Pour voir les autres types de publications sur ce sujet consultez le lien suivant : ಶರಣರು.

Articles de revues sur le sujet « ಶರಣರು »

Créez une référence correcte selon les styles APA, MLA, Chicago, Harvard et plusieurs autres

Choisissez une source :

Consultez les 26 meilleurs articles de revues pour votre recherche sur le sujet « ಶರಣರು ».

À côté de chaque source dans la liste de références il y a un bouton « Ajouter à la bibliographie ». Cliquez sur ce bouton, et nous générerons automatiquement la référence bibliographique pour la source choisie selon votre style de citation préféré : APA, MLA, Harvard, Vancouver, Chicago, etc.

Vous pouvez aussi télécharger le texte intégral de la publication scolaire au format pdf et consulter son résumé en ligne lorsque ces informations sont inclues dans les métadonnées.

Parcourez les articles de revues sur diverses disciplines et organisez correctement votre bibliographie.

1

ಸಜ್ಜನಶೆಟ್ಟರ, ಸಿದ್ಧಲಿಂಗೇಶ ಉ. "ಶ್ರೀ.ಮೈಲಾರ ಬಸವಲಿಂಗ ಶರಣರು". International Journal of Kannada Research 5, № 1 (2019): 114–19. http://dx.doi.org/10.22271/24545813.2019.v5.i1b.1030.

Texte intégral
Styles APA, Harvard, Vancouver, ISO, etc.
2

ಎನ್., ಎಸ್. ಸತೀಶ್. "ಅಲ್ಲಮನ ವಚನದ ವಿವೇಚನೆ". AKSHARASURYA JOURNAL 05, № 04 (2024): 41 to 46. https://doi.org/10.5281/zenodo.14289593.

Texte intégral
Résumé :
ಅಲ್ಲಮ ಈ ವಚನದಲ್ಲಿ ಮುಸುರೆ ಹಾಗು ನೊಣವನ್ನು ಉಪಮೆ ನೀಡುವುದರ ಮೂಲಕ ವಿಷಯಾಸೆಗಳನ್ನು ಮುಸುರೆಯೆಂದು ಸಾಮಾನ್ಯ ಮನುಷ್ಯನ ಮನಸ್ಸನ್ನು ನೊಣವೆಂದು ಹೇಳಿದ್ದಾನೆ. ಮುಸುರೆ ಅಲ್ಪಾವಧಿಯದ್ದಾಗಿದ್ದು ಸ್ವಲ್ಪ ಸಮಯದ ಅನಂತರ ಕೊಳೆತು ನಾರುತ್ತದೆ ಅಂತೆಯೇ ವಿಷಯಾಸಕ್ತಿಗಳು ಆ ಕ್ಷಣಕ್ಕೆ ಸಂತಸವನ್ನು ತಂದು ಕೊಟ್ಟರೂ ದೀರ್ಘಾವಧಿಯಲ್ಲಿ ತನ್ನ ಮನಸ್ಸಿನ ಶಾಂತಿಯನ್ನು ಕಳೆದುಕೊಳ್ಳುತ್ತಾ, ಚಿತ್ತ ವಿಕೃತಿಗೆ ಒಳಗಾಗುವುದಲ್ಲದೆ ಅವನು ತನ್ನ ವ್ಯಕ್ತಿತ್ವ ನಾರುವಂತೆ ಮಾಡಿಕೊಳ್ಳುತ್ತಾನೆ. ಇನ್ನು ಮತ್ತೊಂದು ಆಯಾಮವನ್ನು ನೋಡುವುದಾದರೆ ಮುಸುರೆಯ ಮಡಕೆ ಮನುಷ್ಯನ ಲೋಭತನದ ಕ್ರೋಢೀಕರಣ ಇದು ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತದೆ. ನೊಣ ಈ ಕ್ರೋಢೀಕರಣವನ್ನು ಹರಡುವ ಸಾಂಕ್ರಾಮಿಕ ರೋಗದ ಮನೋಭಾವದಂತೆ ಕಾಣುತ್ತದೆ.  ನೊಣದ ಸ್ವಭಾವದಲ್ಲಿನ ಚಂಚಲತೆ, ಪಶುವಿನಲ್ಲಿ
Styles APA, Harvard, Vancouver, ISO, etc.
3

ಸಿ., ನಾಗಭೂಷಣ. "ಗುಮ್ಮಳಾಪುರದ ಸಿದ್ಧಲಿಂಗ ಯತಿಗಳ ಶೂನ್ಯ ಸಂಪಾದನೆ: ಕೆಲವು ಟಿಪ್ಪಣಿಗಳು". AKSHARASURYA 06, № 02 (2025): 01 to 19. https://doi.org/10.5281/zenodo.15123743.

Texte intégral
Résumé :
ಅಭಿನವ ಅಲ್ಲಮರೆಂದು ಖ್ಯಾತರಾದ ತೋಂಟದ ಸಿದ್ಧಲಿಂಗಯತಿಗಳು, ತಮ್ಮ ಶಿಷ್ಯ-ಪ್ರಶಿಷ್ಯ ಪರಂಪರೆಯ ಮೂಲಕ, ಗ್ರಂಥಸಂಪಾದನೆಯ ವಿಧಿವಿಧಾನಗಳನ್ನು ಅನ್ವಯಿಸಿ ವಚನಗಳನ್ನು ಸಂಕಲಿಸುವ ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ಕೈಗೊಂಡಿರುವುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿಯೇ ವಿಶಿಷ್ಟವಾದುದಾಗಿದೆ. ವಚನ ರಚನೆ ಹಾಗೂ ವಚನ ರಕ್ಷಣೆ, ವ್ಯಾಖ್ಯಾನ ಎರಡರಲ್ಲಿಯೂ ಸ್ಥಾನ ಪಡೆದಿದ್ದಾರೆ. ವಚನಗಳನ್ನು ಸಂಕಲಿಸುವ, ವ್ಯಾಖ್ಯಾನಿಸುವಂತಹ ಸಾಹಿತ್ಯಕ ಚಟುವಟಿಕೆಗಳನ್ನು ತಮ್ಮ ಶಿಷ್ಯ ಪ್ರಶಿಷ್ಯ ಪರಂಪರೆಯ ಮೂಲಕ ಅನುಷ್ಠಾನಗೊಳಿಸಿದರು. “ಕಲ್ಯಾಣ ಕ್ರಾಂತಿಯ ವಿಪ್ಲವದ ನಂತರ ಅಳಿದುಳಿದ ವಚನ ಸಾಹಿತ್ಯವನ್ನು ಸಂರಕ್ಷಿಸುವ ಶೋಧಿಸುವ, ಸಂಕಲಿಸುವ, ವ್ಯಾಖ್ಯಾನಿಸುವ ಮೂಲಕ ಕಾಪಾಡಿಕೊಂಡು ಬರಲು 15 ಮತ್ತು 16 ನೇ ಶತಮಾನದ ಸಂಕಲನಕಾರರು ಕಾರಣರಾಗಿದ್ದಾರೆ.
Styles APA, Harvard, Vancouver, ISO, etc.
4

