Academic literature on the topic 'ಬಿ.ಆರ್'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಬಿ.ಆರ್.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಬಿ.ಆರ್"

1

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
2

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
3

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
4

ಸುಚಿತ್ರಾ, ಟಿ., та ಕೆ.ಎಸ್. ಗಿರಿಜಾ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜಾತಿ ನಿರ್ಮೂಲನೆ: ಒಂದು ವಿಶ್ಲೇಷಣೆ". AKSHARASURYA JOURNAL 06, № 05 (2025): 226 to 232. https://doi.org/10.5281/zenodo.15504688.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಜಾತಿ ನಿರ್ಮೂಲನೆ (Annihilation of Caste) ಕೃತಿ ಭಾರತೀಯ ಜಾತಿ ವ್ಯವಸ್ಥೆಯ ವಿರುದ್ಧ ನೀಡಿದ ಅತ್ಯಂತ ಪ್ರಬಲ ವಿಮರ್ಶೆಗಳಲ್ಲಿ ಒಂದಾಗಿದೆ. 1936ರಲ್ಲಿ ಜಾತ್ ಪಾತ್ ತೋಡಕ್ ಮಂಡಳಿಗೆ ಈ ಭಾಷಣವನ್ನು ನೀಡಲು ಉದ್ದೇಶಿಸಲಾಗಿತ್ತಾದರೂ, ಸಂಘಟಕರು ಅದರ ವಿಷಯವನ್ನು ತೀವ್ರವಾದದ್ದು ಎಂದು ಪರಿಗಣಿಸಿ ಅದನ್ನು ನಿರಾಕರಿಸಿದರು. ನಂತರ ಅಂಬೇಡ್ಕರ್ ಅವರು ಈ ಭಾಷಣವನ್ನು ಸ್ವತಃ ಪುಸ್ತಕ ರೂಪದಲ್ಲಿ ಪ್ರಕಟಿಸಿದರು. ಈ ಪ್ರಬಂಧದಲ್ಲಿ ಅಂಬೇಡ್ಕರ್ ಅವರ ಜಾತಿ ಸಂಬಂಧಿತ ಆಲೋಚನೆಗಳ ವಿಶ್ಲೇಷಣೆ, ಹಾಗೂ ಜಾತಿ ನಿರ್ಮೂಲನೆಗಾಗಿ ಅವರು ನೀಡಿದ ಸಂವಿಧಾನಾತ್ಮಕ ಕೊಡುಗೆಗಳನ್ನು ವಿಮರ್ಶಾತ್ಮಕವಾಗಿ ಚರ್ಚಿಸಲಾಗಿದೆ. ಜೊತೆಗೆ, ಈ ಕೃತಿಯ ಪ್ರಸ್ತುತತೆ ಮತ್ತು ಸಮಕಾಲೀನ ಜಾತಿ ರಾಜಕೀಯದ ಮೇಲೆ ಇದರ ಪರಿಣಾಮವನ್ನೂ ಅವಲೋಕಿಸಲಾಗುತ್ತದೆ.
APA, Harvard, Vancouver, ISO, and other styles
5

ಶ್ರೀಧರ್, ಆರ್. "ಕಾರ್ಮಿಕರ ಹಿತರಕ್ಷಕ ಡಾ. ಬಾಬಾಸಾಹೇಬ್ ಅಂಬೇಡ್ಕರ್‌". AKSHARASURYA JOURNAL 06, № 05 (2025): 220 to 225. https://doi.org/10.5281/zenodo.15504669.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಹಾಗೂ ರಾಜಕೀಯ ಕೊಡುಗೆ ಅಪಾರ. ಬಹುಜನರ ಬವಣೆಯ ಬದುಕಿನೊಳಗೆ ಇಳಿದು ಲವಣದಂತೆ ಕರಗಿರುವ ಬಾಬಾಸಾಹೇಬರು ಅಪ್ಪಟ ಪ್ರಜಾಪ್ರಭುತ್ವವಾದಿ. ರೈತರು, ಕಾರ್ಮಿಕರು, ಹೆಣ್ಣು ಮಕ್ಕಳ ಉನ್ನತಿಗೆ ಹಾಗೂ ಸಕಲ ಜೀವಿಗಳ ಘನತೆಗೆ ಅಗತ್ಯವಾದ ಮಾರ್ಗಗಳನ್ನು ಶೋಧಿಸಿದ ಶ್ರೇಷ್ಠ ವಿಮೋಚಕ. ಭಾರತದಲ್ಲಿ ಕಾರ್ಮಿಕರಿಗೆ ಯಾವುದೇ ಹಕ್ಕುಗಳು ದೊರೆತಿದ್ದರೆ, ಕಾರ್ಮಿಕರು ಅದರ ಫಲಾನುಭವಿಗಳು ಆಗಿದ್ದರೆ ಅದರ ಸಂಪೂರ್ಣ‌ ಯಶಸ್ಸು ಬಾಬಾಸಾಹೇಬರಿಗೆ ಸಲ್ಲಬೇಕು. ಪ್ರಸ್ತುತ ಲೇಖನದಲ್ಲಿ ಜನಪರವಾದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಿದ ಬಾಬಾಸಾಹೇಬರ ಪಾತ್ರವನ್ನು ಅಭಿವ್ಯಕ್ತಿಸುವ ಪ್ರಯತ್ನ ಮಾಡಲಾಗಿದೆ.
APA, Harvard, Vancouver, ISO, and other styles
6

