಬರುತ್ತಿವೆ. ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಜನರ ಸರ್ವತೋಮುಖ ಅಭಿವೃದ್ಧಿಗೆÀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ೨೦-೦೩-೧೯೭೫ರಂದು ಸ್ಥಾಪಿಸಲಾಗಿದೆ. ದಿನಾಂಕ ೧೬-೦೮-೨೦೦೫ ರಂದು ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಎಂದು ಮರುನಾಮಕರಣ ಮಾಡಲ್ಪಟ್ಟಿದೆ. ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಅದರ ನಿರ್ದೇಶನಕ್ಕೆ ಅನುಗುಣವಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತದೆ. ಅಂತೆಯೇ ಈ ನಿಗಮದ ಮುಖಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ.
APA, Harvard, Vancouver, ISO, and other styles
7

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ‘ಕಲಿಕೆ’ ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.‘ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ’ ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. ‘ದೇಶ ಸುತ್ತು ಇಲ್ಲವೇ ಕೋಶ ಓದು’ ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯಯನದ ಮೂಲಕ ಹಾಗೂ ಶಾಲಾ ಶಿಕ್ಷಕರು, ಗುರು-ಹಿರಿಯರಿಂದ, ಮಠಮಾನ್ಯಗಳಿಂದ, ಅನುಭಾವಿಗಳ ಸಂಪರ್ಕಗಳ ಮೂಲಕ ಕಲಿಕೆ ನಡೆಯುತ್ತದೆ. ಅಷ್ಟೇ ಏಕೇ ಪಶು-ಪ್ರಾಣಿ, ಜೀವ ಸಂಕುಲಗಳು, ನಿಸರ್ಗದ ಗಿಡ-ಮರ, ಬೆಟ್ಟ, ನದಿ, ಸರೋವರ, ಗಾಳಿ ಹೀಗೆ ಪ್ರಕೃತಿಯನ್ನು ನೋಡಿಯೂ ಮನುಷ್ಯ ಸಾಕಷ್ಟು ವಿಚಾರಗಳನ್ನು ಕಲಿತುಕೊಳ್ಳುತ್ತಾನೆ. ಹೀಗೆ ಸಾವಿರಾರು ದಾರಿಯಿಂದ ಜ್ಞಾನ ಹರಿದುಬರುತ್ತಲೇ ಇರುತ್ತದೆ. ಇವೆಲ್ಲವೂ ಮನುಷ್ಯನ ಜ್ಞಾನಶಾಖೆಗಳೆಂದು ಕರೆಯಲಾಗುತ್ತದೆ.ಕೋಶ ಓದುವಿಕೆಯಿಂದ ಒಂದು ರೀತಿಯ ಜ್ಞಾನ ಲಭಿಸುತ್ತದೆ ಎಂಬುದು ನಿಜವೇ. ಆದರೆ ಪ್ರಕೃತಿಯಿಂದ, ಲೋಕಾನುಭವದಿಂದ ದೊರೆಯುವ ಜ್ಞಾನ ಮಹತ್ವದ್ದಾಗುತ್ತದೆ. ಕಾರಣ ಲೋಕಾನುಭವು ಮನುಷ್ಯನಲ್ಲಿ ಮಾನವೀಯತೆ, ಮಾನವೀಯ ಮೌಲ್ಯಗಳ ಮೂಲಕ ಹೃದಯ ಶ್ರೀಮಂತಿಕೆ, ಭಾವಶ್ರೀಮಂತಿಕೆಗೊಳಿಸಿ ಆತನಲ್ಲಿ ಆತ್ಮವಿಶ್ವಾಸ, ಧೈರ್ಯ ತುಂಬುತ್ತದೆ. ಭಕ್ತಿ, ಶ್ರದ್ದೇ, ಸತತ ಪ್ರಯತ್ನ, ಪ್ರಮಾಣಿಕತೆ, ನ್ಯಾಯ-ನೀತಿ, ಹಸಿವು, ನೋವು-ನಲಿವು ಮುಂತಾದವುಗಳ ಅನುಭವ ನೀಡುತ್ತದೆ. ಅಲ್ಪವಿರಾಮದಿಂದ ಪೂರ್ಣ ವಿರಾಮದೆಡೆಗೆ, ಸಂಶಯದಿಂದ ನಿಸ್ಸಂಶಯದೆಡೆಗೆ, ಪೂರ್ಣತೆಯಿಂದ ಪರಿಪೂರ್ಣತೆಯೆಡೆಗೆ, ದೃಢತೆಯಿಂದ ಸದೃಢತೆಯೆಡೆಗೆ ಕೊಂಡ್ಯೊಯುತ್ತದೆ.