Academic literature on the topic 'ಹಿಂದೂ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಹಿಂದೂ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಹಿಂದೂ"

1

ಗಣೇಶ. "ಧರ್ಮ ಮತ್ತು ಅಂಬೇಡ್ಕರ್‌". AKSHARASURYA JOURNAL 06, № 05 (2025): 46 to 53. https://doi.org/10.5281/zenodo.15504212.

Full text
Abstract:
ಅಂಬೇಡ್ಕರ್‌ ಭಾರತದ ಒಬ್ಬ ಶ್ರೇಷ್ಠ ಪ್ರತಿಭಾವಂತ ಬುದ್ಧಿ ಜೀವಿ ಮತ್ತು ಮೇಧಾವಿ. ಪ್ರಪಂಚದ ಅಪ್ರತಿಮ ಚಿಂತಕರ ಸಾಲಿನಲ್ಲಿ ನಿಲ್ಲಬಲ್ಲ, ಮೇರು ವ್ಯಕ್ತಿತ್ವವುಳ್ಳ ಚಿಂತನಶೀಲ ವ್ಯಕ್ತಿ. ಅವರು ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನು ಆಸಕ್ತಿ ಮತ್ತು ಕುತೂಹಲದಿಂದ ಅಮೂಲಾಗ್ರವಾಗಿ ಅಧ್ಯಯನ ಮಾಡಿದ್ದರು. ಧರ್ಮವನ್ನು ಕುರಿತಂತೆ ರಾಬರ್ಟ್ ಸನ್ ಸ್ಮಿತ್ ಅವರ ಪರಿಕಲ್ಪನೆಯನ್ನು ಅಂಬೇಡ್ಕರ್‌ ಹಿಂದೂ ಧರ್ಮದ ತತ್ವಜ್ಞಾವನ್ನು ಕುರಿತ ತಮ್ಮ ಕೃತಿಯಲ್ಲಿ ಹೀಗೆ ಉಲ್ಲೇಖಿಸಿದ್ದಾರೆ. ಧರ್ಮ ಯಾವುದೇ ಕಾರಣಕ್ಕೂ ದುರ್ಬಲರನ್ನು ಶೋಷಿಸುವ ಅಸ್ತ್ರವಾಗಬಾರದು. ಹಿಂದೂ ಧಾರ್ಮಿಕ ವ್ಯವಸ್ಥೆಯಲ್ಲಿ ದೈವಿಕ ಪ್ರಭುತ್ವದ ಲಿಖಿತ ಸಂವಿಧಾನ ಮತ್ತು ಪುರೋಹಿತಶಾಹಿಯ ಅಘೋಷಿತ ಪ್ರಾಬಲ್ಯವನ್ನು ಕಾಪಾಡಿಕೊಂಡು ಬರಲಾಗಿದೆ. ಈ ಧರ್ಮದಲ್ಲಿ ಬಹುಸಂಖ್ಯಾತ ಹಿಂದುಳಿದ
APA, Harvard, Vancouver, ISO, and other styles
2

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
3

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
4

ಪ್ರಕಾಶ, ಬಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಗಾಂಧೀಜಿ: ಜಾತಿ, ವರ್ಣ, ಹಿಂದುತ್ವ ಕುರಿತು ಅಭಿಪ್ರಾಯ-ಭಿನ್ನಾಭಿಪ್ರಾಯಗಳು". AKSHARASURYA JOURNAL 06, № 05 (2025): 141 to 150. https://doi.org/10.5281/zenodo.15504412.

Full text
Abstract:
ವರ್ತಮಾನದಲ್ಲಿ ಗಾಂಧೀಜಿ ಮತ್ತು ಡಾ. ಬಿ. ಆರ್, ಅಂಬೇಡ್ಕರ್‌‌ರವರನ್ನು ಅನುಸಂಧಾನ ಮಾಡಿದಾಗ ಇವರಿಬ್ಬರ ನಡುವಿನ ಜಾತಿ, ವರ್ಣ, ಹಿಂದುತ್ವ ಕುರಿತು ಅನೇಕ ಹುಸಿ ಚರ್ಚೆಗಳು, ಪ್ರಚಾರ, ಸೆಮಿನಾರ್‌ಗಳು, ಪತ್ರಿಕೆಗಳ ಮೂಲಕ ಬಿತ್ತರವಾಗುತ್ತಿವೆ. ದೇಶದ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಈ ಅಭಿಪ್ರಾಯ-ಭಿನ್ನಾಭಿಪ್ರಾಯಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಲೇಖನದ ಮೂಲಕ ನಿಜವನ್ನು ಅರಿಯುವ ಮುಖೇನ ಹೊಸದೊಂದು ತಾತ್ವಿಕತೆಯನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಜಾತ್‌ಪತ್ ತೊಡಕ್ ಮಂಡಲಕ್ಕಾಗಿ ಅಂಬೇಡ್ಕರ್‌ ಸಿದ್ದಪಡಿಸಿದ ಜಾತಿ ವಿಷಯ ಉಪನ್ಯಾಸವನ್ನು ಗಮನಿಸಿ ತಮ್ಮ ಹರಿಜನ ಪತ್ರಿಕೆಯಲ್ಲಿ ಗಾಂಧೀಜಿ ಅದನ್ನು ಉಲ್ಲೇಖಿಸುವ ಮೂಲಕ ಅಂಬೇಡ್ಕರ್‌ ರವರನ್ನು ಇದು ಪ್ರಚಾ
APA, Harvard, Vancouver, ISO, and other styles
5