ಪ್ರಕಾಶ. "ವಚನಕಾರ್ತಿಯರಲ್ಲಿ ಬಂಡಾಯದ ನೆಲೆಗಳು". AKSHARASURYA JOURNAL 06, № 04 (2025): 56 to 63. https://doi.org/10.5281/zenodo.15490899.

Texte intégral
Résumé :
೧೨ನೇ ಶತಮಾನದ ವಚನಚಳವಳಿಯೇ ಚಾರಿತ್ರಿಕವಾಗಿ ಬಹುದೊಡ್ಡ ಪ್ರಮಾಣದ ಬಂಡಾಯಕ್ಕೆ ನೂತನ ಅಯಾಸವನ್ನು ನೀಡಿತು. ಸುಮಾರು ಮೂವತ್ತೆರಡು ಜನ ಶರಣೆಯರು ವಚನಗಳನ್ನು ರಚಿಸಿ ಶ್ರೇಷ್ಠ ಚಿಂತಕಿಯರಾದರು ಅವರು ಸಮಾಜದ ಡಾಂಭಿಕತೆಯ ವಿರುದ್ಧ ಪ್ರತಿಭಿಟಿಸಿದ ರೀತಿ ಅಗಮ್ಯವಾದುದು. ಲಿಂಗಭೇದ ನಿರಾಕರಣೆ, ಮನೋಪ್ರವೃತ್ತಿಗಳ ವಿರುದ್ಧ ಪ್ರತಿಭಟನೆ ಮಾಡಿರುವುದು ಅವರ ಜ್ಞಾನ, ಆತ್ಮಸ್ಥೈರ್ಯ ಹಾಗೂ ಅವರ ಒಳಗಿನ ಬಂಡಾಯ ಗುಣಕ್ಕೆ ಸಾಕ್ಷಿಯಾಗಿದೆ.ಪುರುಷ ಪ್ರಧಾನ ಸಮಾಜವು ತನ್ನ ಹಿತಾಶಕ್ತಿಯನ್ನು ಕಾಯ್ದುಕೊಂಡು ಮಹಿಳೆಯನ್ನು ಕತ್ತಲೆಯ ಕೂಪಕ್ಕೆ ತಳ್ಳಿತ್ತು ೧೨ನೇಯ ಶತಮಾನದ ಬಸವಾದಿ ಶರಣರು ಮಹಿಳೆಯರ ಬದುಕಿನಲ್ಲಿದ್ದ ಕತ್ತಲೆಯನ್ನು ಸರಿಸಿ ಬೆಳಕಿನ ಮಾರ್ಗವನ್ನು ದರ್ಶಿಸಿದರು ಮನುಷ್ಯನ ಸಣ್ಣತನವನ್ನು ಶಮನಗೊಳಿಸಿ ಸಮಾನತೆಯ ತಳಹದಿಯ ಮೇಲೆ ಮಾನವೀಯವಾದ ಸಮಸಂಸ್ಕೃತಿಯ ಸಮಾಜ
Styles APA, Harvard, Vancouver, ISO, etc.
5

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Texte intégral
Résumé :
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
Styles APA, Harvard, Vancouver, ISO, etc.
6

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Texte intégral
Résumé :
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು”. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
Styles APA, Harvard, Vancouver, ISO, etc.
7

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Texte intégral
Résumé :
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
Styles APA, Harvard, Vancouver, ISO, etc.
8

ಭೀಮಣ್ಣ, ಎಚ್. "ಚಂಚಲ ಮನಸ್ಸು". AKSHARASURYA JOURNAL 04, № 04 (2024): 151 to 156. https://doi.org/10.5281/zenodo.13284183.

Texte intégral
Résumé :
ಮನಸ್ಸು ಹರಿಯುವ ನೀರು ಇದ್ದಹಾಗೆ ಸದಾ ಕಾಲ ಚಲಿಸುತ್ತದೆ. ಮನಸ್ಸನ್ನು ಕುರಿತು ಹಲವು ಜ್ಞಾನಿಗಳು, ಶರಣರು ತಮ್ಮದೇ ಆದ ದೃಷ್ಟಿಕೋನದಲ್ಲಿ ವಿವರಿಸಿದ್ದಾರೆ. ಯಾರು ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೋ ಅವರು ಈ ಜಗದ ಯಾವ ಶಕ್ತಿಯನ್ನು ಗೆಲ್ಲಬಲ್ಲರು ಚಂಚಲವಾದ ಮನಸ್ಸು ಮನುಷ್ಯನ ಸುಖವನ್ನು ಹಾಳುಮಾಡುತ್ತದೆ. ಹುಡುಕಾಟದ ಹಾದಿಯಲ್ಲಿ ನೆಮ್ಮದಿಯೂ ಕೂಡ ಕಳೆದುಕೊಳ್ಳುತ್ತದೆ. ಯಾವುದು ಸತ್ಯ ಯಾವುದು ಸುಳ್ಳು ಎಂದು ಅರಿಯದೆ ಕೊನೆಗೆ ತನ್ನತನವನ್ನು ಕಳೆದುಕೊಂಡು ಹಾಳಾಗುತ್ತದೆ. ಹೀಗೆ ಬಲ್ಲವರು ಮನಸ್ಸನ್ನು ಕುರಿತು ಅಧ್ಯಯನ ಮಾಡಿ ಮನುಷ್ಯನ ಸುಖ ಶಾಂತಿ ಕಾಪಾಡುವಲ್ಲಿ ಮನಸ್ಸು ಹರಿ ಬಿಟ್ಟರೆ ಮನುಷ್ಯ ಜೀವನವೇ ಹಾಳಾಗುತ್ತದೆ ಎಂದು ಹೇಳುತ್ತಾರೆ. ಯಾರು ತಮ್ಮ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳುತ್ತಾರೋ ಅವರು ಮಹಾನ್ ವ್ಯಕ್ತಿಗಳಾಗುತ್ತ
Styles APA, Harvard, Vancouver, ISO, etc.
9