ಹಸಿದವನಿಗೆ ಮಾತ್ರ ಗೊತ್ತು ಅನ್ನದ ಬೆಲೆ. ಈ ಜಗತ್ತಿನಲ್ಲಿ ಪ್ರತಿಯೊಂದು ವಸ್ತುವಿನ ಬೆಲೆ, ಮೌಲ್ಯ ಗೊತ್ತಾಗುವುದು ಕಷ್ಟಪಟ್ಟು ದುಡಿದು ಸಂಪಾದಿಸಿದವನಿಗೆ ಮಾತ್ರ. ಅಂದಾಗಲೇ ಆ ವಸ್ತುವಿನ ಸದ್ಬಳಕೆಯು ಸಾಧ್ಯವಾಗುತ್ತದೆ. ಆದ್ದರಿಂದ ಕೆಟ್ಟ ಪರಿಸ್ಥಿತಿಯಲ್ಲಿ ಬದುಕಿ, ನೂರಾರು ಅವಮಾನ, ಸಮಸ್ಯೆಗಳನ್ನು ಎದುರಿಸಿದ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರು ಅಪ್ಪಟ ದೇಶಾಭಿಮಾನಿಗಳು, ಸ್ವಾಭಿಮಾನಿಗಳು, ಹೋರಾಟಗಾರರು, ತತ್ವನಿಷ್ಠರು, ಜೀವಪರ ಚಿಂತಕರು, ಶಿಕ್ಷಣ ತಜ್ಞರು, ಅರ್ಥಶಾಸ್ತ್ರಜ್ಞರು, ಸಮಾಜಸುಧಾಕರು, ಮಾನವೀಯ ಮೌಲ್ಯಗಳ ಸಾಕಾರ ಮೂರ್ತಿಗಳು ಆಗಿದ್ದಾರೆ.2011ರಲ್ಲಿ ಇಂಗ್ಲೆಂಡ್‌ನ ಕೆಂಬ್ರಿಡ್ಜ ವಿಶ್ವವಿದ್ಯಾಲಯವು ಜಗತ್ತಿನ ಅತ್ಯಂತ ಶ್ರೇಷ್ಠ ವಿದ್ವಾಂಸರ ಸರ್ವೇ ನಡೆಸಿ, ಅದರಲ್ಲಿ ನೂರು ಜನ ಶ್ರೇಷ್ಠ ವಿದ್ವಾಂಸರ ಪಟ್ಟಿ ತಯ್ಯಾರಿಸಿತ್ತು. ಆ ನೂರು ಜನ ಘನ ವಿದ್ವಾಂಸರ ಪಟ್ಟಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ ಅವರೇ ಮೊಟ್ಟ ಮೊದಲಿಗರಾಗಿದ್ದಾರೆ. ಜಗತ್ತಿನ ಹತ್ತಾರು ಸಂವಿಧಾನಗಳನ್ನು ಅಧ್ಯಯನ, ಅನುಶೀಲನಗೈದು, ಈ ನಮ್ಮ ಭಾರತ ದೇಶಕ್ಕೆ ಅಗತ್ಯವೆನಿಸುವ ಸರ್ವ ಜನಾಂಗದ ಶಾಂತಿಯ ತೋಟವಾಗಿ ನಿರ್ಮಿಸಲು, ಸಕಲ ಜೀವರಾಶಿಗಳ ಏಳಿಗೆಯನ್ನು ಗಮನದಲ್ಲಿರಿಸಿಕೊಂಡು ಜಗತ್ ಪ್ರಸಿದ್ದವಾದ ಸಂವಿಧಾನ ರಚಿಸಿ, ಸಂವಿಧಾನ ಶಿಲ್ಪಿಯಾಗಿದ್ದಾರೆ. ಡಾ. ಬಿ. ಆರ್. ಅಂಬೇಡ್ಕರ ಅವರು ಆರಂಭಿಕ ಜೀವನ, ಶೈಕ್ಷಣಿಕ ಸಾಧನೆ, ಧಾರ್ಮಿಕ, ಸಾಮಾಜಿಕ, ರಾಜಕೀಯ ಹೋರಾಟ ಮಾಡಿ ಗಗನದೆತ್ತರಕ್ಕೆ ಬೆಳದುನಿಂತ ಅವರ ಪರಿಯು ಜಗತ್ತನ್ನೇ ಬೆರಗುಗೊಳಿಸುತ್ತದೆ. ಅವರ ಜೀವನದ ಪ್ರತಿಯೊಂದು ಹೆಜ್ಜೆಗಳು, ಪ್ರತಿ ಉಸಿರು ಜಗತ್ತಿಗೆ ಮಾದರಿಯಾಗಿವೆ. ಅವರು ನಡೆದು ಬಂದ ದಾರಿಯನ್ನು ಅವಲೋಕಿಸುತ್ತ, ಅನುಸರಿಸುತ್ತ, ಮುನ್ನಡೆದು ಬದುಕು ಹಸನುಗೊಳಿಸಿಕೊಳ್ಳಬೇಕಾಗಿದೆ. ಅಂತಹ ಮೇರು ಸಾಧಕರ ಸಾಧನೆ ಕುರಿತು ಅರಿತುಕೊಳ್ಳುವ ಸಣ್ಣದಾದ ಪ್ರಯತ್ನ ಇಲ್ಲಿ ಮಾಡಲಾಗಿದೆ.