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
7

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
8

ರೇಣುತಾಕ್ಷಿ. "ಶಿಕ್ಷಣವೆಂದರೆ ಜೀವನಕ್ಕೆ ಸಿದ್ಧತೆಯಲ್ಲ, ಶಿಕ್ಷಣವೇ ಜೀವನ". AKSHARASURYA JOURNAL 06, № 05 (2025): 169 to 174. https://doi.org/10.5281/zenodo.15504563.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಅವರು ಹೇಳಿದಂತೆ, ಶಿಕ್ಷಣ ಜೀವನಕ್ಕೆ ಸಿದ್ಧತೆ ಮಾತ್ರವಲ್ಲ, ಅದು ಜೀವನವೇ ಆಗಿದೆ. ಶಿಕ್ಷಣವು ಕೇವಲ ಉದ್ಯೋಗ ಅಥವಾ ಜೀವನೋದ್ಯಮಕ್ಕೆ ಪೂರಕವಾಗಿರುವುದಷ್ಟೇ ಅಲ್ಲ, ಅದು ವ್ಯಕ್ತಿಯ ಬುದ್ಧಿ, ಚಿಂತನೆ, ವ್ಯಕ್ತಿತ್ವ ಮತ್ತು ಸಮಾಜದ ಪ್ರಗತಿಗೆ ಸಹಾಯಕವಾಗಬೇಕು. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಶಿಕ್ಷಣವು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾಭ್ಯಾಸವು ವ್ಯಕ್ತಿಗೆ ಅರ್ಥಪೂರ್ಣ ಬದುಕನ್ನು ಕಟ್ಟಿಕೊಳ್ಳಲು, ಸ್ವತಂತ್ರವಾಗಿ ಚಿಂತಿಸಲು, ಹಾಗೂ ತಾನು ಎದುರಿಸುವ ಸವಾಲುಗಳಿಗೆ ಉತ್ತರಿಸಲು ಶಕ್ತಿಯನ್ನು ನೀಡುತ್ತದೆ. ಸಮೃದ್ಧ ಜೀವನಕ್ಕಾಗಿ ಕೇವಲ ಹಣಕಾಸಿನ ಪ್ರಗತಿಯನ್ನಷ್ಟೇ ಗಮನಿಸುವುದಕ್ಕಿಂತ, ಮಾನವೀಯತೆ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಾಪಾ
APA, Harvard, Vancouver, ISO, and other styles
9

ವಿಜಯಲಕ್ಷ್ಮಿ, ದತ್ತಾತ್ರೇಯ ದೊಡ್ಡಮನಿ. "ವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ". AKSHARASURYA JOURNAL 06, № 05 (2025): 241 to 248. https://doi.org/10.5281/zenodo.15504724.