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Texte intégral
Résumé :
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
Styles APA, Harvard, Vancouver, ISO, etc.
10

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Texte intégral
Résumé :
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
Styles APA, Harvard, Vancouver, ISO, etc.
11

ಲಕ್ಷ್ಮೀ, ಎಲ್. ಪೂಜಾರಿ. "ವಚನ ಚಳವಳಿ ಮತ್ತು ಮಹಿಳೆ". AKSHARASURYA JOURNAL 06, № 05 (2025): 54 to 59. https://doi.org/10.5281/zenodo.15504231.

Texte intégral
Résumé :
ವಚನ ಸಾಹಿತ್ಯ ಹನ್ನೆರಡನೇ ಶತಮಾನದಲ್ಲಿ ಹುಟ್ಟಿಕೊಂಡಂತಹ ವಿಶಿಷ್ಟ ಸಾಹಿತ್ಯದ ಪ್ರಕಾರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಕಾಣುತ್ತೇವೆ. ಈ ಯುಗವನ್ನು ಸಾಮಾಜಿಕ ಪರಿವರ್ತನೆ ಯುಗ ಎಂದು ಕರೆಯುವಷ್ಟರಮಟ್ಟಿಗೆ ಬದಲಾವಣೆ ಆಗಿರುವುದನ್ನು ಕಾಣುತ್ತೇವೆ. ವಚನ ಎಂದರೆ ಮಾತು, ಉಕ್ತಿ ಎಂಬ ಅರ್ಥವನ್ನು ಹೊಂದಿದ್ದು ಗದ್ಯ ಪದ್ಯಗಳ ರೂಪದಲ್ಲಿ ಕಂಡುಬಂದಿದೆ ಮಹಿಳೆಯರ ಸಮಾನತೆಗೆ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ.ಶತಮಾನಗಳಿಂದ ಅಸ್ಪೃಳಾಗಿದ್ಧ ಅದೃಶ್ಯಳಾಗಿದ್ಧ ಹೆಣ್ಣನ್ನು ವಚನಕಾರರು ಮಾನವೀಯ ದೃಷ್ಟಿಯಿಂದ ಕಂಡಿದ್ದಾರೆ. ಪುರುಷನ ಹಾಗೆ ಮಹಿಳೆಗೆ ಸಮಾನವಾದ ಸ್ಥಾನವನ್ನು ನೀಡುವ ಮೂಲಕ 12ನೇ ಶತಮಾನದಲ್ಲಿ ವಚನಕಾರರು ಮಾಡಿದ ಒಂದು ಬೃಹತ್ ಬದಲಾವಣೆ ಇಡೀ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದೆ. ಸ್ತ್ರೀಯರ ಸಮಾನತೆಗಾಗಿ ಮಾಡಿದ ಮೊದಲ ಚಳುವ
Styles APA, Harvard, Vancouver, ISO, etc.
12

ಶ್ರೀನಿವಾಸ, ಎಸ್.ಜಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 01 to 10. https://doi.org/10.5281/zenodo.15490768.

Texte intégral
Résumé :
ʼಕಾಯಕವೇ ಕೈಲಾಸʼ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದ್ದು ವಚನ ಸಾಹಿತ್ಯ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಗುರಿಯಿಟ್ಟು ನಡೆದ ದಾರ್ಶನಿಕ ಚಳುವಳಿ ವಚನ ಸಾಹಿತ್ಯ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು ಕೂತು ಉಣ್ಣುವ ವರ್ಗಗಳು ನಿರ್ಮಾಣವಾಗುವುದಕ್ಕೆ ಕಾರಣವಾಗಿರಬೇಕು, ಸಮಾಜದಲ್ಲಿ ಮೇಲ್ವರ್ಗವೆಂದು ಕರೆಸಿಕೊಂಡ ಜನರು ಸಮಾಜದ ಇತರರನ್ನು
Styles APA, Harvard, Vancouver, ISO, etc.
13

ಶಂಕರ್, ಜ್ಯೋತಿ, та ಮಮತ ಬಿ ಆರ್. "ಶಿವಶರಣೆಯರ ವಚನಗಳಲ್ಲಿ ಪ್ರಾಣಿ ಪ್ರತಿಮೆ". Shanlax International Journal of Arts, Science and Humanities 12, S1-Oct (2024): 219–23. https://doi.org/10.34293/sijash.v12is1-oct.8308.