APA, Harvard, Vancouver, ISO, and other styles
8

ಅರುಣ್‌ಕುಮಾರ್, ಬಿ., та ರಾಮಕೃಷ್ಣಯ್ಯ ಕೆ. "ಆಧುನಿಕ ಕನ್ನಡ ರಂಗಭೂಮಿಯಲ್ಲಿ ರಂಗನಿರ್ದೇಶಕರಾಗಿ ಬಿ. ವಿ. ಕಾರಂತರ ಕೊಡುಗೆ". AKSHARASURYA JOURNAL 06, № 03 (2025): 01 to 10. https://doi.org/10.5281/zenodo.15343656.

Full text
Abstract:
ಆಧುನಿಕ ಕನ್ನಡ ರಂಗಭೂಮಿಯ ನಿರ್ದೇಶಕರಾಗಿರುವ ಬಿ. ವಿ. ಕಾರಂತ ಅವರು ಬಾಲ್ಯದಲ್ಲಿ ಬೆಳೆದದ್ದು ಕನ್ನಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ. ಅವರ ಕಣ್ಣುಗಳು, ಮತ್ತು ಕಿವಿಗಳು ಯಕ್ಷಗಾನ, ಜಾತ್ರೆ, ಕೋಲ, ರಥೋತ್ಸವ, ಪದ-ದಾನಗಳು ಮತ್ತು ವಿವಿಧ ಸಂಗೀತ ವಾದ್ಯಗಳ ಧ್ವನಿ ವಿನ್ಯಾಸಗಳಿಗೆ ತೆರೆದುಕೊಂಡವು. ಇವರು ಪ್ರಸಿದ್ಧ ಗುಬ್ಬಿ ವೀರಣ್ಣ ಕಂಪನಿಯವರು ಪುತ್ತೂರಿನಲ್ಲಿ ಬೀಡುಬಿಟ್ಟಾಗ ಅಲ್ಲಿ ‘ಕೃಷ್ಣಲೀಲಾ’ ನಾಟಕವನ್ನು ನೋಡಿ ನಾಟಕದ ಕಡೆಗೆ ಆಸಕ್ತರಾದರು. ನಂತರ ಅವರು ಗುಬ್ಬಿ ಕಂಪನಿಗೆ ಸೇರಿಕೊಂಡರು. ಅವರು ಡಾ. ರಾಜಕುಮಾರರಂತಹ ಹಿರಿಯರ ನಟರ ಜೊತೆಗೆ ಅಭಿನಯವನ್ನು ಮಾಡಿದರು. ಗುಬ್ಬಿ ವೀರಣ್ಣನವರು ಕಾರಂತರನ್ನು ಸ್ನಾತಕೋತ್ತರ ಪದವಿ ಅಭ್ಯಾಸಕ್ಕೆ ಬನಾರಸ್ ವಿಶ್ವವಿದ್ಯಾಲಯಕ್ಕೆ ಕಳುಹಿಸಿದರು. ಅಲ್ಲಿ ಅವರು ಹಿಂದೂಸ್ತಾನಿ ಸಂಗೀತವನ್ನು ಕಲಿತರು. ಅಲ್ಲಿಯ ರಂಗಭೂಮಿ ಮತ್ತು ಹಿಂದಿ ನಾಟಕಗಳ ಬಗ್ಗೆ ಪಿಹೆಚ್. ಡಿ ಪದವಿಯನ್ನು ಪಡೆದರು. 1962ರಲ್ಲಿ ನವದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಸಂಸ್ಥೆಯಿಂದ ಪದವಿ ಪಡೆದರು.  ದೆಹಲಿಯಲ್ಲಿ ಕನ್ನಡದಲ್ಲಿ ಪ್ರಸಿದ್ಧ ನಾಟಕಗಳನ್ನು ಬರೆದು ನಿರ್ದೇಶಿಸಿದರು. ದೆಹಲಿಯ ಗೆಳೆಯರೊಂದಿಗೆ ಸೇರಿಕೊಂಡು ಕನ್ನಡ ಭಾರತಿ ಆರಂಭಿಸಿ ಅಲ್ಲಿ ಗಹನ ನಾಟಕಗಳನ್ನು ನಿರ್ಮಿಸಿದರು. 