Full text
Abstract:
ಆತ್ಮಕಥೆ ಕನ್ನಡ ಸಾಹಿತ್ಯದ ಒಂದು ಸಾಹಿತ್ಯ ಪ್ರಕಾರವಾಗಿ ಬೆಳೆದು ಬಂದಿರುವುದನ್ನು ನೋಡುತ್ತೇವೆ. ಮನುಷ್ಯನ ಸುತ್ತಲೂ ನಡೆಯುವ ಮತ್ತು ಅವರ ಅಂತರಾಳದಲ್ಲಿರುವ ಹೂರಣಗಳನ್ನು ಹೊರ ಹಾಕುವ ಒಂದು ಪ್ರಕಾರವಾಗಿ ಕಾಣುತ್ತೇವೆ. ಒಬ್ಬ ಮನುಷ್ಯನ ಇಡೀ ಬದುಕಿನಲ್ಲಿ ನಡೆದಂತಹ ತಪ್ಪು-ಸರಿ, ಸಿಹಿ-ಕಹಿ ಘಟನೆಗಳಿಗೆ ಅಕ್ಷರ ರೂಪವನ್ನು ನೀಡುತ್ತಾನೆ. ತಮ್ಮ ಅಂತರಾಳದ ತಮುಲಗಳನ್ನು ಸ್ವವಿಮರ್ಶೆಗೆ ಒಳಪಡಿಸಿಕೊಳ್ಳಲಾಗುತ್ತದೆ. ಆದರೆ ಬಾಬಾ ಸಾಹೇಬರು ಬರೆದ ಅವರ ಆತ್ಮಕಥೆಯಲ್ಲಿ ಅವರ ಬದುಕಿನ ಕಹಿ ಘಟನೆಗಳು ಹೇಗೆ ಮುಂದೆ ಅವರು ಇಡೀ ಸಮಾಜದ ಏಳಿಗೆಗಾಗಿ ಅವುಗಳನ್ನೆ ಆಧಾರವಾಗಿ ಬಳಸಿಕೊಂಡರು ಎನ್ನುವುದನ್ನು ಅವರ ಬದುಕೆ ನಮಗೆ ತೋರಿಸಿಕೊಡುತ್ತದೆ. ʼವೀಸಾದ ನಿರೀಕ್ಷೆಯಲ್ಲಿನ ನೆನಪುಗಳ ಸುರುಳಿ’ ಇದು ಡಾ. ಬಿ.ಆರ್. ಅಂಬೇಡ್ಕರ್‌ ಅವರು ಬರೆದಿರುವ ಆತ್ಮಕಥ
APA, Harvard, Vancouver, ISO, and other styles
10

ಅಂಜಿನಪ್ಪ, ಎಲ್.ಟಿ. "ಕನ್ನಡದಲ್ಲಿ ಮೀಸಲಾತಿ ಚಳವಳಿಯ ಇತಿಹಾಸ: ಒಂದು ಅವಲೋಕನ". AKSHARASURYA JOURNAL 06, № 06 (2025): 01 to 10. https://doi.org/10.5281/zenodo.15580870.

Full text
Abstract:
ಪ್ರಸ್ತುತ ಈ ಲೇಖನದಲ್ಲಿ ಭಾರತದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆ ಶೂದ್ರರು ಅನುಭವಿಸಿದ ಯಾತನೆಗಳು, ಹನ್ನೆರಡನೇ ಶತಮಾನದಲ್ಲಿ ಆದ ಸಾಮಾಜಿಕ ಕ್ರಾಂತಿಗಳು, ಸ್ವಾತಂತ್ರ ಪೂರ್ವದಲ್ಲಿನ ಮೀಸಲಾತಿ ಕ್ರಮಗಳು ನಂತರದ ಬೆಳವಣಿಗೆಯನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ಕೊಲ್ಲಾಪುರದ ಶಾಹುಮಹಾರಾಜರು ಹಿಂದುಳಿದವರಿಗೆ ಶೇಕಡ 50ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ ಎಂಬ ಹೆಗ್ಗಳಿಕೆ ಪಾತ್ರವಾದ ರೀತಿ ಹಾಗೂ ಅವರ ಕೈಗೊಂಡ ಕಾರ್ಯವೈಖರಿಗಳನ್ನು ಇಲ್ಲಿ ತಿಳಿಸಲಾಗಿದೆ. ಜೊತೆಗೆ ನಾಲ್ವಡಿ ಕೃಷ್ಣರಾಜ ಒಡೆಯರು ಹಿಂದುಳಿದವರಿಗೆ ನೀಡಿದ ಕೊಡುಗೆಗಳು ಅವರ ಅಧಿಕಾರವಧಿಯಲ್ಲಿ ಜಾರಿಗೆ ತಂದ ಮಿಲ್ಲರ್ ಆಯೋಗ, ಮಿಲ್ಲರ್ ಆಯೋಗವು ಆ ಸಂದರ್ಭದಲ್ಲಿ ಅಧಿಕಾರಿಗಳಿಗೆ ನೀಡುತ್ತಿದ್ದ ತಾರತಮ್ಯ ಸಂಬಳದ ಸೌಲತ್ತುಗಳು ಇತರ ಸೌಲತ್ತುಗಳು ಹಾಗೂ ಆಯೋಗ ಕ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!