Texte intégral
Résumé :
ಜಗತ್ತಿನ ಸಾಂಸ್ಕೃತಿಕ ಇತಿಹಾಸವನ್ನು ಗಮನಿಸಿದರೆ ನಮ್ಮ ಕನ್ನಡ ನಾಡಿನ ಶರಣಸಂಸ್ಕೃತಿಯು ಮಹತ್ತರವಾದುದು. ೧೨ನೇ ಶತಮಾನದಲ್ಲಿ ಪ್ರವರ್ಧಮಾನಕ್ಕೆ ಬಂದ ಶರಣ ಸಂಸ್ಕೃತಿ ಹಾಗೂ ವಚನ ಸಾಹಿತ್ಯವು ಅಂದಿನ ಸಮಾಜದಲ್ಲಿ ನೆಲೆಯೂರಿದ್ದ ಅನೇಕ ಮೂಢನಂಬಿಕೆಗಳು, ಅಂಧಶ್ರದ್ಧೆಗಳು, ಅಂಧ ಆಚರಣೆಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಲು ಸಹಾಯಕವಾಗಿದ್ದವು. ಬಸವಣ್ಣನವರಿಂದ ಸ್ಥಾಪಿತವಾದ ಅನುಭವ ಮಂಟಪದಲ್ಲಿ ಎಲ್ಲಾ ಶರಣರು ತನ್ನ ಅನುಭವ, ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು. ಇದಕ್ಕಾಗಿ ಅವರು ಬಳಸಿಕೊಂಡ ಮಾಧ್ಯಮವೇ ವಚನಗಳು. ಶಿವಶರಣರು ಸಮಾಜದಲ್ಲಿ ಕಂಡ ಅನೇಕ ವಿಷಯಗಳನ್ನು ತಮ್ಮ ಮನದ ಅಂತರಾಳದಲ್ಲಿ ತುಡಿಯುತ್ತಿರುವ ಭಾವನೆಗಳನ್ನು ಸಮರ್ಪಕವಾಗಿ ವ್ಯಕ್ತಪಡಿಸಲು ಅನೇಕ ಪ್ರತಿಮೆಗಳನ್ನು ಬಳಸಿಕೊಂಡರು. ಅವುಗಳಲ್ಲಿ ಪ್ರಾಣಿ ಪ್ರತಿಮೆ ಕೂಡ ಒಂದಾಗಿದೆ.
Styles APA, Harvard, Vancouver, ISO, etc.
14

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Texte intégral
Résumé :
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
Styles APA, Harvard, Vancouver, ISO, etc.
15

ಶೀಲಾದೇವಿ, ಎಸ್. ಬಿರಾದಾರ. "ವೀರಾಂಗಿಣಿ ಅಕ್ಕಮಹಾದೇವಿ". AKSHARASURYA JOURNAL 04, № 06 (2024): 152 to 156. https://doi.org/10.5281/zenodo.13725661.

Texte intégral
Résumé :
ಹಳೆಗನ್ನಡ ಸಾಹಿತ್ಯವು ರಾಜ್ಯಾಶ್ರಯದಲ್ಲಿಯೇ ಪಂಡಿತ ಪಾಮರರಿಗೆ ಮಾತ್ರ ಸಿಮಿತವಾಗಿತ್ತು. ಹನ್ನೆರಡನೆ ಶತಮಾನದಲ್ಲಿ ವಚನ ಸಾಹಿತ್ಯಯೂ ತೀರಾ ಸರಳ ಸಹಜವಾಗಿ ತಾವು ಬೋದಿಸುವುದು ಸಾಮಾನ್ಯನಿಗೂ ತಲುಪಬೇಕು ಎಂಬ ಆಶಯ ಹೊಂದಿದವರು. ಶಿವಶರಣರು ಶಿವಶರಣೆಯರ ಆಲೋಚನೆಗಳನ್ನು ಅನುಭವಗಳನ್ನು ವಿಚಾರಧಾರೆಗಳೆ ವಚನ. ಜನಸಾಮಾನ್ಯರ ಭಾಷೆಯಲ್ಲಿಯೆ ತಮ್ಮ ಭಾವನೆಗಳನ್ನು ಅನಿಸಿಕೆಗಳನ್ನು ತತ್ವಗಳನ್ನು ಹಾಗೂ ಅವರ ಆತ್ಮಾನುಭವಗಳೇ ವಚನರೂಪದಲ್ಲಿ ವ್ಯಕ್ತಪಡಿಸಿದ್ದು ವಚನ ಸಾಹಿತ್ಯ. ವಚನ ಸಾಹಿತ್ಯ ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವುದು ಕನ್ನಡ ಸಾಹಿತ್ಯದ ಹೆಮ್ಮೆಯಾಗಿದೆ. ವಚನ ಸಾಹಿತ್ಯದಲ್ಲಿ ಕಾಣಿಸುವ ವಿಶಿಷ್ಟ ಪ್ರತಿಭೆಯ ಮಹಿಳೆ ಅಕ್ಕಮಹಾದೇವಿ. ಕನ್ನಡ ಸಾಹಿತ್ಯದ ಮೊದಲ ಕವಿಯತ್ರಿ ಮತ್ತು ವಚನಗಾರ್ತಿ, 12 ನೆಯ ಶತಮಾನದ ಪ್ರಪ್ರಥಮವಾಗಿ ಪುರುಷರಿಗೆ ಸಮಾನವಾಗಿ ನಿಂ
Styles APA, Harvard, Vancouver, ISO, etc.
16

ಲಕ್ಷ್ಮಿದೇವಿ, ಎನ್‌. "ಬಾಚಿಕಾಯಕದ ಕಾಳವ್ವೆಯ ವಚನದಲ್ಲಿ ಕಾಯಕ, ಮಾತು ಮತ್ತು ವ್ರತ ಪ್ರಜ್ಞೆ". AKSHARASURYA 04, № 03 (2024): 117 to 124. https://doi.org/10.5281/zenodo.12672873.