1970ರಲ್ಲಿ ಬೆಂಗಳೂರಿಗೆ ಬಂದು ರಂಗಭೂಮಿಗೆ ನವೀನ ತಂತ್ರಗಳು, ವೈಭವ, ಸಂಗೀತ, ಮತ್ತು ನೃತ್ಯವನ್ನು ತರುವ ಮೂಲಕ ಕನ್ನಡ ರಂಗಭೂಮಿಯಲ್ಲಿ ಕಂಪನ್ನು ಸೃಷ್ಟಿಸಿದರು. ಭಾರತದಲ್ಲಿಯೇ ರಂಗಭೂಮಿ ಸಂಗೀತದಲ್ಲಿ ವಿಭಿನ್ನ ರೂಪಗಳನ್ನು ಬೆರೆಸುವ ಮೂಲಕ ಕನ್ನಡ ರಂಗಭೂಮಿಯನ್ನು ಬೆಳೆಸಿದರು. ನಂತರ ಇಬ್ರಾಹಿಂ ಅಲ್ಯಾಜಿ ನೇತೃತ್ವದಲ್ಲಿ 1969 ಮತ್ತು 1972 ರ ನಡುವೆ ಅವರು ನವದೆಹಲಿಯ ಸರ್ದಾರ್ ಪಟೇಲ್ ವಿದ್ಯಾಲಯದಲ್ಲಿ ನಾಟಕ ಶಿಕ್ಷಕರಾಗಿ ಕೆಲಸ ಮಾಡಿದರು. ನಂತರ ದಂಪತಿಗಳು ಬೆಂಗಳೂರಿಗೆ ಮರಳಿದರು.  ಕಾರಂತರು ನೂರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಅದರಲ್ಲಿ ಅರ್ಧದಷ್ಟು ಕನ್ನಡ ಭಾಷೆಯಲ್ಲಿವೆ. ಅವರು ಹಯವದನ, ಕತ್ತಲೆ ಬೆಳಕು, ಹುಚ್ಚು ಕುದುರೆ, ಏವಂ ಇಂದ್ರಜಿತ್, ಈಡಿಪಸ್, ಸಂಕ್ರಾಂತಿ, ಜೋಕುಮಾರ ಸ್ವಾಮಿ, ಸತ್ತವರ ನೇರಳು, ಹುಟ್ಟುವ ಬಡಿದರೆ, ಕಿಂದರಿ ಜೋಗಿ, ಚಂದ್ರಹಾಸ ಮತ್ತು ಗೋಕುಲ ನಿರ್ಗಮನ ನಾಟಕಗಳಲ್ಲದೆ, ಪಂಜರ ಶಾಲೆ, ನೀಲಿ ಕುದುರೆ, ಹೆಡ್ಡಾಯಣ, ಅಳಿಲು ರಾಮಾಯಣ ಮುಂತಾದ ಹಲವಾರು ಮಕ್ಕಳ ನಾಟಕಗಳನ್ನೂ ಸಹ ನಿರ್ದೇಶಿಸಿದ್ದಾರೆ. ಇವರ ನಿರ್ದೇಶನದ ನಾಟಕಗಳೆಂದರೆ ಪ್ರೇಕ್ಷಕರಿಗೆ ಎಲ್ಲಿಲ್ಲದ ಆಸಕ್ತಿ. ಹಾಗಾಗಿ ಅವರು ಅಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ರಂಗಾಯಣ ಸಂಸ್ಥೆಯ ಹುಟ್ಟಿಗೆ ಕಾರಣರಾದರು. 1981ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ರಂಗಭೂಮಿಗೆ ಸಲ್ಲಿಸಿದ ಅಮೋಘ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. ಕರ್ನಾಟಕ ಸರ್ಕಾರವು ಕನ್ನಡ ರಂಗಭೂಮಿಗೆ ಅವರ ಕೊಡುಗೆಗಾಗಿ ಗುಬ್ಬಿ ವೀರಣ್ಣ ಪ್ರಶಸ್ತಿಯನ್ನು ನೀಡಿದೆ. ಹೀಗೆ ಅವರು ಭಾರತದ ಹಲವು ಭಾಷೆಗಳಲ್ಲಿನ ರಂಗಭೂಮಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುವುದರ ಜೊತೆಗೆ ತಮ್ಮ ಮಾತೃಭಾಷೆಯಾಗಿರುವ ಕನ್ನಡ ರಂಗಭೂಮಿಗೂ ತಮ್ಮ ಅಮೂಲ್ಯ ಕೊಡುಗೆಯನ್ನು ಕೊಟ್ಟಿರುವುದು ವೈಶಿಷ್ಟ್ಯಪೂರ್ಣವಾಗಿದೆ. 