ನೇತ್ರಾವತಿ, ಎಸ್. "ಧರ್ಮದ ಒಳಗಡೆ ಸಿಲುಕಿದ ಮುಸ್ಲಿಂ ಮಹಿಳೆ". AKSHARASURYA 03, № 05 (2024): 114–27. https://doi.org/10.5281/zenodo.10938130.

Full text
Abstract:
ಧರ್ಮ ಎಂದರೆ ಮಾನವೀಯ ಮೌಲ್ಯಗಳನ್ನು, ಅಹಿಂಸೆಯಿಂದ ಕೂಡಿರುವಂತಹದ್ದು, ಎಲ್ಲರನ್ನು ಪ್ರೀತಿಯಿಂದ, ಮಮತೆಯಿಂದ ನೋಡಿಕೊಳ್ಳುವುದನ್ನು ಧರ್ಮ ಎನ್ನಬಹುದು. ಹಾಗೆಯೇ ಯಾವುದೇ ಆಚಾರ-ವಿಚಾರಗಳನ್ನು, ಮಾನವ ಸಂಬಂಧಗಳನ್ನು ಪವಿತ್ರ ಭಾವನೆಯಿಂದ, ಯಾವುದೇ ಜೀವಿಗೂ ತೊಂದರೆಯನ್ನು ನೀಡದೆ ನಡೆಸಿಕೊಳ್ಳುವುದನ್ನು ಧರ್ಮ ಎಂದು ಹೇಳಬಹುದು. ಭಾರತ ಹಲವು ಧರ್ಮಗಳನ್ನು ಒಳಗೊಂಡಿದೆ, ಅದರಲ್ಲಿ ಮುಸ್ಲಿಂ ಧರ್ಮವೂ ಒಂದು. ಹಿಂದೂಗಳಂತೆ ಮುಸ್ಲಿಂ ಧರ್ಮದವರನ್ನು ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವುದನ್ನು ಗುರುತಿಸಬಹುದು. ಯಾವುದೇ ಧರ್ಮದಲ್ಲಾದರೂ ಮಹಿಳೆಯರಿಗೆ ಸ್ವಾತಂತ್ರ್ಯ ದೊರೆಯುವುದು ತೀರ ಕಡಿಮೆ ಪ್ರಮಾಣದಲ್ಲಿ. ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ಪ್ರಾಚೀನ ಕಾಲದಲ್ಲಿ ಗೌರವ, ಮನ್ನಣೆ, ತಮ್ಮ ಬದುಕನ್ನು ಅವರೇ ನಿರ್ಮಿಸಿಕೊಳ್ಳುವ ಅವಕಾಶ, ಸ್ವಾತಂತ್ರ್ಯ ಇತ್ತು
APA, Harvard, Vancouver, ISO, and other styles
6

ಡಿ., ಪುರುಷೋತ್ತಮ. "ಟಿಪ್ಪು: ಐತಿಹಾಸಿಕ ವ್ಯಕ್ತಿ ಕುರಿತು ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 50 to 58. https://doi.org/10.5281/zenodo.10929686.