Texte intégral
Résumé :
ವಚನಗಳಲ್ಲಿ ನಾವು ವಿಚಾರ ಸ್ವಾತಂತ್ರ್ಯದ ಪರಾಕಾಷ್ಟೆಯನ್ನು ಕಾಣುತ್ತೇವೆ. “ಉದರ ನಿಮಿತ್ತಂ ಬಹುಕೃತ ವೇಷಂ” ಎಂಬ ಮಾತೊಂದಿದೆ. ಹೊಟ್ಟೆ ಹೊರೆಯುವುದಕ್ಕಾಗಿ ಮಾನವ ಅನೇಕ ವೇಷಗಳನ್ನು ಕೈಗೊಳ್ಳುತ್ತಾನೆ. ಆದರೆ ಶರಣರು ಹೊಟ್ಟೆ ಹೊರೆಯುವ ಕಾಯಕದ ಮೂಲಕ ದಾಸೋಹ ಸಿದ್ಧಾಂತವನ್ನು ಅನುಭಾವದ ಮೂಲಕ ಸಮಾಜಕ್ಕೆ ಸಾರಿದವರು. ಅಸಮಾನತೆಯ ಸಮಾಜದಲ್ಲಿ ಶೂದ್ರರಿಗೆ, ಅಸ್ಪೃಶ್ಯರಿಗೆ, ಹೆಣ್ಣಿಗೆ ಸಮಾನ ಸ್ಥಾನಮಾನವನ್ನು ತಂದುಕೊಟ್ಟ ಕೀರ್ತಿ ಬಸವಣ್ಣನರಿಗೆ ಸಲ್ಲುತ್ತದೆ. ೧೨ನೇ ಶತಮಾನದ ಸಮಾಜದಲ್ಲಿ ಅಕ್ಷರ ಕ್ರಾಂತಿಯ ಮೂಲಕ ಸ್ತ್ರೀ-ಪುರುಷ ಸಮಾನತೆಯನ್ನು ಪಡೆದದ್ದು ಪವಾಡವೇ ಸರಿ. ಅದರಲ್ಲೂ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಮಹಿಳೆ ಅನುಭವ ಮಂಟಪದ ಗೋಷ್ಠಿಯಲ್ಲಿ ಪುರುಷನಷ್ಟೇ ಸಮಾನತೆಯನ್ನು ಕೈಗೊಂಡಿದ್ದು ಸಮಾಜಿಕ ಕ್ರಾಂತಿ ಎನ್ನಬಹುದು. ಅವರಲ್ಲಿ
Styles APA, Harvard, Vancouver, ISO, etc.
17

ಕುಸುಮಾಂಜಲಿ, ಎಲ್. ಸಿ. ಜಗದೀಶ್. "ವಚನ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ". AKSHARASURYA JOURNAL 06, № 04 (2025): 11 to 18. https://doi.org/10.5281/zenodo.15490805.

Texte intégral
Résumé :
ಇದರಲ್ಲಿ ವಚನ ಸಾಹಿತ್ಯ ಮತ್ತು ಸ್ತ್ರೀ ಸಂವೇದನೆಯ ಸಂಬಂದವನ್ನು ಹೇಳಲಾಗಿದೆ. ಸ್ತ್ರೀ ಸಂವೇನೆ ಎಂದರರೇನು ಮತ್ತು ಸ್ತ್ರೀವಾದಕ್ಕಿರುವ ಮೌಲ್ಯವು ಯಾವುದು ಹಾಗೂ ಸಂವೇದನೆ ಎಂದರೆ ಏನು ಎಂದು ವಿವರಿಸಲಾಗಿದೆ. ಆದರೆ ಸ್ತ್ರೀವಾದವನ್ನು ಇಲ್ಲಿ ಆನ್ವಯಿಕವಾಗಿ ಮಾತ್ರವೇ ಬಳಸಲಾಗಿದೆ. ಎಲ್ಲಿಯೂ ವಚನ ಕಾರ್ತಿಯರನ್ನು ಮತ್ತು ವಚನಗಳನ್ನು ಹೆಚ್ಚು ಉಲ್ಲೇಖಿಸಲಿಕ್ಕೆ ಹೋಗಲಿಲ್ಲ. 
Styles APA, Harvard, Vancouver, ISO, etc.
18

V., Shivananda. "ಔತ್ತರೇಯ ಭಾರತೀಯ ಭಾಷೆ-ಕೃತಿಗಳಲ್ಲಿ ಕರ್ನಾಟಕ ಸಂಸ್ಕೃತಿಯ ಕೆಲವು ಉಲ್ಲೇಖಗಳು". ಔತ್ತರೇಯ ಭಾರತೀಯ ಭಾಷೆ-ಕೃತಿಗಳಲ್ಲಿ ಕರ್ನಾಟಕ ಸಂಸ್ಕೃತಿಯ ಕೆಲವು ಉಲ್ಲೇಖಗಳು 03, № 02 (2024): 1–18. https://doi.org/10.5281/zenodo.10656661.

Texte intégral
Résumé :
ಕನ್ನಡ ಸಾರಸ್ವತ ಲೋಕದಲ್ಲಿ ಎಲೆಮರೆಯ ಕಾಯಿಯಂತಿದ್ದು ಕನ್ನಡ ಸಂಶೋಧನ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಯಾಗಿ ವಿಸ್ತರಿಸಿದ ಹಾಗೂ ಶ್ರೀಮಂತಗೊಳಿಸಿದ ವಿದ್ವಾಂಸರಲ್ಲಿ ಡಾ.ವಿ.ಶಿವಾನಂದ ಅವರು ಪ್ರಮುಖರು. ಅತ್ಯುತ್ತಮ ಕನ್ನಡ ಪ್ರಾಧ್ಯಾಪಕರಾಗಿ, ನಿರಂತರ ಅಧ್ಯಯನಶೀಲ ವಿದ್ವಾಂಸರಾಗಿ, ಪ್ರಥಮಶ್ರೇಣಿಯ ಸಂಶೋಧಕರಾಗಿ, ಶ್ರೇಷ್ಠ ಭಾಷಾವಿಜ್ಞಾನಿಯಾಗಿ ಅವರು ತಮ್ಮ ವಿದ್ವತ್ ಪ್ರತಿಭೆಯನ್ನು ಬೋಧನೆ ಮತ್ತು ಬರಹಗಳಲ್ಲಿ ಧಾರೆಯೆರೆದು ಕನ್ನಡ ಸಾರಸ್ವತ ಪ್ರಪಂಚವನ್ನು ಶ್ರೀಮಂತಗೊಳಿಸಿದವರು. ಶ್ರೀಯುತರು ಮೂಲತಃ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಕನಮಡಿ ಗ್ರಾಮದವರು. ತಂದೆ ಗುರುಪಾದಯ್ಯ, ತಾಯಿ ರಾಚಮ್ಮ. ಹುಟ್ಟಿದ್ದು 1-5-1941. ಪ್ರಾಥಮಿಕ ಶಿಕ್ಷಣವನ್ನು ಕನಮಡಿಯಲ್ಲಿ, ನಂತರ ಶ್ರೀ ಶರಣಬಸವೇಶ್ವರ ಹೈಸ್ಕೂಲ್‌ನಲ್ಲಿ ಹಾಗೂ ಶ್ರೀಶರಣಬಸವೇಶ್ವರ ಕಲ
Styles APA, Harvard, Vancouver, ISO, etc.
19

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Texte intégral
Résumé :
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
Styles APA, Harvard, Vancouver, ISO, etc.
20

ಶಂಭುಲಿಂಗ, ಹುಬ್ಬಳ್ಳಿ. "ಶಿವಶರಣರ ದೃಷ್ಟಿಯಲ್ಲಿ ಆರ್ಥಿಕ ಸಿದ್ಧಾಂತ". AKSHARASURYA 03, № 06 (2024): 137 to 142. https://doi.org/10.5281/zenodo.11127274.