APA, Harvard, Vancouver, ISO, and other styles
9

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ್ವಗಳನ್ನು ಪ್ರತಿಪಾದಿಸುವುದಷ್ಟೇ ಅಲ್ಲ ಅನುಷ್ಟಾನಗೊಳಿಸಿದ್ದಾರೆ. ಮೂಖನಾಯಕ, ಸಮತಾ, ಬಹಿಷ್ಕೃತ ಭಾರತ ಎಂಬ ಪತ್ರಿಕೆಗಳ ಮೂಲಕ ದಮನಿತರನ್ನು ಜಾಗೃತರಾಗಿಸಿದರು. 1924ರಲ್ಲಿ ʼಬಹಿಷ್ಕೃತ ಹಿತಕಾರಿಣಿ ಸಭಾ’ ಸಂಸ್ಥೆಯನ್ನು ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕೆ ಸ್ಥಾಪಿಸಿದರು. ʼಚೌಡಾರ್ ಕೆರೆ’ ನೀರಿನ ಸತ್ಯಾಗ್ರಹ ಮತ್ತು ಕಾಲಾರಾಮ ದೇವಾಲಯ ಪ್ರವೇಶಕ್ಕಾಗಿ ಹೋರಾಟ ನಡೆಸಿ ಯಶಸ್ವಿಯಾದರು. ದುಂಡುಮೇಜಿನ ಸಮ್ಮೇಳನದಲ್ಲಿ ಅಸ್ಪೃಶ್ಯರ ಪ್ರತಿನಿಧಿಯಾಗಿ ಭಾಗವಹಿಸಿ ತಾರ್ಕಿಕ ವಾದ ಮಂಡಿಸಿ ಶಾಸನ ಸಭೆಗಳಲ್ಲಿ ಅಸ್ಪೃಶ್ಯರ ಮೀಸಲಾತಿಗಾಗಿ ಹೋರಾಡಿದರು. ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಸಾಂವಿಧಾನಿಕ ಕಾನೂನಿನ ಚೌಕಟ್ಟಿನಲ್ಲಿ ದಲಿತರಿಗೆ, ಹಿಂದುಳಿದವರಿಗೆ, ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಸೂಕ್ತ ಮೀಸಲಾತಿ ಸೌಲಭ್ಯ, ಸಮಾನತೆಯ ಹಕ್ಕು(ವಿಧಿ-14), ಅಸ್ಪೃಶ್ಯತೆ ನಿಷೇಧ(ವಿಧಿ-17), ಗೌರವದಿಂದ ಬದುಕುವ ಹಕ್ಕು(ವಿಧಿ-21) ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್‌‌ರವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಸತ್ತಿನಲ್ಲಿ, ರಾಜ್ಯ ಶಾಸನಸಭೆಯಲ್ಲಿ ತಕ್ಕ ಪಾತಿನಿಧ್ಯವನ್ನು ಗಳಿಸಿಕೊಟ್ಟರು. ಕಾನೂನು ಮಂತ್ರಿಯಾಗಿ ಹಿಂದೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಕಲ್ಪಿಸುವುದಕ್ಕಾಗಿ ʼಹಿಂದೂ ಕೋಡ್ ಬಿಲ್’ನ್ನು ತಯಾರಿಸಿ ಸಂಸತ್ತಿನಲ್ಲಿ ಮಂಡಿಸಿ ಶತಾಯಗತಾಯ ಪ್ರಯತ್ನಿಸಿದಾಗ್ಯೂ ಒಪ್ಪಿತವಾಗದ ಕಾರಣ ತಮ್ಮ ಮಂತ್ರಿ ಸ್ಥಾನಕ್ಕೆ 1951 