Full text
Abstract:
ಭಾರತವು ರಾಜ ಮಹಾ ರಾಜರಿಂದ ಅನುಭವಿಸಿದ ಪ್ರಭುತ್ವದ ಕಲ್ಪನೆ, ಬ್ರಿಟೀಷರಿಂದ ಕಲಿತ ಪ್ರಭುತ್ವದ ಪಾಠ, ಸ್ವಾತಂತ್ರ್ಯ ನಂತರ ನಾವು ಅನುಭವಿಸುತ್ತಿರುವ ಪ್ರಜಾಪ್ರಭುತ್ವದ ಕಲ್ಪನೆಗಳಲ್ಲಿ ಬಹಳ ವೈರುಧ್ಯ ಮತ್ತು ವ್ಯತ್ಯಾಸಗಳು ಇವೆ. ಪ್ರಜಾಪ್ರಭುತ್ವದ ದೃಷ್ಟಿಯಿಂದ ಇತಿಹಾಸವನ್ನು ನೋಡಿದರೆ ಬ್ರಿಟೀಷರು, ಇಲ್ಲಿಯ ರಾಜ ಮಹಾರಾಜರುಗಳೆಲ್ಲರೂ ಪ್ರಜಾಪ್ರಭುತ್ವದ ವಿರೋಧಿಗಳೆಂದೇ ಬರೆಯಬೇಕಾಗುತ್ತದೆ. ಏಕೆಂದರೆ ಅವರುಗಳು ಯಾರು ಇಂದಿನ ಸಂವಿಧಾನ ದತ್ತವಾದ ಪ್ರಭುತ್ವನ್ನು ನಡೆಸಿಲ್ಲ. ಪ್ರಜಾಪ್ರಭುತ್ವ ಕಲ್ಪನೆಯಿಂದ ಇತಿಹಾಸ ನೋಡುವುದು ಕೂಡ ತಪ್ಪು. ಏಕೆಂದರೆ ಆ ಕಾಲದ ಚರಿತೆಯಲ್ಲಿ ಇಲ್ಲದನ್ನು ಕಾಣ ಬಯಸಿದರೆ ಅದು ಸಿಗುವುದಿಲ್ಲ. ಇದರಿಂದ ನಮ್ಮ ಪ್ರಭುತ್ವ ಒಪ್ಪುವ ಚರಿತ್ರೆ ನಮಗೆ ಲಬ್ಧವಾಗುವುದಿಲ್ಲ. ಕಾಲ ಪ್ರಜ್ಞೆ ಇರದೆ, ಚಾರಿತ್ರರಿಕ ದೃಷ್ಟಿ ಇರದೆ ಬರೆದ
APA, Harvard, Vancouver, ISO, and other styles
7

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್‌ ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್‌ ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
8

ದಿನೇಶ, ಎನ್.ಎನ್. "ಮಲಬಾರ್ ಮಾಪಿಳ್ಳೆ ಬಂಡಾಯಗಳು: ಧರ್ಮ, ಭೂಮಿ ಮತ್ತು ಹಕ್ಕುಗಳಿಗಾಗಿ ಹೋರಾಟ". AKSHARASURYA 06, № 02 (2025): 105 to 116. https://doi.org/10.5281/zenodo.15124098.

Full text
Abstract:
19ನೆಯ ಶತಮಾನದಾದ್ಯಂತ ಸ್ಫೋಟಗೊಂಡು 20ನೇಯ ಶತಮಾನದ ಮೊದಲ ಭಾಗವು ಉಗ್ರ ಹೋರಾಟದೊಂದಿಗೆ ಅಳಿದುಹೋದವು. ಕೇರಳದ ಮಲಬಾರ್ ಪ್ರದೇಶದಲ್ಲಿ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಪ್ರತಿರೋಧವಾಗಿ ಪ್ರಾರಂಭವಾಯಿತು. ಮಲೆಯಾಳಿ ಸಮಾಜದ ಜೊತೆಗಿನ ಅರಬರ ವ್ಯಾಪಾರೀ ಸಂಬಂಧದ ಚರಿತ್ರೆ ಸುಮಾರು 9ನೇ ಶತಮಾನದಷ್ಟು ಹಿಂದಿನಿಂದ ಪ್ರಾರಂಭವಾಗುತ್ತದೆ. ಕರಾವಳಿ ಪ್ರಾಂತ್ಯದಲ್ಲಿದ್ದ ಹಿಂದೂ ಮುಖಂಡರುಗಳಿಗೆ ಶ್ರೀಮಂತ ಅರಬ ವ್ಯಾಪಾರಿಗಳ ಬೆಂಬಲ ಯಾವಾಗಲೂ ಬೇಕಾಗುತ್ತಿತ್ತು. ಮಲಬಾರಿನಲ್ಲೇ ಕ್ರಮೇಣ ಉಳಿದುಕೊಂಡ ಅರಬ ವ್ಯಾಪಾರಿಗಳು ಪ್ರಮುಖವಾಗಿ ನಾಯರ್ ಮತ್ತು ತಿಯಾ ಜಾತಿಯ ಹೆಂಗಸರನ್ನೇ ಮದುವೆಯಾದರು. ಕಾಲಾಂತರದಲ್ಲಿ ಇವರೇ ಮಾಪಿಳ್ಳೆಗಳಾದರು. ಮತಾಂತರಗೊಂಡು ಹೊಸದಾಗಿ ಸೇರ್ಪಡೆಗೊಳ್ಳುವ ಪ್ರತಿಯೊಬ್ಬ ಸದಸ್ಯನನ್ನು ಮಾಪಿಳ್ಳೆಗಳು ಸಂತೋಷದಿಂದ ಸ್ವೀಕರಿಸಿದರೂ ಮ
APA, Harvard, Vancouver, ISO, and other styles
9

ಅಶ್ವಿನಿ, ಎಂ. ಎಸ್. "ಬಾಬಾ ಸಾಹೇಬ್ ಅಂಬೇಡ್ಕರ್‌: ಸಾಮಾಜಿಕ ನ್ಯಾಯದ ರೂವಾರಿ". AKSHARASURYA JOURNAL 06, № 05 (2025): 10 to 16. https://doi.org/10.5281/zenodo.15504125.