Texte intégral
Résumé :
12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಅಂದಿನ ಸಮಾಜದ ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತಹ ಸುಧಾರಣೆಯನ್ನು ತರಲು ಬಯಸಿದರು. ಪ್ರತಿಯೊಬ್ಬ ವ್ಯಕ್ತಿಯೂ ಕಾಯಕದಲ್ಲಿ ತೊಡಗಬೇಕು. ಆ ಕಾಯಕದಿಂದ ಬಂದ ಹಣದಿಂದ ತನ್ನ ಅಗತ್ಯತೆಗಳನ್ನು ಪೂರೈಸಿಕೊಂಡು ಉಳಿದ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು ಎಂಬುದು ಶರಣರ ಆಲೋಚನೆಯಾಗಿತ್ತು. ಜೊತೆಗೆ ಸಮಾಜದಲ್ಲಿನ ಸಂಪತ್ತು ಎಲ್ಲ ಜನರಿಗೆ ಸಮಾನವಾಗಿ ಹಂಚಿಕೆ ಆಗಬೇಕು ಎಂಬ ಪರಿಕಲ್ಪನೆಯನ್ನು ಹೊಂದಿದ್ದರು. ಅಂತೆಯೆ ‘ಶಿವಶರಣರ ದೃಷ್ಟಿಕೋನದಲ್ಲಿ ಆರ್ಥಿಕ ಸಿದ್ದಾಂತ’ ಎಂಬ ಈ ಲೇಖನದಲ್ಲಿ ಅರ್ಥಶಾಸ್ತ್ರದ ಪರಿಕಲ್ಪನೆಗಳಾದ ಕೃಷಿ, ಉದ್ಯೋಗ, ಉತ್ಪಾದನೆ, ವಿತರಣೆ, ಆದಾಯ, ಅನುಭೋಗ, ಉಳಿತಾಯ ಮುಂತಾದ ಅಂಶಗಳ ಬಗ್ಗೆ ಬೆಳಕನ್ನು ಚೆಲ್ಲಲಾಗಿದೆ. ಉ
Styles APA, Harvard, Vancouver, ISO, etc.
21

ಸೋಮಶೇಖರ, ಎಂ. "ಹರಿಹರನ ರಗಳೆಯಲ್ಲಿ ಶರಣ ಕೆಂಬಾವಿ ಭೋಗಣ್ಣ". AKSHARASURYA 04, № 02 (2024): 145 to 156. https://doi.org/10.5281/zenodo.11525997.

Texte intégral
Résumé :
ವಚನ ಸಾಹಿತ್ಯದ ಮಾತು ಬಂದ ತಕ್ಷಣವೇ ನಮ್ಮಲ್ಲಿ ಬಸವಾದಿ ಶರಣರ ಆಲೋಚನೆಗಳು ಸುಳಿದಾಡುತ್ತವೆ. ವಚನ ಸಾಹಿತ್ಯದ ಮೇಲೆ ಸಾಕಷ್ಟು ಸಂಶೋಧನೆಗಳು ನಡೆದಿದೆ; ನಡೆಯತ್ತಲೇ ಇದೆ. ವಚನ ಸಾಹಿತ್ಯವನ್ನು ಅಧ್ಯಯನದ ದೃಷ್ಟಿಯಿಂದ ಬಸವಪೂರ್ವ ಯುಗ (11ನೇ ಶತಮಾನ), ಬಸವ ಯುಗ (12-13ನೇ ಶತಮಾನ), ಬಸವೋತ್ತರ ಯುಗ (15-19ನೇ ಶತಮಾನ) ಹಾಗೂ ಆಧುನಿಕ ಯುಗ (20ನೇ ಶತಮಾನ) ಎಂದೂ ವಿಭಾಗಿಸಿಕೊಳ್ಳಲಾಗಿದೆ. ಈ ಸಾಹಿತ್ಯ ಸೃಷ್ಟಿಯ ಪ್ರಮುಖ ಕಾರಣ ಹಾಗೂ ಪ್ರೇರಣೆಗಳೆಂದರೆ ಶರಣ ಧರ್ಮದ ತತ್ವಗಳ ಪ್ರಸಾರ ಮಾಡುವುದು ಹಾಗೂ ಅಂದಿನ ಸಮಾಜದಲ್ಲಿನ ಅಸಮಾನತೆಯನ್ನು ಹೊಡೆದೋಡಿಸುವುದು. ಹನ್ನೊಂದನೆಯ ಶತಮಾನದಲ್ಲಿ ಈ ಕಾರ್ಯವನ್ನು ಕೈಗೊಂಡವರು ಕೊಂಡಗುಳಿ ಕೇಶಿರಾಜ, ಕೆಂಬಾವಿ ಭೋಗಣ್ಣ, ಶಂಕರದಾಸಿಮಯ್ಯ, ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಸಕಳೇಶ ಮಾದರಸ, ಜೇಡರದಾಸಿಮಯ್ಯ ಹಾಗೂ ಚಂದ
Styles APA, Harvard, Vancouver, ISO, etc.
22

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Texte intégral
Résumé :
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
Styles APA, Harvard, Vancouver, ISO, etc.
23

ಮ.ಸು.ಕೃಷ್ಣಮೂರ್ತಿ. "ಔತ್ತರೇಯ ಸಂತರ ಮೇಲೆ ವೀರಶೈವ ಪ್ರಭಾವ". AKSHARASURYA 04, № 03 (2024): 01 to 36. https://doi.org/10.5281/zenodo.12701300.