ಸೆಪ್ಟಂಬರ್ 27 ರಂದು ರಾಜಿನಾಮೆ ನೀಡಿದರು. ಸಾಮಾಜಿಕ ನ್ಯಾಯವನ್ನು ಭಾರತ ಸಂವಿಧಾನದ ಆಧಾರ ಮತ್ತು ಸ್ಪೂರ್ತಿಯಾಗಿಸಿದ್ದಾರೆ. ಅವರು ನಡೆಸಿದ ಹೋರಾಟಗಳಲ್ಲಿ, ಮಾಡಿದ ಭಾಷಣಗಳಲ್ಲಿ, ರಚಿಸಿದ ಕೃತಿಗಳಲ್ಲಿ ಅವರ ಸಾಮಾಜಿಕ ನ್ಯಾಯದ ಚಿಂತನೆಗಳನ್ನು ಕಾಣಬಹುದು. ಈ ಲೇಖನದಲ್ಲಿ ಅವರು ಸಾಮಾಜಿಕ ನ್ಯಾಯಕ್ಕಾಗಿ ನಡೆಸಿದ ಹೋರಾಟ ಮತ್ತು ಚಿಂತನೆಗಳನ್ನು ವಿಶ್ಲೇಷಿಸುವ ಪ್ರಯತ್ನ ಮಾಡಲಾಗಿದೆ. 
APA, Harvard, Vancouver, ISO, and other styles
10

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು ಸಮಾಜದ ಕೋಪಗೊಳಗಾಗುತ್ತಿದ್ದಳು. ಮನು ಧರ್ಮಶಾಸ್ತ್ರದಲ್ಲಿ ಮಹಿಳೆಯರು ಸ್ಥಾನಮಾನವನ್ನು ಅತಿ ಕೆಟ್ಟದಾಗಿ ಚಿತ್ರಿಸಿದ್ದಾರೆ. ಶತಮಾನಗಳಿಂದ ಹೆಣ್ಣನ್ನು ಒಂದು ಸಾಕು ಪ್ರಾಣಿಯಂತೆ ವೈದಿಕ ಧರ್ಮ ನೋಡಿದೆ. ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆಯರನ್ನು ಅತ್ಯಂತ ಹೀನಾಯವಾಗಿ ಪುರುಷ ಸಮಾಜ ಕಾಣುತ್ತಾ ಬಂದಿದೆ. ಮಹಿಳೆಯನ್ನು ಪುರುಷನ ಸಮಾನ ಸ್ಥಾನದಲ್ಲಿ ಸ್ಥಾಪಿಸುವ ಕೆಲಸವನ್ನು ಅನೇಕ ಸಮಾಜ ಸುಧಾರಕರು ಮಾಡಿದ್ದಾರೆ. ಅವರಲ್ಲಿ ಸ್ತ್ರೀ ಸಮಾನತೆಗಾಗಿ ಕಾನೂನು ರಚಿಸಿ ಸಂವಿಧಾನಾತ್ಮಕ ನೆಲೆಗಟ್ಟಿನಲ್ಲಿ ಸ್ವತಂತ್ರ ಭಾರತದ ಸ್ತ್ರೀ ಸ್ವಾತಂತ್ರ್ಯವನ್ನು ಎತ್ತಿ ಹಿಡಿದು, ಮನುಷ್ಯ ಸಮಾನತೆ ಮೆರೆದ ಕೀರ್ತಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಮನುಷ್ಯನ ಹಕ್ಕುಗಳನ್ನು ಲಿಂಗಭೇದ ರಹಿತ ನೆಲೆಗಳಲ್ಲಿ ಶೋಧಿಸಿ ಆ ವರೆಗಿನ ಸ್ತ್ರೀಯರ ಬಗೆಗಿದ್ದ ಮನುವಾದಿ ಚಿಂತಕರ ಧೋರಣೆಗಳನ್ನು ಕಾನೂನು ರಚನೆಯ ಮೂಲಕ ವಿರೋಧಿಸಿದವರು ಅಂಬೇಡ್ಕರ್ ಅವರು ಎಂಬುದನ್ನು ತಿಳಿಸುವುದು ಈ ಲೇಖನದ ಉದ್ದೇಶವಾಗಿರುತ್ತದೆ.
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!