Full text
Abstract:
ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಮಹಾಜ್ಞಾನಿ ಹಾಗೂ ಭಾರತದ ಸಂವಿಧಾನ ರಚನ ಕರಡು ಸಮಿತಿಯ ಅಧ್ಯಕ್ಷರು. ಹೀಗೆ ಇವರ ಶ್ರೇಷ್ಠತೆಗಳನ್ನು ಪಟ್ಟಿ ಮಾಡುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇಂಥ ಶ್ರೇಷ್ಠ ವ್ಯಕ್ತಿ ಭಾರತದಲ್ಲಿದ್ದ ವರ್ಣ ವ್ಯವಸ್ಥೆಯ ವಿರುದ್ಧ ಹೋರಾಡಿ, ತಾನೇ ಸಂವಿಧಾನವನ್ನು ರಚಿಸಿ ಸಾಮಾಜಿಕ ನ್ಯಾಯವನ್ನು ನೀಡಿದ ಸಾಮಾಜಿಕ ಚ
APA, Harvard, Vancouver, ISO, and other styles
10

ರಮೇಶ್. "ನಿರಂಜನರ ಬರವಣಿಗೆಯಲ್ಲಿ ಮಾರ್ಕ್ಸ್‌ವಾದ". AKSHARASURYA 06, № 02 (2025): 75 to 83. https://doi.org/10.5281/zenodo.15124060.

Full text
Abstract:
ನಿರಂಜನರು ಸಾಹಿತ್ಯವಲಯದಲ್ಲಿ ಉಂಟುಮಾಡಿದ ಸಾಮಾಜಿಕ ಹೋರಾಟ ಬಹಳ ಮುಖ್ಯವಾದುದು. ಸಾಹಿತ್ಯ ಮತ್ತು ಬದುಕನ್ನು ಏಕ ರೀತಿಯಲ್ಲಿ ಕಂಡುಕೊಂಡವರು. ಸಾಮಾಜಿಕ ಬದ್ಧತೆಯನ್ನು ಕೊನೆಯವರೆಗೂ ಉಳಿಸಿಕೊಂಡವರು. ಬಾಲ್ಯದಲ್ಲಿ ಗಾಂಧಿವಾದಕ್ಕೆ ಮನಸೋತು, ಅನಂತರ ಸಮಾಜವಾದದತ್ತ ಒಲವು ಬೆಳಸಿಕೊಂಡರು. ಹರೆಯದಲ್ಲಿ ಸಮತಾವಾದದ ಸಿದ್ದಾಂತಗಳಿಂದ ಪ್ರಭಾವಿತರಾಗಿ ಮಾರ್ಕ್ಸ್‌ವಾದಿಯಾಗಿ ಕಮ್ಯೂನಿಸ್ಟ್ ಪಕ್ಷದ ಸಕ್ರಿಯ ಸದಸ್ಯರಾಗಿ ದುಡಿದವರು ನಿರಂಜನರು. ʼಸ್ವಾತಂತ್ರ್ಯ ಚಳವಳಿ, ಏಕೀಕರಣ ಚಳವಳಿ, ಹಿಂದೂ ಸಾಂಸ್ಕೃತಿಕ ಪುನರುಜ್ಜೀವನ ಚಳವಳಿಗಳು ಸೊಕ್ಕೇರಿ ಒಟ್ಟಿಗೆ ಕ್ರಿಯಾನಿರತವಾಗಿದ್ದಾಗ, ಮಾರ್ಕ್ಸ್‌ವಾದದಿಂದ ಆಕರ್ಷಿತವಾಗಿ, ಅಖಿಲಭಾರತ ಚಳವಳಿಯ ಒಂದು ಭಾಗವಾಗಿ ಕನ್ನಡ ಪ್ರಗತಿಶೀಲ ಚಳವಳಿಯು ಹುಟ್ಟಿಕೊಂಡಿತು. ಶಿವರಾಯರು ಬೆಳೆಬೆಳೆಯುತ್ತಾ ಗಾಂಧೀ ಪ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!