Texte intégral
Résumé :
ಬಹುಸಾಂಸ್ಕೃತಿಕ ಸಂಬಂಧಗಳ ಸಂಶೋಧಕ-ಸಾಧಕರು ಮ.ಸು.ಕೃಷ್ಣಮೂರ್ತಿ ಮನುಕುಲವನ್ನು ಇಡಿಯಾಗಿ ಕಾಣುವ ಮನಸ್ಸು, ಕನ್ನಡ-ಹಿಂದಿ ಭಾಷೆ-ಸಾಹಿತ್ಯಗಳ ಸೇತುವೆ, ಎರಡು ಭಾಷೆಗಳಲ್ಲೂ ಬರೆದ ಸವ್ಯಸಾಚಿ, ಬಹುಪ್ರಕಾರಗಳ ಸಾಹಿತ್ಯಕೃಷಿಕ, ಭಾರತೀಯ ಅಧ್ಯಾತ್ಮ ಪರಂಪರೆಯ ಮಹಾಶೋಧಕ ಮೊದಲಾದ ಪ್ರಸಿದ್ಧಿಗೆ ಭಾಜನರಾದ ಸಾಹಿತಿ ಮ.ಸು.ಕೃಷ್ಣಮೂರ್ತಿ ಅವರು. ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಶ್ರೀಯುತರ ಒಂದೊಂದು ಪುಸ್ತಕವೂ ಇವರ ಆಳವಾದ ವಿದ್ವತ್ತಿಗೆ ಸಾಕ್ಷಿಯಾಗಿವೆ. ಕಾದಂಬರಿ, ಕವಿತೆ, ಜೀವನ ಚರಿತ್ರೆ, ಸಣ್ಣಕಥೆ, ನಾಟಕ, ಲಲಿತ ಪ್ರಬಂಧ, ವಚನಗಳು, ಮಕ್ಕಳ ಸಾಹಿತ್ಯ, ಸಂಪಾದನೆ, ಸಂಶೋಧನೆ - ಈ ಎಲ್ಲ ಕ್ಷೇತ್ರಗಳನ್ನು ಸಮೃದ್ಧಗೊಳಿಸುವುದರ ಜೊತೆಗೆ ಎಂ.ಎಸ್.ಕೆ.. ಅವರು ಹಿಂದಿಯಿಂದ ಹಾಗೂ ಇಂಗ್ಲಿಷ್&zwnj;ನಿಂದ ಕನ್ನಡಕ್ಕೆ ವಿಪುಲವಾಗಿ ಅನುವಾದಿಸಿದ್ದಾರೆ;
Styles APA, Harvard, Vancouver, ISO, etc.
24

ಎಂ., ತಿಪ್ಪೇಸ್ವಾಮಿ. "ಚಿತ್ರದುರ್ಗ ಜಿಲ್ಲೆಯ ತತ್ವಪದಗಳಲ್ಲಿನ ಸಾಮಾಜಿಕ ಮೌಲ್ಯಗಳು". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 22–27. http://dx.doi.org/10.59176/kjksp.v3i1.2334.

Texte intégral
Résumé :
ತತ್ವಪದಗಳ ಮುಖ್ಯ ಉದ್ದೇಶ ಸಮಾಜದಲ್ಲಿ ಬದಲಾವಣೆಯನ್ನು ತರುವುದಾಗಿದೆ. ಸಮಾಜದಲ್ಲಿ ಸಮಾನತೆ, ಸಹಕಾರ, ಸಹಬಾಳ್ವೆಯ ಜೊತೆಗೆ ಸಮಾಜದ ಮನುಜರು ಅರಿವಿನ ಹಾದಿ ಹಿಡಿದು ಬದುಕುವುದರಿಂದ ಸಮಾಜಕ್ಕು ಕ್ಷೇಮ ಎಂಬುದನ್ನು ಅರಿತಿದ್ದರಿಂದಲೆ ಶರಣರು, ಹರಿದಾಸರು, ತತ್ವಪದಕಾರರೆಲ್ಲರೂ ತಮ್ಮ ವಚನಗಳ ಮೂಲಕ, ಕೀರ್ತನೆಗಳ ಮೂಲಕ, ತತ್ವಪದಗಳ ಮೂಲಕ ಸಮಾಜಕ್ಕೆ ತಿಳಿಸುವಂತಹ ಪ್ರಯತ್ನ ಪಟ್ಟರು. ಆಧ್ಯಾತ್ಮಿಕ ಅನುಸಂಧಾನದ ಜೊತೆಜೊತೆಗೆ ಸಮಾಜವನ್ನು ಎಚ್ಚರಿಸುವುದರೊಂದಿಗೆ ಶುದ್ಧೀಕರಿಸುವ ಕಾರ್ಯವನ್ನು ತತ್ವಪದಕಾರರು ನಿರಂತರವಾಗಿ ಮಾಡಿಕೊಂಡು ಬಂದಿರುವುದನ್ನು ಗಮನಿಸಬಹುದು. ಈ ಭಾಗದ ತತ್ವಪದಕಾರರು ಬಯಲು ಸೀಮೆಯ, ಬರದ ನಾಡಿನ ಜನರ ಕಷ್ಟದ ಬದುಕನ್ನು ಕಂಡಿದ್ದರಿAದ ತಮ್ಮ ತತ್ವಪದಗಳಲ್ಲಿ ಸಮಾಜವನ್ನು ತಿದ್ಧುವಂತಹ, ಬದಲಾವಣೆಯನ್ನು ತರುವಂತಹ, ಹಣತೆಯನ್ನು ಹಚ್ಚಿದ್ದಾರ
Styles APA, Harvard, Vancouver, ISO, etc.
25

Belale, Kumar, та K. Chandrakath. "ಸಿದ್ಧರಾಮನನಿಜವಚನಗಳಲ್ಲಿ ಲಿಂಗ ವಿಕಳಾವಸ್ಥೆಯ ಭಾವ". ShodhKosh: Journal of Visual and Performing Arts 5, № 1 (2024). https://doi.org/10.29121/shodhkosh.v5.i1.2024.3597.

Texte intégral
Résumé :
ಹನ್ನೆರಡನೆಯ ಶತಮಾನದಲ್ಲಿ ಶಿವಶರಣ ಶರಣೆಯರು ತಮ್ಮ ಆದರ್ಶ ದಾಂಪತ್ಯ ಜೀವನವನ್ನು ನಡೆಸಿ ತಾವು ತಮ್ಮ ತಮ್ಮ ಆರಾಧ್ಯ ದೈವವನ್ನು ದರ್ಶಿಸಿ ಮುಂದಿನವರಿಗೆ ಮಾರ್ಗದರ್ಶಿಗಳಾಗಿದ್ದಾರೆ. ವೀರಶೈವ ಭಕ್ತರಲ್ಲಿ “ಶರಣ ಸತಿ ಲಿಂಗ ಪತಿ’ ಭಾವ ಮೊದಲಿನಿಂದಲೂ ಆಚರಣೆಯಲ್ಲಿದ್ದುದು ಕಂಡು ಬರುತ್ತದೆ. ವಚನ ಸಾಹಿತ್ಯ ಇದಕ್ಕೆ ಸಾಕ್ಷಿಯಾಗಿ ನಿಂತಿದೆ. ಲೌಖಿಕ ಭೂಮಿಕೆಯಿಂದ ಅಧ್ಯಾತ್ಮಿಕತೆಯ ಕಡೆಗೆ ಒಲಿದಿರುವುದು ಶರಣರ ಜೀವನದಿಂದ ತಿಳಿದು ಬರುವ ಅಂಶ. ಅವರು ಉಂಡು ಉಪವಾಸಿಗಳು, ಮದುವೆಯಾಗಿಯೂ ಬ್ರಹ್ಮಚಾರಿಗಳು ಎಂಬ ಮಾತಿಗೆ ಉದಾಹರಣೆಯಾಗಿ ನಮ್ಮ ಮುಂದೆ ಇದ್ದಾರೆ. ಶಿವಶರಣರಲ್ಲಿ ಬಹು ಪ್ರಮುಖರಾದ ಸಿದ್ಧರಾಮರು ಸಹ ಈ ವಿಷಯದ ಬಗೆಗೆ ಪ್ರಸ್ತಾಪಿಸಿದ್ದಾರೆ.ಸತಿ-ಪತಿ ಭಾವದ ವಚನಗಳುಸಿದ್ದರಾಮನಲ್ಲಿ ವಿಶೇಷವಾಗಿವೆ. ಸಿದ್ದರಾಮ ತನ್ನನ್ನು ಹೆಣ್ಣಾಗಿಯೂ ಕಪಿಲಸಿದ್ಧಮಲ್ಲಿ
Styles APA, Harvard, Vancouver, ISO, etc.
26

ಭಟ್, ಮೈತ್ರಿ. "ಬಸವಣ್ಣನವರ ವಚನಗಳೂ... ಮನೋವಿಜ್ಞಾನವೂ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 17–21. http://dx.doi.org/10.59176/kjksp.v3i1.2333.

Texte intégral
Résumé :
ಕನ್ನಡದ ಅನನ್ಯ ಸಾಹಿತ್ಯ ಪ್ರಕಾರವಾದ ವಚನವು ಅಂತರಂಗದ ಉತ್ಕಟ ಅವಸ್ಥೆಯಿಂದ ಹೊರಬಂದ ಶಬ್ದರೂಪವಾಗಿದ್ದು, ಅತ್ತ ಪದ್ಯವೂ ಅಲ್ಲದ ಇತ್ತ ಗದ್ಯವೂ ಅಲ್ಲದ ಈ ವಿಶಿಷ್ಟ ಲಯಬದ್ಧ ಗೀತೆಯು ಗಾತ್ರದಲ್ಲಿ ಕಿರಿದಾದರೂ ಜೀವ ವಿಕಾಸದ ಹಾದಿಯಲ್ಲಿ ಹಿರಿದಾದುದೇ ಆಗಿದೆ. ಇಂತಹ ವಚನಗಳು ಅಂತರಂಗದ ನಿವೇದನೆಗಳಾಗಿ, ಆತ್ಮಗತ ಸಂಭಾಷಣೆಗಳಾಗಿ ಹೊರಹೊಮ್ಮಿವೆ. ವಿವಿಧ ಕಾಯಕಗಳಲ್ಲಿ ತೊಡಗಿದ್ದ ನಾನಾ ಜಾತಿಮತಗಳ ಜನರು ತಮ್ಮ ಅಂತಃಪ್ರೇರಣೆಯ ತುಡಿತಕ್ಕೆ ಸ್ಪಂದಿಸಿ, ತಮ್ಮ ಮನದಾಳದ ಚಿಂತನೆಗಳನ್ನು ಜನಮಾನಸಕ್ಕೆ ತಲುಪಿಸಲು ಆಡುನುಡಿಯನ್ನು ಬಳಸಿಕೊಂಡರು. ಶುದ್ಧ ದೇಸೀ ಮನೋಭೂಮಿಕೆಯಲ್ಲಿ ಹುಟ್ಟಿದ ಇವು ಗದ್ಯದ ನಿರರ್ಗಳತೆಯಿಲ್ಲದಿದ್ದರೂ ಸರಳತೆಯಿಂದ, ಪದ್ಯದ ಕ್ರಮಬದ್ಧ ಛಂದೋಗತಿ ಇಲ್ಲದಿದ್ದರೂ ಅದರ ಲಯದಿಂದ ಕೂಡಿ ಸ್ವಚ್ಛಂದ ಲಯದಲ್ಲಿ ಮಿಂದೇಳುತ್ತವೆ. ಬಿಡಿಯಾಗಿ ನೋಡಿದರ
Styles APA, Harvard, Vancouver, ISO, etc.
Nous offrons des réductions sur tous les plans premium pour les auteurs dont les œuvres sont incluses dans des sélections littéraires thématiques. Contactez-nous pour obtenir un code promo unique!